Breaking News

ರಾಜಕೀಯ

ನಿಧಿ ಸಮರ್ಪಣಾ ಅಭಿಯಾನ ವೇಳೆ ಕಾರ್ಯಕರ್ತನ ಹತ್ಯೆ ಖಂಡಿಸಿ ವಿಎಚ್‍ಪಿ, ಬಜರಂಗದಳ ಪ್ರತಿಭಟನೆ

ದೆಹಲಿಯಲ್ಲಿ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ವೇಳೆ ಬಜರಂಗದಳ ಕಾರ್ಯಕರ್ತನ ಮೇಲೆ 10-15 ಯುವಕರ ತಂಡವೊಂದು ಹಲ್ಲೆ ನಡೆಸಿ ಹತ್ಯೆ ಮಾಡಿದ್ದು, ಕೂಡಲೇ ಯುವಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು. ದೆಹಲಿಯಲ್ಲಿ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ತೆರಳಿದ್ದ ವೇಳೆ …

Read More »

ಅಂದೊಂದಿತ್ತು ಕಾಲ’ ಚಿತ್ರೀಕರಣಕ್ಕೆ ಪುನೀತ್‌ ಕ್ಲ್ಯಾಪ್‌

ಬೆಂಗಳೂರು: ‘ನಮ್ಮ ಬಸವ’ ಚಿತ್ರದಲ್ಲಿ ‘ಅಂದೊಂದಿತ್ತು ಕಾಲ’ಕ್ಕೆ ಹೆಜ್ಜೆ ಹಾಕಿದ್ದ ನಟ ಪುನೀತ್‌ ರಾಜ್‌ಕುಮಾರ್‌ ಸೋಮವಾರ, ಅಣ್ಣ ರಾಘವೇಂದ್ರ ರಾಜ್‌ಕುಮಾರ್‌ ಅವರ ಹಿರಿಯ ಪುತ್ರ ನಟ ವಿನಯ್‌ ರಾಜ್‌ಕುಮಾರ್‌ ಅವರ ಹೊಸ ಚಿತ್ರ ‘ಅಂದೊಂದಿತ್ತು ಕಾಲ’ಕ್ಕೆ ಕ್ಲ್ಯಾಪ್‌ ಮಾಡುವ ಮುಖಾಂತರ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ. ನಾಗರಬಾವಿಯ ವಿನಾಯಕ ವೆಂಕಟೇಶ್ವರ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆಯಿತು. ರಾಘವೇಂದ್ರ ರಾಜ್‌ಕುಮಾರ್‌, ನಿರ್ದೇಶಕ ಪ್ರೇಮ್‌ ಸೇರಿದಂತೆ ಗಣ್ಯರು ಹಾಜರಿದ್ದರು. ಅದಿತಿ ಪ್ರಭುದೇವ ಹಾಗೂ …

Read More »

ಮತ್ತೆ ಏರಿಕೆ ಕಂಡ ಪೆಟ್ರೋಲ್ ಹಾಗೂ ಡೀಸೆಲ್ ದರ

ನವದೆಹಲಿ : ಪೆಟ್ರೋಲ್ ಹಾಗೂ ಡೀಸೆಲ್ ದರ ದೇಶದಲ್ಲಿ ದಿನೇದಿನೇ ಹೆಚ್ಚುತ್ತಿದ್ದು, ಗ್ರಾಹಕರನ್ನು ಚಿಂತೆಗೀಡಾಗುವುದೂ ಮಾಡುತ್ತಿದೆ. ಇಂದು ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್ ಗೆ 26 ಪೈಸೆ ಹೆಚ್ಚಳವಾಗಿದೆ . ಡೀಸೆಲ್ ದರ ಲೀಟರ್ ಗೆ 29 ಪೈಸೆ ಹೆಚ್ಚಳ ಮಾಡಲಾಗಿದೆ . ಪೆಟ್ರೋಲ್ ದರ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 88.99 ರೂಪಾಯಿಗಳಾಗಿವೆ . ಡೀಸೆಲ್ ಗೆ ಲೀಟರ್ ದರ 79.35 ರೂಪಾಯಿಗಳಾಗಿವೆ . ಕೇಂದ್ರ ಸರ್ಕಾರ …

Read More »

ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ:ಉಮೇಶ ಕತ್ತಿ ಇದೀಗ ಯೂಟರ್ನ್

ಬೆಂಗಳೂರು : ಮನೆಯಲ್ಲಿ ಟಿ ವಿ, ಬೈಕ್, ಫ್ರಿಡ್ಜ್ ಇದ್ದರೆ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗುವುದು ಎಂದು ಹೇಳಿಕೆ ನೀಡಿದ್ದ ಸಚಿವ ಉಮೇಶ ಕತ್ತಿ ಇದೀಗ ಯೂಟರ್ನ್ ಹೊಡೆದಿದ್ದಾರೆ. ಸಚಿವರ ಹೇಳಿಕೆ ಸಾರ್ವಜನಿಕರು, ಸ್ವಪಕ್ಷ ಹಾಗೂ ವಿರೋಧ ಪಕ್ಷದ ನಾಯಕರಿಂದ ವಿರೋಧ ವ್ಯಕ್ತ ವಾಗಿರುವ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದೆ ಮಾನದಂಡಗಳೇ ಮುಂದುವರಿಸಲಾಗುವುದು ಎಂದು ಸೋಮವಾರ ಹೇಳಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ …

Read More »

ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಗಳಿಗೆ ಸನ್ಮಾನ ಕಾರ್ಯಕ್ರಮ

ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತ್ ಕಾರ್ಯಾಲಯ ದಲ್ಲಿ ಮೊದಲ ಸಭೆ ಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಗಳಿಗೆ ಸನ್ಮಾನ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರೇಣುಕಾ ಈರಪ್ಪ ಪಾಟೀಲ ಹಾಗೂ ಉಪಾಧ್ಯಕ್ಷ ಶ್ರೀ ಭೀಮಪ್ಪ ಯಲ್ಲಪ್ಪ ಬಿರನಾಳಿ ಹಾಗೂ ಸರ್ವ ಸದಸ್ಯರು ಹಾಗೂ ಪಿಡಿಒ ಸಾಯೀಶ್ವರಿ ಮೆಣಸಿನಕಾಯಿ ಮತ್ತು ಲೇಕ್ಕಾಧಿಕಾರಿ …

Read More »

ವಾಟ್ಸಾಪ್, ಫೇಸ್‌ಬುಕ್‌ಗೆ ಸುಪ್ರೀಂ ಕೋರ್ಟ್‌ನಿಂದ ನೋಟಿಸ್ ಜಾರಿ

ನವದೆಹಲಿ: ತನ್ನ ಹೊಸ ಖಾಸಗಿತನ ನೀತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ವಾಟ್ಸಾಪ್ ಮತ್ತು ಅದರ ಮಾತೃ ಸಂಸ್ಥೆ ಫೇಸ್ ಬುಕ್ ಗೆ ನೋಟಿಸ್ ಜಾರಿ ಮಾಡಿದೆ. ಈ ಬಗ್ಗೆ ನಾಲ್ಕು ವಾರಗಳಲ್ಲಿ ಟೆಕ್ ದೈತ್ಯರಿಂದ ಪ್ರತಿಕ್ರಿಯೆ ನೀಡುವಂತೆ ತಿಳಿಸಿದೆ. ಭಾರತದಲ್ಲಿ ವಾಟ್ಸಾಪ್ ತನ್ನ ಹೊಸ ಗೌಪ್ಯತಾ ನೀತಿಯನ್ನು ಜಾರಿಗೆ ತರದಂತೆ ನಿರ್ಬಂಧ ಹೇರಬೇಕು ಮತ್ತು ಐರೋಪ್ಯ ಒಕ್ಕೂಟ ಪ್ರದೇಶದಲ್ಲಿ ಬಳಕೆದಾರರಿಗೆ ಅನ್ವಯವಾಗುವ ಗೌಪ್ಯತಾ ನೀತಿಯನ್ನು …

Read More »

ಸಿಂಘು ಗಡಿಯಲ್ಲಿ 72 ವರ್ಷದ ರೈತ ಹೃದಯಾಘಾತದಿಂದ ಸಾವು

ಹೊಸದಿಲ್ಲಿ, : ಮೂರು ಕೃಷಿ ಕಾಯ್ದೆಗಳ ವಿರುದ್ಧ ಸಿಂಘು ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪಂಜಾಬ್‌ನ 72 ವರ್ಷದ ರೈತರೋರ್ವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತಪಟ್ಟಿರುನ ರೈತ ಮೊಗ ಜಿಲ್ಲೆಯ ನಿವಾಸಿ ಹಂಸ ಸಿಂಗ್ ಎಂದು ಹರ್ಯಾಣದ ಸೋನಿಪತ್‌ನ ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿರುವ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಹಂಸ ಸಿಂಗ್ ಗುರುವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರ ಮರಣೋತ್ತರ ಪರೀಕ್ಷೆ ಶುಕ್ರವಾರ ಪೂರ್ಣಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

Read More »

ರೈತರು, ಮನೆ ನಿರ್ಮಿಸುವವರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್

ಶಿವಮೊಗ್ಗ: ಈ ಹಣಕಾಸು ಸಾಲಿನಲ್ಲಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳು ಮಾರ್ಚ್ ಒಳಗಾಗಿ ಪೂರ್ಣಗೊಳಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದ್ದಾರೆ. ಶಿಕಾರಿಪುರದಲ್ಲಿ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ತೋಟಗಾರಿಕಾ ಬೆಳೆಗಳನ್ನು ಹೆಚ್ಚು ಬೆಳೆಯಲು ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಪ್ರತಿ ವರ್ಷ ತೋಟಗಾರಿಕಾ ಬೆಳೆಗಳ ಕ್ಷೇತ್ರ ಹೆಚ್ಚಳವಾಗಬೇಕು. ರೈತರು ಮಿಶ್ರ ಬೆಳೆ ಬೆಳೆಯುವುದರಿಂದ ಹೆಚ್ಚಿನ ಆರ್ಥಿಕ ಲಾಭ ಪಡೆಯಲು ಸಾಧ್ಯವಿದೆ …

Read More »

ಡಿಜಿಟಲ್‌ ರೂಪದಲ್ಲಿ ವಿಮಾ ದಾಖಲೆ: ಐಆರ್‌ಡಿಎಐ

ನವದೆಹಲಿ: ವಿಮಾ ಪಾಲಿಸಿ ಹೊಂದಿರುವವರಿಗೆ ಪಾಲಿಸಿಯ ದಾಖಲೆಗಳನ್ನು ಡಿಜಿಟಲ್ ಸ್ವರೂಪದಲ್ಲಿ ನೀಡಬೇಕು ಎಂದು ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು (ಐಆರ್‌ಡಿಎಐ) ಕಂಪನಿಗಳಿಗೆ ಸೂಚನೆ ನೀಡಿದೆ. ಈ ದಾಖಲೆ ಬಳಸಿಕೊಳ್ಳುವುದು ಹೇಗೆ ಎಂಬುದನ್ನು ಪಾಲಿಸಿದಾರರಿಗೆ ತಿಳಿಸಿಕೊಡಬೇಕು ಎಂದು ಕೂಡ ಅದು ಸೂಚಿಸಿದೆ. ಈ ಕ್ರಮಗಳನ್ನು ಕೈಗೊಳ್ಳುವುದರಿಂದ ವಿಮಾ ಕ್ಲೇಮ್‌ ಪ್ರಕ್ರಿಯೆಗೆ ವೇಗ ಸಿಗುತ್ತದೆ ಎಂದು ಪ್ರಾಧಿಕಾರ ಹೇಳಿದೆ. ಪಾಲಿಸಿ ದಾಖಲೆಗಳನ್ನು ಡಿಜಿಟಲ್ ಸ್ವರೂಪದಲ್ಲಿ ನೀಡುವುದರಿಂದ ವೆಚ್ಚ ಕಡಿಮೆ ಆಗುತ್ತದೆ, ದಾಖಲೆಗಳು …

Read More »

ಒಂದು ವರ್ಷದೊಳಗೆ ರಾಜ್ಯದ ಎಲ್ಲಾ ಬಂಜಾರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸಲಾಗುವುದು: BSY

ದಾವಣಗೆರೆ: ಮುಂದಿನ ಒಂದು ವರ್ಷದೊಳಗೆ ರಾಜ್ಯದ ಎಲ್ಲಾ ಬಂಜಾರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕಂದಾಯ ಅಧಿಕಾರಿಗಳಿಗೆ ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಶ್ರೀ ಸಂತ ಸೇವಾಲಾಲ್ ಮಹಾರಾಜರ 282ನೇ ಜಯಂತ್ಯೋತ್ಸವ ಉದ್ಘಾಟಿಸಿ, ಮಾತನಾಡಿದ ಅವರು, ಮುಂದಿನ ಸೇವಾಲಾಲ್ ಜಯಂತಿ ವೇಳೆಗೆ ಸರ್ವೆ ಮುಗಿಸಿ ಕಂದಾಯ ಗ್ರಾಮಗಳನ್ನಾಗಿ ಮಾಡುವ ಕಾರ್ಯ ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದರು. ಸೂರಗೊಂಡನಕೊಪ್ಪಕ್ಕೆ ಮಂಜೂರಾಗಿರುವ ರೇಲ್ವೆ ಸ್ಟೇಷನ್ ಗೆ ಸಂತ …

Read More »