ಬೆಂಗಳೂರು: ಬಿಜೆಪಿ ರಾಷ್ಟೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ವಿರುದ್ಧ ಟ್ವೀಟ್ ಮಾಡಿ ಕಿಡಿಕಾರಿದ್ದ ಮಾಜಿ ಸಿಎಂ ಸಿದ್ದರಾಮಯ್ಯನ ವಿರುದ್ಧ ಸಂಸದ ಪ್ರತಾಪ್ ಸಿಂಹ ಅವರು ಟ್ವೀಟ್ ಮಾಡಿಯೇ ತಿರುಗೇಟು ನೀಡಿದ್ದಾರೆ. ಬಿಎಲ್ ಸಂತೋಷ್ ಅವರ ವಿರುದ್ಧ ಟ್ವೀಟ್ ಮೂಲಕವೇ ಕಿಡಿಕಾರಿದ್ದ ಸಿದ್ದರಾಮಯ್ಯ, ಚೀನಾ ವಿಚಾರದ ಬಗ್ಗೆ ಮಾತನಾಡಲು ಸಂತೋಷ್ ಯಾರು? ಸಂತೋಷ್ ಅವರು ಸಿಎಂ ಯಡಿಯೂರಪ್ಪಗೆ ಶಹಭಾಸ್ ಗಿರಿ ನೀಡಿದ್ದು ಮನಸ್ಸಿನಿಂದಲೋ ಇಲ್ಲ ನಾಲಿಗಿಯಿಂದಲೋ ಎಂದು ಪ್ರಶ್ನಿಸಿದ್ದರು. …
Read More »ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರಶ್ನಿಸಿ ರಾಷ್ಟ್ರವನ್ನು ನಿರಾಶೆಗೊಳಿಸಿದ್ದಾರೆಬಿಜೆಪಿ:ರಾಹುಲ್ ಗಾಂಧಿ
ನವದೆಹಲಿ,ಜು.6- ರಾಹುಲ್ ಗಾಂಧಿ ಅವರು ರಕ್ಷಣಾ ಸ್ಥಾಯಿ ಸಮಿತಿಯ ಒಂದೇ ಒಂದು ಸಭೆಯಲ್ಲೂ ಭಾಗವಹಿಸುವುದಿಲ್ಲ, ಜವಾಬ್ದಾರಿಯುತ ಪ್ರತಿಪಕ್ಷದ ನಾಯಕ ಏನು ಮಾಡಬಾರದೋ ಅದನ್ನೇ ಅವರು ಮಾಡುತ್ತಿದ್ದಾರೆ. ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರಶ್ನಿಸಿ ರಾಷ್ಟ್ರವನ್ನು ನಿರಾಶೆಗೊಳಿಸಿದ್ದಾರೆ ಎಂದು ಬಿಜೆಪಿ ತಿರುಗೇಟು ನೀಡಿದೆ. ಚೀನಾ-ಭಾರತದ ಗಡಿ ವಿವಾದ ಕುರಿತು ರಾಹುಲ್ ಗಾಂಧಿ ಸರ್ಕಾರದ ವಿರುದ್ಧದ ಆಕ್ರಮಣಕಾರಿ ಪ್ರಶ್ನೆ ಮುಂದುವರಿಸುತ್ತಿದ್ದಂತೆ, ಇದನ್ನೇ ಗುರಿಯಾಗಿಸಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ನಾಯಕ ಸಂಸತ್ತಿನ ರಕ್ಷಣಾ ಸ್ಥಾಯಿ ಸಮಿತಿಯ ಒಂದೇ …
Read More »ಡಿಕೆಶಿ ಕೆಪಿಸಿಸಿ ಪಟ್ಟ ಏರಿದ ತಕ್ಷಣವೇ ಲಕ್ಷ್ಮಿ ಪುತ್ರನಿಗೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿರ್ಯದರ್ಶಿ ಸ್ಥಾನ.
ಬೆಳಗಾವಿ: ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಪಟ್ಟ ಏರುತ್ತಿದ್ದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ ಹೆಬ್ಬಾಳಕರ್ ಗೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಮೃಣಾಲ್ ಅವರು ವಿದ್ಯಾರ್ಥಿ ಕಾಂಗ್ರೆಸ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಆದ್ರೆ ಈಗ ಕೆಪಿಸಿಸಿ ನಾಯಕರು ಸಂಘಟನೆ ಚತುರತೆ ಕಂಡು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿಸಿದ್ದಾರೆ. ಜತೆಗೆ ಕಾಂಗ್ರೆಸ್ ನಲ್ಲಿ …
Read More »ಬಿಟ್ಟು ಬಿಡದೆ ಸುರಿಯುತ್ತಿರೋ ಮಳೆ- ರಸ್ತೆ ತುಂಬೆಲ್ಲಾ ನೀರು
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಕಳೆದೆರಡು ದಿನಗಳಿಂದ ಕರಾವಳಿಯಲ್ಲಿ ಆಗ್ಗಾಗೆ ಬರುತ್ತಿದ್ದ ಮಳೆ ಇಂದು ಬಿಟ್ಟು ಬಿಡದೆ ಸುರಿಯುತ್ತಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಾದ ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕುಗಳಲ್ಲೂ ಮಳೆ ಎಡೆಬಿಡದೆ ಸುರಿಯುತ್ತಿದೆ. ಪರಿಣಾಮ ನದಿ, ಹೊಳೆಗಳೆಲ್ಲಾ ಮೈತುಂಬಿ ಹರಿಯುತ್ತಿದೆ. ಮುಂಗಾರು ಆರಂಭವಾಗಿ ತಿಂಗಳುಗಳೇ ಕಳೆದರೂ ಈ ಬಾರಿ ಮಳೆ ಮಾತ್ರ ಬಿರುಸಾಗಿರಲಿಲ್ಲ. ಆದರೆ ಇಂದಿನಿಂದ ಮುಂಗಾರು ಅಬ್ಬರಿಸುತ್ತಿದೆ. ಮಂಗಳೂರು ನಗರದಲ್ಲೂ …
Read More »ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 10 ಸಾವಿರ ಹಾಸಿಗೆಗಳನ್ನು ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಬೆಂಗಳೂರು(ಜು.03): ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 10 ಸಾವಿರ ಹಾಸಿಗೆಗಳನ್ನು ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಂಕು ಲಕ್ಷಣಗಳಿದಿದ್ದರೂ ಪಾಸಿಟಿವ್ ವರದಿಗಳು ಬರುತ್ತಿವೆ. ಬೆಂಗಳೂರಲ್ಲಿ ಪ್ರತಿನಿತ್ಯ ಸೋಂಕಿನ ಪ್ರಕರಣಗಳು ಅಧಿಕಗೊಳ್ಳುತ್ತಿವೆ. ಇದರಿಂದ ಹಾಸಿಗೆ ಲಭ್ಯವಾಗುತ್ತಿಲ್ಲ ಎಂದು ಜನರು ಭೀತಿಗೊಳಗಾಗಿದ್ದಾರೆ. ಆದರೆ, ಜನರು ಯಾವುದೇ ರೀತಿಯಲ್ಲಿಯೂ ಭಯಗೊಳ್ಳಬೇಕಾದ ಅಗತ್ಯ ಇಲ್ಲ. ಸರ್ಕಾರ ಎಲ್ಲಾ ರೀತಿಯ …
Read More »ಇಂದು ನಡೆದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗೋಕಾಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂಭ್ರಮಾಚರಿಸಿದರು.
ಬೆಳಗಾವಿ: ಬೆಂಗಳೂರಿನಲ್ಲಿ ಇಂದು ನಡೆದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗೋಕಾಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂಭ್ರಮಾಚರಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಘೋಷಣೆಗಳನ್ನು ಕೂಗಿ ಸಂಭ್ರಮಾಚರಿಸಿದರು. ವಿವೇಕ ಜತ್ತಿ, ರೀಯಾಜ್ ಚೌಗಲಾ, ಮಲ್ಲಿಕಾರ್ಜುನ ಸೇರಿ ನೂರಾರು ಕಾರ್ಯಕರ್ತರು ಇದ್ದರು.
Read More »ಕೊರೊನಾ ವಾರಿಯರ್ಸ್ಗಳಾಗಿ50 ಲಕ್ಷ ವಿಮಾ ಸೌಲಭ್ಯವನ್ನು ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ
ಬೆಂಗಳೂರು, ಜೂ.30- ಕೊರೊನಾ ವಾರಿಯರ್ಸ್ಗಳಾಗಿ ಕೆಲಸ ಮಾಡುವ ಖಾಸಗಿ ಮತ್ತು ಅರೆಕಾಲಿಕ ವೈದ್ಯರು, ಪ್ಯಾರಾಮೆಡಿಕಲ್ ಸಿಬ್ಬಂದಿಗಳಿಗೂ 50 ಲಕ್ಷ ವಿಮಾ ಸೌಲಭ್ಯವನ್ನು ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರ ಜತೆ ಸಭೆ ನಡೆಸಿದ ಅವರು, ಕೊರೊನಾ ನಿಯಂತ್ರಣಕ್ಕೆ ಖಾಸಗಿ ಆಸ್ಪತ್ರೆಗಳು ಸಹಕಾರ ನೀಡುವಂತೆ ಮನವಿ ಮಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೊರೊನಾ ವಾರಿಯರ್ಸ್ಗಳಾಗಿ ಕೆಲಸ ಮಾಡುವ ವೈದ್ಯಕೀಯ ಕ್ಷೇತ್ರದವರಿಗೆ 50 ಲಕ್ಷ …
Read More »ಮಾಜಿ ಪ್ರಧಾನಿ ದೇವೇಗೌಡ ಹೊರಡಿಸಿರುವ ಪತ್ರಿಕಾ ಪ್ರಕಟಣೆ.
ಬೆಂಗಳೂರು (ಜೂನ್ 25); ರಾಜ್ಯದಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಬಿಜೆಪಿ ಸಚಿವರುಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮನೆಯ ಎದುರು ಧರಣಿ ನಡೆಸಲು ಮುಂದಾಗಿದ್ದಾರೆ. ಜೂನ್.29 ರಂದು ಧರಣಿ ನಡೆಸಲಿರುವುದಾಗಿ ಸ್ವತಃ ಸಿಎಂ ಗೆ ಎಚ್ಚರಿಕೆ ಪತ್ರ ರವಾನಿಸಿದ್ದಾರೆ.ಸಿಎಂ ಗೆ ಪತ್ರ ಬರೆದಿರುವ ದೇವೇಗೌಡ, “ಸಚಿವ ಕೆ.ಸಿ. ನಾರಾಯಣಗೌಡ ಚುನಾವಣಾ ವೈಷಮ್ಯದ ಹಿನ್ನೆಲೆ ಕೆ.ಆರ್ ಪೇಟೆಯ ಜೆಡಿಎಸ್ ಕಾರ್ಯಕರ್ತ ಹೆಚ್.ಟಿ. …
Read More »ಇಂದಿನಿಂದ SSLC ಪರೀಕ್ಷೆ ಆರಂಭ- ವಿದ್ಯಾರ್ಥಿಗಳೇ ಭಯ ಬೇಡ…….
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಈ ಭಯದ ಮಧ್ಯೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದ್ದು, ರಾಜ್ಯಾದ್ಯಂತ ಒಟ್ಟು 8,48,203 ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆಯಲಿದ್ದಾರೆ. ಇಂದಿನಿಂದ ಜುಲೈ 4ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಜ್ಜಾಗಿದ್ದಾರೆ. ಬೆಳಗ್ಗೆ 10.30 ರಿಂದ 1.30 ವರೆಗೆ ಪರೀಕ್ಷೆ ನಡೆಯಲಿದ್ದು, ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡ್ಕೊಂಡಿದೆ. ಎಲ್ಲಾ ಕಡೆ ಎರಡೆರಡು ಬಾರಿ ಸ್ಯಾನಿಟೈಸ್ …
Read More »ಕೊರೊನಾ ವಾರಿಯರ್ಸ್ಗಳಿಗೂ ಸೋಂಕುತಪಾಸಣೆ ಮಾಡೋ ಸಿಬ್ಬಂದಿಯಂತೂ ಕಾಳಜಿಯನ್ನೆ ವಹಿಸ್ತಿಲ್ಲ…..
ಹಾವೇರಿ: ಕೊರೊನಾ ವಾರಿಯರ್ಸ್ಗಳಿಗೂ ಸೋಂಕು ತಗುಲಿದೆ. ಆದರೆ ಆರೋಗ್ಯ ಇಲಾಖೆ ಸಿಬ್ಬಂದಿ ನಿಷ್ಕಾಳಜಿ ತೋರುತ್ತಿದೆ. ಅದರಲ್ಲೂ ಈ ಜಿಲ್ಲೆಯಲ್ಲಿನ ಕ್ವಾರಂಟೈನ್ ಕೇಂದ್ರಗಳಲ್ಲಿನ ಜನರ ತಪಾಸಣೆ ಮಾಡೋ ಸಿಬ್ಬಂದಿಯಂತೂ ಕಾಳಜಿಯನ್ನೆ ವಹಿಸ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ರಾಜ್ಯದಲ್ಲಿ ಕೊರೊನಾ ವಾರಿಯರ್ಸ್ ಆಗಿರೋ ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೋಂಕು ತಗುಲಿದೆ. ಅದರಲ್ಲೂ ಹಾವೇರಿ ಜಿಲ್ಲೆಯಲ್ಲಿ ದೃಢಪಟ್ಟಿರೋ ಬಹುತೇಕ ಪ್ರಕರಣಗಳು ಸಾಂಸ್ಥಿಕ ಕ್ವಾರಂಟೈನ್ ಆಗಿದ್ದವರು. ಹೀಗಿದ್ದರೂ ಕ್ವಾರಂಟೈನ್ ಕೇಂದ್ರಗಳಲ್ಲಿನ ಜನರ ತಪಾಸಣೆ …
Read More »
Laxmi News 24×7