Breaking News

ರಾಜಕೀಯ

ಇನ್ನೂ 20 ವರ್ಷ ಕಾಂಗ್ರೆಸ್‍ನ್ನು ವಿಪಕ್ಷ ಸ್ಥಾನದಲ್ಲೇ ಕೂರಿಸುತ್ತೇನೆ : ಬಿಎಸ್ವೈ ಚಾಲೆಂಜ್

ಬೆಂಗಳೂರು,  ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 145ರಿಂದ 150 ಸ್ಥಾನ ಗೆದ್ದು ಇನ್ನೂ 20 ವರ್ಷ ಕಾಂಗ್ರೆಸ್ ವಿರೋಧ ಪಕ್ಷದಲ್ಲೇ ಕೂರುವಂತೆ ಮಾಡುವುದು ನನ್ನ ಗುರಿ. ಅದನ್ನು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸವಾಲು ಹಾಕಿದರು. ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಅವರು, ಬಿಡಿಎ ವಸತಿ ಯೋಜನೆಯಲ್ಲಿ ನೀವು ಮಾಡಿರುವ ಆರೋಪ ಕುರಿತು ನೀವು ಸಿಬಿಐಗಾದರೂ ಹೋಗಿ, ಹೈಕೋರ್ಟ್‍ಗಾದರೂ ಹೋಗಿ, ಲೋಕಾಯುಕ್ತಕ್ಕಾದರೂ ಹೋಗಿ, …

Read More »

ಕೊರೊನಾ ಸೋಂಕಿಗೆ ಬಲಿಯಾದ ಕ್ಷೇತ್ರದ ಶಾಸಕ ಬಿ. ನಾರಾಯಣರಾವ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಬೀದರ್: ಕೊರೊನಾ ಸೋಂಕಿಗೆ ಬಲಿಯಾದ ಕ್ಷೇತ್ರದ ಶಾಸಕ ಬಿ. ನಾರಾಯಣರಾವ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ  ನೆರವೇರಿತು. ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಸಸ್ತಾಪುರ ಬಂಗ್ಲಾ ಬಳಿಯ ಶಾಸಕರ ನಿವೇಶನ ಜಾಗದಲ್ಲಿ ಅಂತ್ಯಕ್ರಿಯೆ ನಡೆಯಿತು. ಸರ್ಕಾರಿ ಗೌರವ ಹಾಗೂ ಧಾರ್ಮಿಕ ವಿಧಿ ವಿಧಾನಗಳನುಸಾರ ಕೊರೊನಾ ನಿಯಮಗಳನ್ನನುಸರಿಸಿ ಅಗಲಿದ ಶಾಸಕರಿಗೆ ಅಂತಿಮ ನಮನ ಸಲ್ಲಿಸಲಾಯಿತು.   ಅಂತ್ಯಕ್ರಿಯೆ ವೇಳೆ ಪೊಲೀಸ್ ಪಡೆಯಿಂದ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ …

Read More »

ಅಂಗಡಿ ಉತ್ತರಾಧಿಕಾರಿ ಯಾರು? ಉಪ ಚುನಾವಣೆ ಚರ್ಚೆ ಆರಂಭ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಎದುರಾಗುವ ಉಪ ಚುನಾವಣೆಗೆ ಅಭ್ಯರ್ಥಿಗಳು ಯಾರಾಗಬಹುದು ಎನ್ನುವ ಚರ್ಚೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಅಂಗಡಿ ಅವರು 2004ರಿಂದ ಒಟ್ಟು 4 ಚುನಾವಣೆಗಳಲ್ಲಿ ಸತತವಾಗಿ ಜಯ ಗಳಿಸಿದ್ದರು. ಇದರಿಂದಾಗಿ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಪ್ರಬಲ ಹಿಡಿತ ಹೊಂದಿದ್ದ ಅಂಗಡಿ ಅವರ ಹಠಾತ್ ನಿಧನದಿಂದ ಬಿಜೆಪಿ ವಲಯದಲ್ಲಿ ಆಘಾತ ಉಂಟಾಗಿದೆ. ಹೀಗಾಗಿ, ಉತ್ತರಾಧಿಕಾರಿ ಯಾರಾಗುತ್ತಾರೆ ಎನ್ನುವ ಕುತೂಹಲ …

Read More »

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ  ಸಂತಾಪ ಸೂಚಿಸಿದ್ದಾರೆ.

ಗೋಕಾಕ: ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ  ಸಂತಾಪ ಸೂಚಿಸಿದ್ದಾರೆ. ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಕಳೆದ ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಅವರು ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿ 51 ದಿನಗಳು ಕಳೆದಿದ್ದು, ನಮ್ಮೆಲ್ಲರಿಗೂ …

Read More »

ಸರಸ್ವತಿ ಪುತ್ರರಾಗಿದ್ದ ಎಸ್ ಪಿ ಬಿ ಸಂಗೀತ ಮಾಂತ್ರಿಕರಾಗಿದ್ದರು. ಅವರು ಹಾಡಿದ ಹಾಡುಗಳನ್ನು ಕೇಳುತ್ತಾ ಬೆಳೆದ ನಾವು ಅವರ ಅಗಲಿಕೆಯನ್ನೂ ನೋಡಬೇಕಾದ ಸಂದರ್ಭ ಬಂದಿದ್ದು ದುರ್ದೈವ.: ರಮೇಶ್ ಜಾರಕಿಹೊಳಿ

ಬೆಳಗಾವಿ: ಗಾನ ಗಂಧರ್ವ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಆಗುತ್ತಿಲ್ಲ. ಇತ್ತೀಚೆಗೆ ಕೋವಿಡ್ ಸೋಂಕಿಗೆ ಗುರಿಯಾಗಿ ಚಿಕಿತ್ಸೆ  ಪಡೆದಿದ್ದ ಎಸ್.ಪಿ.ಬಿ ಅವರನ್ನು ಕಳೆದುಕೊಂಡ ಸಂಗೀತ ಕ್ಷೇತ್ರ ತುಂಬಾ ಬಡವಾಗಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಬಹುಭಾಷಾ ಗಾಯಕರಾಗಿದ್ದ ಕಂಚಿನ ಕಂಠದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು 16 ಭಾರತೀಯ ಭಾಷೆಗಳಲ್ಲಿ 40,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಬರೆದ ಗಾಯಕ ಎಂಬುದು ಇತಿಹಾಸದಲ್ಲಿ ದಾಖಲಾಗಿದೆ. ಸರಸ್ವತಿ ಪುತ್ರರಾಗಿದ್ದ ಎಸ್ …

Read More »

ಅಖಿಲ ಭಾರತ ವೀರಶೈವ ಮಹಾಸಭಾ – ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಸಿಎಂ ಬಿಎಸ್‍ವೈ ಪುತ್ರಿ

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಸಿಎಂ ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ ಉದಯಕುಮಾರ್ ನೇಮಕವಾಗಿದ್ದಾರೆ. ಯಡಿಯೂರಪ್ಪ ಅವರ ಅವರು ಮೊದಲ ಪುತ್ರಿ ಅರುಣಾದೇವಿ ಉದಯಕುಮಾರ್ ಅವರನ್ನು ಇಂದು ಮಹಿಳಾ ವಿಭಾಗದ ಅಧ್ಯಕ್ಷರಾಗಿ ನೇಮಕ ಮಾಡಲಾಯ್ತು. ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾದ ಕಚೇರಿಯಲ್ಲಿ ಅರುಣಾದೇವಿ ಅವರು ಅಧಿಕಾರ ಸ್ವೀಕರಿಸಿದರು. ಇದೇ ಕಾರ್ಯಕ್ರಮದಲ್ಲಿ ವೀರಶೈವ ಮಹಾಸಭಾದ ಕೋಶಾಧ್ಯಕ್ಷರಾಗಿ ಜಿ. ಗುರುಬಸಪ್ಪ ನೇಮಕಗೊಂಡರು. ಅರುಣಾದೇವಿಯವರು ವೀರಶೈವ …

Read More »

ಅಕ್ಟೋಬರ್-ನವೆಂಬರ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ರಾಜ್ಯ ಚುನಾವಣಾ ಆಯೋಗ.

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ. 5,800 ಗ್ರಾಮ ಪಂಚಾಯತ್ ಗಳಿಗೆ ಈ ವರ್ಷ ಚುನಾವಣೆ ನಡೆಯಲಿದ್ದು, ಅಗತ್ಯವಿರುವ ಪೂರ್ವ ಸಿದ್ಧತೆ ಕೈಗೊಳ್ಳಲು ಚುನಾವಣಾ ಆಯೋಗ ರಾಜ್ಯ ಪೊಲೀಸ್ ಡಿಜಿ ಮತ್ತು ಐಜಿಪಿ ಅವರಿಗೆ ಪತ್ರ ಬರೆದಿದೆ. ಚುನಾವಣಾ ಸಮದಲ್ಲಿ ಸೂಕ್ತ ಭದ್ರತೆ ಕೈಗೊಂಡು ಕಾನೂನು ಸುವ್ಯವಸ್ಥೆ ಪಾಲಿಸುವಂತೆ ಸೂಚಿಸಿದೆ. ಚುನಾವಣಾ ಖರ್ಚು ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ …

Read More »

ಬೆಂಗಳೂರಲ್ಲಿ ಸೋಂಕು ಪತ್ತೆ ಶೇ.5ಕ್ಕಿಂತ ಕಡಿಮೆ ಮಾಡಿ: ಪ್ರಧಾನಿ ಮೋದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೊರೋನಾ ಸೋಂಕು ಪರೀಕ್ಷೆ ಪ್ರಮಾಣ ದ್ವಿಗುಣಗೊಳಿಸಿ ಹಾಗೂ ಸೋಂಕು ಪತ್ತೆ ಪ್ರಮಾಣವನ್ನು ಶೇ.5ಕ್ಕಿಂತ ಕಡಿಮೆಗೊಳಿಸಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರಕ್ಕೆ ಮತ್ತು ಬಿಬಿಎಂಪಿ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಕಳೆದ ಬುಧವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ರಾಜ್ಯದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್‌ ಮೂಲಕ ಸಭೆ ನಡೆಸಿದರು. ಈ ವೇಳೆ ವಿಶೇಷವಾಗಿ ಬೆಂಗಳೂರಿನಲ್ಲಿ ಕೊರೋನಾ …

Read More »

ಮಗನ ಅಂತಿಮ ದರ್ಶನ ಇಲ್ಲದ್ದಕ್ಕೆ ಕಣ್ಣೀರಿಟ್ಟ ಅಂಗಡಿ ತಾಯಿ

ಬೆಳಗಾವಿ  : ದೆಹಲಿಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಂತ್ಯಸಂಸ್ಕಾರ ನಡೆಯುತ್ತಿದ್ದರೆ, ಬೆಳಗಾವಿಯ ಅವರ ನಿವಾಸದಲ್ಲಿ ತಾಯಿ ಸೋಮವ್ವ ಅವರ ಸಂಕಟ, ವೇದನೆ ಹೇಳತೀರದ್ದಾಗಿತ್ತು. ಕಣ್ಣೆದುರೇ ಬಹು ಎತ್ತರಕ್ಕೆ ಬೆಳೆದಿದ್ದ ಮಗನ ಅಕಾಲಿಕ ಮರಣದ ದುಃಖದೊಂದಿಗೇ ಕೈಯ್ಯಾರೆ ಬೆಳೆಸಿದ ಮಗನನ್ನು ಅಂತಿಮವಾಗಿ ನೋಡಲು ಸಾಧ್ಯವಾಗಲಿಲ್ಲವಲ್ಲ ಎಂಬ ನೋವು ಅವರನ್ನು ಆವರಿಸಿಕೊಂಡಿತ್ತು. ಕೋವಿಡ್‌ ನಿಯಮಾನುಸಾರ ಅಂಗಡಿಯವರ ಪಾರ್ಥಿವ ಶರೀರರನ್ನು ಹುಟ್ಟೂರಿಗೂ ತರಲಾಗಿರಲಿಲ್ಲ. ತಾಯಿ ಸೋಮವ್ವ ಅಂಗಡಿ ಮಗನ …

Read More »

ಮತ್ತೆ ಲಾಕ್‌ಡೌನ್ ಇಲ್ಲ; ಮೈಕ್ರೋ ಸೀಲ್‌ಡೌನ್‌ ಜಾರಿಗೆ ಚಿಂತನೆ..!

ಬೆಂಗಳೂರು : ಕೊರೋನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ತಡೆಯಲು ಮತ್ತೊಮ್ಮೆ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿಯಾಗುವುದೇ ಎಂಬ ಚರ್ಚೆ ಆರಂಭವಾಗಿದೆ. ಆದರೆ ಈ ಹಿಂದಿನಂತೆ ಸಂಪೂರ್ಣ ಲಾಕ್‌ಡೌನ್‌ ಜಾರಿಯಾಗುವ ಸಾಧ್ಯತೆಗಳು ಇಲ್ಲ. ಆದರೆ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಮೈಕ್ರೋ ಸೀಲ್‌ಡೌನ್‌ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಕೋವಿಡ್‌ ನಿಯಂತ್ರಣ ಕುರಿತಂತೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ನಡೆಸಿದ ಸಂವಾದದಲ್ಲಿ ಈ ವಿಷಯ ಸೂಕ್ಷ್ಮವಾಗಿ …

Read More »