ಬೆಳಗಾವಿ – ಕೊರೋನಾದಿಂದಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಾಗಿರುವ ಪರಿಣಾಮ, ಕ್ಷೇತ್ರಕ್ಕೆ ಹೊರದೇಶಗಳಿಂದ ಬಂದಿರುವವರ ಮೇಲೆ ತೆಗೆದುಕೊಂಡಿರುವ ಕ್ರಮ ಮತ್ತು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾಗಿರುವ ಎಚ್ಚರಿಕೆಗಳ ಕುರಿತು ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುರುವಾರ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ ಚರ್ಚಿಸಿದರು. ಬೆಳಗಾವಿ ತಾಲೂಕಾ ಪಂಚಾಯತ ಸಭಾಗೃಹದಲ್ಲಿ ಸಭೆ ಆಯೋಜಿಸಲಾಗಿತ್ತು. ಹೊರ ದೇಶ ಹಾಗೂ ಹೊರ ರಾಜ್ಯಗಳಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ 3,800 ಜನರು ಬಂದಿದ್ದಾರೆ. ಈ 3800 ಜನರ ಮೇಲೆ ನಿಗಾ …
Read More »ಹುಕ್ಕೇರಿ ಪಟ್ಟಣದ ಬಾಗವಾನ ಗಲ್ಲಿಯ ಓರ್ವ ವ್ಯಕ್ತಿ ಈ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡಿರುವುದು ಖಚಿತ
ಹುಕ್ಕೇರಿ ; ದೆಹಲಿಯ ನಿಜಾಮುದ್ದೀನ್ ತಬ್ಲೀಘ್ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡ ಓರ್ವ ಸೇರಿದಂತೆ ಇದೇ ವೇಳೆ ಅಂತಾರಾಜ್ಯಗಳಿಗೆ ಭೇಟಿ ನೀಡಿದ ತಾಲೂಕಿನ ಐವರಿಗೆ ಕಿಲ್ಲರ್ ಕೊರೋನಾ ವೈರಸ್ ಸೋಂಕು ತಗಲಿರುವ ಶಂಕೆಯ ಮೇಲೆ ನಿಗಾ ವಹಿಸಲಾಗಿದೆ. ಹುಕ್ಕೇರಿ ಪಟ್ಟಣದ ಬಾಗವಾನ ಗಲ್ಲಿಯ ಓರ್ವ ವ್ಯಕ್ತಿ ಈ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡಿರುವುದು ಖಚಿತಪಟ್ಟ ಹಿನ್ನೆಲೆಯಲ್ಲಿ ಆತನನ್ನು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಜತೆಗೆ ಇದೇ ಸಮಯದಲ್ಲಿ …
Read More »ಕಷ್ಟಕಾಲದಲ್ಲಿ ರಾಜ್ಯಕ್ಕೆ ಸಿಗುತ್ತಾ ಕೇಂದ್ರದ ನೆರವು?; ಮೋದಿ ಏರ್ಪಡಿಸಿರುವ ಸಿಎಂ ಗಳ ಸಭೆಯಲ್ಲಿ ಬಾಕಿ ಕೇಳಲಿರುವ ಬಿಎಸ್ವೈ
ಬೆಂಗಳೂರು (ಏಪ್ರಿಲ್ 02); ಮಾರಣಾಂತಿಕ ಕೊರೋನಾ ವೈರಸ್ ಇಡೀ ದೇಶಕ್ಕೆ ಬೆದರಿಕೆ ಒಡ್ಡಿದ್ದು ಇದನ್ನು ತಡೆಯುವ ಹಾಗೂ ಲಾಕ್ಡೌನ್ ಕುರಿತು ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಬೆಳಗ್ಗೆ 11 ಗಂಟೆಗೆ ಸಿಎಂಗಳ ಸಭೆ ಕರೆದಿದ್ದಾರೆ. ಆದರೆ, ಈ ಸಭೆಯಲ್ಲಿ ಯಡಿಯೂರಪ್ಪ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಹಣ ಕೇಳಲಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ರಾಜ್ಯಕ್ಕೆ ಬರ ಮತ್ತು ನೆರೆ ಒಂದರಹಿಂದೊಂದರಂತೆ ಅಪ್ಪಳಿಸಿತ್ತು. …
Read More »ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರ ಬಗ್ಗೆ ಜನರೇ ಮಾಹಿತಿ ನೀಡಿ; ಶ್ರೀರಾಮುಲು ಮನವಿ
ಬೆಂಗಳೂರು (ಏಪ್ರಿಲ್ 01); ದೆಹಲಿಯ ನಿಜಾಮುದ್ದೀನ್ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸುಮಾರು 2,000 ಜನ ಭಾಗವಹಿಸಿದ್ದಾರೆ. ಈ ಪೈಕಿ ಕರ್ನಾಟಕದಿಂದ 300 ಜನ ಭಾಗವಹಿಸಿದ್ದಾರೆ. ಹೀಗಾಗಿ ಈ ಸಭೆಯಲ್ಲಿ ಭಾಗವಹಿಸಿದವರ ಕುರಿತು ಜನ ಮಾಹಿತಿ ನೀಡಬೇಕಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಮನವಿ ಮಾಡಿದ್ದಾರೆ. ಇಂದು ಬಾಗಲಕೋಟೆಯಲ್ಲಿ ಮಾತನಾಡಿರುವ ಅವರು, “ರಾಜ್ಯದಲ್ಲಿ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗಿಯಾದ 40 ಜನ ಪತ್ತೆಯಾಗಿದ್ದಾರೆ. ಇವರ ಮಾದರಿಯನ್ನು ಪರಿಶೀಲನೆಗೆ ಕಳುಹಿಸಲಾಗಿದೆ. ಉಳಿದವರ ಪತ್ತೆ …
Read More »ಕೊರೊನಾ ವಿಪತ್ತು ಪರಿಹಾರ ನಿಧಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಒಂದು ಲಕ್ಷ ರೂ. ದೇಣಿಗೆ
ಬೆಳಗಾವಿ – ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕೊರೊನಾ ವಿಪತ್ತು ಪರಿಹಾರ ನಿಧಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಆರ್ ಟಿಜಿಎಸ್ ಮೂಲಕ ಹಣವನ್ನು ಅವರು ವರ್ಗಾಯಿಸಿದ್ದಾರೆ. ಕೊರೋನಾ ವೈರಸ್ ಹರಡುತ್ತಿರುವ ಇಂದಿನ ಸಂಕಷ್ಟದ ಸಂದರ್ಭದಲ್ಲಿ ಎಲ್ಲರೂ ತಮ್ಮ ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸುತ್ತಿದ್ದಾರೆ. ಜನರು ಮನೆಯಲ್ಲೇ ಇದ್ದುಕೊಂಡು ತಮ್ಮ ಸಹಕಾರ ನೀಡಬೇಕು. ನಮಗಾಗಿ ತಮ್ಮ ಜೀವವನ್ನೇ ಪಣವಾಗಿಟ್ಟು ಕೆಲಸ …
Read More »ಕೆಎಂಎಫ್ ಮೂಲಕ ಹಾಲು ಖರೀದಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಬಡವರಿಗೆ ಗುರುವಾರದಿಂದಲೇ ಉಚಿತವಾಗಿ ವಿತರಿಸಲಾಗುವುದು
ಬೆಂಗಳೂರು: ಕೆಎಂಎಫ್ ಮೂಲಕ ೭.೫ ಲಕ್ಷ ಲೀಟರ್ ಹಾಲನ್ನು ಸರ್ಕಾರ ಖರೀದಿಸಿ ಸ್ಲಂ ಹಾಗೂ ಬಡಜನರು ವಾಸಿಸುವ ಪ್ರದೇಶಗಳಲ್ಲಿ ಉಚಿತವಾಗಿ ಏಪ್ರಿಲ್ ೧೪ರವರೆಗೆ ಹಾಲು ವಿತರಣೆಗೆ ನಿರ್ಧರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಎಂಎಫ್ ಅಧ್ಯಕ್ಷ, ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಸಲ್ಲಿಸಿದ್ದಾರೆ. ಕೊರೋನಾ ವೈರಾಣು ಸೋಂಕಿನ ತಡೆಗೆ ಲಾಕ್ಡೌನ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಎಂಎಫ್ ಮೂಲಕ ಹಾಲು ಖರೀದಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಬಡವರಿಗೆ …
Read More »ಕಲಬುರಗಿ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯನ ಪತ್ನಿಗೆ ಕೊರೊನಾ ಸೋಂಕು
ಕಲಬುರಗಿ: ಕೊರೊನಾ ವೈರಸ್ನಿಂದಾಗಿ ಸಾವನ್ನಪ್ಪಿದ್ದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯನ ಪತ್ನಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಅಧಿಕೃತ ಪ್ರಕಟನೆ ಹೊರಡಿಸಿದೆ. ಆರಂಭದಲ್ಲಿ ಚಿಕಿತ್ಸೆ ನೀಡಿದ್ದ ವೈದ್ಯರಲ್ಲಿ ಕೊರೊನಾ ಲಕ್ಷಣಗಳ ಕಂಡು ಬಂದ ಹಿನ್ನೆಲೆಯಲ್ಲಿ ಐಸೋಲೇಷನ್ ನಲ್ಲಿರಿಸಲಾಗಿತ್ತು. ಮೊದಲ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ 14 ದಿನಗಳ ಕಾಲ ಕಲಬುರಗಿಯ ಇಎಸ್ಐ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ವೈದ್ಯನ ಕಫ ಹಾಗೂ ರಕ್ತದ ಮಾದರಿಯನ್ನು ಎರಡನೇ …
Read More »ಕೊರೊನಾದಿಂದ ಅಲ್ಲ ಊಟ ತಿಂಡಿ ಇಲ್ಲದೆ ಸಾಯೋ ಪರಿಸ್ಥಿತಿ ಬರುತ್ತೆ:ಹೆಚ್.ಡಿ.ರೇವಣ್ಣ
ಹಾಸನ: ಕೊರೊನಾದಿಂದ ಅಲ್ಲ ಊಟ ತಿಂಡಿ ಇಲ್ಲದೆ ಸಾಯೋ ಪರಿಸ್ಥಿತಿ ಬರುತ್ತೆ. ಸರ್ಕಾರದಲ್ಲಿ ಹಣ ಇಲ್ಲ ಎನ್ನುವ ಸಿಎಂ ಯಡಿಯೂರಪ್ಪ ಒಬ್ಬನೇ ಒಬ್ಬ ಗುತ್ತಿಗೆದಾರನಿಗೆ 1,200 ಕೋಟಿ ಹಣ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಗಂಭೀರ ಆರೋಪ ಮಾಡಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿನಿತ್ಯ 69 ಲಕ್ಷ ಲೀಟರ್ ಹಾಲು ಶೇಖರಣೆ ಆಗುತ್ತಿದೆ. ಅದರಲ್ಲಿ 40 ಲಕ್ಷ ಲೀಟರ್ ಮಾತ್ರ ಮಾರಾಟ ಮಾಡಲಾಗುತ್ತಿದೆ. ಉಳಿದ 29 ಲಕ್ಷ …
Read More »ದೆಹಲಿಯ ಜಮಾತ್ ಸಮಾವೇಶಕ್ಕೆ ಉಡುಪಿ ಜಿಲ್ಲೆಯಿಂದ ಯಾರೂ ಪಾಲ್ಗೊಂಡಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯ ಇಲ್
ಉಡುಪಿ: ಕೊರೊನಾ ಹಾಟ್ ಸ್ಪಾಟ್ ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಉಡುಪಿ ಜಿಲ್ಲೆಯಿಂದ 16 ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದಾರೆ ಎಂಬ ಮಾಹಿತಿಯಿದೆ. ಉಡುಪಿ, ಕುಂದಾಪುರ- ಬೈಂದೂರು, ಕಾರ್ಕಳ, ಪಡುಬಿದ್ರೆ ವ್ಯಾಪ್ತಿಯ ಯುವಕರು ಮತ್ತು ಮಧ್ಯವಯಸ್ಕರು ಜಮಾತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆಂಬ ಮಾಹಿತಿ ರಾಜ್ಯದಿಂದ ಜಿಲ್ಲೆಗೆ ರವಾನೆಯಾಗಿದೆ. ಮಂಗಳವಾರ ರಾತ್ರಿ ಈ ಮಾಹಿತಿ ಬಂದಿದ್ದು, ಆಯಾ ಪೊಲೀಸ್ ಠಾಣೆಯ ಮೂಲಕ ಶಿಬಿರಾರ್ಥಿಗಳನ್ನು ಹಾಗೂ ಶಿಬಿರಾರ್ಥಿಗಳ ಸಂಪರ್ಕಕ್ಕೆ ಬಂದವರನ್ನು ಗುರುತಿಸುವ ಕೆಲಸ ನಡೆದಿದೆ. 16 …
Read More »ಬೆಳಗಾವಿ:ಆಹಾರ ಧಾನ್ಯ ವಿತರಿಸಿದ ಸತೀಶ ಜಾರಕಿಹೊಳಿ ಅಭಿಮಾನಿ ಬಳಗ,
ಬೆಳಗಾವಿ: ಸತೀಶ ಜಾರಕಿಹೊಳಿ ಅಭಿಮಾನಿ ಬಳಗ, ವಾಲ್ಮೀಕಿ ಯುವ ವೇದಿಕೆ ಕಾರ್ಯಕರ್ತರು ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕೀಡಾದ ಬಡ ಜನರಿಗೆ, ಕೂಲಿ ಕಾರ್ಮಿಕರಿಗೆ, ಆಹಾರ ಧಾನ್ಯ ಸೇರಿ ಅಗತ್ಯ ವಸ್ತುಗಳನ್ನು ವಿತರಿಸಿದರು. ವಾಲ್ಮೀಕಿ ಯುವ ವೇದಿಕೆ ರಾಜ್ಯಾಧ್ಯಕ್ಷ ವಿಜಯ ತಳವಾರ ನೇತೃತ್ವದಲ್ಲಿ ಕಾರ್ಯಕರ್ತರು, ಮಾಹಾನಗರ ಪಾಲಿಕೆ ಮೂಲಕ ಬಡವರಿಗೆ ಮತ್ತು ಅಗತ್ಯ ಸೇವೆ ಸಲ್ಲಿಸುತ್ತಿರುವ ಪೊಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಊಟ, ಹಣ್ಣು ಹಂಪಲ, ಹ್ಯಾಂಡ್ ವಾಷ್, ವಾಟರ್ ಬಾಟಲ್ …
Read More »
Laxmi News 24×7