Breaking News

ರಾಜಕೀಯ

ಲಾಕ್‍ಡೌನ್ ನಿಯಮ ಉಲ್ಲಂಘನೆ- ಬೇಕಾಬಿಟ್ಟಿ ತಿರುಗಾಡುತ್ತಿದ್ದವರಿಗೆ ಲಾಠಿ ರುಚಿ, ದಂಡ

ಯಾದಗಿರಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆ ಜಿಲ್ಲಾದ್ಯಂತ ಕಠಿಣ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಕಳೆದ 15ರಂದು ಲಾಕ್‍ಡೌನ್ ಆರಂಭವಾಗಿದ್ದು, ಆಗಲೇ 5 ದಿನ ಕಳೆದಿದೆ. ಆದರೂ ಜನತೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದು, ಅಂತಹವರಿಗೆ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಾರೆ. ಲಾಕ್‍ಡೌನ್ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಪೊಲೀಸರು ಹರಸಾಹಸ ಪಡುವಂತಾಗಿದೆ. ಫುಲ್ ಅಲರ್ಟ್ ಆಗಿದ್ದಾರೆ. ಮಾಸ್ಕ್ ಇಲ್ಲದೆ ಬೇಕಾಬಿಟ್ಟಿಯಾಗಿ ನಗರದಲ್ಲಿ ತಿರುಗಾಟ ನಡೆಸಿದವರಿಗೆ ದಂಡ ಜೊತೆಗೆ …

Read More »

ಬೆಂಗಳೂರಿನಲ್ಲಿ ಲಾಕ್‍ಡೌನ್ ಮುಂದುವರಿಯುತ್ತಾ? ಬೆಳಗಾವಿ ಲಾಕ್ ಡೌನ್ ಆಗತ್ತಾ..?

               ಬೆಳಗಾವಿ ಲಾಕ್ ಡೌನ್ ಆಗತ್ತಾ..?   ಬೆಂಗಳೂರು: ವೈದ್ಯಕೀಯ ಅವಸ್ಥೆ, ಕೊರೊನಾ ಅಬ್ಬರದ ನಡುವೆ ಬೆಂಗಳೂರಲ್ಲಿ ಮತ್ತೆ ಲಾಕ್‍ಡೌನ್ ಬೇಕಾ ಮತ್ತು ಬೇಡ್ವಾ ಅನ್ನೋದು ಇಂದು ತೀರ್ಮಾನ ಆಗುವ ಸಾಧ್ಯತೆಗಳಿವೆ. ಬುಧವಾರ ಬೆಳಗ್ಗೆ 5 ಗಂಟೆಗೆ ಕೊನೆ ಆಗುವ ಲಾಕ್‍ಡೌನ್‍ನ್ನು ಮತ್ತಷ್ಟು ದಿನ ಮುಂದುವರಿಸಬೇಕಾ? ಒಂದು ವೇಳೆ ಮುಂದುವರಿಸಿದ್ರೆ ಎಷ್ಟು ದಿನ? ಅಥವಾ ಇನ್ಮುಂದೆ ಲಾಕ್‍ಡೌನ್ ಬೇಕೇ ಬೇಡ್ವಾ ಅನ್ನೋದು …

Read More »

ಕೋವಿಡ್ ಲ್ಯಾಬ್ ಆರಂಭಿಸಿ: ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪತ್ರ

ಬೆಳಗಾವಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತಲಿದ್ದು, ಸೋಂಕು ತಡೆಗಟ್ಟಲು ಅಗತ್ಯ ಸೌಲಭ್ಯಗಳ ಕಲ್ಪಿಸುವುದರ ಜತೆಗೆ ಹೋಬಳಿ ಮಟ್ಟದಲ್ಲಿಯೂ ಕೋವಿಡ್ ಕೇಂದ್ರಗಳನ್ನು ಆರಂಭಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.   ಸೋಂಕಿತರ ಸಂಖ್ಯೆ ಹೆಚ್ಚುತಲಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಇಬ್ಬರು ನರಳಾಡಿ ಪ್ರಾಣ ಕಳೆದುಕೊಂಡಿದ್ದಾರೆ. ವ್ಯಾಪಕವಾಗಿ ಹಡರುತ್ತಿರುವ ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಂಡು …

Read More »

ದೂರವಾಣಿ ಕದ್ದಾಲಿಕೆ ಆರೋಪ: ರಾಜಸ್ಥಾನ ಸರ್ಕಾರದ ವಿವರಣೆ ಕೇಳಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ರಾಜಸ್ಥಾನದ ರಾಜಕೀಯದ ಅನಿಶ್ಚಿತತೆ ಮುಂದುವರಿದಿದೆ. ಬಿಜೆಪಿ ನಾಯಕರ ದೂರವಾಣಿ ಸಂಭಾಷಣೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಕೆ ಮಾಡಿದೆ ಎಂಬ ಆರೋಪ ತೀವ್ರವಾಗುತ್ತಿದ್ದು, ಈ ಬಗ್ಗೆ ರಾಜಸ್ಥಾನ ಸರ್ಕಾರದ ಬಳಿ ಕೇಂದ್ರ ಗೃಹ ಸಚಿವಾಲಯ ವರದಿ ಕೇಳಿದೆ. ರಾಜಸ್ಥಾನದ ಗೆಹ್ಲೋಟ್ ಸರಕಾರವನ್ನು ಉರುಳಿಸಲು ಬಿಜೆಪಿ ಆಮಿಷವೊಡ್ಡಿದೆ ಎಂಬ ಮಾತುಗಳಿಗೆ ಆಧಾರ ಒದಗಿಸುವಂತಹ ಸಂಭಾಷಣೆಗಳುಳ್ಳ ಆಡಿಯೋ ಕ್ಲಿಪ್ ನ್ನು ಕಾಂಗ್ರೆಸ್ ಬಹಿರಂಗಪಡಿಸಿದ್ದು, ಎರಡು ಎಫ್ ಐಆರ್ ಕೂಡಾ ದಾಖಲಾಗಿದೆ. ಈ ಕುರಿತು ಕೂಡಾ …

Read More »

Big breaking ಡಿಸಿಸಿ ಬ್ಯಾಂಕ್ ಚುನಾವಣೆ ಮುಂದುಡ ಲಾಗಿದೆ..

ರಾಜ್ಯ ಸರ್ಕಾರ ನಿರ್ಧರಿಸಿದ ಪ್ರಕಾರ ಎಲ್ಲ ಸಹಕಾರಿ ಸಂಘಗಳ ಚುನಾವಣೆ ಯನ್ನಾ ರಾಜ್ಯ ಸರ್ಕಾರ ಮುಂದೂಡಿದೆ ಬೆಳಗಾವಿಯ ಪ್ರತಿಷ್ಠಿತ ಬ್ಯಾಂಕ ಗಳಲ್ಲೊಂದಾದ ಬೆಳಗಾವಿ ಡಿ.ಸಿ.ಸಿ. ಬ್ಯಾಂಕ ಚುನಾವಣೆ ಕೂಡ ಸರ್ಕಾರ ಮುಂದೂಡಿದೆ

Read More »

ಬಿಗ್ ಬಿ ಪತ್ನಿ ಜಯಾ ಬಚ್ಚನ್ ವರದಿ ನೆಗೆಟಿವ್, ಐಶ್ವರ್ಯಾ ಮತ್ತು ಆರಾಧ್ಯಗೂ ಸೋಂಕು

ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯಗೂ ಕೊರೊನಾ ಸೋಂಕು ತಗುಲಿದೆ. ಶನಿವಾರ ರಾತ್ರಿ ಬಿಗ್ ಬಿ ಅಮಿತಾಬ್ ಬಚ್ಚನ್ ತಮಗೆ ಸೋಂಕು ತಗುಲಿರುವ ಬಗ್ಗೆ ಟ್ವಿಟ್ಟರ್ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದರು. ತಂದೆ ಅಮಿತಾಬ್ ಬಚ್ಚನ್ ಬಳಿಕ ಟ್ವೀಟ್ ಮಾಡಿದ್ದ ಅಭಿಷೇಕ್ ತಮ್ಮ ವರದಿಯೂ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದರು. ಇದೀಗ ಐಶ್ವರ್ಯಾ ಮತ್ತು ಆರಾಧ್ಯಗೂ ಸೋಂಕು ತಗುಲಿರುವುದು ಖಚಿತವಾಗಿದೆ.ಅಭಿಷೇಕ್ ಮತ್ತು ಅಮಿತಾಬ್ ಬಚ್ಚನ್ ಮುಂಬೈನ …

Read More »

ವಿಕಾಸ್ ದುಬೆ ಎನ್‌‌ಕೌಂಟರ್‌ನಲ್ಲಿ ಭಾಗಿಯಾಗಿದ್ದ ಪೊಲೀಸ್‍ಗೆ ಕೊರೊನಾ……….

ಲಕ್ನೋ: ಗ್ಯಾಂಗ್‍ಸ್ಟರ್ ವಿಕಾಸ್ ದುಬೆ ಎನ್‍ಕೌಂಟರ್ ನಲ್ಲಿ ಭಾಗಿಯಾಗಿದ್ದ ಓರ್ವ ಪೊಲೀಸ್ ಸಿಬ್ಬಂದಿಗೆ ಕೊರೊನಾ ತಗುಲಿದೆ. ಕೊರೊನಾ ಸೋಂಕಿತ ಪೊಲೀಸ್ ಜೊತೆ ಇತರೆ ಸಿಬ್ಬಂದಿ ಪ್ರಯಾಣಿಸಿದ್ದರು. ಪೊಲೀಸ್ ಪೇದೆಯನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಪೊಲೀಸರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಶಂಕಿತ ಸೋಂಕಿತರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಎನ್‍ಕೌಂಟರ್ ನಲ್ಲಿ ಭಾಗಿಯಾಗಿದ್ದ ಎಲ್ಲ ಪೊಲೀಸ್ ಸಿಬ್ಬಂದಿ ಸಹ ಸೆಲ್ಫ್ ಕ್ವಾರಂಟೈನ್ ನಲ್ಲಿದ್ದಾರೆ. …

Read More »

ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ: ಈರಣ್ಣಾ ಕಡಾಡಿ

ಮೂಡಲಗಿ: ಕೇಂದ್ರ ಬಿಜೆಪಿ ಸರ್ಕಾರ ನವಭಾರತ ನಿರ್ಮಾಣದ ಹಿನ್ನೆಲೆಯಲ್ಲಿ ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು.  ಸಮೀಪದ ಕಲ್ಲೋಳಿ ಪಟ್ಟಣದ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಕೇಂದ್ರ ಸರ್ಕಾರ 20 ಸಾವಿರ ಕೋಟಿ ಗ್ಯಾರಂಟಿ ಸ್ಕೀಂನ್ನು ಜಾರಿಗೊಳಿಸಿದೆ. ಇದರಿಂದ 2 ಲಕ್ಷ ಸಣ್ಣ ಮತ್ತು ಅತಿ ಸಣ್ಣ ಹಾಗೂ ಮಧ್ಯಮ …

Read More »

ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರಿ ಉದ್ಯೋಗಿಗಳ ಬಳಕೆ ಮಾಡಿಕೊಳ್ಳಲು ಸರ್ಕಾರ ಮಹತ್ವ ನಿರ್ಧಾರ

ಬೆಂಗಳೂರು: ಅನ್‍ಲಾಕ್-2 ಅವಧಿಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರಿ ಉದ್ಯೋಗಿಗಳ ಬಳಕೆ ಮಾಡಿಕೊಳ್ಳಲು ಸರ್ಕಾರ ಮಹತ್ವ ನಿರ್ಧಾರವನ್ನು ಮಾಡಿದೆ. ಕೋವಿಡ್ ನಿಯಂತ್ರಣ ಮಾಡಲು ಉದ್ದೇಶಕ್ಕಾಗಿ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಪ್ರಯತ್ನಗಳನ್ನು ಹೆಚ್ಚಿಸುವ ಅಗತ್ಯವಿರುವ ಕಾರಣ ಸರ್ಕಾರಿ ಉದ್ಯೋಗಿಗಳ ಬಳಕೆಗೆ ಸರ್ಕಾರ ಮುಂದಾಗಿದೆ. ಆದ್ದರಿಂದ ರಾಜ್ಯದ ಎಲ್ಲಾ ಇಲಾಖೆಯ, ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ 50 ವರ್ಷ ಒಳಗಿನ ಅಧಿಕಾರಿಗಳು, ಸಿಬ್ಬಂದಿಗಳ ಮಾಹಿತಿ ನೀಡಲು ಸೂಚನೆ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿ ಮುಖ್ಯ …

Read More »

ಕಾನ್ಪುರ್ ಎನ್‍ಕೌಂಟರ್- ಆರೋಪಿ ವಿಕಾಸ್ ದುಬೆಯ ಮತ್ತಿಬ್ಬರು ಸಹಚರರ ಎನ್‍ಕೌಂಟರ್

ಲಕ್ನೋ: ಪೊಲೀಸ್ ಕಸ್ಟಡಿಯಲ್ಲಿರುವ ಉತ್ತರ ಪ್ರದೇಶದ ಕಾನ್ಪುರದ ಪೊಲೀಸ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆಯ ಮತ್ತಿಬ್ಬರು ಸಹಚರರನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ. ಆರೋಪಿ ವಿಕಾಸ್ ದುಬೆಯ ಅನುಚರರಾದ ಪ್ರಭಾತ್ ಮಿಶ್ರಾ, ಭವನ್ ಶುಕ್ಲಾರನ್ನು ಇಂದು ಪೊಲೀಸರು ಕಾನ್ಪುರಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಮಾರ್ಗದ ನಡುವೆ ಪೊಲೀಸರಿಂದ ಪಿಸ್ತೂಲ್ ಕಸಿದುಕೊಂಡಿದ್ದ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದರು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಶೂಟೌಟ್ ಮಾಡಿದ್ದ …

Read More »