Breaking News

ರಾಜಕೀಯ

ಸುದ್ದಿ ವಿಶ್ಲೇಷಣೆ | ಕೊವಿಡ್​ ಸುನಾಮಿ ಮಧ್ಯೆ ರಾಜ್ಯದ ಐಎಎಸ್ ಅಧಿಕಾರಿಗಳ ವಿಫಲತೆ ಬಗ್ಗೆ ಮಾತನಾಡುವವರು ಯಾರು?​

ಇದನ್ನು ಓದಿದರೆ ನಿಮಗೆ ಆಶ್ಚರ್ಯ ಆಗಬಹುದು ಅಥವಾ ಶಾಕ್ ಆಗಬಹುದು. ಕರ್ನಾಟಕದಲ್ಲಿ ಆಮ್ಲಜನಕದ ಕೊರತೆ ಮಾತ್ರ ಇದೆ ಎಂದುಕೊಂಡಿರಾ? ಸದ್ಯ ಅದು ಎಲ್ಲರಿಗೂ ಗೊತ್ತಿರುವ ಸಂಗತಿ. ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ಕೊರತೆಯೂ ಇದೆ. ನಿಮಗೆ ಇದನ್ನು ಕೇಳಿದರೆ ಅಚ್ಚರಿ ಮತ್ತು ಶಾಕ್ ಎರಡೂ ಆಗುತ್ತೆ ಅಲ್ಲವೇ? ನೀವು ತುಂಬಾ ಸಿನಿಕರಾಗಿದ್ದರೆ, ಐಎಎಸ್ ಅಧಿಕಾರಿಗಳು ಎಂದರೆ ಬಿಳಿ ಆನೆ ಇದ್ದಂತೆ, ಅವರ ಬಗ್ಗೆ ನಾವ್ಯಾಕೆ ತಲೆಕೆಡಿಸಿಕೊಳ್ಳಬೇಕು. ಅವರಿಂದ ನಮಗೇನು ಪ್ರಯೋಜನ ಇಲ್ಲ …

Read More »

ಆಮ್ಲಜನಕ ಕೊರತೆ: ಯೋಗಿ ಸರ್ಕಾರದ ಹುಳುಕು ಬಹಿರಂಗಪಡಿಸಿದ ಹೈಕೋರ್ಟ್

ಲಕ್ನೋ, ಮೇ 12: ಕೋವಿಡ್ ಮಾಹಿತಿ ವ್ಯವಸ್ಥೆಯ ವಿಶ್ವಾಸಾರ್ಹತೆಯ ಬಗ್ಗೆ ಯೋಗಿ ಆದಿತ್ಯನಾಥ್ ಸರ್ಕಾರ ನೀಡಿರುವ ಅಂಕಿ ಅಂಶಗಳ ದೋಷವನ್ನು ಅಲಹಾಬಾದ್ ಹೈಕೋರ್ಟ್ ಬಹಿರಂಗಪಡಿಸಿದೆ. ಆಸ್ಪತ್ರೆಯ ಹಾಸಿಗೆಗಳ ಲಭ್ಯತೆಯ ಬಗ್ಗೆ ಸರ್ಕಾರದ ಸಹಾಯವಾಣಿ ಮತ್ತು ಪೋರ್ಟಲ್ ನಡುವೆ ಸರಿಯಾದ ಹೊಂದಾಣಿಕೆಯಿಲ್ಲ,ಕೋವಿಡ್ ಮಾಹಿತಿ ವ್ಯವಸ್ಥೆಯ ವಿಶ್ವಾಸಾರ್ಹತೆಯ ಬಗ್ಗೆ ಉತ್ತರ ಪ್ರದೇಶ ಆಡಳಿತ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಯೋಗಿ ಸರ್ಕಾರದ ಹುಳುಕನ್ನು ಕೋರ್ಟ್ ಬಹಿರಂಗಪಡಿಸಿದೆ. ”ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆಯಾಗದೆ ಕೋವಿಡ್‌ …

Read More »

ಇಸ್ರೇಲ್ ದಾಳಿಗೆ 10 ಹಮಾಸ್ ಬಂಡುಕೋರ ನಾಯಕರ ಸಾವು

ಗಾಜಾ: ಇಸ್ರೇಲ್ ಹಾಗೂ ಪಾಲೆಸ್ಟೈನ್ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ಗಾಜಾ ಗುರಿಯಾಗಿಸಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‌ನ 10ರಷ್ಟು ಬಂಡುಕೋರ ನಾಯಕರನ್ನು ಹೊಡೆದುರುಳಿಸಲಾಗಿದ್ದು, ಎರಡು ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಇದಕ್ಕೆ ಪ್ರತಿಯಾಗಿ ಪಾಲೆಸ್ಟೈನ್‌ನ ಹಮಾಸ್ ಬಂಡುಕೋರರು, ಇಸ್ರೇಲ್ ಮೇಲೆ 1,000ಕ್ಕೂ ಹೆಚ್ಚು ರಾಕೆಟ್ ದಾಳಿಯನ್ನು ನಡೆಸಿದೆ. 2014ರಲ್ಲಿ ಇಸ್ರೇಲ್ ಹಾಗೂ ಪಾಲೆಸ್ಟೈನ್ ನಡುವೆ ನಡೆದ ಯುದ್ಧವು 50 ದಿನಗಳ ಕಾಲ ಮುಂದುವರಿದಿತ್ತು. ಈಗ ಹಿಂದಿನಗಿಂತಲೂ ಭೀಕರ ಪರಿಸ್ಥಿತಿ ನಿರ್ಮಾಣವಾಗುವ …

Read More »

1000 ಆಕ್ಸಿಜನ್​ ಬೆಡ್​ ಇರುವ, ದೇಶದಲ್ಲಿಯೇ ಅತ್ಯಂತ ದೊಡ್ಡ ಕೊವಿಡ್​ ಕಾಳಜಿ ಕೇಂದ್ರ ಕೇರಳದಲ್ಲಿ ನಿರ್ಮಾಣ

ಭಾರತದಲ್ಲಿಯೇ ಅತ್ಯಂತ ದೊಡ್ಡದಾದ, ಆಕ್ಸಿಜನ್​ ಬೆಡ್​ಗಳನ್ನೊಳಗೊಂಡ ಕೊವಿಡ್​ 19 ಕಾಳಜಿ ಕೇಂದ್ರ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿದೆ. ಇದು ಎರ್ನಾಕುಲಂನ ಅಂಬಾಲಮುಗಲ್​ನಲ್ಲಿ ಸಿದ್ಧವಾಗುತ್ತಿರುವ ಈ ಕೊವಿಡ್​ ಕೇರ್​​ ಸೆಂಟರ್​​ನಲ್ಲಿ 1000 ಆಕ್ಸಿಜನ್ ಬೆಡ್​ಗಳು ಇರಲಿವೆ. ಗುರುವಾರ (ಮೇ 13)ದ ಹೊತ್ತಿಗೆ ಸಂಪೂರ್ಣವಾಗಿ ಸಿದ್ಧವಾಗಲಿದೆ. ಎಲ್ಲೆಲ್ಲೂ ಆಕ್ಸಿಜನ್ ಕೊರತೆ ಮಿತಿಮೀರುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಅಂಬಾಲಮುಗಲ್​ನ ರಿಫೈನರಿ ಶಾಲೆ ಮೈದಾನದಲ್ಲಿ, 1000 ಆಕ್ಸಿಜನ್ ಬೆಡ್​​ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಎರ್ನಾಕುಲಂ ಜಿಲ್ಲಾಧಿಕಾರಿ ಎಸ್​. ಸುಹಾಸ್ …

Read More »

ಕುತೂಹಲಕ್ಕೆ ಕಾರಣವಾಗಿದೆ ಆಕಾಶದಲ್ಲಿ ಕಂಡುಬಂದ ವಿಚಿತ್ರ ಆಕೃತಿ.!

ಕಳೆದ ವರ್ಷ ಜನವರಿ ತಿಂಗಳಲ್ಲಿ ಲಾಹೋರ್​​ನಲ್ಲಿ ವಿಚಿತ್ರವಾದ ಕಪ್ಪು ಬಣ್ಣದ ವರ್ತುಲ ಆಕಾಶದಲ್ಲಿ ಕಾಣಿಸಿಕೊಂಡ ಘಟನೆ ನಿಮಗೆ ನೆನಪಿದ್ದಿರಬಹುದು. ಈ ದೃಶ್ಯದ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವಿವಿಧ ವೇದಿಕೆಗಳಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆಯೇ ಅನೇಕರು ಇದನ್ನ ಹಾರುವ ತಟ್ಟೆ ಇರಬಹುದು ಎಂದು ಭಾವಿಸಿದ್ದರು. ಆದರೆ ಬಳಿಕ ತಜ್ಞರು ಈ ಬಗ್ಗೆ ಸಂಶೋಧನೆ ನಡೆಸಿ ಇದೊಂದು ಕೈಗಾರಿಕಾ ಪ್ರದೇಶದಲ್ಲಿ ಆದ ಸಮಸ್ಯೆಯಿಂದಾಗಿ ಈ ರೀತಿ …

Read More »

ಸಿಇಟಿ ಪರೀಕ್ಷೆ ಮುಂದೂಡಿಕೆ: ದಿನಾಂಕ ಮರು ನಿಗದಿ ಮಾಡಲಾಗಿದೆ.

ಬೆಂಗಳೂರು: ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿರುವ ಕಾರಣ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮುಂದೂಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಯನ್ನು ಮುಂದೂಡಿ, ದಿನಾಂಕವನ್ನು ಮರು ನಿಗದಿ ಮಾಡಲಾಗಿದೆ. ಈ ಹಿಂದೆ ಸಿಇಟಿ ಪರೀಕ್ಷೆಯನ್ನು ಜುಲೈ 7 ಮತ್ತು 8ರಂದು ನಡೆಸಲು ತೀರ್ಮಾನಿಸಲಾಗಿದೆ. ಇದೀಗ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮುಂದೂಡಿಕೆಯಾದ ಕಾರಣ ಸಿಇಟಿ ಪರೀಕ್ಷೆಯನ್ನು ಮುಂದೂಡಿ, ಆಗಸ್ಟ್ 28 ಮತ್ತು 29ರಂದು ನಡೆಸಲು ಕರ್ನಾಟಕ ಪರೀಕ್ಷಾ …

Read More »

ಹೆಲ್ಮೆಟ್ ಧರಿಸದ ಬೈಕ್​ ಸವಾರನಿಗೆ ದಂಡ ಹಾಕಿದ ಎಸ್​ಐಗೆ ನಡುರಸ್ತೆಯಲ್ಲೇ ಎಸಿ, ತಹಸೀಲ್ದಾರ್ ಅವಾಜ್​! ವಿಡಿಯೋ ವೈರಲ್​

ಮಂಡ್ಯ: ಹೆಲ್ಮೆಟ್​ ಹಾಕದೆ ಬೈಕ್​ನಲ್ಲಿ ಬಂದ ಕಂದಾಯ ಇಲಾಖೆ ಸಿಬ್ಬಂದಿಗೆ ದಂಡ ಹಾಕಿದ ಸಬ್​ಇನ್​ಸ್ಪೆಕ್ಟರ್​ಗೆ ನಡು ರಸ್ತೆಯಲ್ಲೇ ನಿಂತು ಎಸಿ ಮತ್ತು ತಹಸೀಲ್ದಾರ್ ಅವಾಜ್​ ಹಾಕಿರುವ ವಿಡಿಯೋ ವೈರಲ್​ ಆಗಿದೆ. ಇನ್ನುಂದೆ ಕಂದಾಯ ಇಲಾಖೆ ಸಿಬ್ಬಂದಿಗೆ ದಂಡ ಹಾಕದಂತೆ ಪೊಲೀಸರಿಗೆ ಎಸಿ ಶಿವಾನಂದಮೂರ್ತಿ, ತಹಸೀಲ್ದಾರ್ ಕುಂಞ ಅಹಮದ್ ವಾರ್ನಿಗ್​ ಮಾಡಿರುವ ಘಟನೆ ನಾಗಮಂಗಲದಲ್ಲಿ ಸಂಭವಿಸಿದೆ.  ನಾಗಮಂಗಲ ಟೌನ್ ಪೊಲೀಸ್ ಠಾಣೆ ಎಸ್‌ಐ ರವಿಶಂಕರ್ ನೇತೃತ್ವದ ತಂಡ ವಾಹನ ತಪಾಸಣೆ ಮಾಡುತ್ತಿದ್ದರು, …

Read More »

ಹಳೆ ವೀಡಿಯೋಗೆ ಧ್ವನಿ ; ಪೊಲೀಸರಿಂದ ಪದ್ಮಾ ಹರೀಶ್ ವಿಚಾರಣೆ

ಬೆಂಗಳೂರು, : ಮುಂಬೈ ಪೊಲೀಸರು ವೃದ್ಧ ವ್ಯಕ್ತಿಯ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿದ್ದಾರೆ ಎನ್ನಲಾದ ವಿಡಿಯೋಗೆ ಹಿನ್ನೆಲೆ ಧ್ವನಿ ಕೊಟ್ಟಿದ್ದ ಕೈ ಪಕ್ಷದ ಮಹಿಳಾ ಮಣಿ ತೊಂದರೆಯಲ್ಲಿ ಸಿಲುಕಿದ್ದಾರೆ. ಕರ್ನಾಟಕ ಪೊಲೀಸರಿಗೆ ಛೀಮಾರಿ ಹಾಕಿ ವೈರಲ್ ಮಾಡಿದ್ದ ಕೈ ಪಕ್ಷದ ಮಹಿಳಾ ಮಣಿಯೊಬ್ಬಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಸುಳ್ಳು ಸುದ್ದಿ ಹಬ್ಬಿಸಿದ ಪ್ರಕರಣ ಕುರಿತು ನಗರ ಪೊಲೀಸ್ ಆಯುಕ್ತ ಕಮಲಪಂತ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕೈ ಪಕ್ಷದ ನಾಯಕಿ ಇದೀಗ …

Read More »

ಮೈಸೂರು ತಲುಪಿದ ಆಮ್ಲಜನಕ ಟ್ಯಾಂಕ್‌

ಮೈಸೂರು: ಕೇಂದ್ರ ಸರ್ಕಾರವು ಆಮ್ಲಜನಕ ಎಕ್ಸ್‌ಪ್ರೆಸ್‌ನಲ್ಲಿ ಮಂಗಳವಾರ ಬೆಂಗಳೂರಿಗೆ ಸಾಗಿಸಿದ್ದ ಆಮ್ಲಜನಕದ ಒಂದು ಕಂಟೈನರ್‌ ಅನ್ನು (ಟ್ಯಾಂಕ್‌) ಬುಧವಾರ ಬೆಳಿಗ್ಗೆ ಮೈಸೂರಿಗೆ ತರಲಾಯಿತು. ಈ ಕಂಟೈನರ್‌ನಲ್ಲಿ 20 ಸಾವಿರ ಲೀಟರ್ ಆಮ್ಲಜನಕ ತುಂಬಿದೆ. ಈ ಆಮ್ಲಜನಕವನ್ನು ಸ್ಥಳೀಯವಾಗಿ ಶೇಖರಿಸಿ ಕೂಡಲೇ ಕಂಟೈನರ್‌ ಹಿಂದಿರುಗಿಸಬೇಕಿತ್ತು. ಆದರೆ, ಇಷ್ಟು ಆಮ್ಲಜನಕವನ್ನು ಸಂಗ್ರಹಿಸಲು ಬೇಕಾದ ಶೇಖರಣಾ ಘಟಕ ಮೈಸೂರು ಜಿಲ್ಲೆಯಲ್ಲಿ ಇರಲಿಲ್ಲ. ಹೀಗಾಗಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ವಿಕೋಪ ನಿರ್ವಹಣೆ ಕಾಯ್ದೆ ಪ್ರಯೋಗಿಸಿ …

Read More »

ಡಿಸಿಎಂ ಸವದಿ ಸಹೋದರನ ಪುತ್ರ ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು; ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸಹೋದರನ ಪುತ್ರ ವಿನೋದ್ ಸವದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಡಿಸಿಎಂ ಸವದಿ ಅವರ ಸಹೋದರ ಪರಪ್ಪ ಸವದಿ ಅವರ ಪುತ್ರ ವಿನೋದ್ ಸವದಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಕೇವಲ 36 ವರ್ಷದ ವಿನೋದ್ ಸವದಿ ಕೊರೊನಾಗೆ ಬಲಿಯಾಗಿರುವುದು ಕುಟುಂಬದವರಿಗೆ ಬರಸಿಡಿಲುಬಡಿದಂತಾಗಿದೆ.

Read More »