Breaking News

ರಾಜಕೀಯ

ಪತ್ರಕರ್ತರ ಕೋವಿಡ್-19 ಪರೀಕ್ಷೆ ನಡೆಸುತ್ತಿದ್ದ ವೇಳೆ ಅಡ್ಡಿಪಡೆಸಿ, ಗಲಾಟೆ ಮಾಡಿದ ಎಂಎಲ್‍ಸಿ ಕೆ.ಟಿ ಶ್ರೀಕಂಠೇಗೌಡ ಹಾಗೂ ಅವರ ಪುತ್ರನ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಕಿಡಿ

ಮಂಡ್ಯ: ಇಂದು ಪತ್ರಕರ್ತರ ಕೋವಿಡ್-19 ಪರೀಕ್ಷೆ ನಡೆಸುತ್ತಿದ್ದ ವೇಳೆ ಅಡ್ಡಿಪಡೆಸಿ, ಗಲಾಟೆ ಮಾಡಿದ ಎಂಎಲ್‍ಸಿ ಕೆ.ಟಿ ಶ್ರೀಕಂಠೇಗೌಡ ಹಾಗೂ ಅವರ ಪುತ್ರನ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಕಿಡಿಕಾರಿದ್ದಾರೆ. ಈ ರೀತಿ ಗೂಂಡಾಗಿರಿ ಮಾಡಿ, ಗಲಾಟೆ ಮಾಡೋರಿಗೆ ಎಂಎಲ್‍ಸಿ ಆಗಿ ಮುಂದುವರಿಯೋಕೆ ಯಾವ ಅರ್ಹತೆ ಇದೆ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ದೂರವಾಣಿಯಲ್ಲಿ ಮಾತನಾಡಿದ ಅವರು, ಎಸ್‍ಪಿ, ಪೊಲೀಸ್ ಅಧಿಕಾರಿಗಳು, ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುತ್ತಿದ್ದ ಪತ್ರಕರ್ತರ …

Read More »

ಕೊರೋನಾ ವಿರುದ್ಧವಾಗಿ ಜಿಲ್ಲಾಮಟ್ಟದ ಅಧಿಕಾರಿಗಳು ಉತ್ತಮ ಸಹಕಾರ ನೀಡುತ್ತಿದ್ದಾರೆ: ಸಿಇಓ

ಮಂಡ್ಯ.ಏ.22 (ಕರ್ನಾಟಕ ವಾರ್ತೆ):- ಎಲ್ಲಾ ಇಲಾಖೆಯ ಅಧಿಕಾರಿಗಳು, ಸಂಘ-ಸಂಸ್ಥೆಗಳು, ದಾನಿಗಳು ಕೊರೋನಾ ವಿರುದ್ಧವಾಗಿ ಉತ್ತಮ ಸಹಕಾರ ನೀಡುತ್ತಿದ್ದಾರೆ. ಎಂದು ಜಿಲ್ಲಾ ಮುಖ್ಯಕಾರ್ಯನಿರ್ವಾಹಣಾಧಿಕಾರಿಯಾದ ಕೆ.ಯಾಲಕ್ಕಿಗೌಡ ಅವರು ಹೇಳಿದರು. ನಗರದ ಜಿಲ್ಲಾಪಂಚಾಯಿತಿಯ ಸಭಾಂಗಣದಲ್ಲಿ ಜಿಲ್ಲಾಪಂಚಾಯಿತಿಯ ಅಧ್ಯಕ್ಷರಾದ ನಾಗರತ್ನಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಗ್ರಾಮಪಂಚಾಯಿತಿಯ ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾಡುತ್ತಿದ್ದು ಗ್ರಾಮಪಂಚಾಯಿತಿಯ ಅಧ್ಯಕ್ಷತೆಯಲ್ಲಿ ಗ್ರಾಮಪಡೆ ಎನ್ನುವ ಹೆಸರಿನಿಂದ ಮಾಡುತ್ತಿದ್ದಾರೆ. ಪಿಡಿಓ, ಕಾರ್ಯದರ್ಶಿ,ಸದಸ್ಯರು,ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು, ಪೊಲೀಸರು,ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು, …

Read More »

SSLC ಪರೀಕ್ಷೆ ಖಂಡಿತಾ ನಡೆಯುತ್ತೆ.ಸುರೇಶ್ ಕುಮಾರ್…

ಬೆಂಗಳೂರು: ಲಾಕ್ ಡೌನ್ ಮುಂದುವರೆದಿದ್ದು, ವೈರಸ್ ವಿಚಾರವಾಗಿ ಜನ ಭಯಗೊಂಡಿದ್ದಾರೆ. ಪರೀಕ್ಷೆಗಳಿಗೂ ವೈರಸ್ ಕಾಟ ತಪ್ಪಿಲ್ಲ. ಇಷ್ಟೊತ್ತಿಗೆ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳು ನಡೆದಿರಬೇಕಿತ್ತು. ಆದ್ರೆ ಲಾಕ್ ಡೌನ್ ಮುಂದುವರಿಕೆಯಿಂದಾಗಿ ಪರೀಕ್ಷೆ ಹೇಗೆ ಮಾಡ್ತಾರೆ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಈ ಮಧ್ಯೆ ಪರೀಕ್ಷೆ ನಡೆಯದೆ 1-9 ಪಾಸ್ ಮಾಡಿದ ಹಾಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತೆ ಎಂಬ ವದಂತಿಗಳು ಹರಿದಾಡುತ್ತಿವೆ. ಈ ವದಂತಿಗಳಿಗೆ ಸಚಿವ ಸುರೇಶ್ ಕುಮಾರ್ ಬ್ರೇಕ್ ಹಾಕಿದ್ದಾರೆ. ಬೆಂಗಳೂರಿನಲ್ಲಿ …

Read More »

ಬೆಳಗಾವಿ ಹೆಲ್ತ್ ಬುಲೆಟಿನ್ ಸಂಪೂರ್ಣವಾಗಿ…

ಬೆಳಗಾವಿ ಜಿಲ್ಲೆ: ಮತ್ತೇ ಆರು ಜನರಲ್ಲಿ ಸೋಂಕು ಪತ್ತೆ – ಸೋಂಕಿತರ ಒಟ್ಟು ಸಂಖ್ಯೆ 51 ಕ್ಕೆ ಏರಿಕೆ ಬೆಳಗಾವಿ, ಏ.25(ಕರ್ನಾಟಕ ವಾರ್ತೆ): ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ(ಏ.25) ಮತ್ತೇ ಆರು ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ಈ ಹೊಸ ಆರು ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 51 ಕ್ಕೆ ಏರಿದಂತಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ(ಏ.25) …

Read More »

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ೬ ತಾಲ್ಲೂಕುಗಳಲ್ಲ್ಲಿ ಇಲ್ಲಿಯವರೆಗೆ ಒಟ್ಟು ೧೯ ಸೋಂಕಿತರು

ನಿಪ್ಪಾಣಿ: ’ಚಿಕ್ಕೋಡಿ ಲೋಕಸಭಾ ಕ್ಷೇತ್ರದ ೬ ತಾಲ್ಲೂಕುಗಳಲ್ಲ್ಲಿ ಇಲ್ಲಿಯವರೆಗೆ ಒಟ್ಟು ೧೯ ಸೋಂಕಿತರು ಕಂಡುಬಂದಿದ್ದಾರೆ. ಕೇವಲ ರಾಯಬಾಗ ತಾಲ್ಲೂಕಿನಲ್ಲಿ ೧೮ ಜನರು ಮತ್ತು ಹುಕ್ಕೇರಿ ತಾಲ್ಲೂಕಿನಲ್ಲಿ ಒಬ್ಬರು ಒಳಗೊಂಡಿದ್ದಾರೆ. ಇತರೆ ತಾಲ್ಲೂಕುಗಳಲ್ಲಿ ಒಬ್ಬರೂ ಸೋಂಕಿತರು ಇಲ್ಲ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ೨೩೪ ಜನರು ವಿದೇಶದಿಂದ, ೧೫೮೭೯ ಜನರು ಪರರಾಜ್ಯದಿಂದ ಮತ್ತು ೧೦೭೧೮ ಜನರು ಹೊರಜಿಲ್ಲೆಗಳಿಂದ ಬಂದಿದ್ದು ಅವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ’ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದ್ದಾರೆ. …

Read More »

ಕೊರೋನಾ ಸೋಂಕಿತರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಕೇಂದ್ರ ಸರ್ಕಾರ ಅನುಮತಿ ….

ಬೆಂಗಳೂರು : ಕೊರೋನಾ ಸೋಂಕಿತರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಕೇಂದ್ರ ಸರಕಾರವು ರಾಜ್ಯಕ್ಕೆ ಅನುಮತಿ ನೀಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ. ಶುಕ್ರವಾರ ಕೇಂದ್ರದ ಆರೋಗ್ಯ ಸಚಿವ ಹರ್ಷವರ್ಧನ್​ರೊಂದಿಗೆ ವಿಡಿಯೋ ಸಂವಾದ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸುಧಾಕರ್, ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ನಡೆಯಲಿದೆ ಎಂದರು. ಕೊರೊನಾ ಸೋಂಕು ಕಾಣಿಸಿಕೊಂಡರೆ ಆತಂಕ ಪಡುವ ಅಗತ್ಯ ಇಲ್ಲ. ಬಹಳ ಜನ ಕೊರೊನಾ ಸೋಂಕು ದೃಢಪಟ್ಟರೆ …

Read More »

ವೈದ್ಯರ ಸಲಹೆ ಪಡೆದು ಮದ್ಯ ಸೇವನೆ ಬಿಟ್ಬಿಡಿ: ಅಬಕಾರಿ ಸಚಿವ ನಾಗೇಶ್ ಸಲಹೆ

ಕೋಲಾರ: ಮದ್ಯವ್ಯಸನಿಗಳೇ ಬೇರೆ ಮದ್ಯಪ್ರಿಯರೇ ಬೇರೆ ಎನ್ನುವ ಮೂಲಕ ಮದ್ಯಪಾನಿಗಳ ಬಗ್ಗೆ ಸಚಿವ ಎಚ್.ನಾಗೇಶ್ ವಿಭಿನ್ನ ರೀತಿಯಲ್ಲಿ ವಿಶ್ಲೇಷಣೆ ನೀಡಿದ್ದಾರೆ. ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನರ ಸುರಕ್ಷತೆಗಾಗಿಯೇ ಮದ್ಯ ಬಂದ್ ತೀರ್ಮಾನ ಮಾಡಿದ್ದೇವೆ. ವೈದ್ಯರಿಂದ ಸಲಹೆ ಪಡೆದುಕೊಂಡು ಚಟವನ್ನು ಬಿಟ್ಡು ಬಿಡಿ ಎಂದು ಕಿವಿ ಮಾತು ಹೇಳಿದ್ರು. ತಾಳ್ಮೆ, ಚಟ ತ್ಯಜಿಸಿ ಕೌನ್ಸಿಲಿಂಗ್ ಮಾಡಿಸಿಕೊಳ್ಳಿ. ಮದ್ಯ ಬಿಟ್ಟು ಕುಟುಂಬದ ಜೊತೆ ಚೆನ್ನಾಗಿರಿ. ಇನ್ನೂ ಇದೆ …

Read More »

ಕೋಟಿಗೊಬ್ಬ-3 ಚಿತ್ರ ತಂಡದಿಂದ ಸರ್ಪ್ರೈಸ್…..

ಬೆಂಗಳೂರು: ಲಾಕ್‍ಡೌನ್ ಸಮಯದಲ್ಲೂ ಕೋಟಿಗೊಬ್ಬ-3 ಚಿತ್ರ ತಂಡದಿಂದ ಹೊಸ ಸುದ್ದಿಗಳು ಹೊರ ಬರುತ್ತಿದ್ದು, ಇದೀಗ ಅಭಿಮಾನಿಗಳಿಗೆ ಮತ್ತೊಂದು ಸರ್ಪ್ರೈಸ್ ನೀಡಲು ಮುಂದಾಗಿದೆ. ಟೀಸರ್ ಮೂಲಕ ಹುಚ್ಚು ಹಿಡಿಸಿದ್ದ ಚಿತ್ರ ತಂಡ ಇದೀಗ ಅಭಿಮಾನಿಗಳ ನಿರೀಕ್ಷೆಯಂತೆ ಹೊಸ ಸುದ್ದಿಯನ್ನು ಕೊಟ್ಟಿದ್ದು, ಸಂತಸ ಮೂಡಿಸಿದೆ. ಹೌದು ಲಾಕ್‍ಡೌನ್ ಹೊತ್ತಲ್ಲಿ ಕೋಟಿಗೊಬ್ಬ-3 ಚಿತ್ರತಂಡ ಕಿಕ್ಕೇರಿಸುತ್ತಿದ್ದು, ಚಿತ್ರದ ಟೈಟಲ್ ಟ್ರ್ಯಾಕ್‍ನ ಲಿರಿಕಲ್ ವಿಡಿಯೋವನ್ನು ಬಿಡುಗಡೆ ಮಾಡುತ್ತಿದೆ. ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಚಿತ್ರದ ಶೂಟಿಂಗ್ ಮುಗಿದು …

Read More »

ಚೀನಿಯರು ಇದೇನಪ್ಪಾ ಮಾಡಿದ್ರು..?’- ಲಾಕ್‍ಡೌನ್ ಬಗ್ಗೆ ರೋಹಿತ್ ಶರ್ಮಾ ಬೇಸರ

ಮುಂಬೈ: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಆದಾಗಲೇ 2020ರ ಐಪಿಎಲ್ ಆವೃತ್ತಿ ಆರಂಭವಾಗಿ ಅಭಿಮಾನಿಗಳಿಗೆ ಭರಪೂರ ಮನರಂಜನೆ ಲಭಿಸುತ್ತಿತ್ತು. ಆದರೆ ಕೊರೊನಾ ಕಾರಣದಿಂದ ಟೂರ್ನಿ ಮುಂದೂಡಲಾಗಿದ್ದು, ಅಭಿಮಾನಿಗಳು ಸೇರಿದಂತೆ ಹಲವು ಕ್ರಿಕೆಟ್ ಆಟಗಾರರು ಈ ಕುರಿತು ಬೇಸರಗೊಂಡಿದ್ದಾರೆ. ಲಾಕ್‍ಡೌನ್‍ನಿಂದಾಗಿ ಮನೆಯಲ್ಲೇ ಉಳಿದಿರುವ ಹಲವು ಆಟಗಾರು ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಇತ್ತ ಮುಂಬೈ ತಂಡದ ನಾಯಕ ರೋಹಿತ್ ಶರ್ಮಾ ಇನ್‍ಸ್ಟಾ ಮೂಲಕ ಅಭಿಮಾನಿಗಳೊಂದಿಗೆ ಸಾಕಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ …

Read More »

ಬೆಂಗಳೂರು:ಎಣ್ಣೆ ಸೀಜ್ ಮಾಡಿದ್ದಕ್ಕೆ ಎಸಿಪಿಯೇ ಅಮಾನತು………

ಬೆಂಗಳೂರು: ಸರ್ಕಾರಿ ವಾಹನದಲ್ಲಿ ಸಾಗಿಸುತ್ತಿದ್ದ ಮದ್ಯವನ್ನು ಸೀಜ್ ಮಾಡಿದ್ದ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಎಸಿಪಿಯನ್ನೇ ಅಮಾನತು ಮಾಡಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಎಸಿಪಿ ವಾಸು ಅವರನ್ನು ಅಡಿಷನಲ್ ಕಮಿಷನರ್ ಮುರುಗನ್ ಅಮಾನತುಗೊಳಿಸಿದ್ದಾರೆ. ತನ್ನ ಮಾತಿಗೆ ಬೆಲೆ ಕೊಟ್ಟಿಲ್ಲವೆಂದು ನನ್ನನ್ನು ಅಡಿಷನಲ್ ಕಮಿಷನರ್ ಮುರುಗನ್ ಸಸ್ಪೆಂಡ್ ಮಾಡಿದ್ದಾರೆ ಎಂದು ಎಸಿಪಿ ವಾಸು ಆರೋಪಿಸಿದ್ದಾರೆ. ಅಡಿಷನಲ್ ಕಮಿಷನರ್ ಮುರುಗನ್ ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ವೈರಸ್ ತಡೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಕೊರೊನಾ ಸೋಂಕಿನಿಂದ …

Read More »