Breaking News

ರಾಜಕೀಯ

ಅಟಲ್ ಬೀಹಾರಿ ವಾಜಪೇಯಿಗೆ ದೇಶದ ನಮನ

ನವದೆಹಲಿ,ಡಿ.25-ರಾಷ್ಟ್ರಪತಿ ರಾಮಾನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಮಾಜಿ ಪ್ರಧಾನಿ ದಿವಂಗತ ಅಟಲ್ ಬೀಹಾರಿ ವಾಜಪೇಯಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ವಾಜಪೇಯಿ ಸ್ಮರಣಾರ್ಥ ಏರ್ಪಡಿಸಿದ್ದ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವರುಗಳು ಕೇಸರಿ ಪಕ್ಷದಿಂದ ದೇಶದ ಮೊಟ್ಟ ಮೊದಲ ಪ್ರಧಾನಮಂತ್ರಿ ಎಂಬ ಕೀರ್ತಿಗೆ ಪಾತ್ರರಾಗಿದ್ದ ವಾಜಪೇಯಿ ಅವರಿಗೆ ನಮನ ಸಲ್ಲಿಸಿದರು. ಅಜಾತಶತ್ರು ವಾಜಪೇಯಿ ಅವರನ್ನು ಕುರಿತು ರಾಷ್ಟ್ರಪತಿ ಕೋವಿಂದ್ ಅವರು, ಸದೈವ …

Read More »

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪೊಲೀಸರ ವಶಕ್ಕೆ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ, ಕಾಯ್ದೆ ರದ್ದು ಮಾಡುವಂತೆ ಕೋರಿ ಸಹಿ ಸಂಗ್ರಹ ಮನವಿ ಪತ್ರದೊಂದಿಗೆ ರಾಷ್ಟ್ರಪತಿ ಭವನಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರೀಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ ಕಾಯ್ದೆ ರದ್ದು ಮಾಡಬೇಕು ಎಂದು ಆಗ್ರಹಿಸಿ 2 ಕೋಟಿ ಸಹಿ ಸಂಗ್ರಹ ಮನವಿ ಪತ್ರದೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು …

Read More »

ನೈಟ್ ಕರ್ಫ್ಯೂ ತೀರ್ಮಾನ ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ: ದಿನೇಶ್ ಗುಂಡೂರಾವ್

ಬೆಂಗಳೂರು: ಕೊರೊನಾ ಹೊಸ ಪ್ರಭೇದ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ವೇಳೆ ಮಾತ್ರ ಜಾರಿಗೊಳಿಸಿರುವ ನೈಟ್ ಕರ್ಫ್ಯೂ ವಿಚಾರ ತೀವ್ರ ಟೀಕೆಗೆ ಗುರಿಯಾಗಿದೆ. ವಿಪಕ್ಷ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದೆ. ರೂಪಾಂತರಿ ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರದ ಕ್ರಮಗಳು ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡುರಾವ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಕಾಟಾಚಾರದ ರಾತ್ರಿ ಕರ್ಫ್ಯೂ ಹೇರಿ …

Read More »

ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ. ನಟಿ ರಾಗಿಣಿ ದ್ವಿವೇದಿ ಉಸಿರಾಟದ ಸಮಸ್ಯೆ ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಇದೀಗ ಪರಪ್ಪನ ಅಗ್ರಹಾರ ಜೈಲಿನಿಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಡ್ರಗ್ಸ್ ಕೇಸ್ ನಲ್ಲಿ ಬಂಧನಕ್ಕೀಡಾಗಿರುವ ನಟಿ ರಾಗಿಣಿ ಕಳೆದ ನಾಲ್ಕು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿದ್ದಾರೆ. ಡ್ರಗ್ಸ್ ಕೇಸ್ ನಲ್ಲಿ ಜೈಲು …

Read More »

ರಾತ್ರಿ ಮಾತ್ರ ಎಚ್ಚರವಾಗಿರೋಕೆ ಅದೇನು ಕರೋನಾನ ಇಲ್ಲ ಗೂಬೆನಾ ಎಂಬ ಅನುಮಾನ: ಹೆಚ್.ಸಿ.ಮಹದೇವಪ್ ವ್ಯಂಗ್ಯ

ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿರುವ ಕಾಟಾಚಾರದ ನೈಟ್‍ ಕರ್ಫ್ಯೂಗೆ ಮಾಜಿ ಸಚಿವ ಹೆಚ್.ಸಿ.ಮಹದೇವಪ್ ವ್ಯಂಗ್ಯವಾಡಿದ್ದಾರೆ. ರಾಜ್ಯ ಸರ್ಕಾರದ ತರ್ಕರಹಿತವಾದ ಕರ್ಫ್ಯೂ ಆದೇಶವನ್ನು ಕಂಡ ನಂತರ ರಾತ್ರಿ ಮಾತ್ರ ಎಚ್ಚರವಾಗಿರೋಕೆ ಅದೇನು ಕರೋನಾನ ಇಲ್ಲ ಗೂಬೆನಾ ಎಂಬ ಅನುಮಾನ ನನ್ನ ಕಾಡತೊಡಗಿದ್ದು ಈ ಮಾತು ಹಾಸ್ಯವಾಗಿ ಕಂಡರೂ ನನ್ನಲ್ಲಿ ದಿಗಿಲು ಹುಟ್ಟಿಸಿದೆ ಟ್ವೀಟ್ ಮೂಲಕ ಹೆಚ್.ಸಿ.ಮಹದೇವಪ್ಪ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.  9 ತಿಂಗಳ ಹಿಂದೆ ಕೊರೊನಾ ತಡೆಗಾಗಿ ಸರ್ಕಾರ ಮಾಡಿಕೊಂಡ ಯಡವಟ್ಟುಗಳು …

Read More »

ಡಿ.25 ರಿಂದ ಜ.10 ರವರೆಗೆ ರೈತರ ಕೃಷಿ ಜಮೀನುಗಳಿಗೆ 6.80 ಟಿಎಮ್‍ಸಿ ನೀರು ಬಿಡುಗಡೆ- ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400, ಜಿಆರ್‍ಬಿಸಿಗೆ 2000, ಸಿಬಿಸಿ ಕಾಲುವೆಗೆ 550 ಕ್ಯೂಸೆಕ್ಸ್ ನೀರು ಬಿಡುಗಡೆ

ಗೋಕಾಕ : ಹಿಡಕಲ್ ಜಲಾಶಯದಿಂದ ಡಿಸೆಂಬರ್ 25 ರಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ …

Read More »

ಸ್ಥಾಯಿ ಸಮಿತಿ ಅದ್ಯಕ್ಷರಾಗಿ ಸಾವಂತ ತಳವಾರ ಆಯ್ಕೆ ಶುಭ. ಹಾರೈಸಿದ ಸದಸ್ಯರು

ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವಾರ್ಡ ನಂಬರ 19 ನೆಯ ಸದಸ್ಯರಾದ ಸಾವಂತ ತಳವಾರ ಇವರನ್ನು ಸರ್ವ ಸದಸ್ಯರು ಕೂಡಿಕೊಂಡು ಒಮ್ಮತದಿಂದ. ಕೊಣ್ಣೂರ ಪುರಸಭೆಗೆ ಸ್ಥಾಯಿ ಸಮಿತಿ ಅದ್ಯಕ್ಷರನ್ನಾಗಿ ಆಯ್ಕೆ ಮಾಡಿದರು, ಈ ಸಂದರ್ಭದಲ್ಲಿ ಮುಖ್ಯಾಧಿಕಾರಿಯಾದ. ಶಿವಾನಂದ ಹೀರೆಮಠ ,ಅದಕ್ಷರಾದ ರಜಿಯಾಬೇಗಂ ಹೊರಕೇರಿ ಉಪಾದಕ್ಷರಾದ ಮಲ್ಲಪ್ಪ ಹುಕ್ಕೇರಿ, ಸದಸ್ಯರಾದ ಪ್ರಕಾಶ ಕರನಿಂಗ,ವಿನೋದ ಕರನಿಂಗ, ಅಟಲ್ ಕಡಲಗಿ, ಮಾರುತಿ ಪೂಜೇರಿ,ಗೂಳಪ್ಪ ಅಸೂದೆ,ಅಶೋಕ ಕುಮಾರನಾಯಿಕ,ಕುಮಾರ ಕೊಣ್ಣೂರ, ರಾಮಲಿಂಗ್, ಮಗದುಮ್, ಇಮ್ರಾನ್ ಜಮಾದಾರ ಮಹಿಳಾ …

Read More »

ಸಚಿವ ರಮೇಶ್ ಜಾರಕಿಹೊಳಿ ಪ್ರಯತ್ನ : ಮಾರಿಹಾಳ ಗ್ರಾಪಂ.ಗೆ 5 ಸ್ಥಾನಗಳು ಅವಿರೋಧ ಆಯ್ಕೆ

ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರ ಪ್ರಯತ್ನ ದಿಂದ ಸಮೀಪದ ಮಾರಿಹಾಳ ಗ್ರಾಮ ಪಂಚಾಯತಿಯ 18 ಸ್ಥಾನಗಳ ಪೈಕಿ 5 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಅವಿರೋಧ ಆಯ್ಕೆಯಾದ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮಗಳ ಅಭ್ಯುದಯಕ್ಕಾಗಿ ಗ್ರಾಮ ಪಂಚಾಯತಿಯಲ್ಲಿ ಸರ್ವ ಸಮ್ಮತ ಅರ್ಹವ್ಯಕ್ತಿಗಳ ಅವಿರೋಧ ಆಯ್ಕೆಯಾಗಬೇಕು ಇದರಿಂದ ಗ್ರಾಮಸ್ಥರಲ್ಲಿ ಒಗ್ಗಟ್ಟು ಹಾಗೂ ನೆಮ್ಮದಿಯ ಜೀವನಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದರು. ಕೇಂದ್ರ ಹಾಗೂ ರಾಜ್ಯ …

Read More »

ಕೊರೊನಾ ಸೋಂಕಿನ ಆತಂಕದ ನಡುವೆಯೂ ಜಲ್ಲಿಕಟ್ಟು ಕ್ರೀಡೆಗೆ ಷರತ್ತು ಬದ್ಧ ಅನುಮತಿ

ಚೆನೈ, ಡಿ.23-ಕೊರೊನಾ ಸೋಂಕಿನ ಆತಂಕದ ನಡುವೆಯೂ ತಮಿಳುನಾಡು ಸರ್ಕಾರ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಷರತ್ತು ಬದ್ಧ ಅನುಮತಿ ನೀಡಿದೆ. ಕ್ರೀಡೆಯಲ್ಲಿ 150 ಮಂದಿಗಿಂತ ಹೆಚ್ಚಿನ ಜನ ಸೇರಬಾರದು, ಕ್ರೀಡೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಕೊರೊನಾ ನೆಗೆಟಿವ್ ಸರ್ಟಿಫಿಕೆಟ್ ಹೊಂದಿರಬೇಕು ಎಂದು ಸೂಚಿಸಲಾಗಿದೆ. ಕ್ರೀಡೆಯನ್ನು ನೋಡಲು ಆಗಮಿಸುವ ಪ್ರೇಕ್ಷಕರ ಸಂಖ್ಯೆ ಶೇ.50ಕ್ಕಿಂತ ಮೀರಿರಬಾರದು ಎಂದು ತಾಕೀತು ಮಾಡಲಾಗಿದೆ. ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಜಲ್ಲಿಕಟ್ಟು ಬೇಡ ಎಂದು ಕೆಲವರು ವಾದಿಸಿದ್ದರು. ಕ್ರೀಡೆಯಲ್ಲಿ ಸಾಮಾಜಿಕ …

Read More »

ಕೊರೋನದ ಹೊಸ ಪ್ರಭೇದ ಪತ್ತೆ; ಜನರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು: ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ: ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಕೋವಿಡ್ 19 ಸೋಂಕು‌ ನಿವಾರಕ ಲಸಿಕೆಯು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಲಸಿಕೆಯನ್ನು ಸಹ ವ್ಯವಸ್ಥಿತವಾಗಿ ಜನರಿಗೆ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ. ಅಲ್ಲಿಯವರೆಗೂ ಜನರು ಮೈಮರೆಯದೇ ಸರ್ಕಾರದ ಮಾರ್ಗಸೂಚಿಗಳನ್ನು …

Read More »