ಬೆಂಗಳೂರು,ಸೆ.18- 141ನೇ ವಿಧಾನಮಂಡಲ ಅಧಿವೇಶನವು ಸೆ.21ರಿಂದ 8 ದಿನಗಳ ಕಾಲ ನಡೆಯಲಿದ್ದು, ಸದಸ್ಯರಿಗೆ ಕೋವಿಡ್19 ಪರೀಕ್ಷೆ ಮಾಡಿಸಿಕೊಂಡಿರುವ ದೃಢೀಕರಣ ಒದಗಿಸುವುದು ಕಡ್ಡಾಯವಾಗಿದೆ. ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಅವರು ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಸದನ ಆರಂಭವಾಗುವ 72 ಗಂಟೆಗಳ ಮುಂಚಿತವಾಗಿ ಸದಸ್ಯರು ಆರೋಗ್ಯ ತಪಾಸಣೆ ಒಳಗಾಗಿ ಕೋವಿಡ್ 19ರ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು ದೃಢೀಕರಣವನ್ನು ತರಬೇಕೆಂದು ಕೋರಿದ್ದಾರೆ. …
Read More »ಸಿನಿಮಾ ರಂಗದಲ್ಲಿ ಮಾತ್ರ ಇಲ್ಲ. ರಾಜಕೀಯ, ವ್ಯಾಪಾರಸ್ಥರ ರಂಗ, ಅಧಿಕಾರಿ ವಲಯ ಹಾಗೂ ಐಟಿ-ಬಿಟಿ ಯಲ್ಲೂ ಡ್ರಗ್ಸ್ ದಂಧೆ ಇದೆ:ಬಿ.ಸಿ.ಪಾಟೀಲ್
ಚಿಕ್ಕಬಳ್ಳಾಪುರ: ಡ್ರಗ್ಸ್ ದಂಧೆ ಕೇವಲ ಸಿನಿಮಾ ರಂಗದಲ್ಲಿ ಮಾತ್ರ ಇಲ್ಲ. ರಾಜಕೀಯ, ವ್ಯಾಪಾರಸ್ಥರ ರಂಗ, ಅಧಿಕಾರಿ ವಲಯ ಹಾಗೂ ಐಟಿ-ಬಿಟಿ ಯಲ್ಲೂ ಡ್ರಗ್ಸ್ ದಂಧೆ ಇದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಜಿಲ್ಲೆಯ ಚಿಂತಾಮಣಿಯಲ್ಲಿ ಮಾತನಾಡಿ, ಸಿನಿಮಾದವರು ಗಾಜಿನ ಮನೆಯಲ್ಲಿರುವುದರಿಂದ ಬೇಗ ತೋರಿಸುತ್ತೀದ್ದೀರಿ. ಸಮಾಜ ಹುಟ್ಟಿದಾಗಿಂದಲೂ ಈ ಸಾಮಾಜಿಕ ದಾಸ್ಯಗಳಿವೆ. ಅವುಗಳಿಗೆ ಕಡಿವಾಣ ಹಾಕುವಂತಹ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದರು. ಸಿಎಂ ಯಡಿಯೂರಪ್ಪ ದೆಹಲಿ ಭೇಟಿ ವಿಚಾರಕ್ಕೆ …
Read More »ರೈತರನ್ನು ದಾರಿ ತಪ್ಪಿಸಿದ್ದಕ್ಕಾಗಿ ಪ್ರಧಾನಿ ವಿರೋಧ ಪಕ್ಷಗಳ ಮೇಲೂ ಹೊಡೆದರು.
ನವದೆಹಲಿ, ಸೆಪ್ಟೆಂಬರ್ 18: ಲೋಕಸಭೆಯ ಕೃಷಿ ಮಸೂದೆಗಳು ಐತಿಹಾಸಿಕ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರೈತರನ್ನು ದಾರಿ ತಪ್ಪಿಸಿದ್ದಕ್ಕಾಗಿ ಪ್ರಧಾನಿ ವಿರೋಧ ಪಕ್ಷಗಳ ಮೇಲೂ ಹೊಡೆದರು. ಕೃಷಿಯಲ್ಲಿ ರೈತರಿಗೆ ಹೊಸ ಸ್ವಾತಂತ್ರ್ಯ ನೀಡಲಾಗಿದೆ. ಅವರು ಈಗ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಹೆಚ್ಚಿನ ಆಯ್ಕೆಗಳು ಮತ್ತು ಅವಕಾಶಗಳನ್ನು ಹೊಂದಿರುತ್ತಾರೆ. ಮಸೂದೆಗಳ ಅಂಗೀಕಾರಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಮಧ್ಯವರ್ತಿಗಳಿಂದ ರಕ್ಷಿಸಲು ಇವುಗಳನ್ನು ತರುವುದು ಅಗತ್ಯವಾಗಿತ್ತು. ಇವು ರೈತರಿಗೆ ಗುರಾಣಿಯಾಗಿದ್ದು, ಪ್ರಧಾನಿ …
Read More »ನನಗೆ ಸಿಗರೇಟ್ ಕೋಡಿ ಎಂದು ಜೈಲು ಸಿಬ್ಬಂದಿ ಮುಂದೆ ರಂಪಾಟ ಮಾಡಿದ್ದಾರೆಸಂಜನಾ
ಬೆಂಗಳೂರು: ಸಿಸಿಬಿ ನೋಟಿಸ್ ನೀಡಿದಾಗಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಕಿರಿಕ್ ಮಾಡುತ್ತಿರುವ ನಟಿ ಸಂಜನಾಗಲ್ರಾನಿ ಇದೀಗ ಜೈಲಿನಲ್ಲಿ ಮತ್ತೆ ಕ್ಯಾತೆ ತೆಗೆದಿದ್ದಾರೆ. ಸಂಜನಾ ಎರಡು ದಿನಗಳ ನ್ಯಾಯಾಂಗ ಬಂಧನ ಇಂದು ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ನಟಿ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಇದೀಗ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ್ದು, ಈ ಹಿನ್ನೆಲೆಯಲ್ಲಿ ನಟಿಯ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ. ಇದರಿಂದ ಟೆನ್ಶನ್ ಗೆ ಒಳಗಾಗಿರುವ ನಟಿ, ನನಗೆ ಸಿಗರೇಟ್ ಕೋಡಿ …
Read More »ಎರಡನೇ ಬಿಗ್ ಬಾಸ್ ಆವೃತ್ತಿಯಲ್ಲಿ ಸ್ಪರ್ಧಿಸಿದ್ದ ನಟ ಸಂತೋಷ್ ಕುಮಾರಗೆ ಸಿಸಿಬಿ ನೋಟಿಸ್
ಬೆಂಗಳೂರು: ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನನಗೆ ನೋಟಿಸ್ ನೀಡಿದ್ದು, ನಾಳೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಎರಡನೇ ಬಿಗ್ ಬಾಸ್ ಆವೃತ್ತಿಯಲ್ಲಿ ಸ್ಪರ್ಧಿಸಿದ್ದ ನಟ ಸಂತೋಷ್ ಕುಮಾರ್ ಸ್ಪಷ್ಟಪಡಿಮಾತನಾಡಿದ ಅವರು, ನನಗೆ ಯಾವ ಕಾರಣಕ್ಕೆ ನೋಟಿಸ್ ನೀಡಿದ್ದಾರೆ ಎಂಬುದು ನನಗೂ ಕುತೂಹಲ ಇದೆ. ಒಬ್ಬ ಪ್ರಜೆಯಾಗಿ ವಿಚಾರಣೆಗೆ ಹಾಜರಾಗುವುದು ನನ್ನ ಕರ್ತವ್ಯ ಆದ್ದರಿಂದ ಹೋಗುತ್ತೇನೆ. ಅಮ್ಮನ ಕಾರ್ಯದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದೇನೆ. ನಾಳೆ ಬೆಂಗಳೂರಿಗೆ ವಾಪಸ್ ಆಗುತ್ತೇನೆ. ನೋಟಿಸ್ ನೀಡಿದ …
Read More »ಡ್ರಗ್ಸ್ ಪ್ರಕರಣ – ಅಕುಲ್ ಬಾಲಾಜಿ ,ಮತ್ತೆ ಮೂವರಿಗೆC.C.B.ನೋಟಿಸ್
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ಮೂವರಿಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಹೌದು. ನಟ, ಖ್ಯಾತ ನಿರೂಪಕ ಅಕುಲ್ ಬಾಲಾಜಿ, ಯುವರಾಜ್ ಆರ್.ವಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಕುಮಾರ್ಗೆ ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದೆ. ಸದ್ಯ ಹೈದರಾಬಾದ್ ನಲ್ಲಿರುವ ಅಕುಲ್ ಬಾಲಾಜಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಸಿಸಿಬಿ ನೊಟೀಸ್ ತಲುಪಿದೆ ನಾಳೆ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ಹೀಗಾಗಿ …
Read More »ಸದ್ಯಕ್ಕೆ ರಾಜ್ಯದಲ್ಲಿ ಶಾಲೆಗಳನ್ನ ಆರಂಭ ಮಾಡ್ತಿಲ್ಲ:ಸುರೇಶ್ ಕುಮಾರ್
ಮೈಸೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭ ಮಾಡುತ್ತಿಲ್ಲ. ಈಗ ಪಠ್ಯದ ಅನುಮಾನಗಳನ್ನು ಬಗೆಹರಿಸಿಕೊಳ್ಳಲು ಅನುಮತಿ ಸಿಕ್ಕಿದೆ. ಅದು ಕಡ್ಡಾಯ ಅಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಸುರೇಶ್ ಕುಮಾರ್, ರಾಜ್ಯದಲ್ಲಿ ಶಾಲೆಗಳನ್ನು ಆರಂಭ ಮಾಡುತ್ತಿಲ್ಲ. ಈಗ ಅನುಮತಿ ಸಿಕ್ಕಿರುವುದು ಪಠ್ಯದ ಅನುಮಾನಗಳನ್ನು ಬಗೆಹರಿಸಿಕೊಳ್ಳಲು. ಅದು ಕಡ್ಡಾಯ ಅಲ್ಲ. ಇದಕ್ಕೂ ಪೋಷಕರ ಅನುಮತಿ ಕಡ್ಡಾಯ. ಸೆಪ್ಟೆಂಬರ್ 21 ರಿಂದ ಎಲ್ಲಾ ಶಿಕ್ಷಕರು ಶಾಲೆಗೆ ಬರಬೇಕು. ಸೆಪ್ಟೆಂಬರ್ …
Read More »ಸಂಪುಟ ಪುನರ್ರಚನೆ ಆದರೆ ಮೂವರು ಸಚಿವರಿಗೆ ಕೊಕ್ಜೊಲ್ಲೆ, ಸಿ.ಸಿ.ಪಾಟೀಲ್ ಮತ್ತು ಕೋಟಾ ಶ್ರೀನಿವಾಸ್ ಪೂಜಾರಿ ಕೈ ಬಿಡುವ ಸಾಧ್ಯತೆ ಇದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ ನಡೆಯುತ್ತಿದ್ದು, ಸಂಪುಟ ಪುನರ್ರಚನೆ ಆದರೆ ಮೂವರು ಸಚಿವರಿಗೆ ಕೊಕ್ ನೀಡಲು ಮತ್ತು ಏಳು ಮಂದಿ ಶಾಸಕರಿಗೆ ಸಚಿವ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ಪ್ಲ್ಯಾನ್ ಮಾಡಿದೆ .ಸಿಎಂ ಯಡಿಯೂರಪ್ಪ ಬದಲಿಗೆ ಪರ್ಯಾಯ ನಾಯಕನ ಆಯ್ಕೆ ಆಗಲಿದ್ಯಾ?, ಬಿಜೆಪಿ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ಕೈ ಹಾಕಲಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಅಲ್ಲದೇ ಒಂದು ವೇಳೆ ನಾಯಕತ್ವ ಬದಲಾದರೆ ಹೈಕಮಾಂಈ ನಡುವೆ ಬಿಎಸ್ವೈ ಒಂದು ಸಂಪುಟ …
Read More »2024ಕ್ಕೆ ದೇಶಕ್ಕೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆ’
ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರು 2024ಕ್ಕೆ ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಿ ಆಯ್ಕೆಯಾಗಬೇಕು ಎಂದು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಆಶಯ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಗುರುವಾರ ಶಾಸಕ ಎಸ್.ಎ.ರಾಮದಾಸ್ ಆಯೋಜಿಸಿದ್ದ ಪ್ರಧಾನಿ ನರೇಂದ್ರಮೋದಿ ಅವರ 70ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ವೆಬ್ಸೈಟ್ಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ಎರಡು ಬಾರಿ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿರುವ ನರೇಂದ್ರಮೋದಿ ಅವರು 2024ಕ್ಕೂ ಆಯ್ಕೆಯಾಗಬೇಕು. 2029ರ ವೇಳೆಗೆ ಮತ್ತೊಬ್ಬರನ್ನು ಪ್ರಧಾನಿಯನ್ನಾಗಿ …
Read More »2000 ರು. ನೋಟು ಬಿಡುಗಡೆ ಕುರಿತು ಮೋದಿಗೆ ಒಲವಿರಲಿಲ್ಲ!
ನವದೆಹಲಿ : 2016 ನ.8ರಂದು ನೋಟ್ ಬ್ಯಾನ್ ಘೋಷಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, 1000 ರು. ಬದಲು 2000 ರು. ಹೊಸ ನೋಟನ್ನು ಬಿಡುಗಡೆ ಮಾಡುವ ಕುರಿತು ಒಲವನ್ನು ಹೊಂದಿರಲಿಲ್ಲ. ಆದರೆ, ಸಮಾಲೋಚನೆಯ ಬಳಿಕ ಈ ಸಲಹೆಯನ್ನು ಒಪ್ಪಿಕೊಂಡಿದ್ದರು ಎಂಬ ಸಂಗತಿಯನ್ನು ಪ್ರಧಾನಿಯವರ ಮಾಜಿ ಪ್ರಧಾನ ಕಾರ್ಯದರ್ಶಿ ನೃಪೇಂದ್ರ ಮಿಶ್ರಾ ಬಹಿರಂಗ ಪಡಿಸಿದ್ದಾರೆ. ಮೋದಿ ಅವರ ಜನ್ಮ ದಿನದ ನಿಮಿತ್ತ ಆಂಗ್ಲ ಪತ್ರಿಕೆಯೊಂದಕ್ಕೆ ಲೇಖನ ಬರೆದಿರುವ ಅವರು ನೋಟು ಅಪನಗದೀಕರಣದ …
Read More »
Laxmi News 24×7