ಬೆಂಗಳೂರು, ಏ.23- ಕಳೆದ ಮೂರು ದಿನಗಳಿಂದ ತಣ್ಣಗಿದ್ದ ಬೆಂಗಳೂರಿನಲ್ಲಿ ಇಂದು ಬಿಹಾರಿ ಕೊರೊನಾ ಬಾಂಬ್ ಸಿಡಿದಿದ್ದು, ಬಿಹಾರಿ ಮೂಲದ ಕಾರ್ಮಿಕನಿಂದ ಒಂದೇ ದಿನ 9 ಜನರಿಗೆ ಕೊರೊನಾ ಸೋಂಕು ತಗುಲುವ ಮೂಲಕ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶತಕ ದಾಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು 443ಕ್ಕೆ ಏರಿದ್ದು, ಬೆಂಗಳೂರು ನಗರ-9, ಮಂಡ್ಯ-2 ವಿಜಯಪುರ-2, ಧಾರವಾಡ-2, ದಕ್ಷಿಣ ಕನ್ನಡ-1 ಸೇರಿದಂತೆ ಒಂದೇ ದಿನ 16 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ದಿನೇ …
Read More »ತಬ್ಲಿಘೀಗಳಿಗೆ ರಕ್ಷಣೆ ನೀಡಿದ ಆರೋಪ : ಜಮೀರ್, ಇಮ್ರಾನ್ ಪಾಷ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ
ಬೆಂಗಳೂರು, ಏ.23- ಹತ್ತೊಂಬತ್ತು ಮಂದಿ ವಿದೇಶಿ ತಬ್ಲಿಘೀಗಳಿಗೆ ರಕ್ಷಣೆ ನೀಡಿದ ಆರೋಪದ ಮೇಲೆ ಶಾಸಕ ಜಮೀರ್ ಅಹಮ್ಮದ್ ಖಾನ್, ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷ ಹಾಗೂ ಸುಬಾನಿಯಾ ಮಸೀದಿಯ ಮುಖ್ಯಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಅವರಿಗೆ ದೂರು ನೀಡಿದ್ದಾರೆ. ಪಾದರಾಯನಪುರ ವಾರ್ಡ್ನಲ್ಲಿರುವ ಸುಬಾನಿಯಾ ಮಸೀದಿಯಲ್ಲಿ ಇಂಡೋನೇಷ್ಯಾದ 10 ಮಂದಿ ಹಾಗೂ ಕಿರ್ಗಿಸ್ತಾನದ …
Read More »ಸಾಧು-ಸಂತರ ಮೇಲೆ ಮಹಾರಾಷ್ಟ್ರದಲ್ಲಿ ನಡೆದಿರುವ ಹಲ್ಲೆ ಖಂಡಿಸಿ ಶ್ರೀರಾಮ ಸೇನೆ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನ
ಬೆಳಗಾವಿ – – ಸಾಧು-ಸಂತರ ಮೇಲೆ ಮಹಾರಾಷ್ಟ್ರದಲ್ಲಿ ನಡೆದಿರುವ ಹಲ್ಲೆ ಖಂಡಿಸಿ ಶ್ರೀರಾಮ ಸೇನೆ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ ಈ ವಿಷಯ ತಿಳಿಸಿದ್ದಾರೆ. ಮಹಾರಾಷ್ಟ್ರ ಸಿಪಿಐ ಶಾಸಕನಿಂದ ಈ ದುಷ್ಕೃತ್ಯ ನಡೆದಿದ್ದು, ಆತನನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿರುವ ಅವರು, ಶ್ರೀರಾಮ ಸೇನೆಯ ಕಾರ್ಯಕರ್ತರು ರಾಜ್ಯದ್ಯಂತ ಮನೆಯಲ್ಲೇಯ ಸಾಧು ಸಂತರ ಫೋಟೋ ಇಟ್ಟು ಪ್ರತಿಭಟನೆ ನಡೆಸಿ, ಪ್ರಧಾನಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ …
Read More »ಸಂಪರ್ಕಿತರ ಮೇಲೆ ನಿಗಾ ಇಡಲು ತಂತ್ರಜ್ಞಾನ ಬಳಸಿಕೊಳ್ಳಲು ಕರೆ:ಜಗದೀಶ್ ಶೆಟ್ಟರ್
ಬೆಳಗಾವಿ : ಕೋವಿಡ್-೧೯ ಪತ್ತೆ ಮತ್ತು ನಿಯಂತ್ರಣ ಸೇರಿದಂತೆ ವಿವಿಧ ಕಾರ್ಯಚಟುವಟಿಕೆಗಳಿಗಾಗಿ ಸ್ಥಾಪಿಸಲಾಗಿರುವ ಕೋವಿಡ್-೧೯ ವಾರ್ ರೂಮ್ ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಗುರುವಾರ (ಏ.೨೩) ಚಾಲನೆ ನೀಡಿದರು. ಇಲ್ಲಿನ ಇಲ್ಲಿನ ವಿಶ್ವೇಶ್ವರಯ್ಯ ನಗರದ ಸ್ಮಾರ್ಟ್ ಸಿಟಿಯ ಕಮಾಂಡ್ ಅಂಡ್ ಕಂಟ್ರೋಲ್ ಕೇಂದ್ರದಲ್ಲಿ ಕೋವಿಡ್-೧೯ ವಾರ್ ರೂಮ್ ಆರಂಭಿಸಲಾಗಿರುತ್ತದೆ. ವಾರ್ ರೂಮ್ ಕಾರ್ಯಸ್ವರೂಪದ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ …
Read More »ಸಾರಿಗೆ ಇಲಾಖೆಯಿಂದ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮೂರು ಮೊಬೈಲ್ ಫೀವರ್ ಕ್ಲಿನಿಕ್ ಬಸ್…..
ಸಾರಿಗೆ ಇಲಾಖೆಯಿಂದ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮೂರು ಮೊಬೈಲ್ ಫೀವರ್ ಕ್ಲಿನಿಕ್ ಗಳನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಇಲಾಖೆಯ ಸಚಿವರಾದ ಲಕ್ಷ್ಮಣ ಸವದಿ ಅವರು ಗುರುವಾರ (ಏ.೨೩) ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು. ಇಲ್ಲಿನ ವಿಶ್ವೇಶ್ವರಯ್ಯ ನಗರದ ಸ್ಮಾರ್ಟ್ ಸಿಟಿಯ ಕಮಾಂಡ್ ಅಂಡ್ ಕಂಟ್ರೋಲ್ ಕೇಂದ್ರದ ಬಳಿಯಲ್ಲಿ ಬಸ್ ಗಳನ್ನು ಅವರು ಹಸ್ತಾಂತರಿಸಿದರು. ಕೋವಿಡ್-೧೯ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಈ ಕ್ಲಿನಿಕ್ ಗಳನ್ನು ಬಳಸಲಾಗುವುದು ಎಂದು …
Read More »ಬೆಂಗಳೂರು:ಲಾಕ್ಡೌನ್ ಸಡಿಲಿಕೆ ಮಾಡುತ್ತಿದ್ದಂತೆ ಟ್ರಾಫಿಕ್ ಜಾಮ್ …….
ಬೆಂಗಳೂರು: ರಾಜ್ಯ ಸರ್ಕಾರ ಕೊರೊನಾ ಲಾಕ್ಡೌನ್ ಸಡಿಲಿಕೆ ಮಾಡುತ್ತಿದ್ದಂತೆ ಸಿಲಿಕಾನ್ ಸಿಟಿಯಲ್ಲಿ ಜನರ ಓಡಾಟ ಹೆಚ್ಚಾಗಿದೆ. ಜೊತೆಗೆ ಓಡಾಡುವ ವಾಹನಗಳ ಸಂಖ್ಯೆ ಹೆಚ್ಚಳವಾಗಿದ್ದು, ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಸರ್ಕಾರಿ ಕಚೇರಿ, ಐಟಿ-ಬಿಟಿ, ಗೂಡ್ಸ್ ಸರ್ವೀಸ್, ಕೃಷಿ ಚಟುವಟಿಕೆ, ಎಪಿಎಂಸಿ ಮತ್ತು ಇನ್ನಿತರ ತುರ್ತು ಸೇವೆಗಳಿಗೆ ರಾಜ್ಯ ಸರ್ಕಾರ ವಿನಾಯಿತಿ ನೀಡಿದೆ. ಇದರಿಂದ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಜಾಸ್ತಿ ಆಗಿದ್ದು, ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಸುಮಾರು ಅರ್ಧ ಕಿಲೋ ಮೀಟರ್ …
Read More »ಬೆಂಗಳೂರು:ಬಸ್ಗಳಿಂದ ಉದ್ಯೋಗಿಗಳನ್ನ ಕೆಳಗಿಳಿಸಿದ ಪೊಲೀಸರು
ಬೆಂಗಳೂರು: ಇಂದಿನಿಂದ ಕೆಲ ವಲಯಗಳಿಗೆ ಲಾಕ್ಡೌನ್ನಿಂದ ವಿನಾಯ್ತಿ ನೀಡಲಾಗಿದೆ. ಖಾಸಗಿ ಕಂಪನಿಗಳು ತಮ್ಮ ಸಿಬ್ಬಂದಿ ಕರೆ ತರಲು ಬಸ್ ವ್ಯವಸ್ಥೆ ಮಾಡಿವೆ. ಆದ್ರೆ ಬಸ್ ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಸಿಬ್ಬಂದಿಗೆ ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ನಾಗಸಂದ್ರದ ಚೆಕ್ಪೋಸ್ಟ್ ಬಳಿ ಖಾಸಗಿ ವಾಹನಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದರು. ಖಾಸಗಿ ಕಂಪನಿಯ ಟಿಟಿ ವ್ಯಾನ್ ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಕುಳಿತವರನ್ನು ನೋಡಿದ ಪೊಲೀಸರು ಕ್ಲಾಸ್ ತೆಗೆದುಕೊಂಡರು. ಕುರಿಗಳು ಹೋದ …
Read More »ಕೋವಿಡ್-೧೯ ಗೆ ಸಂಬಂಧಿಸಿದಂತೆ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸುವ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಚಾಲನೆ
ಬೆಳಗಾವಿ ಜಿಲ್ಲೆಗೆ ಹೊಸದಾಗಿ ಮಂಜೂರಾಗಿರುವ ಕೋವಿಡ್-೧೯ ಗೆ ಸಂಬಂಧಿಸಿದಂತೆ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸುವ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಗುರುವಾರ (ಏ.೨೩) ಚಾಲನೆ ನೀಡಿದರು. ಇಲ್ಲಿನ ನೆಹರೂ ನಗರದ ಕೆ.ಎಲ್.ಇ. ಆಸ್ಪತ್ರೆ ಎದುರಿಗೆ ಇರುವ ಭಾರತ ಸರ್ಕಾರದ ಆರೋಗ್ಯ ಸಂಶೋಧನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ “ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ”ಯ ಆವರಣದಲ್ಲಿ ಕೋವಿಡ್-೧೯ ಪರೀಕ್ಷಾ ಪ್ರಯೋಗಾಲಯ ಆರಂಭಿಸಲಾಗಿರುತ್ತದೆ. ಸದ್ಯಕ್ಕೆ …
Read More »ಹುಬ್ಬಳ್ಳಿಯ ಒಂದೇ ಕುಟುಂಬದ 7 ಮಂದಿಗೆ ಕೊರೊನಾ ಸೋಂಕು
ಹುಬ್ಬಳ್ಳಿ: ದೆಹಲಿಗೆ ವ್ಯಾಪಾರಕ್ಕಾಗಿ ಹೋಗಿ ಬಂದಿದ್ದ ಹುಬ್ಬಳ್ಳಿಯ ಮುಲ್ಲಾ ಓಣಿಯ ನಿವಾಸಿ ರೋಗಿ ನಂಬರ್-194ರ ಸಂಪರ್ಕದಿಂದ ಇದೀಗ ಹುಬ್ಬಳ್ಳಿಯಲ್ಲಿ ಮತ್ತೆ ಎರಡು ಕೊರೊನಾ ಪಾಸಿಟಿವ್ ಬಂದಿದೆ. ಈ ಮೂಲಕ ಒಬ್ಬನಿಂದ ಒಂದೇ ಕುಟುಂಬದ ಏಳು ಜನರಿಗೆ ಸೋಂಕು ತಗುಲಿದೆ. ತಮ್ಮನಿಂದಾಗಿ ಸಹೋದರ, ಸಹೋದರಿಯರ ಮಕ್ಕಳಿಗೂ ಸೋಂಕು ತಗುಲಿದೆ. ಕೊರೊನಾ ವೈರಸ್ ಮುಲ್ಲಾ ಓಣಿಯ ಕುಟುಂಬಕ್ಕೆ ಸಂಕಷ್ಟವನ್ನು ತಂದೊಡ್ಡಿದ್ದು, ಈಗ ಒಂದೇ ಕುಟುಂಬದಲ್ಲಿಯೇ 7 ಜನರಿಗೆ ಸೋಂಕು ತಗುಲುವ ಮೂಲಕ ಕೊರೊನಾ …
Read More »ಬೆಳಗಾವಿಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ.
ಬೆಂಗಳೂರು – ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 443ಕ್ಕೇರಿದೆ. ಬೆಂಗಳೂರಿನಲ್ಲಿ ಹೊಸದಾಗಿ 9 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 16 ಜನರಿಗೆ ಸೋಂಕು ಪತ್ತೆಯಾಗಿದೆ. ನಿನ್ನೆ 427 ಜನರಿಗೆ ಸೋಂಕು ತಗುಲಿತ್ತು. ಬೆಂಗಳೂರಿನಲ್ಲಿ ಬಿಹಾರ ಮೂಲದ ಕಾರ್ಮಿಕನಿಂದ 9 ಜನರಿಗೆ ಸೋಂಕು ತಗುಲಿದೆ. ವಿಜಯಪುರ, ಮಂಡ್ಯ ಹಾಗೂ ಧಾರವಾಡದ ತಲಾ ಇಬ್ಬರಿಗೆ ಹಾಗೂ ದಕ್ಷಿಣಕನ್ನಡದ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಬೆಳಗಾವಿಯಲ್ಲಿ ಇಂದು ಯಾವುದೇ ಪ್ರಕರಣ …
Read More »
Laxmi News 24×7