Breaking News

ರಾಜಕೀಯ

‘ಕನ್ನಡೇತರ ವ್ಯಕ್ತಿಯನ್ನು ಮೈಸೂರು ಸ್ಯಾಂಡಲ್ ಸೋಪ್ ಬ್ರ್ಯಾಂಡ್ ಅಂಬಾಸಿಡರ್ ಮಾಡಿ ಕನ್ನಡಿಗರನ್ನು ದೂರವಿಟ್ಟಿದ್ದಾರೆ’: ರಮ್ಯಾ

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್​ಡಿಎಲ್) ಸಂಸ್ಥೆಯ ಪ್ರಚಾರಕ್ಕೆ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಆದರೆ, ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿವೆ. ಕರುನಾಡಿನ ಖ್ಯಾತ ಉತ್ಪನ್ನಕ್ಕೆ ಕನ್ನಡೇತರ ನಟಿಯನ್ನು ಬ್ರ್ಯಾಂಡ್​ ಅಂಬಾಸಿಡರ್​ ಮಾಡಿರೋದು ಬಹುತೇಕರ ಆಕ್ರೋಶಕ್ಕೂ ಕಾರಣವಾಗಿದೆ. ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯಾ ಕೂಡಾ ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ನಟಿ ರಮ್ಯಾ ಎಕ್ಸ್​ ಪೋಸ್ಟ್​​: ”ಕೆಎಸ್‌ಡಿಎಲ್ ಪುನರುಜ್ಜೀವನಗೊಳಿಸುವ ಉದ್ದೇಶವನ್ನು …

Read More »

ಫೋನ್‌ಪೇ, ಗೂಗಲ್ ಪೇ, ಪೇಟಿಎಂ ಬಳಕೆದಾರರಿಗೆ ಪ್ರಮುಖ ಸುದ್ದಿ

ಬೆಂಗಳೂರು (ಮೇ. 24): ತಂತ್ರಜ್ಞಾನವು (Technology) ನಮ್ಮ ಜೀವನವನ್ನು ಎಷ್ಟು ಸುಲಭಗೊಳಿಸಿದೆಯೋ, ಅಷ್ಟೇ ಅಪಾಯಗಳನ್ನೂ ಒಡ್ಡುತ್ತಿದೆ. ಇಂಟರ್ನೆಟ್ ಪ್ರವೇಶ ಹೆಚ್ಚಳದ ನಂತರ ಬಂದಿರುವ ದೊಡ್ಡ ಬದಲಾವಣೆಯೆಂದರೆ ಹಣದ ವಹಿವಾಟುಗಳಲ್ಲಿ. ಈಗ ನೀವು ಯಾರಿಗಾದರೂ ಹಣವನ್ನು ಕಳುಹಿಸಲು ಅಥವಾ ಅಂಗಡಿಯಿಂದ ಏನಾದರು ಖರೀದಿಸಿದರೆ ಹೆಚ್ಚಿನ ಜನರು ಆನ್‌ಲೈನ್‌ನಲ್ಲಿ ಪಾವತಿಗಳನ್ನು ಮಾಡುತ್ತಾರೆ. ಪ್ರತಿಯೊಂದು ಸ್ಥಳದಲ್ಲೂ ವಿಭಿನ್ನ ಜನರು ಆನ್‌ಲೈನ್ ಪಾವತಿಗಳನ್ನು ಆಶ್ರಯಿಸುತ್ತಿದ್ದಾರೆ. ನೀವು ಸಹ ಆನ್‌ಲೈನ್ ಪಾವತಿಗಳನ್ನು ಮಾಡುತ್ತಿದ್ದರೆ ನಿಮಗೆ ಒಳ್ಳೆಯ ಸುದ್ದಿ ಇದೆ. ಈಗ …

Read More »

ನನಗೆ ಮೈಸೂರು ಸ್ಯಾಂಡಲ್​ ಸೋಪ್​ ರಾಯಭಾರಿಯಾಗುವ ಆಸೆ ಇಲ್ಲ: ಯದುವೀರ್

ಮೈಸೂರು:‌ ಮೈಸೂರು ಸ್ಯಾಂಡಲ್ ಸೋಪಿಗೆ ನನಗೆ ವೈಯಕ್ತಿಕವಾಗಿ ರಾಯಭಾರಿಯಾಗುವ ಆಸೆ ಇಲ್ಲ ಎಂದು ರಾಜವಂಶಸ್ಥರು, ಬಿಜೆಪಿ ಸಂಸದರೂ ಆಗಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದರು. “ಮೈಸೂರು ಸ್ಯಾಂಡಲ್ ಸೋಪಿಗೆ ಸೂಕ್ತ ರಾಯಭಾರಿ ಎಂದರೆ ನಮ್ಮ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಬ್ರ್ಯಾಂಡೂ ನಮ್ದೇ ಬ್ರ್ಯಾಂಡು ಅಂಬಾಸಿಡರು ನಮ್ಮವ್ರೇ ‘ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಚಾರವಾಗಿ, ನಗರದ ಖಾಸಗಿ ಹೋಟೆಲ್​ನಲ್ಲಿಂದು ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು”ರಾಜಮನೆತನ ಕಮರ್ಷಿಯಲ್ ಆಗಿ …

Read More »

ಮಂಜುನಾಥ ರಾವ್​ ನಿವಾಸಕ್ಕೆ ಅಸ್ಸೋಂ ಸಚಿವ ಭೇಟಿ, ₹5 ಲಕ್ಷ ಪರಿಹಾರ

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಮೃತರಾದ ಮಂಜುನಾಥ ರಾವ್ ನಿವಾಸಕ್ಕೆ ಭಾನುವಾರ ಅಸ್ಸೋಂನ ಸಚಿವ ಬಿಮಲ್ ಬೋರಾಹ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬೆಂಗಳೂರಿನಿಂದ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ ಬಿಮಲ್ ಬೋರಾಹ್, ವಿಜಯನಗರದ ಮಂಜುನಾಥ ರಾವ್ ಅವರ ಮನೆಗೆ ಭೇಟಿ ನೀಡಿ, ಮಂಜುನಾಥ ರಾವ್ ಆವರ ಫೋಟೋಗೆ ಪುಷ್ಪ ನಮನ ಸಲ್ಲಿಸಿದರು. ನಂತರ ರಾವ್ ಅವರ ತಾಯಿ ಸುಮತಿ, ಪತ್ನಿ ಪಲ್ಲವಿ ಹಾಗೂ ಮಗ ಅಭಿರಾಮ್ ಅವರಿಗೆ …

Read More »

ಯತ್ನಾಳ್ ಕಾಟವನ್ನೇ ಸಹಿಸಿಕೊಳ್ಳಲು ಬಿಜೆಪಿಯವರಿಗೆ ಆಗ್ತಾ ಇಲ್ಲ:ಜಮೀರ್ ಅಹ್ಮದ್

ದಾವಣಗೆರೆ: ಬಿಜೆಪಿಯವರಿಗೆ ಯತ್ನಾಳ್ ಕಾಟವನ್ನೇ ಸಹಿಸಿಕೊಳ್ಳಲು ಆಗ್ತಾ ಇಲ್ಲ, ನಮ್ಮ ಪಕ್ಷದ ವಿಚಾರ ಏನಕ್ಕೆ ಬೇಕು? ಮೊದಲು ಯತ್ನಾಳ್ ವಿಚಾರವನ್ನು ಸರಿಪಡಿಸಿಕೊಳ್ಳಿ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಬಿಜೆಪಿ ನಾಯಕರ ವಿರುದ್ದ ಗರಂ ಆದರು. ದಾವಣಗೆರೆಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ತಮನ್ನಾ ಭಾಟಿಯಾ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ, ನಟಿ ತಮನ್ನಾ ಭಾಟಿಯಾ ಆಯ್ಕೆ ವಿಚಾರಕ್ಕೆ ಬೇಸರ ವ್ಯಕ್ತಪಡಿಸಿದರು. “ನಮ್ಮ ರಾಜ್ಯದಲ್ಲಿ ನಟಿಯರು ತುಂಬಾ …

Read More »

18 ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್; ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಆದೇಶವನ್ನು ವಾಪಸ್​​ ಪಡೆಯಲು ತೀರ್ಮಾನಿಸಲಾಗಿದೆ. ಕಳೆದ ಅಧಿವೇಶನದಲ್ಲಿ ಸದನದಿಂದ ಅಮಾನತ್ತಾದ 18 ಶಾಸಕರಿಗೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದ್ದು, ಎರಡು ತಿಂಗಳ ನಂತರ ಅಮಾನತು ಆದೇಶ ವಾಪಸ್ ಪಡೆಯಲಾಗಿದೆ. ಭಾನುವಾರ ಸಂಜೆ ವಿಧಾನಸೌಧದಲ್ಲಿ ಸ್ಪೀಕರ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಹೆಚ್​.ಕೆ.ಪಾಟೀಲ್, ಸಭಾಪತಿ ರುದ್ರಪ್ಪ ಲಮಾಣಿ, ವಿಪಕ್ಷ ನಾಯಕ ಆರ್.ಅಶೋಕ್ ಮತ್ತಿತರರು …

Read More »

ಮುಂಗಾರು ಮೊದಲೇ ತುಂಬಿದ ತುಂಗೆ

ಶಿವಮೊಗ್ಗ: ಮುಂಗಾರುಪೂರ್ವ ಮಳೆಗೆ ತುಂಗಾ ಅಣೆಕಟ್ಟು ಭರ್ತಿಯಾಗಿದ್ದು, 5 ಕ್ರಸ್ಟ್ ಗೇಟುಗಳ ಮೂಲಕ ನದಿಗೆ 2 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಇದು ರಾಜ್ಯದಲ್ಲಿಯೇ ಪ್ರಥಮವಾಗಿ ತುಂಬುವ ಅಣೆಕಟ್ಟಾಗಿದೆ. ಅಣೆಕಟ್ಟೆಗೆ 7,500 ಕ್ಯೂಸೆಕ್ ನೀರು ಒಳ ಹರಿವು ಇರುವ ಕಾರಣ ಐದು ಕ್ರಸ್ಟ್ ಗೇಟ್​ಗಳ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಇನ್ನೂ ಒಂದು ವಾರದಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದೆ. ಆಗ ಡ್ಯಾಂನಿಂದ ಇನ್ನಷ್ಟು ನೀರು ನದಿಗೆ ಬಿಡುವ …

Read More »

ಶಾಲೆ ಪುನಾರಂಭದಲ್ಲೇಕೊರೊನಾ ಕಂಟಕ: ಆರೋಗ್ಯ ಇಲಾಖೆ ಅಲರ್ಟ್

ಬೆಂಗಳೂರು, ಮೇ 25: ರಾಜ್ಯದಲ್ಲಿ ಕೊರೊನಾ (Karnataka Covid) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೊನಾ (Coronavirus) ಸೋಂಕಿತ ವೃದ್ಧರೊಬ್ಬರು ಶನಿವಾರ (ಮೇ.24) ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಮತ್ತು ರಾಜಾಜಿನಗರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಮುಂದಿನ ವಾರ ಮೇ.29ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪುನಾರಂಭವಾಗುತ್ತವೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದು ಹೇಗೆ ಅಂತ ಪೋಷಕರು ಆತಂಕಗೊಂಡಿದ್ದಾರೆ. ಮಕ್ಕಳಿಗೆ ಮಾಸ್ಕ್ …

Read More »

ಪ್ರೀತಿಸಿ ಮದುವೆಯಾಗಿ ಹಣ, ಚಿನ್ನಾಭರಣ ಪಡೆದು ಪರಾರಿ: ಪೊಲೀಸ್​ ಠಾಣೆ ಮೆಟ್ಟಿಲೇರಿದ ಗರ್ಭಿಣಿ

ಬೆಂಗಳೂರು: ಪ್ರೀತಿಸಿ ಮದುವೆಯಾದವನು ಸಂಸಾರಕ್ಕೆ ಹೊಸ ಮನೆ ಮಾಡುವುದಾಗಿ ಹಣ ಚಿನ್ನ ಪಡೆದುಕೊಂಡು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಹೇಮಂತ್​​ ಎಂಬಾತನ ವಿರುದ್ಧ ಆರೋಪ ಕೇಳಿ ಬಂದಿದ್ದು, ಮೂರೇ ತಿಂಗಳಿಗೆ ತನ್ನನ್ನು ತೊರೆದು ಪರಾರಿಯಾದ ಪತಿಗಾಗಿ ಸಂತ್ರಸ್ತ ಮಹಿಳೆ ಬೆಂಗಳೂರು ಪಶ್ಚಿಮ ವಿಭಾಗದ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಕುಣಿಗಲ್​ ಮೂಲದ ಸಂತ್ರಸ್ತೆ, ಬೆಂಗಳೂರಿನಲ್ಲಿ ಮಾಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ಹೇಮಂತ್‌ನ ಪರಿಚಯವಾಗುತ್ತದೆ. ಇಬ್ಬರು ಪರಸ್ಪರ ಪ್ರೀತಿಸಿ ಕಳೆದ ಫೆಬ್ರವರಿಯಲ್ಲಿ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. …

Read More »

ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ…

ಬೆಳಗಾವಿ :ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ….. ಮೂರು ಜ‌ನ ಆರೋಪಿಗಳನ್ನು ಬಂಧಿಸಿದ ಸಾಂಗ್ಲಿ ಪೊಲೀಸರು…… ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಗೈದ ನೀಚರು ಕರ್ನಾಟಕ ಮೂಲದ ಎಂಬಿಬಿಎಸ್ 3ನೇ ವರ್ಷದ ವಿದ್ಯಾರ್ಥಿನಿ ಮೂವರು ಆರೋಪಿಗಳನ್ನು ಬಂಧಿಸಿದ ಸಾಂಗ್ಲಿ ಪೊಲೀಸರು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಕರ್ನಾಟಕ ಮೂಲದ ಎಂಬಿಬಿಎಸ್ ಮೂರನೇ ವರ್ಷದ ವಿದ್ಯಾರ್ಥಿನಿ ಮೇ 18ರಂದು …

Read More »