ಬೆಂಗಳೂರು, ಮೇ 20- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆಸ್ಪೋಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊನೆಗೂ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇನ್ನು ಕೆಲವು ರಾಜ್ಯಗಳ ಪ್ರವೇಶಕ್ಕೆ ನಿರ್ಬಂಧ ಹಾಕಲು ಮುಂದಾಗಿದೆ. ಈಗಾಗಲೇ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ಮತ್ತು ಕೇರಳ ರಾಜ್ಯಗಳ ಪ್ರವೇಶಕ್ಕೆ ಕರ್ನಾಟಕದಲ್ಲಿ ನಿರ್ಬಂಧವಿಧಿಸಲಾಗಿದೆ. ಈ ರಾಜ್ಯಗಳಿಂದ ಯಾರೇ ಬಂದರೂ ಕಡ್ಡಾಯವಾಗಿ ಕ್ವಾರಂಟೈನ್ ಒಳಗಾಗಬೇಕೆಂದು ಸೂಚನೆ ಕೊಡಲಾಗಿದೆ. ಇದರ ನಡುವೆ ಸೋಂಕು ಹೆಚ್ಚಿರುವ ಕೆಲ ರಾಜ್ಯಗಳಿಗೆ ಕರ್ನಾಟಕದಲ್ಲಿ ಕೆಲ ದಿನಗಳ ಮಟ್ಟಿಗೆ ಪ್ರವೇಶ …
Read More »ಬಾಲಚಂದ್ರ ಜಾರಕಿಹೊಳಿ ಮಾಡುತ್ತಿರುವ ಪುಣ್ಯದ ಕೆಲಸದಲ್ಲಿ ನಾವು ಭಾಗಿಯಾಗಿರುವ ಸಾರ್ಥಕದ ಕಾರ್ಯ
ಮೂಡಲಗಿ: ಲಾಕ್ ಡೌನ್ದಂತಹ ಸಂಕಷ್ಟದ ವೇಳೆಯಲ್ಲಿ ಕ್ಷೇತ್ರದ ಜನರ ಸಹಾಯಕ್ಕೆ ಮುಂದೆ ಬಂದು ಅರಭಾಂವಿ ಕ್ಷೇತ್ರದ ಎಲ್ಲ ಕುಟುಂಬಗಳಿಗೆ ದಿನ ನಿತ್ಯದ ಆಹಾರ ಧಾನ್ಯಗಳನ್ನು ನೀಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಮಾದರಿಯಾಗಿದೆ. ಇವರು ಮಾಡುತ್ತಿರುವ ಪುಣ್ಯದ ಕೆಲಸದಲ್ಲಿ ನಾವು ಭಾಗಿಯಾಗಿರುವ ಸಾರ್ಥಕದ ಕಾರ್ಯವಾಗಿದೆ ಎಂದು ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ತಿಳಿಸಿದರು. ಶುಕ್ರವಾರದಂದು ತಾಲೂಕಿನ ನಾಗನೂರ ಪಟ್ಟಣದಲ್ಲಿ ಶಾಸಕ ಮತ್ತು ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …
Read More »ಆಹಾರ ಪದಾರ್ಥಕಿಟ್ ಕೊಡಲು ಕರೆಸಿ, ಜನರಿಗೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವಮಾನ
ಆಹಾರ ಪದಾರ್ಥಗಳ ಕಿಟ್ಗಳನ್ನು ಪಡೆಯುವ ಸಲುವಾಗಿ ನೂರಾರು ಜನರು ಒಂದೆಡೆ ಸೇರಿದ್ದರು. ಎಲ್ಲರೂ ಬಿಸಿಲಿನಲ್ಲಿ ಗಂಟೆಗೂ ಹೆಚ್ಚು ಕಾದರೂ ಶಾಸಕ ರೇಣುಕಾಚಾರ್ಯ ಅವರು ಸ್ಥಳಕ್ಕೆ ಬರಲಿಲ್ಲ. ಇದರಿಂದ ಅಸಮಾಧಾಗೊಂಡ ಜನರು ತಾವು ಮನೆಗೆ ಹೋಗುವುದಾಗಿ ಹೇಳಿದ್ದಾರೆ. ದಾವಣಗೆರೆ: ಆಹಾರ ಪದಾರ್ಥಕಿಟ್ ಕೊಡಲು ಕರೆಸಿ, ಜನರಿಗೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವಮಾನ ಮಾಡಿದ ಘಟನೆ ಹೊನ್ನಾಳಿ ತಾಲೂಕಿನ ಹನಮಸಾಗರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆದಿದೆ. ಕಿಟ್ ಬೇಡ ಅಂದ್ರೆ ಎದ್ದು ಹೋಗು ಎಂದು ಶಾಸಕರು …
Read More »ಸಾಸ್ತಾನ ಟೋಲ್ ಸಿಬ್ಬಂದಿ ಜೊತೆ ಮಂಡ್ಯದ ಸೋಂಕಿತ ಮಾತು – 6 ಮಂದಿ ಕ್ವಾರಂಟೈನ್
ಉಡುಪಿ: ಮುಂಬೈನಿಂದ ಹೊರಟ ಖರ್ಜೂರ ಸಾಗಿಸುವ ಲಾರಿ ಹತ್ತಿ ಮಂಡ್ಯಕ್ಕೆ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಲಾರಿ ಪಾಸ್ ಆಗಿದ್ದ ಟೋಲ್ ಗೇಟ್ನ ಆರು ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಲಾರಿ ಮಹಾರಾಷ್ಟ್ರದಿಂದ ಕರ್ನಾಟಕ ಪ್ರವೇಶಿಸಿದ್ದು, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಲಾರಿಯ ವಿಡಿಯೋ ಪತ್ತೆಯಾಗಿದೆ. ಲಾರಿ ಒಳಗಿದ್ದ ವ್ಯಕ್ತಿ ತೆಕ್ಕಟ್ಟೆ ಸಮೀಪದ ಶಿವಪ್ರಸಾದ್ ಪೆಟ್ರೋಲ್ ಪಂಪ್ ಬಳಿ ಇಳಿದು ಸ್ನಾನ ಮುಗಿಸಿದ್ದು, ನಂತರ ಅಲ್ಲೇ ತಿಂಡಿ ತಿಂದಿದ್ದಾರೆ. ಆಮೇಲೆ …
Read More »ಕಾಂಗ್ರೆಸ್ ಭವನದಲ್ಲಿ ಆಶಾ ಕಾರ್ಯಕರ್ತೆಯರು, ದಾದಿಯರು, ಪೌರ ಕಾರ್ಮಿಕರಿಗೆ ಪಿಪಿಎ ಕಿಟ್ ವಿತರಣೆ: ಡಿ.ಕೆ ಶಿವಕುಮಾರ್
ಬೆಂಗಳೂರು: ಜೀವನವನ್ನು ಪಣಕ್ಕಿಟ್ಟು ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ವೈದ್ಯರಿಗೆ ಹೊರತು ಪಡಿಸಿ ಉಳಿದ ಕೆಲವರಿಗೆ ಪಿಪಿಎ ಕಿಟ್ ಸಿಗುತ್ತಿಲ್ಲ. ಹೀಗಾಗಿ ಇಂದು ಪಿಪಿಇ ಕಿಟ್ ವಿರತರಣೆ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕಾಂಗ್ರೆಸ್ ಭವನದಲ್ಲಿ ಆಶಾ ಕಾರ್ಯಕರ್ತೆಯರು, ದಾದಿಯರು, ಪೌರ ಕಾರ್ಮಿಕರಿಗೆ ಪಿಪಿಎ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ವೈದ್ಯರನ್ನ ಹೊರತುಪಡಿಸಿ ಉಳಿದವರಿಗೆ ಪಿಪಿಎ ಕಿಟ್ ವಿತರಣೆ ಮಾಡಿದ್ದೇವೆ. ಜನ ಲಾಕ್ …
Read More »ಗುಜರಾತಿನ ಹಿರಿಯ ಕಾಂಗ್ರೆಸ್ ನಾಯಕ ಕೊರೊನಾಗೆ ಬಲಿ……….
ಅಹಮದಾಬಾದ್: ಮೊದಲ ಬಾರಿಗೆ ದೇಶದಲ್ಲಿ ಕೊರೊನಾಗೆ ರಾಜಕೀಯ ನಾಯಕರೊಬ್ಬರು ಬಲಿಯಾಗಿದ್ದಾರೆ. ಗುಜರಾತಿನ ಹಿರಿಯ ಕಾಂಗ್ರೆಸ್ ನಾಯಕ 67 ವರ್ಷದ ಬದ್ರುದ್ದೀನ್ ಶೇಖ್ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಏಪ್ರಿಲ್ 15 ರಂದು ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಅವರು ಅಹಮದಾದಬಾದಿನ ಎಸ್ವಿಪಿ ಆಸ್ಪತ್ರೆಗೆ ದಾಖಲಾಗಿದ್ದರು. 11 ದಿನಗಳ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ ಕೊರೊನಾ ಲಾಕ್ಡೌನ್ ಸಮಯದಲ್ಲಿ ಬದ್ರುದ್ದೀನ್ ಶೇಖ್ ಅವರು ಬಡವರಿಗೆ ಆಹಾರ ವಿತರಿಸಲು ಹೋಗಿದ್ದರು. ಈ …
Read More »ಒಂದೇ ಕುಟುಂಬದ ಐವರ ಮೃತದೇಹ ಮನೆಯೊಳಗೆ ಪತ್ತೆ…………
ಲಕ್ನೋ: ಒಂದೇ ಕುಟುಂಬದ ಐವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಅವರ ಮನೆಯಲ್ಲಿಯೇ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಶೃಂಗಾರ್ ನಗರ ಕಾಲೋನಿಯಲ್ಲಿ ನಡೆದಿದ್ದು, ತಮ್ಮ ನಿವಾಸದಲ್ಲಿ ಕುಟುಂಬದ ಐವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ನಿವೃತ್ತ ಆರೋಗ್ಯ ಕಾರ್ಯಕರ್ತ ರಾಜೇಶ್ವರ್ ಪ್ರಸಾದ್ ಪಚೌರಿ (80), ಅವರ ಸೊಸೆ ದಿವ್ಯಾ (33), ಅವರ ಇಬ್ಬರು ಮಕ್ಕಳಾದ ಲಾಲೂ (1), ಆರುಶ್ (10) …
Read More »ಲಾಕ್ಡೌನ್ ಎಫೆಕ್ಟ್ – 100 ಎಕ್ರೆಯಲ್ಲಿ ಕೊಳೆಯುತ್ತಿದೆ 300 ಟನ್ ಅನಾನಸ್
ಮಂಗಳೂರು: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್ಡೌನ್ ಆಗಿದ್ದು, ಎಲ್ಲ ವರ್ಗದ ಜನ ಆತಂಕದಲ್ಲಿದ್ದಾರೆ. ದೇಶದ ಬೆನ್ನೆಲುಬು ರೈತನು ಕೂಡ ತಾನು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ಕಷ್ಟ ನಷ್ಟ ಅನುಭವಿಸುವಂತಾಗಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಎಂಬಲ್ಲಿ ಕೇರಳದ ಎರ್ನಾಕುಲಂ ಮೂಲದ ಶೈಜು 100 ಎಕರೆ ಜಮೀನನ್ನು ಲೀಸ್ಗೆ ಪಡೆದು ಅನಾನಸ್ ಕೃಷಿ ಮಾಡಿದ್ದರು. ಶ್ರಮಕ್ಕೆ ತಕ್ಕ ಪ್ರತಿಫಲ ಭರ್ಜರಿ ಫಸಲು ಕೂಡ ಬಂದಿತ್ತು. …
Read More »ಕಾರ್ಮಿಕರ ಓಡಾಟಕ್ಕೆ ರಸ್ತೆಗೆ ಇಳಿಯಿತು 137 KSRTC ಬಸ್ಸುಗಳು
ಬೆಂಗಳೂರು: 6 ಜಿಲ್ಲೆಗಳಲ್ಲಿ ಕಾರ್ಮಿಕರ ಓಡಾಟಕ್ಕೆ ಕೆಎಸ್ಆರ್ಟಿಸಿಯ 137 ಬಸ್ಸುಗಳು ರಸ್ತೆಗೆ ಇಳಿದಿದೆ. 56 ಸೀಟುಗಳ ಈ ಬಸ್ಸಿನಲ್ಲಿ 21 ಕಾರ್ಮಿಕರಿಗೆ ಮಾತ್ರ ಪ್ರಯಾಣಿಸಲು ಅನುಮತಿ ಸಿಕ್ಕಿದೆ. ಕಾರ್ಮಿಕರು ಸೀಟು ಖಾಲಿ ಬಿಟ್ಟು ಕೂರಬೇಕು ಎಂದು ಷರತ್ತು ವಿಧಿಸಲಾಗಿದೆ. ಈ ಬಸ್ಸುಗಳು ಲಾಕ್ ಡೌನ್ ನಲ್ಲಿ ಸಿಲುಕಿರುವ ವಲಸಿಗ ಕಾರ್ಮಿಕರಿಗಾಗಿ ಮಾತ್ರ ಎಂದು ಕೆಎಸ್ಆರ್ಟಿಸಿ ಸ್ಪಷ್ಟಪಡಿಸಿದೆ. ಈ ಬಸ್ಸುಗಳು ಜಿಲ್ಲಾ ವ್ಯಾಪ್ತಿಯ ಒಳಗಡೆ ಮಾತ್ರ ಸಂಚರಿಸುತ್ತದೆ. ಜಿಲ್ಲಾಡಳಿತದ ಮನವಿಯ ಹಿನ್ನೆಲೆಯಲ್ಲಿ …
Read More »ಕೋವಿಡ್-೧೯: ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ಪರೀಕ್ಷೆ “ಮಾಧ್ಯಮ ಪ್ರತಿನಿಧಿಗಳು ಮುನ್ನೆಚ್ಚರಿಕೆ ವಹಿಸಲಿ”- ಡಾ.ಮುನ್ಯಾಳ
ಬೆಳಗಾವಿ, ಏ.೨೫(ಕರ್ನಾಟಕ ವಾರ್ತೆ): ಕೋವಿಡ್-೧೯ ಹರಡುವಿಕೆ ತಡೆಗಟ್ಟುವ ಕುರಿತು ಜನಜಾಗೃತಿ ಮೂಡಿಸಲು ನಿರಂತರವಾಗಿ ಶ್ರಮಿಸುತ್ತಿರುವ ಎಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮದ ವರದಿಗಾರರು ಮತ್ತು ಛಾಯಾಗ್ರಾಹಕರು ಸೇರಿದಂತೆ ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ “ವಾರ್ತಾಭವನ”ದಲ್ಲಿ ಶನಿವಾರ (ಏ.೨೫) ಕೋವಿಡ್-೧೯ ಗೆ ಸಂಬಂಧಿಸಿದಂತೆ ಆರೋಗ್ಯ ತಪಾಸಣೆ ನಡೆಸಲಾಯಿತು. ಈ …
Read More »
Laxmi News 24×7