Breaking News

ರಾಜಕೀಯ

ಕೊರೊನಾ ವಿಪತ್ತು ಪರಿಹಾರ ನಿಧಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಒಂದು ಲಕ್ಷ ರೂ. ದೇಣಿಗೆ

ಬೆಳಗಾವಿ – ​ ​ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕೊರೊನಾ ವಿಪತ್ತು ಪರಿಹಾರ ನಿಧಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಆರ್ ಟಿಜಿಎಸ್ ಮೂಲಕ ಹಣವನ್ನು ಅವರು ವರ್ಗಾಯಿಸಿದ್ದಾರೆ. ಕೊರೋನಾ ವೈರಸ್ ಹರಡುತ್ತಿರುವ ಇಂದಿನ ಸಂಕಷ್ಟದ ಸಂದರ್ಭದಲ್ಲಿ ಎಲ್ಲರೂ ತಮ್ಮ ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸುತ್ತಿದ್ದಾರೆ. ಜನರು ಮನೆಯಲ್ಲೇ ಇದ್ದುಕೊಂಡು ತಮ್ಮ ಸಹಕಾರ ನೀಡಬೇಕು. ನಮಗಾಗಿ ತಮ್ಮ ಜೀವವನ್ನೇ ಪಣವಾಗಿಟ್ಟು ಕೆಲಸ …

Read More »

ಕೆಎಂಎಫ್ ಮೂಲಕ ಹಾಲು ಖರೀದಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ  ಬಡವರಿಗೆ ಗುರುವಾರದಿಂದಲೇ ಉಚಿತವಾಗಿ ವಿತರಿಸಲಾಗುವುದು

ಬೆಂಗಳೂರು: ಕೆಎಂಎಫ್ ಮೂಲಕ ೭.೫ ಲಕ್ಷ ಲೀಟರ್ ಹಾಲನ್ನು ಸರ್ಕಾರ ಖರೀದಿಸಿ ಸ್ಲಂ ಹಾಗೂ ಬಡಜನರು ವಾಸಿಸುವ ಪ್ರದೇಶಗಳಲ್ಲಿ ಉಚಿತವಾಗಿ ಏಪ್ರಿಲ್ ೧೪ರವರೆಗೆ ಹಾಲು ವಿತರಣೆಗೆ ನಿರ್ಧರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಎಂಎಫ್ ಅಧ್ಯಕ್ಷ, ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಸಲ್ಲಿಸಿದ್ದಾರೆ. ಕೊರೋನಾ ವೈರಾಣು ಸೋಂಕಿನ ತಡೆಗೆ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಎಂಎಫ್ ಮೂಲಕ ಹಾಲು ಖರೀದಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ  ಬಡವರಿಗೆ …

Read More »

ಕಲಬುರಗಿ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯನ ಪತ್ನಿಗೆ ಕೊರೊನಾ ಸೋಂಕು

ಕಲಬುರಗಿ: ಕೊರೊನಾ ವೈರಸ್‍ನಿಂದಾಗಿ ಸಾವನ್ನಪ್ಪಿದ್ದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯನ ಪತ್ನಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಅಧಿಕೃತ ಪ್ರಕಟನೆ ಹೊರಡಿಸಿದೆ. ಆರಂಭದಲ್ಲಿ ಚಿಕಿತ್ಸೆ ನೀಡಿದ್ದ ವೈದ್ಯರಲ್ಲಿ ಕೊರೊನಾ ಲಕ್ಷಣಗಳ ಕಂಡು ಬಂದ ಹಿನ್ನೆಲೆಯಲ್ಲಿ ಐಸೋಲೇಷನ್ ನಲ್ಲಿರಿಸಲಾಗಿತ್ತು. ಮೊದಲ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ 14 ದಿನಗಳ ಕಾಲ ಕಲಬುರಗಿಯ ಇಎಸ್‍ಐ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ವೈದ್ಯನ ಕಫ ಹಾಗೂ ರಕ್ತದ ಮಾದರಿಯನ್ನು ಎರಡನೇ …

Read More »

ಕೊರೊನಾದಿಂದ ಅಲ್ಲ ಊಟ ತಿಂಡಿ ಇಲ್ಲದೆ ಸಾಯೋ ಪರಿಸ್ಥಿತಿ ಬರುತ್ತೆ:ಹೆಚ್.ಡಿ.ರೇವಣ್ಣ

ಹಾಸನ: ಕೊರೊನಾದಿಂದ ಅಲ್ಲ ಊಟ ತಿಂಡಿ ಇಲ್ಲದೆ ಸಾಯೋ ಪರಿಸ್ಥಿತಿ ಬರುತ್ತೆ. ಸರ್ಕಾರದಲ್ಲಿ ಹಣ ಇಲ್ಲ ಎನ್ನುವ ಸಿಎಂ ಯಡಿಯೂರಪ್ಪ ಒಬ್ಬನೇ ಒಬ್ಬ ಗುತ್ತಿಗೆದಾರನಿಗೆ 1,200 ಕೋಟಿ ಹಣ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಗಂಭೀರ ಆರೋಪ ಮಾಡಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿನಿತ್ಯ 69 ಲಕ್ಷ ಲೀಟರ್ ಹಾಲು ಶೇಖರಣೆ ಆಗುತ್ತಿದೆ. ಅದರಲ್ಲಿ 40 ಲಕ್ಷ ಲೀಟರ್ ಮಾತ್ರ ಮಾರಾಟ ಮಾಡಲಾಗುತ್ತಿದೆ. ಉಳಿದ 29 ಲಕ್ಷ …

Read More »

ದೆಹಲಿಯ ಜಮಾತ್ ಸಮಾವೇಶಕ್ಕೆ ಉಡುಪಿ ಜಿಲ್ಲೆಯಿಂದ ಯಾರೂ ಪಾಲ್ಗೊಂಡಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯ ಇಲ್

ಉಡುಪಿ: ಕೊರೊನಾ ಹಾಟ್ ಸ್ಪಾಟ್ ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಉಡುಪಿ ಜಿಲ್ಲೆಯಿಂದ 16 ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದಾರೆ ಎಂಬ ಮಾಹಿತಿಯಿದೆ. ಉಡುಪಿ, ಕುಂದಾಪುರ- ಬೈಂದೂರು, ಕಾರ್ಕಳ, ಪಡುಬಿದ್ರೆ ವ್ಯಾಪ್ತಿಯ ಯುವಕರು ಮತ್ತು ಮಧ್ಯವಯಸ್ಕರು ಜಮಾತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆಂಬ ಮಾಹಿತಿ ರಾಜ್ಯದಿಂದ ಜಿಲ್ಲೆಗೆ ರವಾನೆಯಾಗಿದೆ. ಮಂಗಳವಾರ ರಾತ್ರಿ ಈ ಮಾಹಿತಿ ಬಂದಿದ್ದು, ಆಯಾ ಪೊಲೀಸ್ ಠಾಣೆಯ ಮೂಲಕ ಶಿಬಿರಾರ್ಥಿಗಳನ್ನು ಹಾಗೂ ಶಿಬಿರಾರ್ಥಿಗಳ ಸಂಪರ್ಕಕ್ಕೆ ಬಂದವರನ್ನು ಗುರುತಿಸುವ ಕೆಲಸ ನಡೆದಿದೆ. 16 …

Read More »

ಬೆಳಗಾವಿ:ಆಹಾರ ಧಾನ್ಯ ವಿತರಿಸಿದ ಸತೀಶ ಜಾರಕಿಹೊಳಿ  ಅಭಿಮಾನಿ ಬಳಗ,

ಬೆಳಗಾವಿ:  ಸತೀಶ ಜಾರಕಿಹೊಳಿ  ಅಭಿಮಾನಿ ಬಳಗ, ವಾಲ್ಮೀಕಿ ಯುವ ವೇದಿಕೆ ಕಾರ್ಯಕರ್ತರು  ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕೀಡಾದ ಬಡ ಜನರಿಗೆ, ಕೂಲಿ  ಕಾರ್ಮಿಕರಿಗೆ, ಆಹಾರ ಧಾನ್ಯ ಸೇರಿ ಅಗತ್ಯ ವಸ್ತುಗಳನ್ನು  ವಿತರಿಸಿದರು. ವಾಲ್ಮೀಕಿ ಯುವ ವೇದಿಕೆ ರಾಜ್ಯಾಧ್ಯಕ್ಷ  ವಿಜಯ ತಳವಾರ ನೇತೃತ್ವದಲ್ಲಿ ಕಾರ್ಯಕರ್ತರು,  ಮಾಹಾನಗರ ಪಾಲಿಕೆ ಮೂಲಕ ಬಡವರಿಗೆ ಮತ್ತು ಅಗತ್ಯ ಸೇವೆ ಸಲ್ಲಿಸುತ್ತಿರುವ ಪೊಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ  ಊಟ, ಹಣ್ಣು ಹಂಪಲ, ಹ್ಯಾಂಡ್ ವಾಷ್, ವಾಟರ್ ಬಾಟಲ್ …

Read More »

ಜಮಾತ್‍ಗೆ ಹೋಗಿಬಂದಿದ್ದ ದಂಪತಿ ಕ್ವಾರಂಟೈನ್ – 17 ಮಂದಿಗೆ ಕೊರೊನಾ ಟೆಸ್ಟ್

ಚಿಕ್ಕಬಳ್ಳಾಪುರ: ಜಿಲ್ಲೆಯಿಂದ ದೆಹಲಿಯ ಜಮಾತ್‍ಗೆ ಹೋಗಿ ಬಂದ 17 ಮಂದಿ ಪತ್ತೆಯಾಗಿದ್ದಾರೆ ಎಂದು ಚಿಕ್ಕಬಳ್ಳಾಪುರ ಎಸ್‍ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ಮಾರ್ಚ್ 05ರಿಂದ ಮಾರ್ಚ್ 10ರ ಒಳಗಾಗಿ ಆಗ್ರಾ, ಅಜ್ಮೀರ್ ಹಾಗೂ ದೆಹಲಿ ಪ್ರವಾಸಕ್ಕೆ ತೆರಳಿ ವಾಪಸ್ಸಾಗಿದ್ದ ದಂಪತಿಯನ್ನ ಪತ್ತೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಂಪತಿಯನ್ನ ಹಾಸ್ಪಿಟಲ್ ಕ್ವಾರಂಟೈನ್ ಮಾಡಲಾಗಿದೆ. ಇದಲ್ಲದೇ ಫೆಬ್ರವರಿ 08ರಿಂದ ಫೆಬ್ರವರಿ 15ರ ಮಧ್ಯೆ ಜಮಾತ್‍ಗೆ ಹೋಗಿಬಂದಿದ್ದ 15 ಮಂದಿಯನ್ನ ಪತ್ತೆ ಮಾಡಲಾಗಿದೆ.ಈಗಾಗಲೇ ಅವರು …

Read More »

ಬಳ್ಳಾರಿ:ಕುಡುಕರು ಅಬಕಾರಿ ಇಲಾಖೆ ಕಚೇರಿಯಲ್ಲಿ ಇಟ್ಟಿದ್ದ ಮದ್ಯವನ್ನು ಕದ್ದು ಪರಾರಿ

  ಬಳ್ಳಾರಿ: ದೇಶಾದ್ಯಂತ ಸಂಪೂರ್ಣ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಎಲ್ಲಿಯೂ ಮದ್ಯ ಸಿಗುತ್ತಿಲ್ಲ. ಹೀಗಾಗಿ ಕೆಲ ಕುಡುಕರು ಅಬಕಾರಿ ಇಲಾಖೆ ಕಚೇರಿಯಲ್ಲಿ ಇಟ್ಟಿದ್ದ ಮದ್ಯವನ್ನು ಕದ್ದು ಪರಾರಿಯಾದ ಘಟನೆ ಜಿಲ್ಲೆಯ ಸಿರಗುಪ್ಪ ನಗರದಲ್ಲಿ ನಡೆದಿದೆ. ಸಿರುಗುಪ್ಪ ನಗರದ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ಅಬಕಾರಿ ಇಲಾಖೆ ವಶಕ್ಕೆ ಪಡೆದು ಕಚೇರಿಯಲ್ಲಿ ಇಟ್ಟಿದ್ದರು. ಇತ್ತ ಕಳೆದೊಂದು ವಾರದಿಂದ ರಾಜ್ಯದಲ್ಲಿ ಎಲ್ಲಿಯೂ ಮದ್ಯದ ಸಿಗುತ್ತಿಲ್ಲ. ಹೀಗಾಗಿ ಕಳ್ಳರು ಅಬಕಾರಿ ಕಚೇರಿಯಲ್ಲಿದ್ದ ಮದ್ಯದ …

Read More »

ಹೋಮ್ ಕ್ವಾರಂಟೈನ್ ಆದ ಹುಬ್ಬಳ್ಳಿಯ ಅಯೋಧ್ಯಾ ಹೋಟೆಲ್

ಧಾರವಾಡ/ಹುಬ್ಬಳ್ಳಿ: ಕೊರೊನಾ ವೈರಸ್ ನಿಯಂತ್ರಿಸುವ ಸದುದ್ದೇಶದಿಂದ ಹಾಗೂ ಜಿಲ್ಲೆಯಲ್ಲಿ ಕ್ವಾರಂಟೈನ್ ವ್ಯವಸ್ಥೆ ಹೆಚ್ಚು ಮಾಡುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಡಳಿತ ಹುಬ್ಬಳ್ಳಿಯ ಅಯೋಧ್ಯಾ ಹೋಟೆಲ್‍ನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡಿದೆ. ದೆಹಲಿಯ ನಿಜಾಮುದ್ದೀನ್ ತಬ್ಲಿಘ್ ಜಮಾತ್ ಪ್ರಾರ್ಥನಾ ಮಂದಿರದಲ್ಲಿ ಸಭೆ ನಡೆಸಿ ಮರಳಿ ಬಂದ 30 ಜನರು ಸೇರಿ ಒಟ್ಟು 50 ಜನರನ್ನು ಹೋಟೆಲ್ ಗೆ ಶಿಫ್ಟ್ ಮಾಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆ ಹೊಟೇಲ್ ವಶಕ್ಕೆ ತೆಗೆದುಕೊಂಡಿದೆ. …

Read More »

ತಾವು ಬೆಳೆದ ಫಸಲನ್ನು ನಾಶಪಡಿಸಬೇಡಿ : ರೈತರಲ್ಲಿ ಬಿ‌.ಸಿ.ಪಾಟೀಲ್ ಮನವಿ

ಬೆಂಗಳೂರು,ಏ 1-ರೈತರು ತಾವು ಬೆಳೆದ ಫಸಲನ್ನು ರಸ್ತೆಗೆ ಚೆಲ್ಲುವುದಾಗಲೀ, ನಾಶ ಮಾಡುವುದಾಗಲೀ ಮಾಡಬಾರದು. ಕೊರೋನಾ ರೋಗ ಜಗತ್ತಿಗೆ ಎದುರಾದ ಸಮಸ್ಯೆ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲ.ಹೀಗಾಗಿ ರೈತರು ಆತುರಕ್ಕೊಳಗಾಗದೇ ತಾಳ್ಮೆಯಿಂದ ಕೃಷಿ ಇಲಾಖೆ ನೀಡುವ ಸಲಹೆಗಳನ್ನು ಅನುಸರಿಸಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ರೈತರಿಗೆ ಮನವಿ ಮಾಡಿದ್ದಾರೆ. ರಾಯಚೂರು ಸೇರಿದಂತೆ ಬೇರೆ ಯಾವುದೇ ಭಾಗದಲ್ಲಿ ರೈತರ ಬೆಳೆ ಸಮೀಕ್ಷೆಯಾಗದೇ ಇದ್ದದ್ದು ಕಂಡುಬಂದಲ್ಲಿ ತಕ್ಷಣವೇ ಸಮೀಕ್ಷೆ ಕೈಗೊಳ್ಳಬೇಕು ಎಂದು ಕೃಷಿ ಅಧಿಕಾರಿಗಳಿಗೆ ಕೃಷಿ …

Read More »