ಬೆಳಗಾವಿ: ದೂರು ದಾಖಲಿಸುವ ಅಭ್ಯರ್ಥಿಗಳ ಧ್ವನಿ ಅಡಗಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬೆಳಗಾವಿಯಲ್ಲಿ ತಿರುಗೇಟು ನೀಡಿದ್ದು, ಡಿಕೆಶಿಯವರು ಹತಾಶರಾಗಿದ್ದಾರೆ ಎಂದಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದವೂ ದೂರು ದಾಖಲಾದ ಉದಾಹರಣೆಯಿದೆ. ಸಣ್ಣ ವಿಷಯ ದೊಡ್ಡದು ಮಾಡುವ ಅವಶ್ಯಕತೆ ಇಲ್ಲ, ಕಾನೂನು ಪ್ರಕಾರ ನಡೆಯತ್ತೆ …
Read More »ಮೈಸೂರು ದಸರಾ ಉದ್ಘಾಟನೆಯನ್ನು
ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಅಗ್ರಪೂಜೆ ಸಲ್ಲಿಸಿ ವಿಧ್ಯುಕ್ತ ಚಾಲನೆ ನೀಡಿದರು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ ಸಿ.ಎನ್.ಮಂಜುನಾಥ್ ದಸರಾ ಉದ್ಘಾಟನೆಯನ್ನು ನೆರವೇರಿಸಿದರು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಅಡಗೂರು ಎಚ್.ವಿಶ್ವನಾಥ್, ನಿರಂಜನಕುಮಾರ್, ಎಲ್.ನಾಗೇಂದ್ರ, …
Read More »ಅಕ್ರಮವಾಗಿ ಸಂಗ್ರಹಿಸಿದ್ದ 420 ಮೂಟೆ ಯೂರಿಯಾ ಗೊಬ್ಬರವನ್ನು ಕೃಷಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ
ಕೋಲಾರ: ಅಕ್ರಮವಾಗಿ ಸಂಗ್ರಹಿಸಿದ್ದ 420 ಮೂಟೆ ಯೂರಿಯಾ ಗೊಬ್ಬರವನ್ನು ಕೃಷಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಮಾಲೂರು ಕೃಷಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ರೈತರಿಗೆ ಸರಬರಾಜು ಮಾಡಬೇಕಿದ್ದ ಯೂರಿಯಾ ಗೊಬ್ಬರವನ್ನು ಖಾಸಗಿ ಕಾರ್ಖಾನೆ ಗೋಡೌನ್ನಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೃಷಿ ಅಧಿಕಾರಿಗಳು 420 ಮೂಟೆ ಗೊಬ್ಬರವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಾಲೂರು ಸಹಾಯಕ ಕೃಷಿ ಅಧಿಕಾರಿ ಚಂದ್ರಪ್ಪ ಅವರ …
Read More »HD ದೇವೇಗೌಡ ಸೇತುವೆ ಮುಳುಗಡೆ: ಅಲ್ಲೇ ವಾಷಿಂಗ್, ಕ್ಲೀನಿಂಗ್, ಸ್ವಿಮ್ಮಿಂಗ್, ಡ್ಯಾನ್ಸಿಂಗ್!
ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಬಳಿಯಿರುವ ದೇವೇಗೌಡ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹಾಗಾಗಿ, ಶೂರ್ಪಾಲಿ ಮತ್ತು ಜಮಖಂಡಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಚ್ಚರಿಯ ಸಂಗತಿಯೆಂದರೆ ಸೇತುವೆ ಮೇಲೆ ಅಪಾರ ಪ್ರಮಾಣದಲ್ಲಿ ಹರಿಯುತ್ತಿರುವ ನೀರಿನಲ್ಲೇ ಸ್ಥಳೀಯರು ತಮ್ಮ ವಾಹನಗಳನ್ನು ತೊಳೆಯುತ್ತಿದ್ದಾರೆ. ಅಷ್ಟೇ ಅಲ್ಲ, ಮಹಿಳೆಯರು ಬಟ್ಟೆ ಒಗೆಯುತ್ತಿರುವುದು ಹಾಗೂ ಮಕ್ಕಳು ನೀರಲ್ಲಿ ಈಜುತ್ತಾ ಕುಣಿದು ಕುಪ್ಪಳಿಸುತ್ತಿರುವ ದೃಶ್ಯಗಳು ಸಹ ಕಂಡುಬಂದಿವೆ. HD …
Read More »ಪ್ರವಾಹ ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ- 12 ಜಿಲ್ಲಾಧಿಕಾರಿಗಳಿಗೆ CM ಸೂಚನೆ
ಬೆಂಗಳೂರು: ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವೀಡಿಯೋ ಸಂವಾದ ನಡೆಸಿದರು. ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ರೂ. 85.49 ಕೋಟಿ ರೂ.ಗಳನ್ನು ತುರ್ತು ಪರಿಹಾರಕ್ಕಾಗಿ ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ರಕ್ಷಣಾ ಕಾರ್ಯಗಳಿಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಈಗಾಗಲೇ ಜಿಲ್ಲಾಡಳಿತಗಳಿಗೆ ಒದಗಿಸಲಾಗಿದೆ. ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ಸನ್ನದ್ಧರಾಗುವಂತೆ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ …
Read More »ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಚುನಾವಣೆಗೆ ಸಂಬಂಧ ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ.
ಬೆಳಗಾವಿ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಪ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಹತಾಶರಾಗಿ ನಮ್ಮ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಅವರ ಹೇಳಿಕೆಗೆ ನಾವು ಪ್ರತಿಕ್ರಿಯಿಸುವ ಅಗತ್ಯವಿಲ್ಲ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಅವರ ಹತಾಶೆಯ ಮಾತುಗಳಿಗೆ ಕಾರಣವೇನು ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ’ ಎಂದರು. ‘ಆರ್.ಆರ್. ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಜಯ …
Read More »ಬಾಲಿವುಡ್ ನಟ ವಿವೇಕ್ ಓಬೇರಾಯ್ ಅವರ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ
ಮುಂಬೈ: ಡ್ರಗ್ಸ್ ಪ್ರಕರಣ ಸಂಬಂಧ ಬಾಲಿವುಡ್ ನಟ ವಿವೇಕ್ ಓಬೇರಾಯ್ ಅವರ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸ್ಯಾಂಡಲ್ ವುಡೇ ಡ್ರಗ್ಸ್ ಪ್ರಕರಣದಲ್ಲಿ ಎ-6 ಆರೋಪಿಯಾಗಿರುವ ಆದಿತ್ಯ ಆಳ್ವಾ ನಾಪತ್ತೆಯಾಗಿದ್ದು, ಆತನನ್ನು ವಿಚಾರಣೆಗೆ ಒಳಪಡಿಸಲು ಪೊಲೀಸರು ಹುಡುಕಾಟ ನಡೆಸಿದ್ದರೆ. ಆದಿತ್ಯ ಆಳ್ವಾ, ನಟ ವಿವೇಕ ಅವರ ಸಂಬಂಧಿಯಾಗಿದ್ದು, ಅವರ ಮನೆಯಲ್ಲಿ ಇರುವ ಶಂಕೆ ವ್ಯಕ್ತವಾದ ಹಿನ್ನೆಲೆ ದಾಳಿ ನಡೆಸಿದ್ದಾರೆ. ಇದೇ ಕಾರಣದಿಂದ ಬೆಂಗಳೂರಿನ ಸಿಸಿಬಿ ಪೊಲೀಸರು ಸರ್ಚ್ …
Read More »ಈಗಲೂ ಪರಿಸ್ಥಿತಿ ಸಂಪೂರ್ಣ ಚೇತಕರಿಸಿಕೊಂಡಿಲ್ಲ’ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.
ಬೆಳಗಾವಿ: ‘ಕೊರೊನಾ ಹಾಗೂ ಲಾಕ್ಡೌನ್ ಕಾರಣದಿಂದ ಬಸ್ಗಳ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರಿಂದ ಸಾರಿಗೆ ಇಲಾಖೆಯು ₹ 3ಸಾವಿರ ಕೋಟಿಗೂ ಅಧಿಕ ನಷ್ಟ ಅನುಭವಿಸಿದೆ. ಈಗಲೂ ಪರಿಸ್ಥಿತಿ ಸಂಪೂರ್ಣ ಚೇತಕರಿಸಿಕೊಂಡಿಲ್ಲ’ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು. ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇಲಾಖೆಯಲ್ಲಿ 1.30 ಲಕಷ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಬರುತ್ತಿರುವ ಆದಾಯ ಬಸ್ಗಳ ಡಿಸೇಲ್ಗೆ ಮಾತ್ರವೇ ಸಾಕಾಗುತ್ತಿದೆ. ಆದಾಯ ಇಲ್ಲವೆಂದು ಬಸ್ಗಳ ಕಾರ್ಯಾಚರಣೆ …
Read More »‘ಖಾತೆ ಬದಲಾವಣೆ ಆದಾಕ್ಷಣ ಸಚಿವ ಬಿ.ಶ್ರೀರಾಮುಲು ಅಸಮರ್ಥರು ಎಂದರ್ಥವಲ್ಲ.
ಬೆಳಗಾವಿ: ‘ಖಾತೆ ಬದಲಾವಣೆ ಆದಾಕ್ಷಣ ಸಚಿವ ಬಿ.ಶ್ರೀರಾಮುಲು ಅಸಮರ್ಥರು ಎಂದರ್ಥವಲ್ಲ. ಒಳ್ಳೆಯ ಕೆಲಸ ಆಗಬೇಕೆಂದು ಈ ತೀರ್ಮಾನ ಮಾಡಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಧವಾರ ಮಾತನಾಡಿದ ಅವರು, ‘ವರಿಷ್ಠರ ಸಲಹೆ ಪಡೆದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂಪುಟದ ಕೆಲವು ಸಹೋದ್ಯೋಗಿಗಳ ಖಾತೆ ಬದಲಿಸಿದ್ದಾರೆ. ಖಾತೆಗಳನ್ನು ಅದಲು-ಬದಲು ಮಾಡುವ ಅಧಿಕಾರ ಅವರಿಗಿದೆ. ಈ ಬಗ್ಗೆ ಕಾಂಗ್ರೆಸ್ನವರೇಕೆ ತಲೆಕೆಡಿಸಿಕೊಳ್ಳಬೇಕು?’ ಎಂದು ಕೇಳಿದರು. …
Read More »ಬಿಜೆಪಿ,ಕಾಂಗ್ರೆಸ್ ವೈಫಲ್ಯಗಳೇ ನಮ್ಮ ಚುನಾವಣೆ ಅಸ್ತ್ರ : HDK
ಬೆಂಗಳೂರು, ಅ.14- ನಮ್ಮ ಪಕ್ಷ ಅಕಾರದಲ್ಲಿದ್ದಾಗ ಮಾಡಿರುವ ಸಾಧನೆಗಳು, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ವೈಫಲ್ಯಗಳನ್ನು ಜನರ ಮುಂದಿಟ್ಟು ಚುನಾವಣೆ ಎದುರಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ವಿ.ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದೇವೆ ಎಂದರು. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದರೂ ಜನರು ಮಳೆಯಿಂದ ಮನೆ-ಮಠ ಕಳೆದುಕೊಂಡಿದ್ದಾರೆ. ಅಲ್ಲದೆ …
Read More »
Laxmi News 24×7