ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಮೂಡಲಗಿಯಲ್ಲಿ ಜನತಾ ಕಫ್ರ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ ಮೂಡಲಗಿ: ಪ್ರಪಂಚಾದ್ಯಂತ ವ್ಯಾಪಿಸಿರುವ ಕೊರೋನಾ ವೈರಸ್ ಹರಡುವದನ್ನು ತಡೆಯಲು, ನಾಗರಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ ನಾಳಿನ ರವಿವಾರದ “ಜನತಾ ಕಫ್ರ್ಯೂ” ಜಾಗೃತಿ ಆಂದೋಲನಕ್ಕೆ ಶಾಸಕ ಹಾಗೂ ಕ.ಹಾ.ಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿಯಲ್ಲಿಂದು ಚಾಲನೆ ನೀಡಲಾಯಿತು. …
Read More »ಬೆಳಗಾವಿ: ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲ: ಆರೋಗ್ಯ ಸಚಿವ ಶ್ರೀರಾಮಲು
ಬೆಳಗಾವಿ: ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲ: ಆರೋಗ್ಯ ಸಚಿವ ಶ್ರೀರಾಮಲು :ಶೀಘ್ರದಲ್ಲಿಯೇ ಬೆಳಗಾವಿಯಲ್ಲಿ ಕೊರೋನಾ ಪ್ರಯೋಗಾಲಯ/ಬೆಳಗಾವಿಯಲ್ಲಿ ಆರೋಗ್ಯ ಸಚಿವ ಶ್ರೀರಾಮಲು ಹೇಳಿಕೆ/ ಡಿಸಿ ಕಚೇರಿ ಆವರಣದಲ್ಲಿ ಸಚಿವರಿಗೆ ಸ್ಕ್ರೀನಿಂಗ್ ಟೆಸ್ಟ್ ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಯನ್ನು ಹಂಚಿಕೊಂಡಿರುವ ಕರ್ನಾಟಕದ ಬೆಳಗಾವಿಯಲ್ಲಿ ಕೊರೋನಾ ಸೊಂಕಿಗೆ ಸಂಬಂಧಪಟ್ಟ ಪ್ರಯೋಗಾಲಯವನ್ನು ಶೀಘ್ರದಲ್ಲಿಯೇ ಆರಂಭಿಸುತ್ತೇವೆ ಎಂದು,ಆರೋಗ್ಯ ಸಚಿವ ಶ್ರೀರಾಮಲು ಅವರು ಬೆಳಗಾವಿಯಲ್ಲಿಂದು ಭರವಸೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸುವ ಮುನ್ನ ಮಾಧ್ಯಮಗಳೊಂದಿಗೆ …
Read More »ಬೆಂಗಳೂರು: ಜನತಾ ಕರ್ಫ್ಯೂ ಪಾಲಿಸಿ ಡಾ. ಅಶ್ವತ್ಥನಾರಾಯಣ ನಿರ್ದೇಶಿಸಿದ್ದಾರೆ.
ಬೆಂಗಳೂರು: ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಐಟಿ-ಬಿಟಿ ಕಂಪನಿಗಳ ಎಲ್ಲ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬೇಕು ಎಂದು ನೀಡಿದ್ದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ನಿರ್ದೇಶಿಸಿದ್ದಾರೆ. ಐಟಿ- ಬಿಟಿ, ಸ್ಟಾರ್ಟ್ ಅಪ್ ಕಂಪನಿಗಳ ಮುಖ್ಯಸ್ಥರ ಜತೆ ಶುಕ್ರವಾರ ವೀಡಿಯೋ ಕಾನ್ಫರೆನ್ಸ್ ನಡೆಸಿದ ಡಾ. ಅಶ್ವತ್ಥನಾರಾಯಣ, ಕೊರೊನಾ ನಿಯಂತ್ರಣ ಸಂಬಂಧ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ವಿವರಿಸಿದರು. ಜತೆಗೆ ಅವರಿಂದ ಸಲಹೆ- ಸೂಚನೆಗಳನ್ನು ಪಡೆದು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ …
Read More »ಕೇರಳದಂತೆ ರಾಜ್ಯದಲ್ಲೂ ವಿಶೇಷ ಪ್ಯಾಕೆಜ್ ಘೋಷಿಸಿ: ಹೆಚ್ ಡಿ ಕುಮಾರಸ್ವಾಮಿ
ಕೊರೊನಾ ವೈರಸ್ ನಿಂದ ಎದುರಾದ ನಿರ್ಬಂಧಗಳಿಂದಾಗಿ ದಿನಗೂಲಿ ನೌಕರರು, ಬೀದಿ ಬದಿ ವ್ಯಾಪಾರಿಗಳು ಹೆಚ್ಚು ಬಾಧಿತರಾಗಿದ್ದಾರೆ. 2 ತಿಂಗಳ ಅವರ ಬದುಕಿಗೆ ನೆರವಾಗುವಂತೆ ಸರ್ಕಾರ ಕಾರ್ಯಕ್ರಮ ರೂಪಿಸಬೇಕು. ಆಟೋ, ಕ್ಯಾಬ್ ಚಾಲಕರ ಬ್ಯಾಂಕ್ ಲೋನ್ ಕಂತು ಪಾವತಿಗೆ 2 ತಿಂಗಳ ವಿನಾಯಿತಿ ಕಲ್ಪಿಸಬೇಕು. ಈ ಮೂಲಕ ಸರ್ಕಾರ ಬಡವರ ಪರ ನಿಲುವು ತಾಳಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೊರೊನಾ ವೈರಸ್ನಿಂದ ಹದಗೆಟ್ಟಿರುವ ಆರ್ಥಿಕತೆಗೆ ಚೈತನ್ಯ …
Read More »ಗೋವಾ ಕನ್ನಡಿಗರ ರಕ್ಷಣೆಗೆ ಆಗ್ರಹಿಸಿ ಪ್ರತಿ ಪಕ್ಷ ಧರಣಿ- ಸಿಎಂ ಉತ್ತರಕ್ಕೆ ಬಿಗಿಪಟ್ಟು
ಬೆಂಗಳೂರು: ಗೋವಾದಲ್ಲಿ ಇರುವ ಕನ್ನಡಿಗರ ಸಮಸ್ಯೆ ವಿಧಾನ ಪರಿಷತ್ ನಲ್ಲಿಂದು ಪ್ರತಿ ಧ್ವನಿಸಿತು. ಗೋವಾ ಕನ್ನಡಿಗರನ್ನು ರಕ್ಷಣೆ ಮಾಡುವಂತೆ ಪ್ರತಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಮುಖ್ಯಮಂತ್ರಿಗಳು ಉತ್ತರ ನೀಡುವಂತೆ ವಿಪಕ್ಷಗಳು ಒತ್ತಾಯ ಮಾಡಿದರು. ಸದನದಲ್ಲಿ ಗದ್ದಲ ಕೋಲಾಹಲಕ್ಕೆ ಸೃಷ್ಟಿಯಾಗಿದ್ದರಿಂದ ಕಲಾಪವನ್ನು ಮುಂದೂಡಿದ ಘಟನೆ ಕೂಡ ನಡೀತು. ವಿಧಾನ ಪರಿಷತ್ ಶೂನ್ಯವೇಳೆ ಕಲಾಪದಲ್ಲಿ ಗೋವಾದಲ್ಲಿ ಪೊಗೊ ಕಾಯಿದೆಯಿಂದ ಸಾವಿರಾರು ಕನ್ನಡಿಗರು ಆತಂಕದಲ್ಲಿ ಇದ್ದಾರೆ ಎಂದು ಬಸವರಾಜ …
Read More »ಬೆಂಗಳೂರು: :ನಾನು ನಿರ್ಭಯಾ ತಾಯಿ ಪಾತ್ರ ಮಾಡ್ತೇನೆ: ಮಾಳವಿಕಾ
ಬೆಂಗಳೂರು: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಯಾರಾದರೂ ಸಿನಿಮಾ ಮಾಡಿದರೆ ಹೇಳಿ ನಾನು ನಿರ್ಭಯಾ ತಾಯಿ ಪಾತ್ರವನ್ನು ಮಾಡುತ್ತೇನೆ ಎಂದು ಹಿರಿಯ ನಟಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ. ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಇಂದು ನಿರ್ಭಯಾ ದೋಷಿಗಳಿಗೆ ಮರಣದಂಡನೆ ಆಗಿದೆ. ನಿರ್ಭಯಾಳಿಗೆ ಇಂದು ನ್ಯಾಯ ಸಿಕ್ಕಿದೆ. ಇದು ದೇಶದ ಪ್ರತಿಯೊಬ್ಬ ಮಗಳ ಗೆಲವು ಎಂದು ನಿರ್ಭಯಾ ತಾಯಿ ಆಶಾದೇವಿ ತಮ್ಮ ಮೊದಲ …
Read More »ಬೆಳಗಾವಿ:ವಸತಿ ಯೋಜನೆಗಳಲ್ಲಿ ಭಾರೀ ಅಕ್ರಮ;ಸರ್ಕಾರಿ ನೌಕರರೇ ಫಲಾನುಭವಿಗಳು!
ಬೆಳಗಾವಿ ಜಿಲ್ಲೆಯ ಆಥಣಿ ತಾಲೂಕಿನ ಐಗಳಿ ಗ್ರಾಮ ಪಂಚಾಯತ ಹದ್ದಿಯಲ್ಲಿ ಎಸ್ಸಿ/ಎಸ್ಟಿ ಫಲಾನುಭವಿಗಳ ಹೆಸರಿನಲ್ಲಿ ಮನೆಗಳನ್ನು ಮಂಜೂರು ಮಾಡಿಸಿಕೊಂಡು, ಅವರಿಗೆ ಅಲ್ಪ-ಸ್ವಲ್ಪ ಹಣ ನೀಡಿ ಸರ್ಕಾರಿ ನೌಕರರೇ ದೊಡ್ಡ ಮನೆಗಳನ್ನು ಕಟ್ಟಿಕೊಳ್ಳುತ್ತಿರುವ ಆಘಾತಕಾರಿ ಸಂಗತಿ ನಡೆದಿವೆ ಎನ್ನಲಾದ ಪ್ರಕರಣಗಳಿಗೆ ಸಂಬಂಧಪಟ್ಟಂತೆ ತನಿಖೆಗೆ ಆದೇಶ ನೀಡಲಾಗಿದೆಯಾದರೂ,ತನಿಖೆಯ ಹೆಸರಿನಲ್ಲಿ ಸುಖಾಸುಮ್ಮನೆ ಕಾಲಹರಣ ಮಾಡಲಾಗುತ್ತಿದೆ. ಈ ಮೂಲಕ ತಪ್ಪಿತಸ್ಥರ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಆಶಾ ಐಹೊಳೆ ಕೂಡ …
Read More »ಶಿವಮೊಗ್: ಹೇಳದೆ ಕೇಳದೇ ಆಸ್ಪತ್ರೆಯಿಂದ ಓಡಿ ಹೋದ ಮಹಿಳೆ
ಶಿವಮೊಗ್ಗ: ಮಂಗನಕಾಯಿಲೆ ಸೋಂಕು ತಗುಲಿದ್ದ ಮಹಿಳೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ಅರಳಗೋಡು ಗ್ರಾಮದ ಸುಮಿತ್ರಮ್ಮ ಮೆಗ್ಗಾನ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ. ವೈದ್ಯರು ಪರೀಕ್ಷಿಸಿದ ನಂತರ ಮಹಿಳೆಗೆ ಕೆಎಫ್ಡಿ ಪಾಸಿಟಿವ್ ಇರುವ ಅಂಶ ದೃಢಪಟ್ಟಿತ್ತು. ಹೀಗಾಗಿ ಮಹಿಳೆಯ ಕುಟುಂಬಸ್ಥರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳೆದ ನಾಲ್ಕು ದಿನದ ಚಿಕಿತ್ಸೆಗೆ ದಾಖಲಿಸಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸುಮಿತ್ರಮ್ಮ ಅವರಿಗೆ ಖಾಯಿಲೆ ಸ್ವಲ್ಪ ವಾಸಿಯಾಗಿತ್ತು. …
Read More »ನೆಲಮಂಗಲ: ಕೊರೊನಾ ಆತಂಕದಲ್ಲಿ ನೆಲಮಂಗಲ ಸಬ್ ರಿಜಿಸ್ಟ್ರಾರ್ ಅಧಿಕಾರಿಗಳಿಂದ ಕೆಲಸ
ಬೆಂಗಳೂರು: ಪ್ರಪಂಚದಾದ್ಯಂತ ಕೊರೊನಾ ಹರಡುತ್ತಿದೆ. ಅಲ್ಲದೆ ನಮ್ಮ ದೇಶದಲ್ಲೂ ಕೂಡ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ರಾಜ್ಯದಲ್ಲೂ ಕೂಡ ಮಾರ್ಚ್ 31ರವರೆಗೆ ಮೆಡಿಕಲ್ ಎಮರ್ಜೆನ್ಸಿಯನ್ನು ಸಹ ಘೋಷಣೆ ಮಾಡಿದೆ. ಮೆಡಿಕಲ್ ಎಮೆರ್ಜೆನ್ಸಿ ಸಮಯದಲ್ಲಿ ಗುಂಪು ಗುಂಪಾಗಿ ಜನ ಸೇರುವುದನ್ನು ನಿಷೇಧಿಸಿದೆ. ಬೆಂಗಳೂರು ಹೊರವಲಯ ನೆಲಮಂಗಲ ನಗರದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮಾತ್ರ ಅಧಿಕಾರಿಗಳು ಕೊರೊನಾ ಭಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಂದು ಶುಕ್ರವಾರ ಹಿನ್ನೆಲೆಯಲ್ಲಿ ರಿಜಿಸ್ಟರ್ ಮಾಡಿಸಲು ಮುಗಿಬಿದ್ದಿದ್ದಾರೆ. ಇದರಿಂದ ರಿಜಿಸ್ಟ್ರಾರ್ …
Read More »ಬೆಂಗ್ಳೂರು ಸಿಸಿಬಿ ಪೊಲೀಸರಿಂದ 56 ಲಕ್ಷ ಮೌಲ್ಯದ ವಸ್ತುಗಳು ವಶ ನಕಲಿ ಸ್ಯಾನಿಟೈಸರ್ಗಳ ಹಾವಳಿ
ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ಭೀತಿಯನ್ನೇ ಬಂಡವಾಳ ಮಾಡಿಕೊಂಡ ಖದೀಮರು ಲಕ್ಷಾಂತರ ಮೌಲ್ಯದ ನಕಲಿ ಸ್ಯಾನಿಟೈಸರ್ ಹಾಗೂ ಹ್ಯಾಡ್ ರಬ್ಗಳನ್ನು ತಯಾರಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ನಕಲಿ ಸ್ಯಾನಿಟೈಸರ್ ಹಾಗೂ ಹ್ಯಾಡ್ ರಬ್ಗಳ ತಯಾರಿಕೆ ಬಗ್ಗೆ ಖಚಿತ ಮಾಹಿತಿ ಪಡೆದ ಬೆಂಗಳೂರು ಸಿಸಿಬಿ ಪೊಲೀಸರು, ನಗರದ ಚಾಮರಾಜಪೇಟೆ ಮತ್ತು ವಿ.ವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಗೊಡೌನ್ಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಬರೋಬ್ಬರಿ 56 ಲಕ್ಷ …
Read More »
Laxmi News 24×7