Breaking News

ರಾಜಕೀಯ

ವಿವಾದಿತ ಸ್ಥಳದಿಂದ ಚೀನ ಅಕ್ರಮ ಟೆಂಟು ತೆರವು : ವಿಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ

ಹೊಸದಿಲ್ಲಿ: ಲಡಾಖ್‌ನ ಎಲ್‌ಎಸಿಯ ವಿವಾದಿತ ಸ್ಥಳದಿಂದ ಚೀನ ಸೇನೆ ವಾಪಸಾತಿ ಕೈಗೊಳ್ಳುತ್ತಿರುವ ವೀಡಿಯೊವೊಂದನ್ನು ಭಾರತೀಯ ಸೇನೆ ಮಂಗಳವಾರ ಬಿಡುಗಡೆ ಮಾಡಿದೆ. ಹಿಮಬೆಟ್ಟದ ನೆತ್ತಿ ಮೇಲೆ ಹೂಡಿದ್ದ ಅಕ್ರಮ ಟೆಂಟ್‌ಗಳನ್ನು ಪಿಎಲ್‌ಎ ಸೈನಿಕರು ಕೀಳುತ್ತಿರುವ ದೃಶ್ಯಗಳು ವೀಡಿಯೋದಲ್ಲಿವೆ. ಯುದ್ದೋಪಕರಣಗಳನ್ನು ಹೊತ್ತು ಪರ್ವತದಿಂದ ಇಳಿಯುತ್ತಾ, ತಮಗಾಗಿ ಕಾಯುತ್ತಿರುವ ಟ್ರಕ್‌ನತ್ತ ಚೀನೀ ಸೈನಿಕರು ಧಾವಿಸುತ್ತಿರುವ ದೃಶ್ಯಗಳನ್ನು ಝೂಮ್‌ ನೋಟದಲ್ಲಿ ವೀಡಿಯೋ ತೋರಿಸಿದೆ. ನಿರ್ಮಾಣಗಳು ಉಡೀಸ್‌: ಅಲ್ಲದೆ ಈ 10 ತಿಂಗಳಲ್ಲಿ ಸೈನಿಕರು ತಂಗಲು, ಯುದ್ದೋಪಕರಣಗಳನ್ನು …

Read More »

BREAKING: ದೇಶದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್ – 9 ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ 9ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ತೈಲ ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ನಡುವೆಯೇ ತೈಲದ ಬೆಲೆ ಏರಿಕೆ ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ 100 ರೂ. ಸನಿಹಕ್ಕೆ ಬಂದಿದೆ. ಇವತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಲಾ 25 ಪೈಸೆಯಷ್ಟು ಹೆಚ್ಚಳವಾಗಿದೆ. ದೆಹಲಿಯಲ್ಲಿ ಒಂದು ಲೀಟರ್ …

Read More »

ಶ್ರೀಮಂತ ರೈತ..! ಹೆಲಿಕಾಪ್ಟರ್ ಖರೀದಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ ಹಾಲು ಉತ್ಪಾದಕ..!!

ಭಿವಾಂಡಿ: ಮಹಾರಾಷ್ಟ್ರದ ಭಿವಾಂಡಿಯ ರೈತ ಮತ್ತು ಉದ್ಯಮಿ ಜನಾರ್ಧನ್ ಭೋಯಿರ್ ಅವರು 30 ಕೋಟಿ ರೂಪಾಯಿಯ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಹಾಲು ಉತ್ಪಾದಕರಾಗಿರುವ ಜನಾರ್ಧನ್ ಡೈರಿ ವ್ಯವಹಾರದಲ್ಲಿ ತೊಡಗಿಕೊಂಡಿದ್ದು, ದೇಶದ ವಿವಿಧ ನಗರಗಳಿಗೆ ಪ್ರಯಾಣಿಸಲು ಹೆಲಿಕಾಪ್ಟರ್ ಖರೀದಿಸಿದ್ದಾರೆ. ಇದರಿಂದ ತಮ್ಮ ಪ್ರವಾಸ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ. ಡೈರಿ ವ್ಯವಹಾರಗಳಿಗೆ ಆಗಾಗ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್ ಗೆಪ್ರಯಾಣಿಸಬೇಕಿದೆ. ನಾನು ಭೇಟಿ ನೀಡಲಿರುವ ಎಲ್ಲಾ ನಗರಗಳಲ್ಲಿ ವಿಮಾನ ನಿಲ್ದಾಣಗಳು ಇರುವುದಿಲ್ಲ. …

Read More »

ಮಧ್ಯ ಪ್ರದೇಶ: ಬಸ್ ಕಾಲುವೆಗೆ ಬಿದ್ದು 35 ಮಂದಿ ಸಾವು, ಹಲವು ಪ್ರಯಾಣಿಕರು ನಾಪತ್ತೆ

ಸಿಧಿ/ರೇವಾ/ಭೋಪಾಲ್: ಮಧ್ಯ ಪ್ರದೇಶದ ಸಿಧಿ ಜಿಲ್ಲೆಯ ಪಾಟ್ನಾ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಬಸ್ಸೊಂದು ಸೇತುವೆಯಿಂದ ಕಾಲುವೆಗೆ ಉರುಳಿ ಬಿದ್ದಿದ್ದು, ಏಳು ಮಹಿಳೆಯರು ಸೇರಿದಂತೆ ಕನಿಷ್ಠ 35 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಇತರ ಹಲವು ಪ್ರಯಾಣಿಕರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈವರೆಗೆ ಕಾಲುವೆಯಿಂದ 35ಕ್ಕೂ ಹೆಚ್ಚು ಶವಗಳನ್ನು ಹೊರತೆಗೆಯಲಾಗಿದೆ. ಸಾವಿನ ಸಂಖ್ಯೆ 40 ದಾಟಬಹುದು ಎಂದು ಇನ್ಸ್‌ಪೆಕ್ಟರ್ ಜನರಲ್(ರೇವಾ ವಲಯ) ಉಮೇಶ್ ಜೋಗಾ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ …

Read More »

ಪಕ್ಷ ಬಿಟ್ಟು ಹೊದಂತಾ ಹಿರಿಯ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ : ಸತೀಶ್ ಜಾರಕಿಹೊಳಿ

ಬೆಳಗಾವಿ : ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕರು, ಜಿಲ್ಲಾ ಪಂಚಾಯಿತಿ ಸದಸ್ಯರು, ಪಕ್ಷ ಬಿಟ್ಟು ಹೊದಂತಾ ಹಿರಿಯ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ಮಾಡಲಾಗುತ್ತಿದೆ. ಕಾಂಗ್ರೆಸ್ ಗೆ ಆಹ್ವಾನ ಮಾಡುವುದು ಪಕ್ಷ ಕಟ್ಟುವ ಒಂದು ಭಾಗವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಇಂದಿನಿಂದ ಹಿರಿಯ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಲಾಗುತ್ತಿದ್ದು, ಗೋಕಾಕದಿಂದಲೇ ಆರಂಭಿಸಲಾಗಿದೆ. ಅಶೋಕ …

Read More »

ಉಮೇಶ್ ಕತ್ತಿಗೆ ಐಎಎಸ್ ಲಾಬಿಯೇ ಗೊತ್ತಿಲ್ಲ : ಕತ್ತಿಯನ್ನು ತಿವಿದ ಹೊನ್ನಾಳ್ಳಿ ಓರಿ

ಬೆಂಗಳೂರು : ನಮ್ಮದು ಬಡವರ, ಶೋಷಿತರ ಪರವಾದ ಸರ್ಕಾರ. ಈ ರೀತಿ ಧ್ವಂದ್ವ ಹೇಳಿಕೆಗಳನ್ನು ನೀಡಬಾರದು. ಉಮೇಶ್ ಕತ್ತಿಗೆ ಐಎಎಸ್ ಲಾಬಿಯೇ ಗೊತ್ತಿಲ್ಲ ಎಂಬುದಾಗಿ CM ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಪಡಿತರ ಕಾರ್ಡ್ ವಿಚಾರವಾಗಿ ಸಚಿವ ಉಮೇಶ್ ಕತ್ತಿ ಗೊಂದಲದ ಹೇಳಿಕೆ ಕುರಿತಂತೆ ಮಾತನಾಡಿದಂತ ಅವರು, ಉಮೇಶ ಕತ್ತಿ, IAS ಲಾಬಿಯೇ ಗೊತ್ತಿಲ್ಲ. ನಮ್ಮದು ಬಡವರ, ಶೋಷಿತರ ಪರವಾದ ಸರ್ಕಾರ. ಈ ರೀತಿಯ ದ್ವಂದ್ವ ಹೇಳಿಕೆಗಳನ್ನು ನೀಡಬಾರದು. …

Read More »

India vs Eng – ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್​ನಲ್ಲಿ ಭಾರತ ಜಯಭೇರಿ

ಚೆನ್ನೈ(ಫೆ. 16): ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆದ ಭಾರೀ ಸೋಲಿನ ಅವಮಾನಕ್ಕೆ ಅಷ್ಟೇ ಭರ್ಜರಿಯಾಗಿ ಭಾರತ ಸೇಡು ತೀರಿಸಿಕೊಂಡಿದೆ. ಚೆನ್ನೈನಲ್ಲೇ ನಡೆದ ಎರಡನೇ ಪಂದ್ಯದಲ್ಲಿ ಭಾರತ 317 ರನ್​ಗಳಿಂದ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಗೆಲ್ಲಲು 482 ರನ್ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡದ ಎರಡನೇ ಇನ್ನಿಂಗ್ಸ್ 164 ರನ್​ಗೆ ಅಂತ್ಯಗೊಂಡಿತು. ಭಾರತೀಯ ಸ್ಪಿನ್ನರ್​ಗಳ ಕೈಚಳಕಕ್ಕೆ ಆಂಗ್ಲರು ಬೇಸ್ತುಬಿದ್ದು ಸೋಲೊಪ್ಪಿದರು. ಈ ಗೆಲುವಿನ ಮೂಲಕ ಭಾರತ ಈ ನಾಲ್ಕು …

Read More »

5 ವರ್ಷಗಳ ಹಿಂದೆ ಧಾರವಾಡದಿಂದ ನಾಪತ್ತೆಯಾಗಿದ್ದ ವ್ಯಕ್ತಿ ಉತ್ತರಾಖಂಡ್​ನಲ್ಲಿ ಪತ್ತೆ

ಗದಗ: ದೂರದ ಉತ್ತರಾಖಂಡ್ ರಾಜ್ಯದಲ್ಲಿ ಸಿಲುಕಿ ನಿತ್ಯ ನರಕಯಾತನೆ ಅನುಭವಿಸುತ್ತಿದ್ದ ಕನ್ನಡಿಗ ಕೆಂಚಪ್ಪ ಮತ್ತೆ ತಾಯಿ ನಾಡಿಗೆ ಮರಳುವ ಕನಸು ಕೂಡಾ ಕಾಣದಂತಹ ಪರಿಸ್ಥಿತಿಯಲ್ಲಿದ್ದರು. ಆದ್ರೆ, ಕನ್ನಡಿಗ ಯೋಧರು ಆತನನ್ನು ಕಾಪಾಡಿ, ಮರಳಿ ತಾಯಿನಾಡಿಗೆ ಕರೆದುಕೊಂಡು ಬಂದಿದ್ದಾರೆ. ಯೋಧರ ಸಮಾಜಮುಖಿ ಕೆಲಸದಿಂದ ಅವರು ತಮ್ಮವರನ್ನು ಸೇರಿಕೊಂಡಿದ್ದಾರೆ. ಕೆಂಚಪ್ಪನಿಗೆ ತಾಯಿನಾಡಿಗೆ ಬಂದ ಸಂತಸವಾದರೆ, ಇನ್ನೊಂದೆಡೆ ವೀರ ಯೋಧರಿಗೆ ಮುಪ್ಪಿನ ವಯಸ್ಸಿನ ಹಿರಿಯ ಜೀವನ್ನು ಸಂಬಂಧಿಕರ ಹತ್ತಿರ ಸೇರಿಸಿರುವ ಸಂತೃಪ್ತಿ ಸಿಕ್ಕಿದೆ. ಗದಗ …

Read More »

ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು

ಮುಂಬೈ, ಫೆ.16 (ಪಿಟಿಐ)- ಪೂನಾ-ಮುಂಬೈ ಎಕ್ಸ್‍ಪ್ರೆಸ್‍ವೇನಲ್ಲಿ ಮುಂಜಾನೆ ಲಾರಿಯೊಂದು ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದ್ದಲ್ಲದೆ, ಖಾಪೊಲಿ ನಗರದ ಸಮೀಪ ಮತ್ತೊಂದು ವಾಹನಕ್ಕೂ ಗುದ್ದಿದ ಕಾರಣ ಸ್ಥಳದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟು ಹಲವರಿಗೆ ಗಾಯಗಳಾಗಿರುವ ಘಟನೆ ಸಂಭವಿಸಿದೆ.ನವಿ ಮುಂಬೈ ಮುನಿಸಿಪಲ್ ಕಾಪೆರ್ರೇಷನ್ (ಎನ್‍ಎಂಎಂಸಿ)ಯ ಪಶುವೈದ್ಯರು ಸೇರಿದಂತೆ ಅವರ ಕುಟುಂಬದ ಮೂವರು ಒಂದು ಕಾರಿನಲ್ಲಿ ತೆರಳುತ್ತಿದ್ದರು. ಖಾಲಾಪುರ ಟೋಲ್ ಪ್ಲಾಜಾ ಕ್ಯೂನಲ್ಲಿ ನಿಂತಿದ್ದ ಎರಡು ಕಾರುಗಳಿಗೆ ಹಿಂದಿನಿಂದ ವೇಗವಾಗಿ ಬಂದ ಲಾರಿ …

Read More »

ಫಾಸ್ಟ್‍ಟ್ಯಾಗ್ ಕಡ್ಡಾಯದ ಹಿನ್ನೆಲೆಟೋಲ್ ಸಿಬ್ಬಂದಿ ಹಾಗೂ ವಾಹನ ಚಾಲಕರ ನಡುವೆ ಮಾತಿನ ಚಕಮಕಿ

ತುಮಕೂರು, ಫೆ.16- ಫಾಸ್ಟ್‍ಟ್ಯಾಗ್ ಕಡ್ಡಾಯದ ಹಿನ್ನೆಲೆಯಲ್ಲಿ ಟೋಲ್ ಸಿಬ್ಬಂದಿ ಹಾಗೂ ವಾಹನ ಚಾಲಕರ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿರುವ ಘಟನೆಗಳು ವರದಿಯಾಗಿವೆ. ಇಂದಿನಿಂದ ಟೋಲ್‍ಗಳಲ್ಲಿ ಫಾಸ್ಟ್‍ಟ್ಯಾಗ್ ಕಡ್ಡಾಯ ಮಾಡಲಾಗಿದೆ. ಟ್ಯಾಗ್ ಇಲ್ಲದ ವಾಹನಗಳಿಂದ ಟೋಲ್ ಸಿಬ್ಬಂದಿ ದುಪ್ಪಟ್ಟು ಹಣ ಪಡೆಯಲು ಮುಂದಾದಾಗ ಚಾಲಕರು ಸಿಬ್ಬಂದಿಗಳೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ. ತುಮಕೂರಿನ ಕ್ಯಾತ್ಸಂದ್ರ ಜಾಸ್ ಟೋಲ್ ಸಮೀಪ ಸಿಬ್ಬಂದಿಗಳು ಹಾಗೂ ವಾಹನ ಚಾಲಕರು ಕೈ ಕೈ ಮಿಲಾಯಿಸಿದ್ದಾರೆ. …

Read More »