Breaking News

ರಾಜಕೀಯ

ಭೂ ಸುಧಾರಣೆ ಕಾಯ್ದೆ ಖಂಡಿಸಿ ಅನ್ನದಾತರು ನಗರದಲ್ಲಿಂದು ಬಾರುಕೋಲು ಚಳವಳಿ ನಡೆಸುವ ಮೂಲಕ ಸರ್ಕಾರದ ವಿರುದ್ಧ ಕಿಡಿ

ಬೆಂಗಳೂರು, ಡಿ.9- ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳು, ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ಖಂಡಿಸಿ ಅನ್ನದಾತರು ನಗರದಲ್ಲಿಂದು ಬಾರುಕೋಲು ಚಳವಳಿ ನಡೆಸುವ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದರು. ರಾಜ್ಯದ ವಿವಿಧ ಭಾಗಗಳಿಂದ ಹಸಿರು ಶಾಲು ಹೊದ್ದು ಕೈಯಲ್ಲಿ ಬಾರುಕೋಲು ಹಿಡಿದು ಬಂದಿದ್ದ ಸಾವಿರಾರು ರೈತರು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಜಮಾವಣೆಗೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋ ಧೋರಣೆ ಖಂಡಿಸಿ ಕ್ಕಾರದ ಘೋಷಣೆಗಳನ್ನು ಕೂಗಿದರು …

Read More »

ಡಿಕೆಶಿ ರಾಜಿನಾಮಗೆ ಒತ್ತಾಯ! ಸತೀಶ ಜಾರಕಿಹೋಳಿ ಹೇಳಿದ್ದೇನು

  ಬೆಂಗಳೂರು: ನಮ್ಮದು ಸಾಮೂಹಿಕ ನಾಯಕತ್ವ. ಸೋಲಿನ ಹೊಣೆಗೆ ಡಿ.ಕೆ. ಶಿವಕುಮಾರ್ ಒಬ್ಬರೇ ಕಾರಣವಲ್ಲ. ಅವರು ರಾಜೀನಾಮೆ ಕೊಡಬೇಕಾದ ಅಗತ್ಯವಿಲ್ಲ. ಉಪಚುನಾವಣೆಯಲ್ಲಿ ಆಡಳಿತಾರೂಢ ಪಕ್ಷವೇ ಗೆಲ್ಲುತ್ತೆ. ಹಾಗಾಗಿ ರಾಜೀನಾಮೆ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಚುನಾವಣೆ ಸೋಲಿನ ಹೊಣೆ ಹೊತ್ತು ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕೆಂಬ ಈಶ್ವರಪ್ಪ ಹೇಳಿಕೆಗೆ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.      

Read More »

ಮೌಂಟ್ ಎವರೆಸ್ಟ್ ಎತ್ತರ ಮತ್ತಷ್ಟು ಹೆಚ್ಚಿದೆ ಎಂದ ನೇಪಾಳ ಹಾಗೂ ಚೀನಾ

ನವದೆಹಲಿ: ವಿಶ್ವದ ಅತೀ ಎತ್ತರದ ಪರ್ವತ ಮೌಂಟ್ ಎವರೆಸ್ಟ್ ಎತ್ತರ ಮತ್ತಷ್ಟು ಹೆಚ್ಚಿದೆ ಎಂದು ನೇಪಾಳ ಹಾಗೂ ಚೀನಾ ಹೇಳಿವೆ.ಹೊಸ ಅಧ್ಯಯನದ ಪ್ರಕಾರ ಮೌಂಟ್ ಎವರೆಸ್ಟ್ ಎತ್ತರ 8,848.86 ಮೀಟರ್ ಎಂದು ನೇಪಾಳ ಮತ್ತು ಚೀನಾ ಜಂಟಿಯಾಗಿ ಘೋಷಣೆ ಮಾಡಿವೆ. ಈ ಮೂಲಕ ಮೌಂಟ್ ಎವರೆಸ್ಟ್ ಮತ್ತಷ್ಟು ಎತ್ತರ ಬೆಳೆದಿದೆ. 1954ಕ್ಕೆ ಹೋಲಿಸಿದರೆ ಮೌಂಟ್ ಎವರೆಸ್ಟ್ ಎತ್ತರ 86 ಸೆಂಟಿಮೀಟರ್ ಹೆಚ್ಚಿದೆ ಎಂದು ತಿಳಿಸಿದೆ. 2015ರಲ್ಲಿ ಸಂಭವಿಸಿದ ಭೂಕಂಪ ಸೇರಿದಂತೆ …

Read More »

ಬೆಳಗ್ಗೆ ಬಂದ್‍ಗೆ ಸಪೋರ್ಟ್, ಮಧ್ಯಾಹ್ನ ಬಿಲ್‍ಗೆ ಬೆಂಬಲ- ಮೇಲ್ಮನೆಯಲ್ಲಿ ಭೂಸುಧಾರಣೆ ಮಸೂದೆ ಪಾಸ್

ಬೆಂಗಳೂರು: ಭಾರತ್ ಬಂದ್ ನಡುವೆಯೇ ವಿವಾದಾತ್ಮಕ ಭೂಸುಧಾರಣಾ ತಿದ್ದುಪಡಿ ವಿಧೇಯಕ ಮೇಲ್ಮನೆಯಲ್ಲಿ ಪಾಸ್ ಆಗಿದೆ. ಸದನದ ಹೊರಗೆ ರೈತರ ಹೋರಾಟವನ್ನು ಬೆಂಬಲಿಸಿದ್ದ ಜೆಡಿಎಸ್, ಪರಿಷತ್‍ನಲ್ಲಿ ಮಾತ್ರ ವಿಧೇಯಕವನ್ನು ಇದ್ದಕ್ಕಿದ್ದಂತೆ ಬೆಂಬಲಿಸಿ ಅಚ್ಚರಿ ಮೂಡಿಸಿತು. ಮರಿತಿಬ್ಬೇಗೌಡ ಹೊರತುಪಡಿಸಿ ಉಳಿದೆಲ್ಲಾ ಜೆಡಿಎಸ್ ಸದಸ್ಯರು ವಿಧೇಯಕದ ಪರವಾಗಿ ಎದ್ದು ನಿಂತು ಬೆಂಬಲ ಸೂಚಿಸಿದರು. ಇದನ್ನು ಬಿಜೆಪಿ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ವಿಧೇಯಕದ ಪರ 37 ಮತ ಬಿದ್ದರೆ, ವಿರುದ್ಧ 21 ಮತ ಬಿದ್ದವು. …

Read More »

ಬ್ರಿಡ್ಜ್ ಕಂ ಬ್ಯಾರೇಜ್ ದಾಟುತ್ತಿದ್ದ ವೇಳೆತಾಯಿ ಮತ್ತು ಮಗ ಬೈಕ್ ಸಮೇತ ನೀರಿಗೆ

ಹಾವೇರಿ: ಧರ್ಮಾ ನದಿಗೆ ಅಡ್ಡಲಾಗಿ ನಿರ್ಮಿಸಿದ ಬ್ರಿಡ್ಜ್ ಕಂ ಬ್ಯಾರೇಜ್ ದಾಟುತ್ತಿದ್ದ ವೇಳೆ ತಾಯಿ ಮತ್ತು ಮಗ ಬೈಕ್ ಸಮೇತ ನೀರಿಗೆ ಬಿದ್ದಿದ್ದು, ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಜಿಲ್ಲೆಯ ಹಾನಗಲ್ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಮೃತರನ್ನು ಬಸವರಾಜ್ ಕುಂದೂರ(22) ಮತ್ತು ತಾಯಿ ಚನ್ನವ್ವ ಕುಂದೂರ(45) ಎಂದು ಗುರುತಿಸಲಾಗಿದೆ. ಕಂಚಿನೆಗಳೂರು ಗ್ರಾಮದಿಂದ ಕಾಡಶೆಟ್ಟಿಹಳ್ಳಿ ಗ್ರಾಮದತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ …

Read More »

ಭಾರತ್ ಬಂದ್; ಬೆಳಗಾವಿಯಲ್ಲಿ ಬಸ್ ಇಲ್ಲದೆ ಪ್ರಯಾಣಿಕರ ಪರದಾಟ

ಬೆಳಗಾವಿ : ನೂತನ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಪರಿಣಾಮ ನಗರದಲ್ಲಿ ಬಸ್ ಸಂಚಾರವಿಲ್ಲದೆ ನೂರಾರು ಪ್ರಯಾಣಿಕರು ಕೇಂದ್ರ ಬಸ್ ನಿಲ್ದಾಣದಲ್ಲಿಯೇ ಪರದಾಡುವ ಸ್ಥಿತಿ ಉಂಟಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ಆರೋಪಿಸಿ ಇಡೀ ದೇಶದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗೂ ಪ್ರತಿಭಟನೆ ನಡೆಯುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.     ಬಸ್ …

Read More »

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ ಕುಮಾರ್

ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಸಕ್ರಿಯ ರಾಜಕಾರಣದಿಂದ ಹೊರ ಬರುತ್ತೇನೆ ಎನ್ನುವ ಮೂಲಕ ಮಾಜಿ ಸ್ಪೀಕರ್ ರಮೇಶ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಬಿಜೆಪಿಗೆ ಸೇರಿದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ.   ಅಧಿಕಾರದ ದುರಾಸೆಯಾಗಿ ಅನೈತಿಕ ರಾಜಕೀಯ ಮಾಡುತ್ತಿದ್ದಾರೆ. …

Read More »

ಭಾರತ್ ಬಂದ್ : ಗೋಕಾಕನಲ್ಲಿ ಸಹಜ ಸ್ಥಿತಿ

  https://youtu.be/klKiPyqipLk   ಗೋಕಾಕ : ರೈತರು ಭಾರತ್ ಬಂದ್ ಗೆ ಕರೆ ನೀಡಿದ ಹಿನ್ನೆಲೆ ರಾಜ್ಯಾದ್ಯಂತ ಪ್ರತಿಭಟನೆ ಕಾವು ಹೆಚ್ಚಾಗಿದೆ. ಆದರೆ ಗೋಕಾಕ ತಾಲ್ಲೂಕಿನಲ್ಲಿ ಪ್ರತಿಭಟನೆ ಬಿಸಿ ತಟ್ಟಿಲ್ಲ. ಎಂದಿನಂತೆ ಜನಜೀವನ ಸಹಜ ಸ್ಥಿತಿಯಲ್ಲಿದೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯುವಂತೆ ಆಗ್ರಹಿಸಿ ಭಾರತ್ ಬಂದ್ ಕರೆ ನೀಡಲಾಗಿದೆ. ಆದರೆ ಜನರು ದಿನನಿತ್ಯದಂತೆ ಅಂಗಡಿ, ವ್ಯಾಪಾರ ವಹಿವಾಟು ನಡೆಸಿರುವುದು ಕಂಡು ಬಂದಿದೆ. ಇನ್ನೂ ಕೆಎಸ್ ಆರ್ …

Read More »

ಭಾರತ್ ಬಂದ್ ಕರೆಗೆ ಬೆಂಬಲ: ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಭಾರತ್ ಬಂದ್ ಕರೆಗೆ ಬೆಂಬಲ ಕೋರಿ ನಗರದ ಹಲವೆಡೆ ಕಾಂಗ್ರೆಸ್ ಮತ್ತು ರೈತ ಸಂಘಟನೆಗಳ ಮುಖಂಡರು ಬೈಕ್ ರ್‍ಯಾಲಿ ನಡೆಸುತ್ತಿದ್ದು, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪ್ರತಿಭಟನೆ ಆರಂಭಿಸಿದೆ. ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ, ಜಮೀರ್ ಅಹಮದ್, ಶಾಸಕ ಜಿ. ಪರಮೇಶ್ವರ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ ಹಾಗೂ ಇತರ ಶಾಸಕರು ಕಪ್ಪು ಬಾವುಟ ಹಿಡಿದು ಪ್ರತಿಭಟನೆ ಆರಂಭಿಸಿದ್ದಾರೆ. ಶಿವಾಜಿನಗರ, ಬ್ರಿಗೇಡ್ ರಸ್ತೆ, ಸಂಪಿಗೆ ರಸ್ತೆ ಮತ್ತು …

Read More »

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ.

ಬೆಂಗಳೂರು : ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ. ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರ ಸತತ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರು ಸಮ್ಮತಿಸಿದ್ದಾರೆ. ಕೋವಿಡ್ ಲಾಕ್ ಡೌನ್ ಮಧ್ಯೆಯೂ 11 ಬಾರಿ ನವದೆಹಲಿಗೆ ತೆರಳಿ ಕೇಂದ್ರದ ಜಲಶಕ್ತಿ ಸಚಿವರನ್ನು ತರ್ಕಬದ್ಧವಾಗಿ ಒತ್ತಾಯಿಸಿದ್ದ ಸಚಿವ ರಮೇಶ್ …

Read More »