ಬೆಂಗಳೂರು: ಇಷ್ಟು ದಿನ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರಕ್ಕೆ ಮೆಚ್ಚುಗೆ ಹಾಗೂ ಸಲಹೆ ನೀಡುತ್ತಿದ್ದ ನಟ ರಿಯಲ್ ಸ್ಟಾರ್ ಉಪೇಂದ್ರ, ಇದೀಗ ಸಿನಿಮಾ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈಗಾಗಲೇ ಹಲವು ನಟ, ನಟಿಯರು ಸಹಾಯ ಮಾಡಿದ್ದು, ಕೆಲವರು ಪಿಎಂ ಕೇರ್ಸ್ ಹಾಗೂ ಸಿಎಂ ಪರಿಹಾರ ನಿಧಿಗೆ ನೀಡಿದರೆ, ಇನ್ನೂ ಕೆಲವರು ಬಡವರಿಗೆ ಆಹಾರ ಪದಾರ್ಥಗಳನ್ನು ದಾನ ಮಾಡುವ ಮೂಲಕ ನೆರವಾಗುತ್ತಿದ್ದಾರೆ. ಮಾತ್ರವಲ್ಲದೆ ನಿಖಿಲ್ ಕುಮಾರಸ್ವಾಮಿ ಸೇರಿದಂತೆ …
Read More »ಪ್ರಧಾನಿ ಮೋದಿ ಭಾಷಣದ ಬಳಿಕ ಮದ್ಯದಂಗಡಿ ತೆರೆಯುವ ಕುರಿತು ನಿರ್ಧಾರ: ಸಚಿವ ನಾಗೇಶ್
ಕೋಲಾರ: ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯುವ ವಿಚಾರವಾಗಿ ಚರ್ಚೆ ನಡೆಸಲಾಗಿದ್ದು, ನಾಳೆ ಪ್ರಧಾನಿ ಮೋದಿ ಅವರ ಸೂಚನೆ ಮೇರೆಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅಬಕಾರಿ ಸಚಿವ ನಾಗೇಶ್ ತಿಳಿಸಿದ್ದಾರೆ. ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ಮದ್ಯದಂಗಡಿ ತೆರೆಯಲು ಚಿಂತನೆ ಮಾಡಲಾಗಿದೆ. ಪ್ರಧಾನಿ ಮೋದಿ ಅವರ ಭಾಷಣದ ನಂತರ ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯಲು ತೀರ್ಮಾನ ಮಾಡಲಾಗುವುದು. ಕಳ್ಳಬಟ್ಟಿ ಸಾರಾಯಿ ತಡೆಗಟ್ಟಲು ನಮ್ಮ ಅಧಿಕಾರಿಗಳು ಹಗಲು ರಾತ್ರಿ ಕೆಲಸ …
Read More »ಇಂದು ಬೆಳಗ್ಗೆ ಮೋದಿ ಭಾಷಣ – ಕಲರ್ ಲಾಕ್ಡೌನ್ ಹೇಗಿರಬಹುದು? ಯಾವುದಕ್ಕೆ ವಿನಾಯಿತಿ?
ನವದೆಹಲಿ: ಮೊದಲ ಹಂತದ ಲಾಕ್ಡೌನ್ ಇಂದು ಮಧ್ಯರಾತ್ರಿಗೆ ಅಂತ್ಯವಾಗಲಿದ್ದು, 21 ದಿನಗಳ ಗೃಹಬಂಧನ ಅಂತ್ಯವಾಗಲಿದೆ. ಇಂದು ಬೆಳಗ್ಗೆ 10 ಗಂಟೆಗೆ ದೇಶದ ಜನರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದು, ದೇಶದ ಗಂಭೀರ ಪರಿಸ್ಥಿತಿಯನ್ನು ಜನರಿಗೆ ವಿವರಿಸಲಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ನಡೆದ ಎಲ್ಲ ರಾಜ್ಯಗಳ ಸಿಎಂಗಳ ಸಭೆಯಲ್ಲಿ ಹಲವು ವಿನಾಯಿತಿಗಳೊಂದಿಗೆ ಏಪ್ರಿಲ್ 30 ವರೆಗೂ ಲಾಕ್ಡೌನ್ ವಿಸ್ತರಿಸುವ ಒಮ್ಮತದ ನಿರ್ಣಯಕ್ಕೆ ಬರಲಾಗಿತ್ತು. ಈ ನಿರ್ಣಯವನ್ನು ಮೊದಲ ಹಂತದ …
Read More »ಹುಬ್ಬಳ್ಳಿ ಕೊರೊನಾ ಸೋಂಕಿತನ ಟ್ರಾವೆಲ್ ಹಿಸ್ಟರಿ ……
ಹುಬ್ಬಳ್ಳಿ: ಹುಬ್ಬಳ್ಳಿಯ ಮುಲ್ಲಾ ಓಣಿಯ ಕೊರೊನಾ ಸೋಂಕಿತನ ಅಣ್ಣ ರೋಗಿ ನಂಬರ್-236 ಟ್ರಾವೆಲ್ ಹಿಸ್ಟರಿಯನ್ನು ಜಿಲ್ಲಾಡಳಿತ ಬಿಡುಗಡೆಗೊಳಿಸಿದ್ದು, ಸಂಪರ್ಕದಲ್ಲಿರುವವರು ಕೂಡಲೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಜಿಲ್ಲಾಡಳಿತ ಮನವಿ ಮಾಡಿದೆ. ಪಿ.194ನ ಅಣ್ಣ ಪಿ-236 ಇಡೀ ಹುಬ್ಬಳ್ಳಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಸುತ್ತಾಡಿದ್ದಾನೆ. ಮಾರ್ಚ್ 23ರಂದು ವಾಹನ ಚಾಲಕನ ಸಮೇತ ಯಲ್ಲಾಪುರಕ್ಕೆ ಪ್ರಯಾಣ ಬೆಳೆಸಿ, ಅಲ್ಲಿಂದ ತನ್ನ ಫುಟ್ ವೇರ್ ಅಂಗಡಿ ಓಪನ್ ಮಾಡಿದ್ದಾನೆ. ಅಂದೇ ಭಾರತ …
Read More »ಮೂರು ಆಸ್ಪತ್ರೆಗೆ ಅಲೆದಾಡಿ ಬೆಂಗ್ಳೂರಿನ ವೃದ್ಧ ಸಾವು – ಕೊನೆಗೆ ಕೊರೊನಾ ಪರೀಕ್ಷೆ
– ಸಂಪರ್ಕಕ್ಕೆ ಬಂದಿದ್ದ 20 ಮಂದಿಗೆ ಕ್ವಾರಂಟೈನ್ – ಟಾಯ್ಲೆಟ್ನಲ್ಲೇ ಕುಸಿದು ಬಿದ್ದಿದ್ದ ವೃದ್ಧ – ಸೋಮವಾರ ಸಂಜೆ ಕೊರೊನಾ ದೃಢ ಬೆಂಗಳೂರು: ಕೊರೊನಾ ಸೋಂಕಿತರ ಸಾವು ಕರ್ನಾಟಕದಲ್ಲಿ 8ಕ್ಕೆ ಏರಿದ್ದು, ಕಳೆದ ದಿನವೇ ಇಬ್ಬರು ಒಂದೇ ದಿನ ಮೃತಪಟ್ಟಿದ್ದಾರೆ. ಅದರಲ್ಲೂ ಸಿಲಿಕಾನ್ ಸಿಟಿಯ 65 ವರ್ಷದ ವೃದ್ಧ ಮೂರು ಆಸ್ಪತ್ರೆಗೆ ಅಲೆದಾಡಿ ಕೊನೆಗೆ ಮೃತಪಟ್ಟಿದ್ದಾರೆ. ಭಾನುವಾರ ಮೃತ ವೃದ್ಧ ಕಫ, ಕೆಮ್ಮು ಎಂದು ರಾಜೀವ್ ಗಾಂಧಿ ಆಸ್ಪತ್ರೆಗೆ ಬಂದಿದ್ದಾರೆ. …
Read More »ಬಾರ್ ಒಪನ್- ಓಡೋಡಿ ಬಂದ ಗ್ರಾಹಕರಿಗೆ ನಿರಾಶೆ
ಧಾರವಾಡ: ಬಾರ್ ಬಾಗಿಲು ಒಪನ್ ಆಗಿದ್ದನ್ನು ನೋಡಿ ಜನರು ಓಡೋಡಿ ಬಂದಿದ್ದು, ಕೊನೆಗೆ ನಿರಾಶೆಯಿಂದ ಸಪ್ಪೆ ಮೋರೆ ಹೊತ್ತು ವಾಪಸ್ ನಡೆದಿದ್ದಾರೆ. ನಗರದ ಟೋಲ್ಗೇಟ್ ಬಳಿಯ ದುರ್ಗಾ ವೈನ್ಸ್ಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ಬಂದಿದ್ದರು. ಬಾರ್ ಬಾಗಿಲು ಓಪನ್ ಆಗುತ್ತಿದ್ದಂತೆ ಒಡೋಡಿ ಬಂದ ಜನರು, ಬಾರ್ ಶುರುವಾಯ್ತಾ ಎಂದು ಕೇಳಿದ್ದಾರೆ. ಆದರೆ ಅಧಿಕಾರಿಗಳು ಆಗಮಿಸಿದ್ದಕ್ಕೆ ಕಾರಣವೇ ಬೇರೆ ಇತ್ತು. ಬಂದ ಜನರಿಗೆಲ್ಲ ಬಾರ್ ಒಪನ್ ಆಗಿಲ್ಲ ಎಂದು ಹೇಳುವಷ್ಟರಲ್ಲಿ ಅಬಕಾರಿ …
Read More »ಚನ್ನಣ್ಣವರ್ ಬಗ್ಗೆ ಸಿಎಂ ಬಳಿ ನಾನು ದೂರಿಲ್ಲ:ಲಕ್ಷ್ಮಣ ಸವದಿ
ಬೆಂಗಳೂರು – ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ಇತ್ತೀಚೆಗೆ ಸಂಭವಿಸಿದ ಒಂದು ಘಟನೆಯ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿ ರವಿ ಚನ್ನಣ್ಣನವರ್ ಅವರ ವಿರುದ್ಧ ನಾನು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದೇನೆ ಎಂಬುದಾಗಿ ಕೆಲವು ಸೋಶಿಯಲ್ ಮೀಡಿಯಾಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ. ರವಿಚನ್ನಣ್ಣವರ್ ಅವರೊಬ್ಬ ಒಳ್ಳೆಯ ಅಧಿಕಾರಿ ಎಂಬುದನ್ನು ನಾನು ಬಲ್ಲೆ. ಅವರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆಯೇ ವಿನ: ಅವರು …
Read More »ಕೊರೋನಾ ಹಿನ್ನೆಲೆಯಲ್ಲಿ ಸೋಮವಾರ ದೂರವಾಣಿ ಮೂಲಕ ಕ್ಷೇತ್ರದ ಅಧಿಕಾರಿಗಳ ಸಭೆ ನಡೆಸಿದರು. ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕಳೆದ ಜನೆವರಿಯಿಂದ ಬೆಂಗಳೂರಿನಲ್ಲಿರುವ ಕೆಎಂಎಫ್ ಚೇರಮನ್ ಬಾಲಚಂದ್ರ ಜಾರಕಿಹೊಳಿ, ಕೊರೋನಾ ಹಿನ್ನೆಲೆಯಲ್ಲಿ ಸೋಮವಾರ ದೂರವಾಣಿ ಮೂಲಕ ಕ್ಷೇತ್ರದ ಅಧಿಕಾರಿಗಳ ಸಭೆ ನಡೆಸಿದರು. ಮೂಡಲಗಿಯ ಈರಣ್ಣ ದೇವಸ್ಥಾನದ ಆವರಣದಲ್ಲಿ ಸೋಮವಾರ ದೂರವಾಣಿ ಮೂಲಕ ಮೂಡಲಗಿ ತಾಲೂಕ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಲಾಕ್ ಡೌನ್ ಸಂಪೂರ್ಣವಾಗಿ ಯಶಸ್ವಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಪ್ರಸ್ತುತ ವಿಶ್ವದಾದ್ಯಂತ ಕಾಡುತ್ತಿರುವ ಪ್ರಬಲ ಕೊರೋನಾ ವೈರಸ್ ತಡೆಯಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ …
Read More »ಕೊಪ್ಪಳ:ಕಳ್ಳಭಟ್ಟಿ ಸಾರಾಯಿ ತಯಾರಿಸುತ್ತಿದ್ದನ್ನು ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ದಾಳಿ
ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ವೆಂಕಟಾಪುರ ಮತ್ತು ತುಮರಿಕೊಪ್ಪ ಗ್ರಾಮಗಳ ತಾಂಡ ಬಳಿ ಕಳ್ಳಭಟ್ಟಿ ಸಾರಾಯಿ ತಯಾರಿಸುತ್ತಿದ್ದನ್ನು ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ, ಅಲ್ಲಿದ್ದ ಪರಿಕರಗಳನ್ನು ವಶಕ್ಕೆ ತೆಗೆದುಕೊಂಡಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಗುಡ್ಡಗಾಡು ಪ್ರದೇಶದಲ್ಲಿ ಕಳ್ಳಭಟ್ಟಿ ತಯಾರಿಕಾ ಘಟಕದ ಮೇಲೆ ತಹಶೀಲ್ದಾರ್ ಎಂ.ಸಿದ್ದೇಶ್ ನೇತೃತ್ವದಲ್ಲಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು. ಅಬಕಾರಿ ಇಲಾಖೆ, ಕಂದಾಯ, ಮತ್ತು ಪೊಲೀಸ್ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಕಳ್ಳಭಟ್ಟಿ ತಯಾರಿಕೆ …
Read More »ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ, ಬಡವರನ್ನು ಬದುಕಿಸಿಕೊಳ್ಳಲು ಸ್ಥಿತಿವಂತರು ಸಹಾಯ ಮಾಡಿ: ಡಿಸಿಎಂ ಕಾರಜೋಳ
ಚಿತ್ರದುರ್ಗ: ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ. ಸ್ಥಿತಿವಂತರು ಬಡವರನ್ನು ಬದುಕಿಸಿಕೊಳ್ಳಲು ಆರ್ಥಿಕ ಸಹಾಯ ಮಾಡಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕೇಳಿಕೊಂಡಿದ್ದಾರೆ. ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನೆರೆ ಹಾವಳಿ, ಬರಗಾಲ ಸೇರಿದಂತೆ ಒಂದಲ್ಲಾ ಒಂದು ಸಮಸ್ಯೆಗಳನ್ನು ಎದುರಿಸುತ್ತಾ ಬಂದಿದ್ದೇವೆ. ಇದೆಲ್ಲವನ್ನೂ ಮುಗಿಸಿಕೊಂಡು 2020ರಲ್ಲಿ ಹೊಸ ಹೊಸ ಯೋಜನೆಗಳನ್ನು ರೂಪಿಸೋಣ ಎಂದಾಗ ಈ ಮಹಾಮಾರಿ ಕೊರೊನಾ ವೈರಸ್ ಅಂಟಿಕೊಂಡಿದೆ. ಈ ಕೊರೊನಾ ನಿರ್ಮೂಲನೆ …
Read More »
Laxmi News 24×7