Breaking News
Home / ರಾಜಕೀಯ (page 30)

ರಾಜಕೀಯ

ಗೋಕಾಕ: ಮಾರ್ಚ್ 28ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ

ಗೋಕಾಕ: ಬೆಳಗಾವಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮಹಾಲಕ್ಷ್ಮಿ ಸಭಾಭವನದಲ್ಲಿ ಗೋಕಾಕ ಮತ್ತು ಅರಭಾವಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಅಭ್ಯರ್ಥಿ ಮೃಣಾಲ ಹೆಬ್ಬಾಳಕರ ಸೇರಿದಂತೆ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More »

ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಸಿಎಂ ಬದಲಾವಣೆ ಕೂಗು: ಡಿ.ಕೆ. ಶಿ.

ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಸಿಎಂ ಸಿದ್ದರಾಮಯ್ಯಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮುಖ್ಯಮಂತ್ರಿ ಹುದ್ದೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ನಾನು ಸಿಎಂ ಆಗುತ್ತೇನೆ ಎಂದು ಹೇಳಿದ್ದಾರೆ. ರಾಜಕಾರಣದಲ್ಲಿ ಏನು ಬೇಕಾದರೂ ನಡೆಯುತ್ತದೆ. ಯಾರಿಗೂ, ಯಾವುದೂ ಶಾಶ್ವತವಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂಬುದನ್ನು ಶಿವಕುಮಾರ್ ಬಹಿರಂಗ …

Read More »

ಕೇಂದ್ರದಲ್ಲಿ ‘INDIA ಮೈತ್ರಿಕೂಟ’ ಅಧಿಕಾರಕ್ಕೆ ಬಂದ್ರೆ ರೈತರ ಸಂಪೂರ್ಣ ‘ಸಾಲಮನ್ನಾ’- ಡಾ.ಜಿ ಪರಮೇಶ್ವರ್ ಘೋಷಣೆ

ತುಮಕೂರು: ದೇಶದಲ್ಲಿ ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದ್ರೆ ರೈತರ ಸಾಲಮನ್ನಾ ಮಾಡಲಾಗುತ್ತದೆ. ಯುವಕರಿಗೆ, ಮಹಿಳೆಯರ ಖಾತೆಗೆ 1 ಲಕ್ಷ ಹಣ ಹಾಕೋದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ದೇಶದಲ್ಲಿ ಇಂಡಿಯಾ ಮೈತ್ರಿಕೂಟವು ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ, ಅಧಿಕಾರಕ್ಕೆ ಬಂದ್ರೆ ರೈತರ ಸಾಲ ಮನ್ನಾ ಮಾಡೋದಾಗಿ ಘೋಷಣೆ ಮಾಡಿದರು. ದೇಶದಲ್ಲಿ ರೈತರ ರಕ್ಷಣೆಗಾಗಿ ಹೊಸ ಕಾಯ್ದೆ ಜಾರಿ ಮಾಡುತ್ತೇವೆ. ಯುವಕರಿಗೆ ಕೌಶಲ್ಯಾಭಿವೃದ್ಧಿ …

Read More »

ಬಿಜೆಪಿಯಲ್ಲಿ ಯಾವುದೆ ತತ್ವ ಸಿದ್ಧಾಂತ ಉಳಿದಿಲ್ಲ.:ಲಕ್ಷ್ಮಣ ಸವದಿ

ಬೆಳಗಾವಿ: ಬಿಜೆಪಿಯಲ್ಲಿ ಯಾವುದೆ ತತ್ವ ಸಿದ್ಧಾಂತ ಉಳಿದಿಲ್ಲ. ಯಾರು ಚಾರಿತ್ರ್ಯವಂತರು, ಯಾರು ಚಾರಿತ್ರ್ಯಹೀನರು ಎಂಬುವುದನ್ನು ಬಿಜೆಪಿ ನೋಡುತ್ತಿಲ್ಲ. ಚುನಾವಣೆಯಲ್ಲಿ ಪಕ್ಷ ಗೆಲ್ಲಿಸಲು ಯಾರನ್ನು ಬೇಕಾದರೂ ಸೇರಿಸಿಕೊಳ್ಳುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಟೀಕಿಸಿದ್ದಾರೆ. ಸೋಮವಾರ ಅಥಣಿಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷಗಳಿಗೆ ನಮ್ಮ ರಾಜ್ಯದಲ್ಲಿ ನೆಲೆ ಇಲ್ಲ ಎಂಬುದು ಜನಾರ್ದನ ರೆಡ್ಡಿಗೆ ಮನವರಿಕೆ ಆಗಿದೆ. ಆದುದರಿಂದ, ತಮ್ಮ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು …

Read More »

ಎಸ್‌ಎಸ್‌ಎಲ್​ಸಿ ಪರೀಕ್ಷೆ: ಮೊದಲ ಪರೀಕ್ಷೆ ದಿನವೇ ರಾಜ್ಯದಲ್ಲಿ ಮೂವರು ವಿದ್ಯಾರ್ಥಿಗಳು ಸಾವು

ತುಮಕೂರು, (ಮಾರ್ಚ್ 25): ಎಸ್‌ಎಸ್‌ಎಲ್​ಸಿ ಪರೀಕ್ಷೆ (SSLC Exam) ಬರೆಯುತ್ತಿದ್ದ ವೇಳೆ ವಿದ್ಯಾರ್ಥಿ(Student) ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿರುವ ಘಟನೆ ತುಮಕೂರಿನ (Tumakuru) ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಮೋಹನ್ ಕುಮಾರ್ ಸಿ.ಎಸ್ (16) ಮೃತ ವಿದ್ಯಾರ್ಥಿ. ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಮೋಹನ್ ಕುಮಾರ್ ಸಿ.ಎಸ್ ಅಸ್ವಸ್ಥಗೊಂಡಿದ್ದಾನೆ. ಕೂಡಲೇ …

Read More »

ಮೋದಿ.ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದ ತಂಗಡಗಿ

ಮೋದಿ…ಮೋದಿ ಎಂದು ಕೂಗಿದರೆ ಕಪಾಳಕ್ಕೆ ಹೊಡೆಯಿರಿ ಎಂದಿದ್ದ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಬಿಜೆಪಿ, ತಂಗಡಗಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.   ಬೆಂಗಳೂರು, (ಮಾರ್ಚ್ 25): “ಯುವಕರು ಮೋದಿ.. ಮೋದಿ.. ಎಂದರೆ ಕಪಾಳಕ್ಕೆ ಹೊಡಿಯಬೇಕು” ಎನ್ನುವ ಸಚಿವ ಶಿವರಾಜ್ ತಂಗಡಗಿ (Shivaraj tangadagi)ಹೇಳಿಕೆ ವಿರುದ್ಧ ಬಿಜೆಪಿ ಕೆಂಡಾಮಂಡಲವಾಗಿದ್ದು, ನಾವು ಮೋದಿ ಮೋದಿ ಎನ್ನುತ್ತೇವೆ ನಮಗೆ ಹೊಡೆಯಿರಿ ಬನ್ನಿ ಎಂದು ಅಭಿಯಾನ ಮಾದರಿಯಲ್ಲಿ …

Read More »

ಏಪ್ರಿಲ್ 5ಕ್ಕೆ ಬರ್ತಿದೆ ಶರಣ್ ನಟನೆಯ ಹಾರರ್ ಸಿನಿಮಾ

‘ಛೂ ಮಂತರ್’ ಸಿನಿಮಾ ರಿಲೀಸ್​ಗೆ ಒಂದು ತಿಂಗಳು ಬಾಕಿ ಇದೆ. ಹೀಗಾಗಿ, ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡುವ ಕೆಲಸವನ್ನು ತಂಡ ಮಾಡುತ್ತಿದೆ. ಟೀಸರ್ ನೋಡಿದವರಿಗೆ ಸಿನಿಮಾದ ಗುಣಮಟ್ಟದ ಬಗ್ಗೆ ನಿರೀಕ್ಷೆ ಮೂಡುವಂತಾಗಿದೆ. ಶೀಘ್ರವೇ ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ. ನಟ ಶರಣ್ (Sharan) ಅವರು ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಅವರ ನಟನೆಯ ‘ಅವಾತರ ಪುರುಷ 2’ ಸಿನಿಮಾ ಮಾರ್ಚ್​ 22ರಂದು ರಿಲೀಸ್ ಆಗಲಿದೆ ಎಂದು ಘೋಷಣೆ ಆಗಿದೆ. ಈ ಚಿತ್ರದಲ್ಲಿ ಮಾಟ …

Read More »

ಫಾಲೋವರ್ಸ್ ವಿಚಾರದಲ್ಲಿ ಶಾರುಖ್​ನ ಹಿಂದಿಕ್ಕಿದ ಬಾಲ ನಟಿ

ಜನ್ನತ್ ಇನ್‌ಸ್ಟಾಗ್ರಾಮ್‌ನಲ್ಲಿ ಕೋಟ್ಯಂತರ ಅನುಯಾಯಿಗಳನ್ನು ಹೊಂದಿದ್ದಾರೆ. ಫಾಲೋವರ್ಸ್ ವಿಷಯದಲ್ಲಿ ಶಾರುಖ್ ಖಾನ್ ಅವರನ್ನೂ ಮೀರಿಸಿದ್ದಾರೆ. ಜನ್ನತ್ ಇನ್‌ಸ್ಟಾಗ್ರಾಮ್‌ನಲ್ಲಿ 49.2 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ. ಅಂದರೆ 4.92 ಕೋಟಿ. ಶಾರುಖ್ 46.5 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದಾರೆ. ಬಾಲ ಕಲಾವಿದರಾಗಿ ಪ್ರೇಕ್ಷಕರ ಮನದಲ್ಲಿ ವಿಶೇಷ ಛಾಪು ಮೂಡಿಸಿದ ಅನೇಕರು ಇದ್ದಾರೆ. ಅವರು ಬೆಳೆದು ದೊಡ್ಡವಾರದ ಬಳಿಕ ಉದ್ಯಮಕ್ಕೆ ಮರಳಿ ಗೆದ್ದವರೂ ಅನೇಕರಿದ್ದಾರೆ. ಈ ಪಟ್ಟಿಯಲ್ಲಿ ಆಲಿಯಾ ಭಟ್‌ (Alia Bhatt) ಅವರಿಂದ ಹಿಡಿದು ಶ್ರೀದೇವಿಯವರೆಗೆ ಅನೇಕ …

Read More »

ಬೆಳಗಾವಿ ಜಿಲ್ಲೆಯಲ್ಲಿ 1259 ಶತಾಯುಷಿ ಮತದಾರರು

ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಪೈಕಿ ಕುಡಚಿ ಕ್ಷೇತ್ರದಲ್ಲಿ 196 ಜನ ಶತಾಯುಷಿ ಮತದಾರರಿದ್ದರೇ, ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ 12 ಜನ ಶತಾಯುಷಿ ಮತದಾರರಿದ್ದಾರೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ 648 ಶತಾಯುಷಿ ಮತದಾರರಿದ್ದರೆ, ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 569 ಜನ ಶತಾಯುಷಿ ಮತದಾರರಿದ್ದಾರೆ. ಬೆಳಗಾವಿ, ಮಾರ್ಚ್​ 23: ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಬೆಳಗಾವಿ (Belagavi) ಜಿಲ್ಲೆಯಲ್ಲಿ ಅತಿ ಹೆಚ್ಚು ಶತಾಯುಷಿ (Centenarian) ಮತದಾರರಿದ್ದಾರೆ. ಚುನಾವಣಾ ಆಯೋಗದ ಪ್ರಕಾರ, ಜಿಲ್ಲೆಯಲ್ಲಿ …

Read More »

ಬೆಳಗಾವಿಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದ ಜಗದೀಶ್ ಶೆಟ್ಟರ್,ಪ್ರಚಾರಕ್ಕೆ ಹೋಗುತ್ತೇನೆ ಎಂದ ಮಂಗಳಾ ಅಂಗಡಿ

ಬೆಳಗಾವಿ (Belagavi)ಲೋಕಸಭಾ ಕ್ಷೇತ್ರದ ಟಿಕೆಟ್ ನನಗೆ ಸಿಗುವ ವಿಶ್ವಾಸ ಇತ್ತು. ಪಕ್ಷದ ವರಿಷ್ಠರು ನನಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಕೆಲಸ ಮಾಡಲು ನನಗೆ ಅವಕಾಶ ಕೊಟ್ಟಿದ್ದಾರೆ. ಹೀಗಾಗಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ (Jagadish Shettar) ಹೇಳಿದ್ದಾರೆ. ಬೆಳಗಾವಿ ಟಿಕೆಟ್ ಘೋಷಣೆ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶೆಟ್ಟರ್, ಬೆಳಗಾವಿಯಲ್ಲಿ ಮತ್ತೊಮ್ಮೆ ಬಿಜೆಪಿ …

Read More »