ಸ್ಯಾಂಡಲ್ ವುಡ್ ನಟ ವಿಜಯ್ ರಾಜ್ ಕುಮಾರ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅನಂತು ವರ್ಸಸ್ ನುರ್ಸತ್ ಸಿನಿಮಾ ಬಳಿಕ ವಿನಯ್ ರಾಜ್ ಕುಮಾರ್ ಮತ್ತೆ ತೆರೆಮೇಲೆ ಬಂದಿಲ್ಲ. ಇದೀಗ ಹೊಸ ಸಿನಿಮಾ ಮೂಲಕ ಮತ್ತೆ ಸದ್ದು ಮಾಡುತ್ತಿದ್ದಾರೆ. ವಿನಯ್ ರಾಜ್ ಕುಮಾರ್ ಹೊಸ ಸಿನಿಮಾಗೆ ಪೆಪೆ ಎಂದು ಹೆಸರಿಡಲಾಗಿದೆ. ಚಿತ್ರದಲ್ಲಿ ವಿನಯ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಆಕ್ಷನ್ ಸಿನಿಮಾದಲ್ಲಿ ನಟಿಸುತ್ತಿದ್ದು, ಫಸ್ಟ್ ಲುಕ್ನಲ್ಲಿ …
Read More »ರಸ್ತೆಯಲ್ಲಿ ಹೋಗೋ ಕುಡುಕ ಮಾತನಾಡುವ ಹಾಗೇ ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಈಶ್ವರಪ್ಪ
ಶಿವಮೊಗ್ಗ : ವಿರೋಧ ಪಕ್ಷ ಇರೋದೇ ಟೀಕೆ ಮಾಡೋಕೆ ಅವರ ಕೆಲಸಾನೇ ಅದು. ವಿರೋಧ ಪಕ್ಷ ಅಡಳಿತ ಪಕ್ಷ ಒಳ್ಳೆಯ ಕೆಲಸ ಮಾಡಿದೇ ಎಂದು ಅಭಿನಂದಿಸಲು ಸಾಧ್ಯವೇ .?? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು. ನಗರದಲ್ಲಿ ಮಾತಾನಾಡಿದ ಅವರು, ವಿರೋಧ ಪಕ್ಷದ ಟೀಕೆಗಳನ್ನುಗುಣಾತ್ಮಕವಾಗಿ ಸ್ವಾಗತಿಸುತ್ತೇವೆ. ಟೀಕೆ ಸರಿ ಇದ್ದರೇ ತಿದ್ದಿಕೊಳ್ಳುತ್ತೇವೆ. ವಿರೋಧ ಪಕ್ಷದವರು ಎಲ್ಲದಕ್ಕೂ ಟೀಕೆ ಮಾಡುವುದೇ ಅವರ ಕೆಲಸ ಅಂಥ ಅಂದುಕೊಂಡಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಅವರ ಸಲಹೆ- …
Read More »ದೆಹಲಿಯಲ್ಲಿ ಲಾಕ್ ಡೌನ್ :ರಾಜ್ಯಸಭಾ ನೌಕರರಿಗೆ ವರ್ಕ್ ಫ್ರಮ್ ಹೋಂ
ನವದೆಹಲಿ : ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ರಾಷ್ಟ್ರ ರಾಜಧಾನಿಯಲ್ಲಿ ಲಾಕ್ಡೌನ್ ಹೇರಿರುವ ಹಿನ್ನೆಲೆಯಲ್ಲಿ ರಾಜ್ಯಸಭೆಯ ಎಲ್ಲಾ ನೌಕರಿಗೆ ಶುಕ್ರವಾರದವರೆಗೆ ವರ್ಕ್ ಫ್ರಮ್ ಹೋಂ ನೀಡಲಾಗಿದೆ. “ಈ ಅವಧಿಯಲ್ಲಿ ಕಚೇರಿಯ ಸುಗಮ ಕಾರ್ಯನಿರ್ವಹಣೆಗೆ ಮನೆಯಿಂದ ಕೆಲಸ ಮಾಡುವವರು ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ಲಭ್ಯವಿರಬೇಕು. ರಾಜ್ಯಸಭಾ ಸಚಿವಾಲಯದ ಎಲ್ಲಾ ವರ್ಗದ ನೌಕರರು, ಕಚೇರಿಯಲ್ಲಿ ಕೆಲಸ ಮಾಡುವ ಅವಶ್ಯಕತೆಗಳಿಗೆ ಒಳಪಟ್ಟು, 20.04.2021 ರಿಂದ 23.04.2021 ರವರೆಗೆ ಮನೆಯಿಂದ ಕೆಲಸ ಮಾಡಬಹುದು. ಆಡಳಿತಾತ್ಮಕ ತುರ್ತು …
Read More »ಮೇ 1ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯಬಹುದು
ನವದೆಹಲಿ, ಏಪ್ರಿಲ್ 19: ದೇಶದಲ್ಲಿ ಮೂರನೇ ಹಂತದ ಕೊರೊನಾ ಲಸಿಕಾ ಅಭಿಯಾನವು ಮೇ 1ರಿಂದ ಆರಂಭಗೊಳ್ಳಲಿದ್ದು, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯಲು ಅರ್ಹ ಎಂದು ಕೇಂದ್ರ ಸರ್ಕಾರ ಸೋಮವಾರ ಪ್ರಕಟಿಸಿದೆ. ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ದೇಶದಲ್ಲಿ ಒಂದು ವರ್ಷದಿಂದಲೂ ಕೊರೊನಾ ಲಸಿಕೆ ಅಭಿವೃದ್ಧಿಯಲ್ಲಿ ಭಾರತ ಸರ್ಕಾರ ಪರಿಶ್ರಮ ಪಡುತ್ತಿದೆ. ಅತಿ ಕಡಿಮೆ ಅವಧಿಯಲ್ಲಿ ಹೆಚ್ಚೆಚ್ಚು ಭಾರತೀಯರು ಲಸಿಕೆ ಪಡೆಯಬೇಕೆಂಬುದು ನಮ್ಮ ಆಶಯವಾಗಿದೆ ಎಂದು ಪ್ರಧಾನಿ ನರೇಂದ್ರ …
Read More »21 ಸಾರಿಗೆ ನೌಕರರ ಅಮಾನತು :ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ
ವಿಜಯಪುರ: ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಜಿಲ್ಲೆಯಲ್ಲಿ ಮುಷ್ಕರ ನಿರತ ನೌಕರರ ಪೈಕಿ ಸೋಮವಾರ 21 ಸಿಬ್ಬಂದಿಯನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ತಿಳಿಸಿದ್ದಾರೆ. ಕರ್ತವ್ಯಕ್ಕೆ ಗೈರುಹಾಜರು ಆಗಿರುವುದು ಮತ್ತು ಕರ್ತವ್ಯಕ್ಕೆ ಬರುವವರಿಗೆ ತೊಂದರೆ ಮಾಡಿ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಮುದ್ದೇಬಿಃಆಳ …
Read More »ಈ ಊರಿಗೆ 2 ಸಂಸದರು, 2 ಶಾಸಕರು : ಆಸ್ಪತ್ರೆಗೆ ಹೋಗಬೇಕಾದರೆ 25 ಕಿ.ಮೀ. ಸಂಚರಿಸಬೇಕು!
ಕುಂದಾಪುರ: ಈ ಪಂಚಾಯತ್ ಎರಡು ಲೋಕಸಭಾ ಕ್ಷೇತ್ರ, ಎರಡು ವಿಧಾನಸಭಾ ಕ್ಷೇತ್ರ, ಇಬ್ಬರು ಸಂಸದರು, ಇಬ್ಬರು ಶಾಸಕರ ವ್ಯಾಪ್ತಿಯಲ್ಲಿ ಬರುತ್ತದೆ. ಆದ್ದರಿಂದ ಊರು ಸರ್ವ ಸೌಲಭ್ಯಗಳನ್ನೂ ಹೊಂದಿರಬೇಕಿತ್ತು. ಆದರೆ ಇಲ್ಲಿನ ಜನರಿಗೆ ಏನಾದರೂ ಅನಾರೋಗ್ಯ ತಲೆದೋರಿದರೆ ತುರ್ತು ಚಿಕಿತ್ಸೆಗೆ 20-25 ಕಿ.ಮೀ. ದೂರ ಬರಬೇಕು; ಅದೂ ಸಣ್ಣ ಆಸ್ಪತ್ರೆಗೆ. ದೊಡ್ಡ ಆಸ್ಪತ್ರೆ ಆಗಬೇಕೆಂದರೆ 45 ಕಿ.ಮೀ. ದೂರ ಹೋಗಬೇಕು. ಇದು ಉಡುಪಿ – ಚಿಕ್ಕಮಗಳೂರು, ಶಿವಮೊಗ್ಗ ಲೋಕಸಭಾ ಕ್ಷೇತ್ರ, ಕುಂದಾಪುರ, …
Read More »ಭಾರತದಲ್ಲಿ ಒಂದೇ ದಿನದಲ್ಲಿ 73,600 ಕೋವಿಡ್ ಲಸಿಕೆ ಕೇಂದ್ರಗಳ ಕಾರ್ಯಾಚರಣೆ
ನವದೆಹಲಿ : ಭಾರತದಲ್ಲಿ ಸೋಮವಾರ ಒಂದೇ ದಿನದಲ್ಲಿ 73,600 ಕೊರೋನಾ ಲಸಿಕೆ ಕೇಂದ್ರಗಳು ಕಾರ್ಯನಿರ್ವಹಿಸುವ ಮೂಲಕ ಇಲ್ಲಿವರೆಗಿನ ಅತ್ಯಂತ ಹೆಚ್ಚಿನ ಲಸಿಕಾ ಕೇಂದ್ರ ಕಾರ್ಯಾಚರಣೆಗೆ ಸಾಕ್ಷಿಯಾಯಿತು. ಇದು ಒಂದು ದಿನದಲ್ಲಿ ದೇಶಾದ್ಯಂತ ಸರಾಸರಿ 45,000 ಕ್ರಿಯಾತ್ಮಕ ಸಿವಿಸಿಗಳಿಗಿಂತ 28,600 ಹೆಚ್ಚಾಗಿದೆ. ಸೋಮವಾರ ರಾತ್ರಿ 8 ಗಂಟೆಯವರೆಗೆ ಭಾರತದಲ್ಲಿ 31 ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್ ಗಳನ್ನು ನೀಡಲಾಯಿತು. ಫಲಾನುಭವಿಗಳಲ್ಲಿ ಸುಮಾರು 21.7 ಲಕ್ಷ ಜನರು ತಮ್ಮ ಮೊದಲ ಡೋಸ್ ಪಡೆಯುತ್ತಿದ್ದರು …
Read More »ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆ ಮದ್ಯ ಖರೀದಿಗೆ ಮುಗಿಬಿದ್ದ ಮದ್ಯಪ್ರಿಯರು
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ನಿಯಂತ್ರಣಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ 6 ದಿನ ಲಾಕ್ ಡೌನ್ ಘೋಷಿಸಿದೆ. ಸೋಮವಾರ ರಾತ್ರಿಯಿಂದಲೇ ದೆಹಲಿಯಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆ ಮದ್ಯಪ್ರಿಯರು ಮದ್ಯ ಖರೀದಿಗೆ ಮುಗಿಬಿದ್ದ ದೃಶ್ಯಗಳು ಕಂಡು ಬಂದಿವೆ. ದೆಹಲಿಯಲ್ಲಿ ಪರಿಸ್ಥಿತಿ ಕೈ ಮೀರಿದ್ದು, ಸೋಂಕು ತಡೆಗೆ ಲಾಕ್ಡೌನ್ ಜಾರಿಮಾಡಲಾಗಿದೆ. ಸಿಎಂ ಕೇಜ್ರಿವಾಲ್ ಅವರು, ಇದು ಸಣ್ಣ ಪ್ರಮಾಣದ ಲಾಕ್ ಡೌನ್ ಆಗಿದ್ದು, …
Read More »ಸ್ವತಃ ಲಾಕ್ ಡೌನ್ ಹೇರಿಕೊಂಡ ಗ್ರಾಮಸ್ಥರು
ಬೀದರ್ : ಕೊರೊನಾ ಅಟ್ಟಹಾಸಕ್ಕೆ ಗಡಿ ಜಿಲ್ಲೆ ನಲುಗಿ ಹೋಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರವು ಸಾಕಷ್ಟು ರೂಲ್ಸ್ ಜಾರಿಗೊಳಿಸುತ್ತಿದೆ. ಸದ್ಯ ಗ್ರಾಮಸ್ಥರೇ ಇಲ್ಲಿ ಸ್ವಯಂ ಲಾಕ್ ಡೌನ್ ಘೋಷಿಸಿಕೊಳ್ಳುತ್ತಿದ್ದಾರೆ. ಹೌದು! ಜಿಲ್ಲೆಯಲ್ಲಿ ಪ್ರತಿ ದಿನ 400ರ ಆಸುಪಾಸಿನಲ್ಲಿ ಕೇಸ್ ಗಳು ದಾಖಲಾಗುತ್ತಿವೆ. ಇದರಿಂದ ಭಯಗೊಂಡ ಗ್ರಾಮಸ್ಥರು ಸ್ವಯಂ ಲಾಕ್ ಡೌನ್ ಹೇರಿಕೊಳ್ಳುತ್ತಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಗ್ರಾಮದ ಹಿರಿಯರು, ಜನಪ್ರತಿನಿಧಿಗಳು ಸೇರಿಕೊಂಡು ಮಹಾಮಾರಿಗೆ ಕಡಿವಾಣ ಹಾಕಲು ಈ ನಿರ್ಧಾರ …
Read More »ಲಾಕ್ಡೌನ್ ಮಾಡಿದ್ರೆ ಜನ ಸಾಯ್ತಾರೆ, ಸೆಕ್ಷನ್ 144 ತನ್ನಿ: ಸಿ.ಎಂ.ಇಬ್ರಾಹಿಂ
ಬೆಂಗಳೂರು: ಲಾಕ್ಡೌನ್ ಮಾಡಿದ್ರೆ ಜನರು ಸಾಯ್ತಾರೆ. ಅದರ ಬದಲಾಗಿ ಬೆಂಗಳೂರಿನಲ್ಲಿ ಸೆಕ್ಷನ್ 144 ಜಾರಿಗೆ ತರಬೇಕು. ಎಲ್ಲದಕ್ಕೂ ಲಾಕ್ಡೌನ್ ಪರಿಹಾರ ಅಲ್ಲ ಎಂದು ಕಾಂಗ್ರೆಸ್ ಎಂಎಲ್ಸಿ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಸಿಎಂ, ಸಚಿವರು, ಬೆಂಗಳೂರಿನ ಶಾಸಕರ ಜೊತೆಗಿನ ಸಭೆ ಬಳಿಕ ಸಿಎಂ ಇಬ್ರಾಹಿಂ ಮಾಧ್ಯಮಗಳ ಜೊತೆ ಮಾತನಾಡಿದರು. ಸರ್ಕಾರ ಸಂಪೂರ್ಣವಾಗಿ ಗೊಂದಲದಲ್ಲಿದ್ದು, ಗಂಟು ಹಾಕಿ ಹೊಳೆಯಲ್ಲಿ ಬಿಟ್ಟಂತಾಗಿದೆ. ರಾಜ್ಯದಲ್ಲಿ ಬೆಡ್, ಆಕ್ಸಿಜನ್, ಇಂಜೆಕ್ಷನ್, ಲಸಿಕೆ ಮತ್ತು ಔಷಧಿಗಳ ಕೊರತೆ ಇದೆ. ಈ …
Read More »
Laxmi News 24×7