ಬೆಂಗಳೂರು: ಗೋವಾದಲ್ಲಿ ಇರುವ ಕನ್ನಡಿಗರ ಸಮಸ್ಯೆ ವಿಧಾನ ಪರಿಷತ್ ನಲ್ಲಿಂದು ಪ್ರತಿ ಧ್ವನಿಸಿತು. ಗೋವಾ ಕನ್ನಡಿಗರನ್ನು ರಕ್ಷಣೆ ಮಾಡುವಂತೆ ಪ್ರತಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಮುಖ್ಯಮಂತ್ರಿಗಳು ಉತ್ತರ ನೀಡುವಂತೆ ವಿಪಕ್ಷಗಳು ಒತ್ತಾಯ ಮಾಡಿದರು. ಸದನದಲ್ಲಿ ಗದ್ದಲ ಕೋಲಾಹಲಕ್ಕೆ ಸೃಷ್ಟಿಯಾಗಿದ್ದರಿಂದ ಕಲಾಪವನ್ನು ಮುಂದೂಡಿದ ಘಟನೆ ಕೂಡ ನಡೀತು. ವಿಧಾನ ಪರಿಷತ್ ಶೂನ್ಯವೇಳೆ ಕಲಾಪದಲ್ಲಿ ಗೋವಾದಲ್ಲಿ ಪೊಗೊ ಕಾಯಿದೆಯಿಂದ ಸಾವಿರಾರು ಕನ್ನಡಿಗರು ಆತಂಕದಲ್ಲಿ ಇದ್ದಾರೆ ಎಂದು ಬಸವರಾಜ …
Read More »ಬೆಂಗಳೂರು: :ನಾನು ನಿರ್ಭಯಾ ತಾಯಿ ಪಾತ್ರ ಮಾಡ್ತೇನೆ: ಮಾಳವಿಕಾ
ಬೆಂಗಳೂರು: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಯಾರಾದರೂ ಸಿನಿಮಾ ಮಾಡಿದರೆ ಹೇಳಿ ನಾನು ನಿರ್ಭಯಾ ತಾಯಿ ಪಾತ್ರವನ್ನು ಮಾಡುತ್ತೇನೆ ಎಂದು ಹಿರಿಯ ನಟಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ. ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಇಂದು ನಿರ್ಭಯಾ ದೋಷಿಗಳಿಗೆ ಮರಣದಂಡನೆ ಆಗಿದೆ. ನಿರ್ಭಯಾಳಿಗೆ ಇಂದು ನ್ಯಾಯ ಸಿಕ್ಕಿದೆ. ಇದು ದೇಶದ ಪ್ರತಿಯೊಬ್ಬ ಮಗಳ ಗೆಲವು ಎಂದು ನಿರ್ಭಯಾ ತಾಯಿ ಆಶಾದೇವಿ ತಮ್ಮ ಮೊದಲ …
Read More »ಬೆಳಗಾವಿ:ವಸತಿ ಯೋಜನೆಗಳಲ್ಲಿ ಭಾರೀ ಅಕ್ರಮ;ಸರ್ಕಾರಿ ನೌಕರರೇ ಫಲಾನುಭವಿಗಳು!
ಬೆಳಗಾವಿ ಜಿಲ್ಲೆಯ ಆಥಣಿ ತಾಲೂಕಿನ ಐಗಳಿ ಗ್ರಾಮ ಪಂಚಾಯತ ಹದ್ದಿಯಲ್ಲಿ ಎಸ್ಸಿ/ಎಸ್ಟಿ ಫಲಾನುಭವಿಗಳ ಹೆಸರಿನಲ್ಲಿ ಮನೆಗಳನ್ನು ಮಂಜೂರು ಮಾಡಿಸಿಕೊಂಡು, ಅವರಿಗೆ ಅಲ್ಪ-ಸ್ವಲ್ಪ ಹಣ ನೀಡಿ ಸರ್ಕಾರಿ ನೌಕರರೇ ದೊಡ್ಡ ಮನೆಗಳನ್ನು ಕಟ್ಟಿಕೊಳ್ಳುತ್ತಿರುವ ಆಘಾತಕಾರಿ ಸಂಗತಿ ನಡೆದಿವೆ ಎನ್ನಲಾದ ಪ್ರಕರಣಗಳಿಗೆ ಸಂಬಂಧಪಟ್ಟಂತೆ ತನಿಖೆಗೆ ಆದೇಶ ನೀಡಲಾಗಿದೆಯಾದರೂ,ತನಿಖೆಯ ಹೆಸರಿನಲ್ಲಿ ಸುಖಾಸುಮ್ಮನೆ ಕಾಲಹರಣ ಮಾಡಲಾಗುತ್ತಿದೆ. ಈ ಮೂಲಕ ತಪ್ಪಿತಸ್ಥರ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಆಶಾ ಐಹೊಳೆ ಕೂಡ …
Read More »ಶಿವಮೊಗ್: ಹೇಳದೆ ಕೇಳದೇ ಆಸ್ಪತ್ರೆಯಿಂದ ಓಡಿ ಹೋದ ಮಹಿಳೆ
ಶಿವಮೊಗ್ಗ: ಮಂಗನಕಾಯಿಲೆ ಸೋಂಕು ತಗುಲಿದ್ದ ಮಹಿಳೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ಅರಳಗೋಡು ಗ್ರಾಮದ ಸುಮಿತ್ರಮ್ಮ ಮೆಗ್ಗಾನ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ. ವೈದ್ಯರು ಪರೀಕ್ಷಿಸಿದ ನಂತರ ಮಹಿಳೆಗೆ ಕೆಎಫ್ಡಿ ಪಾಸಿಟಿವ್ ಇರುವ ಅಂಶ ದೃಢಪಟ್ಟಿತ್ತು. ಹೀಗಾಗಿ ಮಹಿಳೆಯ ಕುಟುಂಬಸ್ಥರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳೆದ ನಾಲ್ಕು ದಿನದ ಚಿಕಿತ್ಸೆಗೆ ದಾಖಲಿಸಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸುಮಿತ್ರಮ್ಮ ಅವರಿಗೆ ಖಾಯಿಲೆ ಸ್ವಲ್ಪ ವಾಸಿಯಾಗಿತ್ತು. …
Read More »ನೆಲಮಂಗಲ: ಕೊರೊನಾ ಆತಂಕದಲ್ಲಿ ನೆಲಮಂಗಲ ಸಬ್ ರಿಜಿಸ್ಟ್ರಾರ್ ಅಧಿಕಾರಿಗಳಿಂದ ಕೆಲಸ
ಬೆಂಗಳೂರು: ಪ್ರಪಂಚದಾದ್ಯಂತ ಕೊರೊನಾ ಹರಡುತ್ತಿದೆ. ಅಲ್ಲದೆ ನಮ್ಮ ದೇಶದಲ್ಲೂ ಕೂಡ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ರಾಜ್ಯದಲ್ಲೂ ಕೂಡ ಮಾರ್ಚ್ 31ರವರೆಗೆ ಮೆಡಿಕಲ್ ಎಮರ್ಜೆನ್ಸಿಯನ್ನು ಸಹ ಘೋಷಣೆ ಮಾಡಿದೆ. ಮೆಡಿಕಲ್ ಎಮೆರ್ಜೆನ್ಸಿ ಸಮಯದಲ್ಲಿ ಗುಂಪು ಗುಂಪಾಗಿ ಜನ ಸೇರುವುದನ್ನು ನಿಷೇಧಿಸಿದೆ. ಬೆಂಗಳೂರು ಹೊರವಲಯ ನೆಲಮಂಗಲ ನಗರದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮಾತ್ರ ಅಧಿಕಾರಿಗಳು ಕೊರೊನಾ ಭಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಂದು ಶುಕ್ರವಾರ ಹಿನ್ನೆಲೆಯಲ್ಲಿ ರಿಜಿಸ್ಟರ್ ಮಾಡಿಸಲು ಮುಗಿಬಿದ್ದಿದ್ದಾರೆ. ಇದರಿಂದ ರಿಜಿಸ್ಟ್ರಾರ್ …
Read More »ಬೆಂಗ್ಳೂರು ಸಿಸಿಬಿ ಪೊಲೀಸರಿಂದ 56 ಲಕ್ಷ ಮೌಲ್ಯದ ವಸ್ತುಗಳು ವಶ ನಕಲಿ ಸ್ಯಾನಿಟೈಸರ್ಗಳ ಹಾವಳಿ
ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ಭೀತಿಯನ್ನೇ ಬಂಡವಾಳ ಮಾಡಿಕೊಂಡ ಖದೀಮರು ಲಕ್ಷಾಂತರ ಮೌಲ್ಯದ ನಕಲಿ ಸ್ಯಾನಿಟೈಸರ್ ಹಾಗೂ ಹ್ಯಾಡ್ ರಬ್ಗಳನ್ನು ತಯಾರಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ನಕಲಿ ಸ್ಯಾನಿಟೈಸರ್ ಹಾಗೂ ಹ್ಯಾಡ್ ರಬ್ಗಳ ತಯಾರಿಕೆ ಬಗ್ಗೆ ಖಚಿತ ಮಾಹಿತಿ ಪಡೆದ ಬೆಂಗಳೂರು ಸಿಸಿಬಿ ಪೊಲೀಸರು, ನಗರದ ಚಾಮರಾಜಪೇಟೆ ಮತ್ತು ವಿ.ವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಗೊಡೌನ್ಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಬರೋಬ್ಬರಿ 56 ಲಕ್ಷ …
Read More »ಹುಬ್ಬಳ್ಳಿಯಿಂದ ಮಹಾರಾಷ್ಟಕ್ಕೆ ತೆರಳುವ 7 ಬಸ್ಸುಗಳ ಸಂಚಾರ ಸ್ಥಗಿತ
ಹುಬ್ಬಳ್ಳಿ: ವಿಜಯಪುರ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಕೊರೊನಾ ವೈರಾಣು ಹರಡಿರುವುದರಿಂದ, ಹುಬ್ಬಳ್ಳಿಯಿಂದ ಈ ಭಾಗಕ್ಕೆ ತೆರಳುವ ಏಳು ಬಸ್ಸುಗಳು ಹಾಗೂ ರಾಜ್ಯದ ಕಲಬುರಗಿಗೆ ತೆರಳುವ ಸ್ಲೀಪರ್ ಕೋಚ್ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈ ಕುರಿತು ವಾಕರಸಾಸಂ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ವಿಭಾಗೀಯ ನಿಯಂತ್ರಕ ಹೆಚ್.ರಾಮನಗೌಡರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರವಾಸಿಗರನ್ನು ನಿಯಂತ್ರಿಸಲು …
Read More »ವಿಶ್ವದ್ಯಂತ ಕೊರೊನಾ ವೈರಸ್ ಭೀತಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ದೇಶದ ಎಲ್ಲಾ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಹಂತ ಹಂತವಾಗಿ ಬಂದ್ ಮಾಡುವ ಬಗ್ಗೆ ಚಿಂತನೆ ನಡೆದಿದೆ.
ಬೆಂಗಳೂರು: ವಿಶ್ವದ್ಯಂತ ಕೊರೊನಾ ವೈರಸ್ ಭೀತಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ದೇಶದ ಎಲ್ಲಾ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಹಂತ ಹಂತವಾಗಿ ಬಂದ್ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಮೊದಲ ಹಂತವಾಗಿ ಇಂದು ಸುಮಾರು 32 ರೈಲುಗಳ ಸಂಚಾರವನ್ನು ನಿಲ್ಲಿಸಲಾಗಿದ್ದು, ನಾಳೆಯಿಂದ ಕೊರೊನಾ ವೈರಸ್ ಹಬ್ಬುತ್ತಿರುವ ಪ್ರಮಾಣವನ್ನು ನೋಡಿಕೊಂಡು ನಿರ್ಧಾರ ಕೈಗೊಳ್ಳಲಾಗುವುದು ಎಂದು ಇಲಾಖೆ ಮುಖ್ಯಸ್ಥರು ತಿಳಿಸಿದ್ದಾರೆ. ರೈಲುಗಳ ಸೇವೆಯಲ್ಲಿ ವ್ಯತ್ಯಯದ ವಿಚಾರ ತಿಳಿದ ಸಾರ್ವಜನಿಕರು ಕೂಡ ಗುರುವಾರದಿಂದಲೇ ತಮ್ಮ ತಮ್ಮ ಊರುಗಳಿಗೆ …
Read More »ಸತತವಾಗಿ ೮ನೇ ಬಾರಿಗೆ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ಪ್ರಭಾಕರ ಕೋರೆ ಆಯ್ಕೆ
ಡಾ.ಪ್ರಭಾಕರ ಕೋರೆ ಸತತವಾಗಿ ೮ನೇ ಬಾರಿಗೆ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗುವುದರ ಮೂಲಕ ಸಂಸ್ಥೆಯ ಇತಿಹಾಸದಲ್ಲಿಯೇ ನೂತನ ದಾಖಲೆ ಬರೆದಿದ್ದಾರೆ. ಕೆಎಲ್ಇ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಗುರುವಾರ ಜರುಗಿದ ನೂತನ ಆಡಳಿತ ಮಂಡಳಿಯ ಪ್ರಥಮ ಸಭೆಯಲ್ಲಿ ಸದಸ್ಯರು ಡಾ.ಪ್ರಭಾಕರ ಕೋರೆಯವರನ್ನು ಕಾರ್ಯಾಧ್ಯಕ್ಷರನ್ನಾಗಿ ಪುನರ್ಆಯ್ಕೆ ಮಾಡುವ ಮೂಲಕ ಅಭಿನಂದಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರು ಹಾಗೂ ವಿಧಾನ ಪರಿಷತ್ನ ಸರ್ಕಾರದ ಮುಖ್ಯಸಚೇತಕರಾದ ಮಹಾಂತೇಶ ಕವಟಗಿಮಠ ಅವರು ಮಾತನಾಡಿ ’ಡಾ.ಕೋರೆಯವರು ಕೆಎಲ್ಇ ಸಂಸ್ಥೆಯ ಸಾರಥ್ಯವನ್ನು …
Read More »ಸಿದ್ದಾಪುರ ತಾಲೂಕಿನಲ್ಲಿ ಹೆಚ್ಚುತ್ತಿರುವ ಮಂಗನಕಾಯಿಲೆ (ಕೆ.ಎಫ್.ಡಿ)ಯಿಂದ ಜನರು ಭಯಪಟ್ಟು ಊರು ಬಿಡುತ್ತಿದ್ದಾರೆ:ವಿಶ್ವೇಶ್ವರ ಹೆಗಡೆ ಕಾಗೇರಿ ಸ್ವಕ್ಷೇತ್ರ
ಕಾರವಾರ: ಕೊರೊನಾ ವೈರಸ್ಗೆ ರಾಜ್ಯದ ಜನ ಭಯಗೊಂಡಿದ್ದರೆ ಇತ್ತ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ವಕ್ಷೇತ್ರ ಸಿದ್ದಾಪುರ ತಾಲೂಕಿನಲ್ಲಿ ಹೆಚ್ಚುತ್ತಿರುವ ಮಂಗನಕಾಯಿಲೆ (ಕೆ.ಎಫ್.ಡಿ)ಯಿಂದ ಜನರು ಭಯಪಟ್ಟು ಊರು ಬಿಡುತ್ತಿದ್ದಾರೆ. ಹೌದು. ಉತ್ತರ ಕನ್ನಡ ಜಿಲ್ಲೆಯ ಜನರೀಗ ಕೆ.ಎಫ್.ಡಿ ವೈರಸ್ಗೆ ಭಯಪಟ್ಟು ಊರು ತೊರೆಯುತಿದ್ದಾರೆ. ವಿಧಾನಸಭಾ ಸ್ಪೀಕರ್ ಕಾಗೇರಿಯವರ ಸ್ವಕ್ಷೇತ್ರ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬಾಳಗೋಡು, ಮಳಗುಳಿ, ಹನುಮನಜಡ್ಡಿ, ಹೊನ್ನೆಗಟಗಿ, ತ್ಯಾಗಲಿಗಳಲ್ಲಿ 200ಕ್ಕೂ ಹೆಚ್ಚು ಮಂಗಗಳು ಈ ವರ್ಷ ಸಾವನ್ನಪ್ಪಿದ್ದು ಇವುಗಳಲ್ಲಿ …
Read More »
Laxmi News 24×7