ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿದೆ. ತಮ್ಮ ಕೋವಿಡ್ ವರದಿ ಪಾಸಿಟಿವ್ ಬರುತ್ತಲೇ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿರುವ ಕುಮಾರಸ್ವಾಮಿ ಅವರು, ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಮತ್ತು ಅವರ ಶ್ರೀಮತಿ ಚನ್ನಮ್ಮ ಅವರಿಗೂ ಸೋಂಕು ತಗುಲಿತ್ತು. ಇದೀಗ ಕುಮಾರಸ್ವಾಮಿ ಅವರಿಗೂ ಸೋಂಕು ತಗುಲಿದೆ. ನಿನ್ನೆಯಷ್ಟೆ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೂ ಕೊರೊನಾ ದೃಢಪಟ್ಟ …
Read More »ಮಸ್ಕಿಯಲ್ಲಿ ಝಗಮಗಿಸುವ ‘ಸಖಿ’ ಮತಗಟ್ಟೆ
ಮಸ್ಕಿ (ರಾಯಚೂರು): ಮಸ್ಕಿ ವಿಧಾನಸಭೆ ಉಪಚುನಾವಣೆಗೆ ಶನಿವಾರ ಮತದಾನ ನಡೆಯುತ್ತಿದ್ದು, ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಎರಡು ಕಡೆಗೆ ‘ಸಖಿ’ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಗಳ ವಿಶೇಷ ಅಲಂಕಾರವು ಗಮನ ಸೆಳೆಯುತ್ತಿದೆ. ಮಸ್ಕಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಶುಕ್ರವಾರ ಗುಲಾಬಿ ವರ್ಣದಲ್ಲಿ ಮುಳುಗಿಸಲಾಗಿದೆ. ‘ಪಿಂಕ್ ಬೂತ್’ ಹೆಸರಿಗೆ ತಕ್ಕಂತೆ ಗುಲಾಬಿ ವರ್ಣವೈವಿಧ್ಯದಲ್ಲಿ ಅಲಂಕಾರ ಮಾಡಲಾಗಿದ್ದು, ಕಾಲೇಜು ಮೂಲ ಕಟ್ಟಡ ಎಲ್ಲಿದೆ ಎಂದು ಹುಡುಕಾಟ ಮಾಡುವಷ್ಟು ಬದಲಾವಣೆ ಮಾಡಲಾಗಿದೆ. …
Read More »ಉಪಚುನಾವಣೆ: ಬೆಳಗಾವಿ ಮತ್ತು ಮಸ್ಕಿ, ಬಸವಕಲ್ಯಾಣದಲ್ಲಿ ಮತದಾನ ಆರಂಭ
ಬೆಳಗಾವಿ/ರಾಯಚೂರು: ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಜಿದ್ದಾಜಿದ್ದಿನ ಕಣಗಳಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಆರಂಭವಾಗಿದೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸೋಂಕು ಹರಡದಂತೆ ಎಚ್ಚರ ವಹಿಸಲು ಮತಗಟ್ಟೆಗಳಲ್ಲಿ ಅಂತರ ಕಾಯ್ದುಕೊಂಡು ಮತದಾನ ಮಾಡಬೇಕಿದೆ. ಹೀಗಾಗಿ, ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದ್ದು, ಬೆಳಿಗ್ಗೆ 7ರಿಂದ ಸಂಜೆ 7ರ ವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರದಲ್ಲಿ ಸಚಿವರಾಗಿದ್ದ ಸುರೇಶ ಅಂಗಡಿ …
Read More »ತಮಿಳು ಚಿತ್ರರಂಗದ ಹಿರಿಯ ಹಾಸ್ಯ ಕಲಾವಿದ ವಿವೇಕ್ ವಿಧಿವಶ
ಚೆನ್ನೈ: ನಿನ್ನೆ (ಏಪ್ರಿಲ್ 16) ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಮಿಳು ಚಿತ್ರರಂಗದ ಹಿರಿಯ ಹಾಸ್ಯ ಕಲಾವಿದ ವಿವೇಕ್ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ (ಏಪ್ರಿಲ್ 17) ವಿಧಿವಶರಾಗಿದ್ದಾರೆ. ಎಡ ಮುಂಭಾಗದ ಅಪಧಮನಿ ನಾಳವು ಶೇ 100 ರಷ್ಟು ಬ್ಲಾಕ್ ಆಗಿದ್ದು, ತೀವ್ರತರವಾದ ಹೃದಯಾಘಾತಕ್ಕೆ ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ವಿವೇಕ್ ಅವರ ಹೃದಯಾಘಾತಕ್ಕೆ ಗುರುವಾರ ತೆಗೆದುಕೊಂಡ ಕೋವಿಡ್ ಲಸಿಕೆ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿದ …
Read More »ಬೀದಿಬದಿ ವ್ಯಾಪಾರಿಗಳಿಗೆ ಸೌಲಭ್ಯ ಕಲ್ಪಿಸಲು ಆಗ್ರಹ
ಲಿಂಗಸುಗೂರು: ‘ಬೀದಿಬದಿ ವ್ಯಾಪಾರಿಗಳಿಗೆ ಜೀವನ ಭದ್ರತೆ ಒದಗಿಸಲು ಸ್ಥಳೀಯ ಸಂಸ್ಥೆಗಳು ವ್ಯಾಪಾರ ಘಟಕಗಳನ್ನು ರಚಿಸಿ, ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಆಗ್ರಹಿಸಿ ಬೀದಿಬದಿ ವ್ಯಾಪಾರಿಗಳ ಮಹಾಮಂಡಲ ತಾಲ್ಲೂಕು ಘಟಕದ ಪದಾಧಿಕಾರಿಗಳು ಶುಕ್ರವಾರ ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮಿ ಅವರಿಗೆ ಮನವಿ ಸಲ್ಲಿಸಿದರು. ‘ರಸ್ತೆ ಬದಿ ವ್ಯಾಪಾರಿಗಳ ಅನುಕೂಲಕ್ಕೆ ಮಾರುಕಟ್ಟೆ ಸಮಿತಿ ರಚಿಸಲಾಗಿದೆ. ಸಮಿತಿ ಸದಸ್ಯರನ್ನು ಕನಿಷ್ಠ ಮೂರು ತಿಂಗಳಿಗೊಮ್ಮೆ ಏಳು ದಿನಗಳ ನೋಟಿಸ್ ನೀಡಿ ಸಭೆ ಕರೆದು ಕುಂದುಕೊರತೆ ವಿಚಾರಣೆ ಮಾಡುವುದನ್ನು …
Read More »ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರೊಂದಿಗೆ ಸಂಪರ್ಕ ಹೊಂದಿದ್ದ ಸವದತ್ತಿ ಶಾಸಕ ಆನಂದ ಮಾಮನಿಗೆ ಕೊರೊನಾ ದೃಢ
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರೊಂದಿಗೆ ಸಂಪರ್ಕ ಹೊಂದಿದ್ದ ಸವದತ್ತಿ ಶಾಸಕ ಆನಂದ ಮಾಮನಿಗೆ ಕೊರೊನಾ ದೃಢಪಟ್ಟಿದೆ. ಉಪಚುನಾವಣಾ ಪ್ರಚಾರಕ್ಕಾಗಿ ಸಿಎಂ ಬಿಎಸ್ ಯಡಿಯೂರಪ್ಪನವರು ಕಳೆದ ನಾಲ್ಕು ದಿನಗಳಿಂದ ಬೆಳಗಾವಿ, ಬಸವ ಕಲ್ಯಾಣ, ಮಸ್ಕಿಗೆ ಪ್ರವಾಸ ಬೆಳೆಸಿದ್ದರು. ಈ ವೇಳೆ ಸಿಎಂ ಬಿಎಸ್ವೈರನ್ನು ಭೇಟಿ ಮಾಡಿದ್ದ ಸವದತ್ತಿ ಶಾಸಕ ಆನಂದ ಮಾಮನಿಗೆ ಇಂದು ಕೊರೊನಾ ಪಾಸಿಟಿವ್ ವರದಿ ಬಂದಿದೆ. ಸೋಮವಾರದಿಂದ ಜ್ವರದಲ್ಲಿ ಬಳಲುತ್ತಿರುವ ಸಿಎಂ ಬಿಎಸ್ವೈ ಮಾತ್ರೆಗಳನ್ನು ಸೇವಿಸಿ ಚುನಾವಣೆ ಪ್ರಚಾರ …
Read More »ಆಸ್ಪತ್ರೆಯಲ್ಲಿ ಬೆಡ್ ಇಲ್ಲದೇ ಪರದಾಟ; ಬೇರೆಡೆಗೆ ಕರೆದೊಯ್ದು ಕಾಪಾಡುವಷ್ಟರಲ್ಲಿ ಹಾರಿ ಹೋದ ಪ್ರಾಣಪಕ್ಷಿ
ಬೆಂಗಳೂರು: ಕೊರೊನಾ ಎರಡನೇ ಅಲೆ ಆರ್ಭಟ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಸೋಂಕಿತರನ್ನು ದಾಖಲಿಸಲು ಬೆಡ್ಗಳಿಲ್ಲದೇ ಜನರೆಲ್ಲ ಸಾವಿಗೀಡಾಗುತ್ತಿರುವ ಪರಿಸ್ಥಿತಿ ಎದುರಾಗಿದೆ. ಕೊರೊನಾ ಮಹಾಮಾರಿಯ ಹಾವಳಿ ಅಷ್ಟರ ಮಟ್ಟಿಗೆ ದೇಶಾದ್ಯಂತ ಆವರಿಸಿಕೊಂಡಿದೆ. ಬೆಂಗಳೂರಿನಲ್ಲಿ ಹಲವು ಸೋಂಕಿತರು ಸೂಕ್ತ ವ್ಯವಸ್ಥೆ ಇಲ್ಲದೇ ಪ್ರಾಣಾಪಾಯಕ್ಕೆ ಸಿಲುಕುತ್ತಿದ್ದು, ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ನಗರದಲ್ಲಿ ಕಳೆದ 3 ದಿನಗಳ ಹಿಂದೆ ಅನಾರೋಗ್ಯಕ್ಕೀಡಾದ ವ್ಯಕ್ತಿಯ ಕುಟುಂಬಸ್ಥರು ಅವರಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗಳಿಗೆ ಅಲೆದಾಡಿ ಬೆಡ್ಗಾಗಿ ಹುಡುಕಾಟ ನಡೆಸುವಷ್ಟರಲ್ಲಿ ವ್ಯಕ್ತಿಯ …
Read More »ಕೊರೊನಾ ವರದಿ “ನೆಗೆಟಿವ್” ಬಂದಿದ್ದಕ್ಕೆ ವೈದ್ಯರನ್ನು ಹಿಗ್ಗಾಮುಗ್ಗ ಥಳಿಸಿದ ವ್ಯಕ್ತಿ
ಮುಂಬೈ, ಏಪ್ರಿಲ್ 16: ತನ್ನ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ವೈದ್ಯರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆ ಮಹಾರಾಷ್ಟ್ರದ ಗೋಂಡಿಯಾ ಜಿಲ್ಲೆಯಲ್ಲಿ ನಡೆದಿದೆ. ಗೋಂಡಿಯಾದ ಆರೋಗ್ಯ ಕೇಂದ್ರದಲ್ಲಿ, ವ್ಯಕ್ತಿಯೊಬ್ಬ ಆತನ ಕುಟುಂಬದ ಮೂರು ಸದಸ್ಯರೊಂದಿಗೆ ಆರ್ಟಿಪಿಸಿಆರ್ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದ. ಪರೀಕ್ಷಾ ವರದಿಯಲ್ಲಿ ಕುಟುಂಬದ ಮೂವರದ್ದು ಪಾಸಿಟಿವ್ ಬಂದಿದ್ದು, ಈ ವ್ಯಕ್ತಿಯ ವರದಿ ಮಾತ್ರ ನೆಗೆಟಿವ್ ಬಂದಿದೆ. ಹೀಗಾಗಿ ಪರೀಕ್ಷೆಯ ವರದಿಯೇ …
Read More »ಸಾರಿಗೆ ನೌಕರರಿಗೆ ಸಿಹಿ ಹಂಚಿದ ವಿಜುಗೌಡ
ವಿಜಯಪುರ: ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಅವರು ಮುಷ್ಕರ ನಿರತ ಸಾರಿಗೆ ನೌಕರರನ್ನು ಭೇಟಿ, ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದರು. ಉಪ ಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಕ್ರಮಕೈಗೊಳ್ಳಲಿದ್ದಾರೆ ಎಂದು ವಿಜುಗೌಡ ಪಾಟೀಲ ಭರವಸೆ ನೀಡಿದರು. ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿ, ಯುಗಾದಿ ಹಬ್ಬದ …
Read More »ಬಿಜೆಪಿ ನಾಯಕನ ಮನೆಯಲ್ಲಿ ಪತ್ತೆಯಾಯ್ತಾ ರಾಶಿ ರಾಶಿ ಹಣ? ಫೋಟೋ ಹಿಂದಿನ ಸತ್ಯಾಂಶವೇ ಬೇರೆ!
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಸದ್ಯ ಚುನಾವಣೆ ಭರಾಟೆ ಜೋರಾಗಿದೆ. ಇದರ ನಡುವೆ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ಮತ್ತು ಪೋಸ್ಟ್ ವಾರ್ಗಳು ಸಹ ನಡೆಯುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ರಾಶಿ ರಾಶಿ ಹಣದ ಕಂತೆಗಳಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹಣವನ್ನು ಬಂಗಾಳ ಬಿಜೆಪಿ ನಾಯಕರೊಬ್ಬರ ಮನೆಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಕೆಲವು ಪೊಲೀಸರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡುತ್ತಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ. ಅನೇಕ ಫೇಸ್ಬುಕ್ …
Read More »
Laxmi News 24×7