ನವದೆಹಲಿ : ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ. ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ : ಕೇರಳದಲ್ಲಿ ಸತತವಾಗಿ 2 ನೇ ಬಾರಿಗೆ ಎಲ್ ಡಿಎಫ್ ಅಧಿಕಾರ ಸಿಗುವ ಸಾಧ್ಯತೆ ಇದೆ. ಕೇರಳ ವಿಧಾನಸಭಾ ಚುನಾವಣೆಮತ ಎಣಿಕೆಯಲ್ಲಿ ಎಲ್ ಡಿಎಫ್ 76 ಸ್ಥಾನಗಳಲ್ಲಿ, ಯುಡಿಎಫ್ 47 ರಲ್ಲಿ …
Read More »ಪಶ್ಚಿಮ ಬಂಗಾಳದಲ್ಲಿ TMC, ತಮಿಳುನಾಡಲ್ಲಿ DMKಗೆ ಮುನ್ನಡೆ; ಮುಗ್ಗರಿಸುತ್ತಾ ಬಿಜೆಪಿ?
ಬೆಂಗಳೂರು: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಗೆ ಶುರುವಾಗಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಎಂಟಿಸಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಮಮತಾ ಬ್ಯಾನರ್ಜಿ ಸರ್ಕಾರದತ್ತ ಈ ಬಾರಿಯೂ ಮತದಾರರು ವಾಲಿದ್ದು, ಬೆಳಗ್ಗೆ 10 ಗಂಟೆ ಹೊತ್ತಿಗೆ 102 ಕ್ಷೇತ್ರಗಳಲ್ಲಿ ಟಿಎಂಸಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಬಿಜೆಪಿಯೂ ಪ್ರಬಲ ಪೈಪೋಟಿ ನೀಡುತ್ತಿದ್ದು 84 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 292 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಯಾವ ಪಕ್ಷ ಜನ ಬೆಂಬಲದೊಂದಿಗೆ ಮ್ಯಾಜಿಕ್ ನಂಬರ್ …
Read More »ಗೋಕಾಕ್ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಲಕ್ಷ್ಮೀ ಹೆಬ್ಬಾಳಕರ ಅವರ ಕ್ಷೇತ್ರದಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ
ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಅಣ್ಣ ರಮೇಶ ಜಾರಕಿಹೊಳಿಯ ಕ್ಷೇತ್ರ ಗೋಕಾಕದಲ್ಲಿ ಕಾಂಗ್ರೆಸ್ ನ ಸತೀಶ ಜಾರಕಿಹೊಳಿಗೆ ಈ ಕ್ಷಣದಲ್ಲಿ ಹಿನ್ನಡೆ ಆಗಿದ್ದು, ಜತೆಗೆ ಲಕ್ಷ್ಮೀ ಹೆಬ್ಬಾಳಕರ ಅವರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಕುಸಿದಿದೆ. ಬೆಳಗಾವಿ ಲೋಕಸಭೆ ಚುನಾವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ರೋಚಕ ಪಡೆಯುತ್ತಿದ್ದು, ಬಿಜೆಪಿಯ ಹಾಗೂ ಕಾಂಗ್ರೆಸ್ ಮಧ್ಯೆ ನೇರ ಹಣಾಹಣಿ ಶುರುವಾಗಿದೆ. ಸದ್ಯ 11,831 ಸಾವಿರಕ್ಕೂ ಹೆಚ್ಚು ಮತಗಳ ಅಂತರವನ್ನು ಮಂಗಳಾ …
Read More »ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಮುನ್ನಡೆ – ನಂದಿ ಗ್ರಾಮದಲ್ಲಿ ಮಮತಾಗೆ ಹಿನ್ನಡೆ
ಕೋಲ್ಕತ್ತಾ: ಇಡೀ ದೇಶವೇ ಕುತೂಹಲದಿಂದ ಗಮನಿಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಭಾರೀ ಸ್ಪರ್ಧೆ ನಡೆಯುತ್ತಿದೆ.ಎರಡು ಪಕ್ಷಗಳ ನಡುವೆ ಹಾವು ಏಣಿ ಆಟ ನಡೆಯುತ್ತಿದೆ. ಒಂದು ಚುನಾವಣಾ ಸುತ್ತು ಮುಗಿದಾಗ ಟಿಎಂಸಿ ಮುನ್ನಡೆ ಸಾಧಿಸಿದರೆ ಮತ್ತೊಂದು ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸುತ್ತಿದ್ದಾರೆ. ವಿಶೇಷವಾಗಿ ನಂದಿ ಗ್ರಾಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಆರಂಭದ ಸುತ್ತಿನಲ್ಲಿ ಹಿನ್ನಡೆಯಾಗಿದ್ದು, ಸುವೇಂದು ಅಧಿಕಾರಿ ಮುನ್ನಡೆ ಸಾಧಿಸಿದ್ದಾರೆ. ಒಟ್ಟು 292 ಕ್ಷೇತ್ರಗಳ …
Read More »ಮರಣಮೃದಂಗ: ದೆಹಲಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ, ವೈದ್ಯ ಸೇರಿದಂತೆ 8ಮಂದಿ ಸಾವು
ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೋವಿಡ್ ಮರಣಮೃದಂಗ ಮುಂದುವರಿದಿದ್ದು, ಆಕ್ಸಿಜನ್ ಕೊರತೆಯಿಂದಾಗಿ ವೈದ್ಯರೊಬ್ಬರು ಸೇರಿದಂತೆ ಎಂಟು ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿರುವ ಘಟನೆ ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ ಶನಿವಾರ(ಮೇ 01) ನಡೆದಿದೆ ಎಂದು ವರದಿ ತಿಳಿಸಿದೆ. “ನಾವು ಇನ್ನೂ ಐದು ಮಂದಿ ಚಿಂತಾಜನಕ ಸ್ಥಿತಿಯಲ್ಲಿರುವ ರೋಗಿಗಳನ್ನು ಉಳಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಡಾ.ಎಸ್ ಸಿಎಲ್ ಗುಪ್ತಾ ಅವರು ತಿಳಿಸಿರುವುದಾಗಿ ಪಿಟಿಐ ನ್ಯೂಸ್ ವರದಿ ಮಾಡಿದೆ. ಇಂದು ಸಾವನ್ನಪ್ಪಿರುವ ಎಂಟು ಮಂದಿಯಲ್ಲಿ ಒಬ್ಬರು ಬಾತ್ರಾ …
Read More »KA 03 NB 4648 Registration ಗಾಡಿಯಲ್ಲಿ ಬಂದ ಮಹಿಳೆಯರ ಈ ಕಾರ್ಯಕ್ಕೆ ಏನೆನ್ನಬೇಕು?
ಉಳ್ಳಾಲ: ನೇತ್ರಾವತಿ ನದಿ ತೀರವನ್ನು ಮಾಲಿನ್ಯ ಮಾಡುವ ಕಾರ್ಯ ಕಳೆದ ಹಲವು ವರ್ಷಗಳಿಂದ ಎಗ್ಗಿಲ್ಲದೆ ನಡೆಯುತ್ತಿದೆ. ಅದರಲ್ಲೂ ರಾಷ್ಟ್ರೀಯ ಹೆದ್ದಾರಿ 66ರ ಆಡಂಕುದ್ರು ಬಳಿ ಇರುವ ನೇತ್ರಾವತಿ ಸೇತುವೆ ಜನರಿಗೆ ಕಸ, ತ್ಯಾಜ್ಯ ಎಸೆಯಲು ಅತ್ಯಂತ ಸುಲಭ ಜಾಗವಾಗಿತ್ತು. ನೇತ್ರಾವತಿ ಸೇತುವೆಯಲ್ಲಿ ಸರಣಿ ಆತ್ಮಹತ್ಯೆ ಬಳಿಕ ಸೇತುವೆಗೆ ಎತ್ತರದ ತಂತಿ ಬೇಲಿ ಹಾಕಿದ ಬಳಿಕ ಆತ್ಮಹತ್ಯೆ ಪ್ರಮಾಣ ಕಡಿಮೆಯಾದರೂ ಸೇತುವೆ ಮೂಲಕ ನದಿಗೆ ಕಸ ಎಸೆಯುವುದು ಮಾತ್ರ ಇನ್ನೂ ನಿಂತಿಲ್ಲ. …
Read More »ಹೆಚ್ಚುತ್ತಿರುವ ಡಿಜಿಟಲ್ ವಂಚನೆಗಳು ಹಾಗೂ ಯುಪಿಐ ಹಗರಣಗಳು
ನವದೆಹಲಿ: ದೇಶದ ಪೂರ್ವ ರಾಜ್ಯಗಳು ಮಾರುಕಟ್ಟೆಗಳ ಮೂಲಕ ಹೆಚ್ಚಿನ ಮಟ್ಟದ ಡಿಜಿಟಲ್ ವಂಚನೆಗಳು ಅಥವಾ ಯುಪಿಐ ಹಗರಣಗಳಿಗೆ (ಶೇಕಡಾ 41) ಸಾಕ್ಷಿಯಾಗುತ್ತಿವೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಪಾವತಿ ಅಪ್ಲಿಕೇಶನ್ಗಳು ಮತ್ತು ಆನ್ಲೈನ್ ಟ್ರಸ್ಟ್ಚೆಕರ್ ಪ್ರಕಾರ, ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಅಸ್ಸಾಂ, ಕಾಶ್ಮೀರ, ಅರುಣಾಚಲ ಪ್ರದೇಶ, ಮೇಘಾಲಯ, ತ್ರಿಪುರ, ನಾಗಾಲ್ಯಾಂಡ್, ಮಿಜೋರಾಂ, ಮಣಿಪುರ, ಹಿಮಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ವಂಚನೆ ದತ್ತಾಂಶ ಒಳನೋಟಗಳು ಮತ್ತು ವಿಶ್ಲೇಷಣೆಯ ಪ್ರಾರಂಭ ಕೆವೈಸಿ, ನಕಲಿ …
Read More »ದೆಹಲಿ ಆಸ್ಪತ್ರೆಯಲ್ಲಿಆಕ್ಸಿಜನ್ ಸಿಗದೇ ವೈದ್ಯ ಸೇರಿ 8 ಸೋಂಕಿತರು ಸಾವನ್ನಪ್ಪಿರುವ ಘಟನೆ
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆಯೇ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಆರಂಭವಾಗಿದ್ದು, ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಆಕ್ಸಿಜನ್ ಸಿಗದೇ ವೈದ್ಯ ಸೇರಿ 8 ಸೋಂಕಿತರು ಸಾವನ್ನಪ್ಪಿರುವ ಘಟನೆ ದೆಹಲಿಯ ಆಸ್ಪತ್ರೆಯಲ್ಲಿ ನಡೆದಿದೆ. ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಈಗಾಗಲೇ ದೆಹಲಿಯ ಎರಡು ಆಸ್ಪತ್ರೆಗಳಲ್ಲಿ ಸರ್ ಗಂಗಾರಾಮ್ ಆಸ್ಪತ್ರೆ ಹಾಗೂ ಜೈಪುರ ಗೋಲ್ಡನ್ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಾಗಿ ರೋಗಿಗಳು ಸಾವನ್ನಪ್ಪಿದ್ದರು. ಇದೀಗ ಬಾತ್ರಾ ಆಸ್ಪತ್ರೆಯಲ್ಲಿಯೂ ಆಕ್ಸಿಜನ್ ಇಲ್ಲದೇ …
Read More »ಆಕ್ಸಿಜನ್ ಮತ್ತು ಜೀವ ರಕ್ಷಕ ರೆಮಡಿಸಿವಿಯರ್ ಇಂಜೇಕ್ಷನಗಳನ್ನು ಕೂಡಲೇ ಪೂರೈಸಬೇಕೆಂದು ರಾಜಕೀಯ ಧುರೀಣ ಅಶೋಕ ಪೂಜಾರಿ ಯವರು ಸರಕಾರವನ್ನು ಆಗ್ರಹಿಸಿದ್ದಾರೆ.
ಗೋಕಾಕ : ನಗರದ ಸರಕಾರಿ ಆಸ್ಪತ್ರೆಯ ಹಳೆಯ ಕಟ್ಟಡವನ್ನು ಆಕ್ಸಿಜನ್ ಪೂರೈಕೆಯ ನೂರು (100)ಬೆಡ್ಗಳ ಕರೋನಾ ಆರೈಕೆ ಕೇಂದ್ರವನ್ನಾಗಿ ಪರಿವರ್ತಿಸುವದರ ಜೊತೆಗೆ ಎಲ್ಲ ಕರೋನಾ ಖಾಸಗಿ ಆಸ್ಪತ್ರೆಗಳಿಗೆ ಸಮರ್ಪಕ ಆಕ್ಸಿಜನ್ ಮತ್ತು ಜೀವ ರಕ್ಷಕ ರೆಮಡಿಸಿವಿಯರ್ ಇಂಜೇಕ್ಷನಗಳನ್ನು ಕೂಡಲೇ ಪೂರೈಸಬೇಕೆಂದು ರಾಜಕೀಯ ಧುರೀಣ ಅಶೋಕ ಪೂಜಾರಿ ಯವರು ಸರಕಾರವನ್ನು ಆಗ್ರಹಿಸಿದ್ದಾರೆ. ನಗರದ ‘ಜ್ಞಾನ ಮಂದಿರ’ ಆಧ್ಯಾತ್ಮ ಕೇಂದ್ರದಲ್ಲಿ ಇಂದು ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ನಗರದ ಸರಕಾರಿ ಆಸ್ಪತ್ರೆ ಹಳೇಯ …
Read More »2 ಲಕ್ಷಕ್ಕೂ ಅಧಿಕ ಲಸಿಕೆ ತುಂಬಿದ್ದ ಟ್ರಕ್ ಪೊಲೀಸರ ವಶಕ್ಕೆ
ಭೋಪಾಲ್: ರಸ್ತೆ ಬದಿಗೆ ತುಂಬಾ ಹೊತ್ತು ನಿಂತಿದ್ದ ಟ್ರಕ್ ಅನ್ನು ಅನುಮಾನದಿಂದ ಪೊಲೀಸರು ಪರಿಶೀಲಿಸಿದಾ 2 ಲಕ್ಷಕ್ಕೂ ಅಧಿಕ ಲಸಿಕೆ ಇರುವುದು ಪತ್ತೆಯಾಗಿದೆ. ಮಧ್ಯಪ್ರದೇಶ ಕರೇಲಿ ಬಸ್ನಿಲ್ದಾಣದ ಬಳಿ ನರ್ಸಿಂಗ್ಪುರ್ನಲ್ಲಿ ನಿಂತಿದ್ದ ಟ್ರಕ್ವೊಂದನ್ನು ಪೊಲೀಸರು ತಪಾಸಣೆ ನಡಸಿದಾಗ ಅದರಲ್ಲಿ 2,40,000 ಕೊವ್ಯಾಕ್ಸಿನ್ ಲಸಿಕೆ ಇರುವುದು ಪತ್ತೆಯಾಗಿದೆ. ಟ್ರಕ್ ತುಂಬಾ ಸಮಯದಿಂದ ಒಂದೇ ಕಡೆ ನಿಂತಿತ್ತು.ಹೀಗಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಟ್ರಕ್ನಲ್ಲಿ ಸಿಕ್ಕ ಲಸಿಕೆ ಸರಿಸುಮಾರು 8 ಕೋಟಿ ರೂಪಾಯಿ …
Read More »
Laxmi News 24×7