Breaking News
Home / ರಾಜಕೀಯ (page 241)

ರಾಜಕೀಯ

ಸತೀಶ್ ಜಾರಕಿಹೊಳಿ ಹೆಗಲಿಗೆ ಕೈ ಹಾಕಿಕೊಂಡು ಸಂಪುಟ ಸಭೆಗೆ ಬಂದ ಡಿಕೆಶಿ

ಬೆಂಗಳೂರು: ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಕೆಂಗಲ್ ಗೇಟ್ ಮೂಲಕ ಆಗಮಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವರಾದ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಹೆಗಲಿಗೆ ಕೈ ಹಾಕುತ್ತಾ ಬಂದು ಗಮನ ಸೆಳೆದರು. ಇತ್ತೀಚೆಗೆ ಕೆ.ಎನ್.ರಾಜಣ್ಣ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ರಾಜ್ಯದಲ್ಲಿ ಮೂರು ಡಿಸಿಎಂ ಆಗಬೇಕು ಎಂದು ಹೈಕಮಾಂಡ್ ನಾಯಕರನ್ನು ಒತ್ತಾಯಿಸಿದ್ದರು. ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕೆಂಬ ಅಪೇಕ್ಷೆ ಇದೆ ಎಂದಿದ್ದರು. ಸಿಎಂ ಸ್ಥಾನಕ್ಕೆ ಡಾ.ಜಿ.ಪರಮೇಶ್ವರ್ …

Read More »

ಹಳೆ ಜಾತಿ ಗಣತಿ ವರದಿ ಕೈಬಿಡಿ, ಹೊಸದಾಗಿ ಸಮೀಕ್ಷೆ ನಡೆಸಿ: ವೀರಶೈವ ಮಹಾಸಭೆ ಆಗ್ರಹ

ಬೆಂಗಳೂರು: ಹಲವು ಲೋಪದೋಷಗಳಿಂದ ಕೂಡಿರುವ ಜಾತಿ ಗಣತಿ ಸಮೀಕ್ಷಾ ವರದಿಯನ್ನು ಸ್ವೀಕರಿಸದೆ ಹೊಸದಾಗಿ ವೈಜ್ಞಾನಿಕತೆಯಿಂದ ಕೂಡಿದ ಜಾತಿ ಗಣತಿ ಸಮೀಕ್ಷೆ ನಡೆಸಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭೆಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ವರದಿ ಈ ತಿಂಗಳ ಅಂತ್ಯದೊಳಗೆ ಸಲ್ಲಿಕೆಯಾಗುತ್ತಿರುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಗುರುವಾರ ಅಖಿಲ ಭಾರತ ವೀರಶೈವ ಮಹಾಸಭೆ ಪದಾಧಿಕಾರಿಗಳು ಸಭೆ ನಡೆಸಿದರು. ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷರಾದ ಮಾಜಿ ಸಚಿವ …

Read More »

ವಿರುಷ್ಕಾ’ ಜೋಡಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವದಂತಿ ಹರಡಿದೆ.

ವಿರುಷ್ಕಾ’ ಜೋಡಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವದಂತಿ ಹರಡಿದೆ. ಬಾಲಿವುಡ್​​ ನಟಿ ಅನುಷ್ಕಾ ಶರ್ಮಾ ಎರಡನೇ ಮಗುವಿಗೆ ತಾಯಿಯಾಗುತ್ತಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದೆ. ಈ ಸುದ್ದಿಯನ್ನು ತಾರಾ ದಂಪತಿ ಖಚಿತಪಡಿಸಿಲ್ಲ. ಆದ್ರೀಗ ವಿರುಷ್ಕಾ ಜೋಡಿಯ ವಿಡಿಯೋವೊಂದು ಆನ್​​ಲೈನ್​ನಲ್ಲಿ ಕಾಡ್ಗಿಚ್ಚಿನಂತೆ ವೈರಲ್​ ಆಗಿದೆ. ಇದರಲ್ಲಿ ಅನುಷ್ಕಾ ಶರ್ಮಾ ಪ್ರೆಗ್ನೆಂಟ್​ ಎಂಬುದು ನೆಟ್ಟಿಗರ ಗುಮಾನಿ.

Read More »

ಟಿಪ್ಪು ಜಯಂತಿ: ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

ಮಂಡ್ಯ: ಟಿಪ್ಪು ವಕ್ಫ್ ಬೋರ್ಡ್​ನಿಂದ ಇಂದು ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಳಿಗ್ಗೆ 6 ರಿಂದ 11 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.   ಶ್ರೀರಂಗಪಟ್ಟಣ ಸೂಕ್ಷ್ಮ ಪ್ರದೇಶವಾಗಿದ್ದು ಬೆಳಿಗ್ಗೆ 11 ಗಂಟೆಯವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ. ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ. ನಗರದಲ್ಲಿ ಮೆರವಣಿಗೆ, ಪ್ರತಿಭಟನೆ, ಸಭೆ-ಸಮಾರಂಭ, ರ್ಯಾಲಿ, ಪಟಾಕಿ ಸಿಡಿಸುವುದು, …

Read More »

ಮನೆಯಲ್ಲಿ ಮಿನಿ ಡ್ರಗ್ಸ್ ಫ್ಯಾಕ್ಟರಿ! ನೈಜೀರಿಯಾ ವ್ಯಕ್ತಿ ಬಂಧನ

ಬೆಂಗಳೂರು: ಅಡುಗೆ ಮಾಡುವ ಪ್ರೆಷರ್ ಕುಕ್ಕರ್​​ನಲ್ಲಿ ಸಿಂಥೆಟಿಕ್ ಡ್ರಗ್ಸ್ ತಯಾರಿಸಿ ದೇಶ, ವಿದೇಶಗಳಿಗೆ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಬೆಂಜಮಿನ್ ಬಂಧಿತ ಆರೋಪಿ. ಈತನಿಂದ ₹10 ಕೋಟಿ ಮೌಲ್ಯದ ಎಂಡಿಎಂಎ ಹಾಗೂ ಅದರ ತಯಾರಿಕೆಗೆ ಬಳಸುತ್ತಿದ್ದ ರಾಸಾಯನಿಕ ವಸ್ತುಗಳು ಮತ್ತು ರಾಸಾಯನಿಕ ಆಮ್ಲ ಸೇರಿದಂತೆ ಮತ್ತಿತರ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ‌. ಆರೋಪಿ ಅವಲಹಳ್ಳಿಯ ತನ್ನ ಮನೆಯಲ್ಲಿಯೇ ಕಚ್ಚಾ ಪದಾರ್ಥಗಳನ್ನು …

Read More »

ಗ್ರಾಹಕರ ಸೋಗಿನಲ್ಲಿ ಬಂದು ಬೆಳಗಾವಿಯ ಬಟ್ಟೆ ಅಂಗಡಿಯೊಂದರಲ್ಲಿ ಬೆಲೆಬಾಳುವ ಸೀರೆ ಕದ್ದೊಯ್ದಿದ್ದ 8 ಅಂತರರಾಜ್ಯ ಕಳ್ಳರ ಬಂಧನ

ಬೆಳಗಾವಿ: ಗ್ರಾಹಕರ ಸೋಗಿನಲ್ಲಿ ಬಂದು ಬೆಳಗಾವಿಯ ಬಟ್ಟೆ ಅಂಗಡಿಯೊಂದರಲ್ಲಿ ಬೆಲೆಬಾಳುವ ಸೀರೆ ಕದ್ದೊಯ್ದಿದ್ದ ಅಂತರರಾಜ್ಯ ಕಳ್ಳರನ್ನು ಹೆಡೆಮುರಿ ಕಟ್ಟುವಲ್ಲಿ ಬೆಳಗಾವಿ ಖಡೇಬಜಾರ್ ಪೊಲೀಸರು ಯಶಸ್ವಿಯಾಗಿದ್ದಾರೆ‌. ಆಂಧ್ರಪ್ರದೇಶದ ಗುಂಟೂರಿನ ಕಳ್ಳರ ಗ್ಯಾಂಗ್ ಇದಾಗಿದ್ದು, ಮಹಾರಾಷ್ಟ್ರದ ಶಿರಡಿಯಲ್ಲಿ ಆರು ಜನ ಮಹಿಳೆಯರು, ಇಬ್ಬರು ಪುರುಷರು ಸೇರಿ ಒಟ್ಟು 8 ಜನರನ್ನು ಬಂಧಿಸಿ ಪೊಲೀಸರು ಬೆಳಗಾವಿಗೆ ಕರೆತಂದಿದ್ದಾರೆ. ಖಡೇಬಜಾರ್​ನಲ್ಲಿರುವ ವಿರೂಪಾಕ್ಷಿ ಬಟ್ಟೆ ಅಂಗಡಿಯಲ್ಲಿ ನವೆಂಬರ್​ 3ರಂದು ಕಳ್ಳತನ ನಡೆದಿತ್ತು. ಎರಡು ತಂಡಗಳಲ್ಲಿ ಅಂಗಡಿಗೆ ಬಂದಿದ್ದ ಆರೋಪಿಗಳು …

Read More »

ತೆಲಂಗಾಣದಲ್ಲಿಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಮತಬೇಟೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ತೆಲಂಗಾಣಕ್ಕೆ ತೆರಳಲಿದ್ದಾರೆ. ಚುನಾವಣಾ ರ‍್ಯಾಲಿಯಲ್ಲಿ ಭಾಗವಹಿಸಲಿರುವ ಅವರು ಕಾಂಗ್ರೆಸ್ ಪರ ಮತಯಾಚನೆ ಮಾಡುವರು. ಬೆಳಿಗ್ಗೆ 11.30ಗಂಟೆಗೆ ಸಿದ್ದರಾಮಯ್ಯ ಬೆಂಗಳೂರಿನಿಂದ ಹೈದರಾಬಾದ್​ಗೆ ಹೊರಡಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ‌ಮೂಲಕ ಕಾಮರೆಡ್ಡಿ ಜಿಲ್ಲೆಗೆ ತೆರಳುವರು. ಕಾಮರೆಡ್ಡಿ ನಗರದಲ್ಲಿ 2 ಗಂಟೆಗೆ ಬೃಹತ್ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮತಯಾಚಿಸುವರು. ಸಂಜೆ 6.30ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಡಿ.ಕೆ.ಶಿವಕುಮಾರ್ ಕ್ಯಾಂಪೇನ್: ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ತೆಲಂಗಾಣದ ಕೋದಡ್​ನಲ್ಲಿ ಪ್ರಚಾರ ನಡೆಸಲಿದ್ದಾರೆ. ಶುಕ್ರವಾರ …

Read More »

ಪಿಎಸ್​ಐ ನೇಮಕಾತಿ ಹಗರಣ: ಇಂದು ಹೈಕೋರ್ಟ್​ ತೀರ್ಪು,

ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ಕುರಿತ ತೀರ್ಪನ್ನು ಹೈಕೋರ್ಟ್ ಇಂದು ಪ್ರಕಟಿಸಲಿದೆ.   ಸರ್ಕಾರದ ಆದೇಶ ರದ್ದು ಕೋರಿ ಎನ್.ವಿ.ಚಂದನ್ ಸೇರಿದಂತೆ ಪಿಎಸ್​​ಐ ಆಯ್ಕೆ ಪಟ್ಟಿಯಲ್ಲಿ ಹೆಸರಿದ್ದ 100 ಅಧಿಕ ಅಭ್ಯರ್ಥಿಗಳು ಸಲ್ಲಿಸಿರುವ ತಕರಾರು …

Read More »

ಲೋಕಾಯುಕ್ತರಿಗೆ ದೂರು ನೀಡಬೇಕೇ? ಜಸ್ಟ್ ಇಷ್ಟು ಮಾಡಿ ಸಾಕು

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ, ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ.     ವಿಜಯಪುರ: ಲೋಕಾಯುಕ್ತ ಪೊಲೀಸ್‌ ಅಧಿಕಾರಿಗಳಿಂದ (Karnataka Lokayukta) ನವೆಂಬರ್ 9 ರಂದು ವಿಜಯಪುರ ಜಿಲ್ಲೆಯ (Vijayapura News) ದೇವರ ಹಿಪ್ಪರಗಿ ತಾಲೂಕಾ ಕೇಂದ್ರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ವಿಜಯಪುರ ಜಿಲ್ಲೆಯ ವ್ಯಾಪ್ತಿಯ ಸಾರ್ವಜನಿಕರು ತಮ್ಮ‌ಸಮಸ್ಯೆಯನ್ನ‌ ಲಿಖಿತವಾಗಿ ಅಧಿಕಾತಿಗಳಿಗೆ ನೀಡಿ ಚರ್ಚಿಸಬಹುದಾಗಿದೆ. …

Read More »

ಸರ್ಕಾರಿ ನಿವಾಸ, ಕಚೇರಿಗಳ ನವೀಕರಣಕ್ಕೆ ರಾಜ್ಯ ಸರ್ಕಾರದಿಂದ ದುಂದುವೆಚ್ಚ; ಯತ್ನಾಳ್

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ (Congress Govt) ಸರ್ಕಾರಿ ನಿವಾಸ ಮತ್ತು ಕಚೇರಿಗಳ ನವೀಕರಣದ ನೆಪದಲ್ಲಿ ದುಂದುವೆಚ್ಚ ಮಾಡುತ್ತಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಬಸನ ಗೌಡ ಪಾಟೀಲ ಯತ್ನಾಳ್, ಭೀಕರ ಬರಗಾಲದ ನಡುವೆಯೂ ಸಿಎಂ ಮತ್ತು ಸಚಿವರದ್ದು ಬಿಂದಾಸ್ ದುನಿಯಾ ಎಂದು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಸಿಎಂ ಮತ್ತು …

Read More »