Breaking News

ರಾಜಕೀಯ

ನೀವು ನಾನಿದ್ದಲ್ಲಿ ಬರುವುದು ಬೇಡ, ನಾನೇ ನೀವಿದ್ದಲ್ಲಿಗೆ ಬರುತ್ತೇನೆ -ಕ್ಷೇತ್ರದ ಜವರಿಗೆ ಭರವಸೆ

ಬೆಳಗಾವಿ – ದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಮ್ಮ ಸಾಮಾಜಿಕ ಕಳಕಳಿ ತೋರಿಸಿದ್ದಾರೆ. ಪ್ರತಿ ನಿತ್ಯ ಶಾಸಕರನ್ನು ಭೇಟಿ ಮಾಡಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಅವರ ಗೃಹ ಕಚೇರಿಗೆ ಜನರು ಬುರುವುದು ವಾಡಿಕೆ. ದಿನವೂ ನೂರಾರು ಜನರು ಅಹವಾಲು ಸಲ್ಲಿಸಲು ಬರುತ್ತಿರುತ್ತಾರೆ. ಅವರೆಲ್ಲರ ಅಹವಾಲು ಆಲಿಸಿ, ಸಮಸ್ಯೆಗೆ ಪರಿಹಾರ ಒದಗಿಸುವ ಕೆಲಸವನ್ನು ಲಕ್ಷ್ಮಿ ಹೆಬ್ಬಾಳಕರ್ ಮಾಡುತ್ತ ಬಂದಿದ್ದಾರೆ. …

Read More »

ನಮ್ಮ ಸರಕಾರದ ಮರ್ಯಾದೆ ಉಳಿದಿದ್ದರೆ ಡಿಸಿ, ಎಸ್ಪಿಗಳಿಂದಲೇ ಹೊರತು ಮಂತ್ರಿಗಳಿಂದಲ್:ಬಿ.ಎಸ್.ಯಡಿಯೂರಪ್ಪ

ಬೆಂಗಳೂರು – ಕೆಲಸ ಮಾಡದೆ ಮನೆಯಲ್ಲೇ ಕುಳಿತಿರುವ ಮಂತ್ರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇನ್ನು ಒಂದೆರೆಡು ದಿನದಲ್ಲೇ ಮಂತ್ರಿಗಳ ಉಸ್ತುವಾರಿ ಬದಲಾವಣೆ ಮಾಡುವುದಾಗಿ ಘೋಷಿಸಿದ್ದಾರೆ. ಖಾಸಗಿ ಚಾನೆಲ್ ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಯಡಿಯೂರಪ್ಪ, ಇಂತಹ ಸಂದರ್ಭದಲ್ಲಿ ಮಂತ್ರಿಗಳು ಮನೆಯಲ್ಲಿ ಮಕ್ಕಳು, ಮೊಮ್ಮಕ್ಕಳ ಜೊತೆ ಕುಳಿತು ಆಟ ಆಡುವುದಲ್ಲ. ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಿ. ಕೊರೋನಾ ತಡೆಯಲು ಏನೇನು ಬೇಕೋ ಅದನ್ನು ಮಾಡಿ ಎಂದು ಕರೆ …

Read More »

ಚೀಲವನ್ನು ಸಾಲಗಿ ಇಟ್ಟು ಗುಂಪು ಗುಂಪಾಗಿ ನಿಂತ ಜನ

ಹಾವೇರಿ: ಕೊರೊನಾ ಸೋಂಕು ತಡೆಗೆ ಲಾಕ್‍ಡೌನ್ ಇದ್ದರೂ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ಗುಂಪು ಗುಂಪಾಗಿ ಪಡಿತರ ಪಡೆಯಲು ಸೇರಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನಾರಾಯಣಪುರ ದೊಡ್ಡಪ್ರಮಾಣದ ವ್ಯವಸಾಯ ಸಹಕಾರಿ ಸಂಘದ ವಿತರಣಾ ಕೇಂದ್ರದ ಮುಂದೆ ಜನರು ಪಡಿತರ ಪಡೆಯಲು ಜಮಾಯಿಸಿದ್ದಾರೆ. ಪಡಿತರ ವಿತರಣಾ ಕೇಂದ್ರದ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿಲಾಗಿತ್ತು. ಆದರೆ ಜನರು ಮಾತ್ರ ಗುಂಪು ಗುಂಪಾಗಿ ನಿಂತು …

Read More »

ಸಂಸದ ಜಿ.ಎಂ.ಸಿದ್ದೇಶ್ವರ್ ಅವರ ಮಕ್ಕಳ ಸೇರಿ ಮೂವರು ಸೋಂಕಿನಿಂದ ಗುಣಮುಖ

ದಾವಣಗೆರೆ: ಜಿಲ್ಲೆಯ ಸಂಸದ ಜಿ.ಎಂ.ಸಿದ್ದೇಶ್ವರ್ ಅವರ ಮಕ್ಕಳ ಸೇರಿ ಮೂವರು ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಸಂಸದರು ಆರೋಗ್ಯ ಇಲಾಖೆಗೆ ಅಭಿನಂದನೆ ಸಲ್ಲಿಸಿದ್ದಾರೆ. ನನ್ನ ಮಗಳು ಮತ್ತು‌ ಮಗ ಸೇರಿದಂತೆ ಇನ್ನೊಬ್ಬ ಯುವಕ 16 ದಿನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ನಾಳೆ ಡಿಸ್ಚಾರ್ಜ್ ಆಗುತ್ತಿದ್ದಾರೆ. ಹಗಲಿರುಳು ಶ್ರಮಿಸಿದ ಆರೋಗ್ಯ ಇಲಾಖೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಧನ್ಯವಾದ ಎಂದು ಅವರು ಹೇಳಿದ್ದಾರೆ. ನಮ್ಮ ಜಿಲ್ಲೆ ಸದ್ಯ ಕೊರೊನಾ ಮುಕ್ತ. ಜನರು ಇನ್ನಷ್ಟು ಜಾಗೃತಿಯಿಂದ …

Read More »

ದೆಹಲಿಯ ನಿಜಾಮುದ್ದೀನ್ ನಂಜಿಗೆ ದಕ್ಷಿಣ ಆಫ್ರಿಕಾದ ಧರ್ಮಗುರು ಬಲಿ..!

ಜೋಹಾನ್ಸ್‍ಬರ್ಗ್, ಏ.5-ಭಾರತದಲ್ಲಿ ಮಾರಕ ಕೊರೊನಾ ಸೋಂಕು ಹೆಚ್ಚಾಗಲು ಕಾರಣವಾದ ದೆಹಲಿಯ ನಿಜಾಮುದ್ದೀನ್ ಪ್ರದೇಶದ ತಬ್ಲೀಘಿ-ಎ-ಜಮಾತ್ ಮರ್ಕೆಜ್ ಬೃಹತ್ ಧಾರ್ಮಿಕ ಸಭೆಯ ದುಷ್ಪರಿಣಾಮ ಈಗ ಜಗತ್ತಿನ ಕೆಲ ಭಾಗಗಳಲ್ಲೂ ಗೋಚರಿಸುತ್ತಿದ್ದು, ಸಾವು ಮತ್ತು ಸೋಂಕುಗಳ ವರದಿಯಾಗುತ್ತಿವೆ. ಈ ಸಭೆಯಲ್ಲಿ ಭಾಗವಹಿಸಿ ದಕ್ಷಿಣ ಆಫ್ರಿಕಾಕ್ಕೆ ಹಿಂದಿರುಗಿದ್ದ ಧರ್ಮ ಗುರು ಒಬ್ಬರು ರಾಜಧಾನಿ ಜೋಹಾನ್ಸ್‍ಬರ್ಗ್‍ನಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ವಿಷಯವನ್ನು ಅವರ ಕುಟುಂಬದ ಮೂಲಗಳೇ ದೃಢಪಡಿಸಿವೆ. ದೆಹಲಿಯಲ್ಲಿ ಮಾರ್ಚ್ 15ರಂದು ನಡೆದ ತಬ್ಲೀಘಿ …

Read More »

ಧಾರವಾಡದ ಜನರಿಗೆ ಗುಡ್ ನ್ಯೂಸ್ – ಜಿಲ್ಲೆಯ ಕೊರೊನಾ ಸೋಂಕಿತ ಗುಣಮುಖ

ಹುಬ್ಬಳ್ಳಿ: ಕೋವಿಡ್-19 ಪಾಸಿಟಿವ್ ಸೋಂಕು ತಗುಲಿದ್ದ ಧಾರವಾಡದ ಹೊಸಯಲ್ಲಾಪುರ ನಿವಾಸಿ ಸಂಪೂರ್ಣ ಗುಣಮುಖರಾಗಿದ್ದು, ಭಾನುವಾರ ಸಂಜೆ ಹುಬ್ಬಳ್ಳಿಯ ಕಿಮ್ಸ್‌ನಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. ಆಸ್ಟ್ರೇಲಿಯಾದಿಂದ ದುಬೈ, ಮಸ್ಕತ್, ಪಣಜಿ ಮಾರ್ಗವಾಗಿ ಧಾರವಾಡ ನಗರಕ್ಕೆ ಮಾರ್ಚ್ 12ರಂದು ಆಗಮಿಸಿದ್ದ 33 ವ್ಯಕ್ತಿಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ಆದ್ದರಿಂದ ಮಾರ್ಚ್ 17ರಂದು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ತೆರಳಿದ್ದರು. ಅಲ್ಲಿಂದ ಮಾರ್ಚ್ 18 ರಿಂದ 21ರವರೆಗೆ ಎಸ್‍ಡಿಎಂ …

Read More »

ಬೆಂಗಳೂರು:ಅಂಬುಲೆನ್ಸ್‌ನಲ್ಲಿ ಗುಜರಿ ವಸ್ತುಗಳ ಸಾಗಾಟ

ಬೆಂಗಳೂರು: ಯಾರೂ ಹಿಡಿಯುವುದಿಲ್ಲ, ಪರಿಶೀಲನೆ ನಡೆಸುವುದಿಲ್ಲ ಎಂದು ಕಳ್ಳತನ ಮಾಡಿದ್ದ ಗುಜರಿ ವಸ್ತುಗಳನ್ನು ಅಂಬುಲೆನ್ಸ್ ನಲ್ಲಿ ಸಾಗಾಟ ಮಾಡುತ್ತಿದ್ದರು. ಶಿವಾಜಿ ನಗರದ ರೆಸಲ್ ಮಾರ್ಕೆಟ್‍ನಲ್ಲಿ ಸತೀಶ್, ಮಹೇಶ್ ಗುಜರಿ ಸಾಮಾನುಗಳನ್ನು ಹರ್ಷಿಣಿ ಹೆಸರಿನ ಅಂಬುಲೆನ್ಸ್ ಮೂಲಕ ಸಾಗಾಟ ಮಾಡುತ್ತಿದ್ದರು. ವಾಹನಗಳ ಟೈರ್, ಟ್ಯೂಬ್ ಸೇರಿದಂತೆ ಹಲವು ಗುಜರಿ ವಸ್ತುಗಳನ್ನು ಖದೀಮರು ಅಂಬುಲೆನ್ಸ್ ನಲ್ಲಿ ಸಾಗಿಸುತ್ತಿದ್ದರು. ಅನುಮಾನ ಬಂದು ಪೊಲೀಸರು ಅಂಬುಲೆನ್ಸ್ ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಗುಜರಿ ಸಾಮಾನು …

Read More »

ಕೊರೊನಾಗೆ 24 ಗಂಟೆಯಲ್ಲಿ 27 ಸಾವು – ಸೋಂಕಿತರ ಸಂಖ್ಯೆ 4,200ಕ್ಕೆ ಏರಿಕೆ

ಬೆಂಗಳೂರು: 27 ಜನರು ಕಳೆದ 24 ಗಂಟೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 100ಕ್ಕೆ ತಲುಪಿದೆ. ಭಾನುವಾರ ಸುಮಾರು 12 ಜನರನ್ನು ಕೊರೊನಾ ಬಲಿ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಇನ್ನು ಕೊರೊನಾ ಸೋಂಕಿತರ ಸಂಖ್ಯೆ 4 ಸಾವಿರದ ಗಡಿ ದಾಟಿದೆ. ಭಾನುವಾರ ಒಂದೇ ದಿನ ಸುಮಾರು 500ಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ ನಾಲ್ಕು ದಿನಗಳಿಂದ ಸೋಂಕಿಂತರ ಸಂಖ್ಯೆ ದ್ವಿಗುಣವಾಗಿ ಏರಿಕೆಯಾಗ್ತಿರೋದು ಆತಂಕಕ್ಕೆ ಕಾರಣವಾಗಿದೆ. ಏಪ್ರಿಲ್ …

Read More »

ಭಾರತಕ್ಕೆ ಬೇಕಾಗಿರುವುದು ಮಹಾಪುರುಷರ ಸಿದ್ಧಾಂತಗಳು ಹೊರತು ದೀಪಗಳಲ್ಲ:ಸತೀಶ ಜಾರಕಿಹೊಳಿ

ಗೋಕಾಕ:ಭಾರತಕ್ಕೆ ಬೇಕಾಗಿರುವುದು ಮಹಾಪುರುಷರ ಸಿದ್ಧಾಂತಗಳು ಹೊರತು ದೀಪಗಳಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂದೇಶ ಸಾರುವ ಮೂಲಕ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದ್ದಾರೆ. ಇಂದು ನಗರದ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಕ್ಕಳ ಜೊತೆ “ಇಂಡಿಯಾ ನಿಡ್ಸ್ ಗ್ರೆಟ್ ಪೀಪಲ್ಸ್ ಐಡಿಯೊಲೊಜಿ ನೊಟ್ ಲ್ಯಾಂಪ್ಸ್” ಎಂಬ ಸಂದೇಶ ಬರೆದ ಪಟ ಮತ್ತು ಮಹಾ ಮಾನವತಾವಾದಿಗಳಾದ ಬುದ್ದ, ಬಸವ ಮತ್ತು ಅಂಬೇಡ್ಕರ್ ಅವರ ಚಿತ್ರವನ್ನು ಹಿಡಿದು ಈ‌ ಸಂದೇಶ ಸಾರಿ …

Read More »

ಗ್ರಾಮಸ್ಥರು, ಆಶಾ ಕಾರ್ಯಕರ್ತೆ ಜೊತೆ ನಾವಿದ್ದೇವೆ ಎಂದು ಕೂಗಿ ಹೂಮಳೆಯ ಸ್ವಾಗತ

ಯಾದಗಿರಿ: ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿರುವ ಆಶಾ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾದಗಿರಿಯ ಜನ ಹೂಮಳೆಯ ಸ್ವಾಗತ ಮಾಡಿ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸಕ್ಕೆ ಮುಂದಾಗಿದ್ದಾರೆ. ಇತ್ತೀಚೆಗಷ್ಟೇ ಆರೋಗ್ಯ ತಪಾಸಣೆಗೆ ತೆರಳಿದ್ದ ಆಶಾ ಕಾರ್ಯಕರ್ತರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆಸಿ ಕೆಲವರು ವಿಕೃತಿ ಮೆರೆದಿದ್ದರು. ಆದರೆ ಯಾದಗಿರಿ ಜಿಲ್ಲೆಯ ಬೆಳೆಗೇರಾ ಗ್ರಾಮದಲ್ಲಿ ಕೊರೊನಾ ಜಾಗೃತಿಗೆ ತೆರಳಿದ್ದ ಆಶಾ ಕಾರ್ಯಕರ್ತೆರಿಗೆ ಗ್ರಾಮದ ಎಲ್ಲಾ ಓಣಿಗಳಲ್ಲಿ ಕೈಯಲ್ಲಿ ಹೂ ಹಿಡಿದು ನಿಂತು ಅವರ ಮೇಲೆ …

Read More »