Breaking News

ರಾಜಕೀಯ

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ಮುಂದಾದ ಸಿಎಂ

ಬೆಂಗಳೂರು : ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆಸಲಿದ್ದಾರೆ ಸಿಎಂ ಯಡಿಯೂರಪ್ಪ, ಹೌದು, ಕೊರೋನಾ ಹೊಡೆತಕ್ಕೆ ರಾಜ್ಯ ತತ್ತರಿಸಿರುವ ಹಿನ್ನೆಲೆಯಲ್ಲಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ. ಆಡಳಿತ ಯಂತ್ರಕ್ಕೆ ಹಿಡಿದಿರುವ ಕಿಲುಬನ್ನು ತಿಕ್ಕಿ ತೊಳೆಯಲು ಬಯಸಿರುವ ಸಿಎಂ ಇದಕ್ಕಾಗಿ ಪೂರ್ವಭಾವಿ ತಯಾರಿ ಆರಂಭಿಸಿದ್ದಾರೆ. ಆಡಳಿತ ಯಂತ್ರ ದುಬಾರಿ ವೆಚ್ಚದ್ದಾಗಿ ಪರಿಣಮಿಸಿರುವುದರಿಂದ ಮೊದಲು ತಮ್ಮ ಸಿಬ್ಬಂದಿಗಳು ಹಾಗೂ ಸಚಿವರ ಸಿಬ್ಬಂದಿಗಳ ಸಂಖ್ಯೆಗೆ ಸಿಎಂ ಕತ್ತರಿ ಹಾಕಲಿದ್ದಾರೆ. …

Read More »

ದೇಶದಲ್ಲಿ 6 ಸಾವಿರ ಗಡಿ ಸಮೀಪಿಸಿದ ಹೆಮ್ಮಾರಿ- 24 ಗಂಟೆಯಲ್ಲಿ 24 ಮಂದಿ ಸಾವು

ನವದೆಹಲಿ: ದೇಶದಲ್ಲಿ ಹೆಮ್ಮಾರಿ ಕೊರೊನಾ ಸೋಂಕಿತರ ಸಂಖ್ಯೆ 5,742 ಆಗಿದ್ದು, 174 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಂದೇ ದಿನ 773 ಮಂದಿಗೆ ಸೋಂಕು ದೃಢವಾಗಿದ್ದು, 24 ಗಂಟೆಯಲ್ಲಿ 32 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ 402 ದಿನ ಚೇತರಿಸಿಕೊಂಡಿದ್ದಾರೆ. ಹಾಟ್‍ಸ್ಪಾಟ್‍ಗಳ ಮೇಲೆ ನಿರಂತರವಾಗಿ ನಿಗಾವಹಿಸಿದ್ದೇವೆ ಅಂತ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುತ್ತಿಲ್ಲ. ಮಂಗಳವಾರ ಒಂದು ಸಾವಿರ ಸೋಂಕಿತರ ಗಡಿ ದಾಟಿದ್ದ ಮಹಾರಾಷ್ಟ್ರದಲ್ಲಿ ಬುಧವಾರ ರಾತ್ರಿ …

Read More »

ಕರ್ನಾಟಕದ ಕೊರೋನಾ ಹಾಟ್‌ಸ್ಪಾಟ್‌ಗಳಲ್ಲಿ ಕನಿಷ್ಠ 2 ವಾರ ಲಾಕ್‍ಡೌನ್ ಮುಂದುವರಿಕೆ..

ಬೆಂಗಳೂರು : ಲಾಕ್ ಡೌನ್ ತೆರವುಗೊಳಿಸುವ ಸಂಬಂಧ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಸರ್ಕಾರ ಹೇಳಿದೆ. ಆದರೆ, ಕೋವಿಡ್-19 ಹಾಟ್ ಸ್ಪಾಟ್ ಗಳಲ್ಲಿ ಕನಿಷ್ಠ ಎರಡು ವಾರಗಳವರೆಗೆ ವಿಸ್ತರಿಸುವ ಕಡೆಗೆ ಒಲವು ವ್ಯಕ್ತಪಡಿಸಿದೆ. ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ಮತ್ತೊಂದಿಷ್ಟು ದಿನಗಳ ಕಾಲ ಲಾಕ್ ಡೌನ್ ವಿಸ್ತರಿಸುವ ಅಗತ್ಯತೆ ಬಗ್ಗೆ ಎದುರು ನೋಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗದ …

Read More »

ತುಮಕೂರು:ಕೊರೊನಾ ಮಹಾಮಾರಿಗೆ ದೇವರ ಪಟ್ಟಕಟ್ಟಿ ಪೂಜೆ

ತುಮಕೂರು: ನಗರ ಸೇರಿದಂತೆ ಜಿಲ್ಲೆಯ ಜನರು ಕೊರೊನಾ ಮಹಾಮಾರಿಗೆ ದೇವರ ಪಟ್ಟಕಟ್ಟಿ ಪೂಜೆ ಸಲ್ಲಿಸುತ್ತಿದ್ದಾರೆ. ಮಹಾಮಾರಿಗೆ ‘ಕೊರೊನಾ ಅಮ್ಮ’ ಎಂದು ಹೆಸರಿಟ್ಟು ಪೂಜಿಸಲಾಗುತ್ತಿದೆ. ಗ್ರಾಮಗಳ ಹೊರವಲಯದಲ್ಲಿ ಎಮ್ಮೆಯ ಮುಖದ ರೀತಿಯಲ್ಲಿ ಮಣ್ಣಿನಲ್ಲಿ ಗೊಂಬೆ ತಯಾರಿಸಲಾಗಿದೆ. ಈ ಗೊಂಬೆಯನ್ನು ಕೊರೊನಾ ಅಮ್ಮನ ಪ್ರತಿರೂಪ ಎಂದು ಹೇಳ್ತಿರುವ ಜನರು ತೆಂಗಿನಕಾಯಿ ಒಡೆದು, ಆರತಿ ಬೆಳಗಿ ಪೂಜೆ ಮಾಡುತ್ತಿದ್ದಾರೆ. ಈ ಹಿಂದೆ ಗ್ರಾಮಗಳಲ್ಲಿ ಪ್ಲೇಗ್ ಬಂದಾಗ ಇದೇ ರೀತಿ ಊರಿನ ಹೊರಗಿನ ಕೆರೆ, ಕಟ್ಟೆ …

Read More »

ಚಿಕ್ಕೋಡಿ: ಆರೋಗ್ಯ ಮಾಹಿತಿ ಕಲೆ ಹಾಕಲು ಹೋಗಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಮತ್ತೆ ಹಲ್ಲೆ

ಚಿಕ್ಕೋಡಿ: ಆರೋಗ್ಯ ಮಾಹಿತಿ ಕಲೆ ಹಾಕಲು ಹೋಗಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಮತ್ತೆ ಹಲ್ಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಆರೋಗ್ಯ ಮಾಹಿತಿ ಕಲೆ ಹಾಕಲು ಹೋಗಿದ್ದ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಪಟ್ಟಣದಲ್ಲಿ ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮನೆ ಮನೆ ಆರೋಗ್ಯ ಸರ್ವೆ ಕಾರ್ಯಕ್ಕೆ ಮುಂದಾಗಿದೆ. ಇದೇ ಕೆಲಸ ನಿಮಿತ್ತವಾಗಿ ಪಟ್ಟಣದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿ …

Read More »

ಮದ್ಯ ಮಾರಾಟಕ್ಕೆ ಅನುಮತಿ ಕೋರಿದ್ದ ವೈದ್ಯರಿಗೆ 10 ಸಾವಿರ ದಂಡ

ಬೆಂಗಳೂರು: ಲಾಕ್‍ಡೌನ್ ವೇಳೆ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದ ಮನೋವೈದ್ಯರಿಗೆ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿ ಅರ್ಜಿ ವಜಾಗೊಳಿಸಿದೆ. ಕೊರೊನಾ ವೈರಸ್ ಹಾವಳಿ ತಡೆಗಟ್ಟುವ ಸಂಬಂಧ ದೇಶದಲ್ಲಿ ಲಾಕ್‍ಡೌನ್ ಜಾರಿಯಾಗಿದ್ದು ಎಲ್ಲ ರಾಜ್ಯ ಸರ್ಕಾರಗಳು ಮದ್ಯ ಮಾರಾಟಕ್ಕೆ ನಿಷೇಧ ಹೇರಿದೆ. ಕರ್ನಾಟಕದಲ್ಲೂ ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಹುಬ್ಬಳ್ಳಿಯ ಖ್ಯಾತ ಮನೋವೈದ್ಯ ವಿನೋದ್ ಕುಲಕರ್ಣಿ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಪಿಐಎಲ್ ಸಲ್ಲಿಸಿದ್ದರು. …

Read More »

ಕ್ವಾರಂಟೈನ್‍ಗಳಿಂದ ಬ್ರಾಂಡೆಡ್ ಬೇಡಿಕೆ – ಉಡುಪಿಯಲ್ಲಿ ಹೊಸ ತಲೆನೋವು ಶುರು

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಕ್ವಾರಂಟೈನ್‍ನಲ್ಲಿರುವ ಜನರ ಕಿರಿಕ್ ಜಾಸ್ತಿಯಾಗುತ್ತಿದೆ. ನಮಗೆ ಬ್ರಾಂಡೆಡ್ ಐಟಂ ಬೇಕು ಅಂತ ಸಿಬ್ಬಂದಿಗೆ ಒತ್ತಡ ಹಾಕುತ್ತಿದ್ದಾರೆ. ಉಡುಪಿ ಜಿಲ್ಲೆಯ ನರ್ಸ್, ಆಶಾ ಕಾರ್ಯಕರ್ತರಿಗೆ ಕ್ವಾರಂಟೈನ್‍ಗಳು ದುಂಬಾಲು ಬೀಳುತ್ತಿದ್ದಾರೆ. ವಿದೇಶದಿಂದ ಬಂದ ವ್ಯಕ್ತಿಗಳ ಕುಟುಂಬಕ್ಕೆ ಜಿಲ್ಲಾಡಳಿತ ಒಂದು ತಿಂಗಳ ಕಾಲ ಹೋಂ ಕ್ವಾರಂಟೈನ್ ವಿಧಿಸಿತ್ತು. ಕುಟುಂಬದ ಯಾವ ಸದಸ್ಯರು ಹೊರಗೆ ಬಾರದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ಆರೋಗ್ಯ ಕಾರ್ಯಕರ್ತರು ದಿಗ್ಬಂಧನ ಹಾಕಿದ್ದರು. ಒಂದು ಕುಟುಂಬಕ್ಕೆ ಬೇಕಾದ …

Read More »

ಕೇವಲ ಹೇಳಿಕೆಗಳಿಗೆ ಸೀಮಿತವಾಗ್ಬೇಡಿ- ಶ್ರೀರಾಮುಲು ವಿರುದ್ಧ ಹೆಚ್‍ಡಿಕೆ ವಾಗ್ದಾಳಿ

ರಾಮನಗರ: ಕೊರೊನಾ ತಡೆಗಾಗಿ ದೇಶಾದ್ಯಂತ ವಿಧಿಸಿರುವ ಲಾಕ್‍ಡೌನ್‍ನ 14ಕ್ಕೆ ನಿಲ್ಲಿಸ್ತಾರೋ ಇಲ್ವೋ ನನಗೆ ಗೊತ್ತಿಲ್ಲ. ಏರುತ್ತಿರುವ ಸೋಂಕಿತರ ಸಂಖ್ಯೆ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಅನ್ನು ವಿಸ್ತರಣೆ ಮಾಡ್ತಾರೋ ಗೊತ್ತಿಲ್ಲ. ಈ ವಿಚಾರವಾಗಿ ಸರ್ಕಾರದ ಸ್ಪಷ್ಟತೆ ಬಗ್ಗೆ ಗೊತ್ತಿಲ್ಲ. ಸರ್ಕಾರ ಏನ್ ಕ್ರಮ ತೆಗೆದುಕೊಳ್ಳುತ್ತೆ ಅನ್ನೋದನ್ನ ಗಮನಿಸ್ತಿದ್ದೇನೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರಗಳಲ್ಲಿ ಕೊರೊನಾ ತಡೆಗಾಗಿ ಜೆಡಿಎಸ್ ಪಕ್ಷದಿಂದ ನಿರ್ಮಿಸಿರುವ ಐದು …

Read More »

“ರಾಜ್ಯದಲ್ಲಿ ಮದ್ಯ ಸಂಪೂರ್ಣನಿಷೇಧ ಮಾಡಲು ಮೊದಲು ನಾನೇ ಬೆಂಬಲ ಸೂಚಿಸುತ್ತೇನೆ:ಸಚಿವ ರಮೇಶ್ ಜಾರಕಿಹೊಳಿ

ಚಿಕ್ಕೋಡಿ(ಬೆಳಗಾವಿ): ರಾಜ್ಯದಲ್ಲಿ ಮದ್ಯ ಸಂಪೂರ್ಣ ನಿಷೇಧ ಮಾಡಬೇಕು. ಸಂಪೂರ್ಣವಾಗಿ ಮದ್ಯ ನಿಷೇಧ ಮಾಡಲು ಮೊದಲು ನಾನೇ ಬೆಂಬಲ ಸೂಚಿಸುತ್ತೇನೆ ಎಂದು ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿದ ಕೊರೊನಾ ಪಾಸಿಟಿವ್ ಹೆಚ್ಚಳ ಹಿನ್ನೆಲೆಯಲ್ಲಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೋನಾ ರೋಗ ಬಂದು ಜನರಿಗೆ ಒಳ್ಳೆಯ ದಾರಿ ತೋರಿಸಿದೆ. ಕೆಟ್ಟ ಚಟಗಳನ್ನ ಕಡಿಮೆ ಮಾಡಲು ಅವಕಾಶ ಸಿಕ್ಕಿದೆ. …

Read More »

18 ಜನರ ಗಂಟಲು ದ್ರವ ಸಂಗ್ರಹಿಸಿ ಸೋಮವಾರ ಪ್ರಯೋಗಾಲಯಕ್ಕೆ ಒಟ್ಟು 850 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ

ಬೆಳಗಾವಿ: ಜಿಲ್ಲೆಯಲ್ಲಿ 7 ಜನರಿಗೆ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಒಟ್ಟು 18 ಜನರ ಗಂಟಲು ದ್ರವ ಸಂಗ್ರಹಿಸಿ ಸೋಮವಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಕೊರೊನಾ ಮೊದಲು ಮೂರು ಬಳಿಕ ನಾಲ್ಕು ಒಟ್ಟು ಏಳು ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಇದರಿಂದ ಸೋಂಕಿತರ ಸಂಪರ್ಕಕ್ಕೆ ಬಂದಿರುವ ಜನರನ್ನು ಗುರುತಿಸಿ ಗಂಟಲು ದ್ರವ ಸಂಗ್ರಹಿಸಲಾಗಿದೆ. ಜತೆಗೆ ಇಂದು ಸಹ ಕೆಲವರ ಗಂಟಲು ದ್ರವ ಸಂಗ್ರಹ …

Read More »