Breaking News

ರಾಜಕೀಯ

ಕೊರೋನಾ ಗ್ರೀನ್ ಝೋನ್ ನಲ್ಲಿ ರಾಯಚೂರು – ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ

ರಾಯಚೂರು(ಏ.17): ಮಹಾಮಾರಿ ಕೊರೋನಾ ರಾಜ್ಯ ಸೇರಿದಂತೆ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ಈ ಮಧ್ಯೆ ರಾಜ್ಯದ ಹಲವು ಜಿಲ್ಲೆಗಳು ಸದ್ಯ ಕೊರೋನಾ ಸೋಂಕಿನಿಂದ ದೂರ ಇವೆ. ರಾಯಚೂರು ಜಿಲ್ಲೆಯೂ ಗ್ರೀನ್ ಝೋನ್​ ನಲ್ಲಿದ್ದು ಸೋಂಕು ಹರಡದಂತೆ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ ಮೊದಲು ಹಂತದ ಲಾಕ್ ಡೌನ್ ಮುಗಿದು ಎರಡನೆಯ ಹಂತದ ಲಾಕ್ ಡೌನ್ ಆರಂಭವಾಗಿದೆ. ಲಾಕ್ ಡೌನ್ ಮಾಡಿದ್ದರೂ ಜನ ಅನಗತ್ಯವಾಗಿ ಓಡಾಡುತ್ತಿದ್ದಾರೆ, ಬಹುತೇಕ ಜನರು ಆಸ್ಪತ್ರೆ, ಗ್ಯಾಸ್ ಖರೀದಿ, …

Read More »

ಆತ್ಮೀಯ ಆತಿಥ್ಯ ನೀಡಿದ್ದಕ್ಕಾಗಿ ಭಾರತಕ್ಕೆ ಬ್ರಿಟನ್ ಪ್ರಜೆಯೊಬ್ಬರು ವಿಶೇಷ ಧನ್ಯವಾದ ತಿಳಿಸಿದ್ದಾರೆ.

ಅಮರಾವತಿ: ಆತ್ಮೀಯ ಆತಿಥ್ಯ ನೀಡಿದ್ದಕ್ಕಾಗಿ ಭಾರತಕ್ಕೆ ಬ್ರಿಟನ್ ಪ್ರಜೆಯೊಬ್ಬರು ವಿಶೇಷ ಧನ್ಯವಾದ ತಿಳಿಸಿದ್ದಾರೆ. ತಿರುಪತಿ ಸಮೀಪದ ಶ್ರೀ ಪದ್ಮಾವತಿ ನಿಲಯದಲ್ಲಿ ಬ್ರಿಟನ್‍ನ ವೇಲ್ಸ್ ಮೂಲದ 56 ವರ್ಷದ ಕುಲ್ಲೆ ಕ್ಲೈವ್ ಬ್ರಯಾಂಟ್ ಕ್ವಾರಂಟೈನ್ ಆಗಿದ್ದರು. ಅವರು ಮೂರು ವಾರಗಳ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. ಎರಡು ಬಾರಿ ಅವರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ರಿಪೋರ್ಟ್ ನೆಗೆಟಿವ್ ಬಂದಿದ್ದರಿಂದ ಅವರನ್ನು ಕ್ವಾರಂಟೈನ್‍ನಿಂದ ಗುರುವಾರ ಬಿಡುಗಡೆಗೊಳಿಸಲಾಗಿದೆ. ಲಂಡನ್‍ನಲ್ಲಿ ಭೂಗೋಳಶಾಸ್ತ್ರದ ಪ್ರೊಫೆಸರ್ ಆಗಿರುವ ಕುಲ್ಲೆ ಕ್ಲೈವ್ ಬ್ರಯಾಂಟ್ …

Read More »

ಬೆಳಗಾವಿ ಡಿಸಿಸಿ ಬ್ಯಾಂಕಿನಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ.- ಮಾಜಿ ಸಂಸದ ರಮೇಶ ಕತ್ತಿ

ಬೆಳಗಾವಿ -: ಕೊರೋನ ಇಡೀ ದೇಶವನ್ನೇ ತಲ್ಲಣಗೊಳಿಸಿದ್ದು, ಜನರನ್ನು ರಕ್ಷಿಸಲು ಸರಕಾರಕ್ಕೆ ಎಲ್ಲರ ಸಹಾಯ ಸಹಕಾರ ಅವಶ್ಯವಿದೆ. ಈ ನಿಟ್ಟಿನಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕಿನಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ. ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ, ಮಾಜಿ ಸಂಸದ ರಮೇಶ ಕತ್ತಿ ತಿಳಿಸಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ದೇಶದಿಂದ ಕೊರೋನ ರೋಗ ಹೊಡೆದೋಡಿಸಲು ಸರಕಾರಗಳಿಗೆ ನೆರವು …

Read More »

ಬೆಳಗಾವಿ ಕರೊನಾ ಸೈನಿಕರಿಗೆ ಮಾಸ್ಕ್, ಟಿಷರ್ಟ್, ಸ್ಯಾನಿಟೈಸರ್ ವಿತರಣೆ

ಬೆಳಗಾವಿ ಕರೊನಾ ಸೈನಿಕರಿಗೆ ಮಾಸ್ಕ್, ಟಿಷರ್ಟ್, ಸ್ಯಾನಿಟೈಸರ್ ವಿತರಣೆ ಆಹಾರ, ಔಷಧಿ ವಿತರಣೆ ಮತ್ತು ತುರ್ತು ಸೇವೆಗೆ ಸಜ್ಜಾಗಲು ಕರೆ ಬೆಳಗಾವಿ, ಎಪ್ರಿಲ್ 16(ಕರ್ನಾಟಕ ವಾರ್ತೆ) ಕೋವಿಡ್-೧೯ ಕುರಿತು ಜನಜಾಗೃತಿ ಮೂಡಿಸುವುದರ ಜತೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ನೆರವು ನೀಡಲು ಸಜ್ಜಾಗಿರುವ “ಕರೊನಾ ಸೈನಿಕರಿಗೆ” (ಸ್ವಯಂಸೇವಕರು) ಗುರುವಾರ ನಗರದ ವಾರ್ತಾಭವನದಲ್ಲಿ ಟಿ-ಶರ್ಟ್, ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ …

Read More »

ಕಣ್ಣೋಟದಲ್ಲೇ ಕೊಲ್ಲುವ ಚುಲುವೆ.. ನಿನಗ್ಯಾಕೆ ಇಷ್ಟು ಅವರಸ? ನೀನ್ಯಾಕೆ ಹೋದೆ ಸೌಂದರ್ಯ.. ನೀನ್ಯಾಕೆ ಹೋದೆ

ಮರೆಯಾದಳ್ಯಾಕೆ ಸೌಂದರ್ಯ? ಕಣ್ಣೋಟದಲ್ಲೇ ಕೊಲ್ಲುವ ಚುಲುವೆ.. ನಿನಗ್ಯಾಕೆ ಇಷ್ಟು ಅವರಸ? ನೀನ್ಯಾಕೆ ಹೋದೆ ಸೌಂದರ್ಯ.. ನೀನ್ಯಾಕೆ ಹೋದೆ? ಸ್ಯಾಂಡಲ್‌ವುಡ್‌-ಕಾಲಿವುಡ್‌-ಟಾಲಿವುಡ್‌ನಲ್ಲಿ ಬಹು ಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದ ಸೌಂದರ್ಯ ಸಾವಿನ ಸುದ್ದಿ ಇತ್ತೀಚೆಗಷ್ಟೇ ನಡೆದಂತಿದೆ. ಹೆಸರಿಗೆ ತಕ್ಕ ಸೌಂದರ್ಯ ಹಾಗೂ ನಟನೆಯಿಂದ ಕನ್ನಡಿಗರ ಹೃದಯದಲ್ಲಿ ಸದಾ ನೆನಪಲ್ಲಿ ಉಳಿಯುವ ಆಪ್ತ ನಟಿ. ಅಭಿನಯ, ರೂಪದೊಂದಿಗೆ ಹಿರಿಯ ಕಲಾವಿದರನ್ನೂ ಗೌರವಿಸುತ್ತಿದ್ದ ಗುಣ, ತಮಗೆ ಸೂಕ್ತವಾದ ಪಾತ್ರಗಳನ್ನು ಆಯ್ಕೆ ಮಾಡುತ್ತಿದ್ದ ರೀತಿ ಅಭಿಮಾನಿಗಳನ್ನು ಮಾತ್ರವಲ್ಲದೇ ಚಿತ್ರರಂಗದವರನ್ನೂ …

Read More »

Big breaking”ಬೆಳಗಾವಿಯಲ್ಲಿ ನಾಳೆಯಿಂದ ಕರೋನಾ ವೈರಸ್ ತಪಾಸಣಾ ಪ್ರಯೋಗಾಲಯ ಪ್ರಾರಂಭ

“ಬೆಳಗಾವಿಯಲ್ಲಿ ನಾಳೆಯಿಂದ ಕರೋನಾ ವೈರಸ್ ತಪಾಸಣಾ ಪ್ರಯೋಗಾಲಯ ಪ್ರಾರಂಭ” ಮಹಾಮಾರಿ ಕೊರೋನಾ ವೈರಸ್‌ ಪರೀಕ್ಷೆ ಬೆಳಗಾವಿಯ ಪಾರಂಪರಿಕ ಚಿಕಿತ್ಸಾ ವಿದ್ಯಾಲಯದಲ್ಲಿ ನಾಳೆಯಿಂದ ನಡೆಯಲಿದ್ದು, 3- 4 ದಿನಗಳ ಕಾಲ ವರದಿಗಾಗಿ ಕಾಯುವ ಸಂದಿಗ್ಧತೆ ತಪ್ಪಲಿದೆ. ಇಂಡಿಯನ್‌ ಕೌನ್ಸಿಲ್‌ ಫಾರ್‌ ಮೆಡಿಕಲ್‌ ರಿಸರ್ಚ್‌ (ಐಸಿಎಂಆರ್‌) ಕೊರೋನಾ ಪರೀಕ್ಷೆಗೆ ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಈವರೆಗೆ ಬೆಂಗಳೂರು ಮತ್ತು ಶಿವಮೊಗ್ಗಕ್ಕೆ ರಕ್ತ, ಗಂಟಲು ದ್ರವವನ್ನು ಕಳಿಸಿ ಪರೀಕ್ಷೆ ವರದಿ ಪಡೆಯಲಾಗುತ್ತಿತ್ತು, ಜಿಲ್ಲಾಧಿಕಾರಿಗಳು ಹಾಗೂ …

Read More »

ಗದಗ:ಅನಾಮಧೇಯ ವ್ಯಕ್ತಿಗಳಿಂದ ಫುಡ್ ಕಿಟ್ ವಿತರಣೆ……..

ಗದಗ: ಕೊರೊನಾ ಲಾಕ್‍ಡೌನ್ ವೇಳೆ ಅನ್ಯಕೋಮಿನ ಅನಾಮಧೇಯ ವ್ಯಕ್ತಿಗಳು ದಿನಸಿ ಕಿಟ್ ವಿತರಿಸಿದ್ದು, ಗ್ರಾಮಸ್ಥರು ಆತಂಕಕ್ಕೊಳಗಾಗಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದಲ್ಲಿ ನಡೆದಿದೆ. ಗುರುವಾರ ರಾತ್ರಿ 3 ಜನರ ಯುವಕರು, ಗ್ರಾಮದ ಹತ್ತಾರು ಮನೆಗಳಿಗೆ ಅಕ್ಕಿ, ಗೋಧಿ, ಬೆಳೆ, ಸಕ್ಕರೆ, ಎಣ್ಣೆ ಪ್ಯಾಕೆಟ್ ಹೀಗೆ ಅನೇಕ ವಸ್ತುವಿನ ದಿನಸಿ ಕಿಟ್ ವಿತರಿಸಿದ್ದಾರೆ. ನಮಗೆ ಬೇಡ ಅಂದರೂ ಕೊಟ್ಟು ಹೋಗಿದ್ದಾರೆ ಎಂದು ಸ್ಥಳೀಯ ಅಜ್ಜಿಯರಿಬ್ಬರು ಹೇಳುತ್ತಿದ್ದಾರೆ. ಇವರು …

Read More »

ಸರ್ಕಾರದ ಮಾರ್ಗಸೂಚಿ ಪ್ರಕಾರವೇ ಹೋಟೆಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ: ಬೊಮ್ಮನಹಳ್ಳಿ

ಬೆಳಗಾವಿ : ಸರ್ಕಾರದ ಮಾರ್ಗಸೂಚಿ ಪ್ರಕಾರವೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಸೇರಿದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಹೋಟೆಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಕ್ವಾರಂಟೈನ್ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾಗಿರುತ್ತದೆ. ಎಲ್ಲ ಕ್ವಾರಂಟೈನ್ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ವೈಯಕ್ತಿಕ ಸ್ವಚ್ಛತೆ ಸೇರಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಕ್ವಾರಂಟೈನ್ …

Read More »

ರೈತರು ಬೆಳೆದ ತರಕಾರಿಗಳನ್ನು,ಸರ್ಕಾರವೆ ನೇರವಾಗಿ ತೆಗೆದುಕೊಂಡು ಜನರಿಗೆ ವಿತರಿಸುವ ಕಾರ್ಯಕ್ಕಾಗಿ ಚಿಂತನೆ ಮಾಡಬೇಕು

ಗೋಕಾಕ: ರೈತರು ಬೆಳೆದ ತರಕಾರಿಗಳನ್ನು ಮತ್ತು ಬೆಳೆಗಳನ್ನು ಸರ್ಕಾರವೆ ನೇರವಾಗಿ ತೆಗೆದುಕೊಂಡು ಜನರಿಗೆ ವಿತರಿಸುವ ಕಾರ್ಯಕ್ಕಾಗಿ ಚಿಂತನೆ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆ ನೀಡಿದರು. ಇಂದು‌ ನಗರದಲ್ಲಿ‌‌ ಮಾತನಾಡಿ ರೈತರು ಬೆಳೆದ ತರಕಾರಿಗಳು ನಾಶವಾಗುತ್ತಿವೆ. ಇದನ್ನು ಕಡಿಮೆ‌ ದರದಲ್ಲಿ ನೀಡಲು ರೈತರು ಮುಂದಾಗಿದ್ದಾರೆ. ಇದರಿಂದ ಜನಸಾಮಾನ್ಯರಿಗೂ ಮತ್ತು ರೈತರಿಗೂ ಸ್ವಲ್ಪ ಮಟ್ಟಿಗೆ ಅನುಕೂಲ ಆಗುತ್ತದೆ ಎಂದರು. ಕೊರೋನಾ ಸಂಕಷ್ಟದಲ್ಲಿ ಎಲ್ಲ ವರ್ಗದವರಿಗೂ ಅನಾನುಕೂಲವಾಗಿದೆ. ಹೀಗಾಗಿ ರೈತರು …

Read More »

ದಾವಣಗೆರೆ:ಲಾಕ್‍ಡೌನ್ ಉಲ್ಲಂಘಿಸಿದವರ ಕೈಗೆ ಸ್ಲೇಟ್ ಕೊಟ್ಟು ಜಾಗೃತಿ

ದಾವಣಗೆರೆ: ಲಾಕ್‍ಡೌನ್ ಉಲ್ಲಂಘಿಸಿ ಅನಗತ್ಯವಾಗಿ ಹೊರಗಡೆ ತಿರುಗುತ್ತಿದ್ದವರನ್ನು ಎಳೆತಂದ ದಾವಣಗೆರೆ ಪೊಲೀಸರು ಅವರ ಕೈಗೆ ಸ್ಲೇಟ್ ಕೊಟ್ಟು ಕೊರೊನಾ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಕೊರೊನಾ ಭಯದಿಂದ ದೇಶವೇ ಲಾಕ್‍ಡೌನ್ ಆಗಿದೆ. ಅನಗತ್ಯವಾಗಿ ಹೊರಗೆ ಬರಬೇಡಿ ಎಂದು ಆಯಾ ಜಿಲ್ಲೆಗಳಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸರು ಮನವಿ ಮಾಡುತ್ತಿದ್ದಾರೆ. ಹೀಗಾದರೂ ದಾವಣಗೆರೆಯಲ್ಲಿ ನೂರಕ್ಕೂ ಅಧಿಕ ಮಂದಿ ಹೊರಗೆ ಬಂದು ಕಾನೂನು ಉಲ್ಲಂಘಿಸಿದವರನ್ನು ವಶಕ್ಕೆ ಪಡೆದಿದ್ದಾರೆ ಹೊರಗಡೆ ಬಂದು ಸುಖಾಸುಮ್ಮನೆ ತಿರುಗುತ್ತಿದ್ದ …

Read More »