Breaking News
Home / ರಾಜಕೀಯ (page 328)

ರಾಜಕೀಯ

ಬಾಂಗ್ಲಾ ವಿರುದ್ಧ ಸೋಲು ಕಂಡ ಭಾರತ…

ಕೊಲಂಬೊ (ಶ್ರೀಲಂಕಾ): ಯುವ ಆಟಗಾರ ಶುಭಮನ್​ ಗಿಲ್​ ಶತಕದ ಹೊರತಾಗಿಯೂ ಭಾರತ ತಂಡ ಬಾಂಗ್ಲಾದೇಶ ವಿರುದ್ದದ ಪಂದ್ಯದಲ್ಲಿ ಮುಗ್ಗಿಸಿದೆ. ಪ್ರಿನ್ಸ್​ ಗಿಲ್​ ಶತಕವು ತಂಡದ ಜಯಕ್ಕೆ ಕೊಡುಗೆ ಆಗಲಿಲ್ಲ, ಅವರ ಆಟ ವ್ಯರ್ಥ ಪ್ರಯತ್ನದಂತಾಯಿತು. ಭಾರತ 49.5 ಓವರ್​ಗೆ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 259 ರನ್​ ಗಳಿಸಲಷ್ಟೇ ಶಕ್ತವಾಯಿತು. ಇದರಿಂದ ಬಾಂಗ್ಲಾ ಆರು ರನ್​ಗಳ​ ಗೆಲುವು ದಾಖಲಿಸಿತು. ಏಷ್ಯಾ ಕಪ್​ ಟೂರ್ನಿಯ ಆರನೇ ಸೂಪರ್​ 4 ಪಂದ್ಯದಲ್ಲಿ ಐದು ಬದಲಾವಣೆಗಳೊಂದಿಗೆ ಮೈದಾನಕ್ಕಿಳಿದ …

Read More »

5 ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್​ ಭರ್ಜರಿ ತಯಾರಿ.

ಹೈದರಾಬಾದ್​: 2024 ರ ಲೋಕಸಭಾ ಚುನಾವಣೆ ಸಮರಕ್ಕೆ ಕಾಂಗ್ರೆಸ್​ ಸಿದ್ಧವಾಗಿದೆ. ನಿರ್ಣಾಯಕ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಸಿದ್ಧತೆಗಳನ್ನು ಭರ್ಜರಿಯಾಗೇ ಆರಂಭಿಸಿದೆ. ಪ್ರಸ್ತುತ ಆರ್ಥಿಕ ಮತ್ತು ರಾಜಕೀಯ ಸಮಸ್ಯೆಗಳು ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​​​​​​​​​ಗೆ ಮರು ಚೇತರಿಕೆ. ಮೈತ್ರಿಗಳೊಂದಿಗೆ ಸಮನ್ವಯ, ಇಂಡಿಯಾ ಒಕ್ಕೂಟದ ಬಲಪಡಿಸುವಿಕೆ ಸೇರಿದಂತೆ ಹಲವು ಮಹತ್ವದ ಅಂಶಗಳ ಬಗ್ಗೆ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸದಸ್ಯರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರ ನೇತೃತ್ವದಲ್ಲಿ, ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ …

Read More »

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಇಂದು ಭಾರತ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮ

ಬೆಂಗಳೂರು : ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ಯ ಅಂಗವಾಗಿ ಇಂದು ಬೆಳಗ್ಗೆ 10:00 ಗಂಟೆಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ, ಬಾಂಕ್ವೆಟ್ ಹಾಲ್‌ನಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತ ಸಂವಿಧಾನದ ಪೀಠಿಕೆಯನ್ನು ಏಕಕಾಲದಲ್ಲಿ ಓದುವ ಕಾರ್ಯಕ್ರಮದಲ್ಲಿ ಅಧಿಕಾರಿ, ಸಿಬ್ಬಂದಿ ಹಾಜರಾಗಬೇಕೆಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಮಾಜ ಕಲ್ಯಾಣ ಸಚಿವರ ನೇತೃತ್ವದಲ್ಲಿ ಬಾಂಕ್ವೆಟ್ ಹಾಲ್‌ನಲ್ಲಿ ಭಾರತ …

Read More »

ಕಾಂತಾರ 2′ ಚಿತ್ರಕ್ಕಾಗಿ 11 ಕೆ.ಜಿ ತೂಕ ಇಳಿಸಿಕೊಂಡ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ

ಬಹುನಿರೀಕ್ಷೆಯ ಕಾಂತಾರ 2 ಸಿನಿಮಾಗಾಗಿ ಡಿವೈನ್ ಸ್ಟಾರ್ ಖ್ಯಾತಿಯ ರಿಷಬ್​ ಶೆಟ್ಟಿ ಸುಮಾರು 11 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ. ಭಾರತೀಯ ಚಿತ್ರರಂಗ ಮಾತ್ರವಲ್ಲದೇ ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಚಿತ್ರ ‘ಕಾಂತಾರ’. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಈ ಸಿನಿಮಾ ಕಳೆದ ವರ್ಷ ತೆರೆಕಂಡು ಬ್ಲಾಕ್‌ ಬಸ್ಟರ್ ಹಿಟ್ ಆಗಿ, ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿತ್ತು. ಕರಾವಳಿ ಭಾಗದ ದೈವಾರಾಧನೆ ಕಥೆ ಹೊಂದಿರುವ …

Read More »

ಉಪ್ಪಿ ಮನವಿ ಈ ವರ್ಷದ ಗಣೇಶ ಹಬ್ಬದಂದು ರಿಯಲ್​ ಸ್ಟಾರ್​ ಉಪೇಂದ್ರ ಅಭಿಮಾನಿಗಳಿಗೆ ಡಬಲ್​ ಖುಷಿ. ಒಂದೆಡೆ ಇಡೀ ದೇಶವೇ ಗಣೇಶ ಚತುರ್ಥಿಯ ಸಂಭ್ರಮದಲ್ಲಿ ಮುಳುಗಿದ್ರೆ, ಈ ಕಡೆ ಉಪ್ಪಿಗೆ ಹುಟ್ಟುಹಬ್ಬದ ಸಂಭ್ರಮ. ಅದರ ಜೊತೆಗೆ ಎಂಟು ವರ್ಷಗಳ ಬಳಿಕ ಆಯಕ್ಷನ್ ಕಟ್​ ಹೇಳಿರುವ ಯುಐ ಸಿನಿಮಾದ ಟೀಸರ್​ ಲಾಂಚ್​ ಕಾರ್ಯಕ್ರಮವಿದೆ. ಹೀಗಾಗಿ ಉಪ್ಪಿ ಸೆಪ್ಟೆಂಬರ್​ 18ರಂದು ಫುಲ್​ ಬ್ಯುಸಿಯಾಗಿರುತ್ತಾರೆ. ​ಈ ಕಾರಣಕ್ಕಾಗಿ ಅವರು ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಬರ್ತ್​ಡೇ ದಿನ ಮನೆಯಲ್ಲಿ ಸಿಗಲ್ಲ ಉಪ್ಪಿ!: “ಎಲ್ಲಾ ಅಭಿಮಾನಿ ದೇವರುಗಳಿಗೆ ನಮಸ್ಕಾರ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಸೆಪ್ಟೆಂಬರ್​ 18 ಈ ವರ್ಷ ಬಾರಿ ವಿಶೇಷ. ಯಾಕಂದ್ರೆ ಗಣೇಶ ಚತುರ್ಥಿ ಹಬ್ಬ ಆ ದಿನಾನೇ. ಅಭಿಮಾನಿಗಳ ಹಬ್ಬನೂ ಅದೇ ದಿನ. ನಿಮ್ಮೆಲ್ಲರ ಬಹುನಿರೀಕ್ಷಿತ ‘ಯುಐ’ ಸಿನಿಮಾದ ಟೀಸರ್​ ಕೂಡ ಅಂದೇ ಲಾಂಚ್​ ಮಾಡುತ್ತಿದ್ದೇವೆ. ಈ ಪ್ರಯುಕ್ತ ನಾನು ತುಂಬಾ ಬ್ಯುಸಿ ಇರುತ್ತೇನೆ. ಸೆಪ್ಟೆಂಬರ್​ 17ರ ರಾತ್ರಿ ಅಥವಾ 18ರ ಬೆಳಗ್ಗೆ ಕತ್ರಿಗುಪ್ಪೆ ಹಾಗೂ ಸದಾಶಿವನಗರದ ಮನೆಯಲ್ಲಿ ಸಿಗುವುದಿಲ್ಲ. ನನಗೆ ತುಂಬಾ ಕೆಲಸಗಳಿರುವುದರಿಂದ ಸೆಪ್ಟೆಂಬರ್​ 18ರಂದು ಮಧ್ಯಾಹ್ನ 2 ಗಂಟೆಯ ಮೇಲೆ ಊರ್ವಶಿ ಥಿಯೇಟರ್​ನಲ್ಲಿ ನಿಮಗಾಗಿ ಕಾಯುತ್ತಿರುತ್ತೇನೆ. ನೀವೆಲ್ಲರೂ ಅಲ್ಲೇ ಬನ್ನಿ. ಕೇಕ್​ ಕತ್ತರಿಸೋಣ. ಎಲ್ಲ ಸಂಭ್ರಮವನ್ನು ಆಚರಿಸೋಣ. 2 ಗಂಟೆಯಿಂದ 8 ಗಂಟೆಯವರೆಗೂ ಈ ಸಂಭ್ರಮಾಚರಣೆ ಇರುತ್ತದೆ. 6 ಗಂಟೆಯ ನಂತರ ಥಿಯೇಟರ್​ ಒಳಗಡೆ ‘ಯುಐ’ ಟೀಸರ್​ ಲಾಂಚ್ ಮಾಡುತ್ತೇವೆ. ಬನ್ನಿ, ಎಲ್ಲರೂ ಪಾಲ್ಗೊಳ್ಳೋಣ” ಎಂದು ರಿಯಲ್​ ಸ್ಟಾರ್​ ಉಪೇಂದ್ರ ವಿಡಿಯೋ ಮೂಲಕ ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ. ಪ್ಯಾನ್​​ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಆಗುತ್ತಿರುವ ಯುಐ ಚಿತ್ರದಲ್ಲಿ ನಟ ಉಪೇಂದ್ರ ನಟಿಸುವುದರ ಜೊತೆಗೆ ಆಯಕ್ಷನ್​ ಕಟ್​ ಕೂಡ ಹೇಳಿದ್ದಾರೆ. ಉಪ್ಪಿ 2 ಸಿನಿಮಾ ಬಳಿಕ ಉಪೇಂದ್ರ ಡೈರೆಕ್ಟರ್​ ಕ್ಯಾಪ್​ ತೊಟ್ಟ ಚಿತ್ರವಿದು. ಉಪ್ಪಿ 2 ಸಿನಿಮಾ 2015ರಲ್ಲಿ ತೆರೆಕಂಡಿತ್ತು. ಉಪೇಂದ್ರ ಅವರ ನಟನೆಗೆ ಮಾತ್ರವಲ್ಲ, ನಿರ್ದೇಶನ ಶೈಲಿಗೂ ಕೂಡ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಇವರು ನಟಿಸುವುದರ ಜೊತೆಗೆ ನಿರ್ದೇಶನ ಮಾಡಿರುವ ಯುಐ ಚಿತ್ರದ ಟೀಸರ್ ಸೆಪ್ಟಂಬರ್​ 18ರಂದು ಅವರ ಹುಟ್ಟುಹಬ್ಬದ ದಿನವೇ ಅನಾವರಣಗೊಳ್ಳಲು ತಯಾರಾಗಿದೆ. ಸದ್ಯ ಯುಐ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಎಡಿಟಿಂಗ್​ ಕೆಲಸ ನಡೆಯುತ್ತಿದೆ. ಉಪೇಂದ್ರ ಈ ಚಿತ್ರದಲ್ಲಿ 3ಡಿ ಬಾಡಿ ಸ್ಕ್ಯಾನ್​ ಬಳಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಕ್ಯಾಮರಾಗಳನ್ನು ಬಳಸಿ ಶೂಟ್​ ಮಾಡಲಾಗಿದ್ದು, ಈ ತಂತ್ರಜ್ಞಾನ ಬಳಸಿದ್ದು ಏಷ್ಯಾದಲ್ಲಿಯೇ ಮೊದಲ ಸಿನಿಮಾ ಎನ್ನಲಾಗಿದೆ. ಹೊಸ ತಂತ್ರಜ್ಞಾನವನ್ನು ಜೇಮ್ಸ್​ ಕ್ಯಾಮರಾನ್​ ‘ಅವತಾರ್​ 2’ ಸಿನಿಮಾಗೆ ಬಳಸಲಾಗಿತ್ತು. ಇಷ್ಟೇ ಅಲ್ಲ, ಸುಮಾರು 14 ಸಾವಿರ ವಿಎಫ್​ಎಕ್ಸ್​ ಶಾಟ್ಸ್​ ಅನ್ನು ಬಳಸಲಾಗಿದೆ. ಹಿಂದೆಂದೂ ಕನ್ನಡದಲ್ಲಿ ಈ ಟೆಕ್ನಾಲಜಿ ಬಳಸಿಲ್ಲ ಅನ್ನೋದು ಗಮನಾರ್ಹ. ಉಪ್ಪಿ ನಿರ್ದೇಶಿಸಿದ ಈವರೆಗಿನ ಸಿನಿಮಾಗಳಲ್ಲಿ ಇದು ದುಬಾರಿ ಎನ್ನಲಾಗಿದೆ. ಸಿನಿಮಾ ಬಜೆಟ್​ ಸುಮಾರು 100 ಕೋಟಿ ರೂಪಾಯಿ ಎಂದು ವರದಿಯಾಗಿದೆ. ಅಲ್ಲದೇ ತಾಂತ್ರಿಕವಾಗಿಯೂ ಈ ಚಿತ್ರ ಅಡ್ವಾನ್ಸ್​ ಆಗಿರುತ್ತೆ ಅನ್ನೋದು ಗೊತ್ತಾಗಿದೆ. ಮತ್ತೊಂದೆಡೆ ಯುಐ ಚಿತ್ರ ರಿಲೀಸ್​ ಯಾವಾಗ? ಅನ್ನೋ ಪ್ರಶ್ನೆ ಅಭಿಮಾನಿಗಳ ವಲಯದಲ್ಲಿದೆ. ನಿರ್ಮಾಪಕರ ಮೂಲಗಳ ಪ್ರಕಾರ, ಈ ಸಿನಿಮಾ ವರ್ಷದ ಕೊನೆಯಲ್ಲಿ ಬಿಡುಗಡೆಯಾಗಬಹುದು ಎನ್ನಲಾಗಿದೆ. ಸದ್ಯ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣವಾಗುತ್ತಿರುವ ಹೈ ಬಜೆಟ್​ ಚಿತ್ರಗಳಲ್ಲಿ ಯುಐ ಕೂಡ ಒಂದು. ಹಲವಾರು ಸ್ಪೆಷಾಲಿಟಿಗಳಿಗೆ ಸೌತ್​ ಇಂಡಸ್ಟ್ರಿಯಲ್ಲಿ ಟಾಕ್​ ಆಗುತ್ತಿರುವ ಈ ಚಿತ್ರದ ಮೂಲಕ ಉಪ್ಪಿ ಪ್ರೇಕ್ಷಕರಿಗೆ ಏನು ಹೇಳಲು ಹೊರಟಿದ್ದಾರೆ ಅನ್ನೋದನ್ನು ಕಾದು ನೋಡಬೇಕು.

ಉಪ್ಪಿ ಮನವಿಈ ವರ್ಷದ ಗಣೇಶ ಹಬ್ಬದಂದು ರಿಯಲ್​ ಸ್ಟಾರ್​ ಉಪೇಂದ್ರ ಅಭಿಮಾನಿಗಳಿಗೆ ಡಬಲ್​ ಖುಷಿ. ಒಂದೆಡೆ ಇಡೀ ದೇಶವೇ ಗಣೇಶ ಚತುರ್ಥಿಯ ಸಂಭ್ರಮದಲ್ಲಿ ಮುಳುಗಿದ್ರೆ, ಈ ಕಡೆ ಉಪ್ಪಿಗೆ ಹುಟ್ಟುಹಬ್ಬದ ಸಂಭ್ರಮ. ಅದರ ಜೊತೆಗೆ ಎಂಟು ವರ್ಷಗಳ ಬಳಿಕ ಆಯಕ್ಷನ್ ಕಟ್​ ಹೇಳಿರುವ ಯುಐ ಸಿನಿಮಾದ ಟೀಸರ್​ ಲಾಂಚ್​ ಕಾರ್ಯಕ್ರಮವಿದೆ. ಹೀಗಾಗಿ ಉಪ್ಪಿ ಸೆಪ್ಟೆಂಬರ್​ 18ರಂದು ಫುಲ್​ ಬ್ಯುಸಿಯಾಗಿರುತ್ತಾರೆ. ​ಈ ಕಾರಣಕ್ಕಾಗಿ ಅವರು ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಬರ್ತ್​ಡೇ …

Read More »

S.P. ಡಾ: ಭೀಮಾಶಂಕರ ಎಸ್ ಗುಳೇದ ಅವರಿಗೆ ಪುಷ್ಪಗುಚ್ಛ ನೀಡಿ  ಸನ್ಮಾನಿಸಿದ: ಸೋಮಶೇಖರ್ ಹುಡೆದ

ಅಲಿಯನ್ಸ್ ಕ್ಲಬ್ ಬೆಳಗಾವಿ ಸ್ಮಾರ್ಟ್ ಸಿಟಿ,ಅಲಿಯನ್ಸ್ ಅಂತರಾಷ್ಟ್ರೀಯ ಸೇವಾ ಸ್ಥಾಪಕ ಜಿಲ್ಲಾ ಗವರ್ನರ್ ದಿನಕರ್ ಶೆಟ್ಟಿ ಹಾಗೂ ಅಲಯನ್ಸ್ ಕ್ಲಬ್ ಸದಸ್ಯರಾದ ಸೋಮಶೇಖರ್ ಹುಡೆದ ಮತ್ತು ಬೈಲಹೊಂಗಲ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಹಾಗೂ ಉದ್ಯಮಿ ಸುಧಾಕರ್ ಶೆಟ್ಟಿ ಮತ್ತು ಅಲಿಯನ್ಸ್ ಕ್ಲಬ್ ಬೆಳಗಾವಿ ಸ್ಮಾರ್ಟ್ ಅಧ್ಯಕ್ಷರಾದ ಹೋಟೆಲ್ ಉದ್ಯಮಿ ಪ್ರಭಾಕರ್ ಶೆಟ್ಟಿ ಅವರು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಡಾ: ಭೀಮಾಶಂಕರ ಎಸ್ ಗುಳೇದ ಅವರಿಗೆ ಪುಷ್ಪಗುಚ್ಛ …

Read More »

ದೇವಾಲಯಗಳ ಆವರಣ ಹಾಗೂ ಸುತ್ತಮುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಬಳಕೆ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು : ದೇವಾಲಯಗಳ ಆವರಣ ಹಾಗೂ ಸುತ್ತಮುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಬಳಕೆ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇಗುಲಗಳ ಸುತ್ತಮುತ್ತ ಬೀಡಿ, ಸಿಗರೇಟ್, ಪಾನ್ ಮಸಾಲ, ಗುಟ್ಕಾ ದಂತಹ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು ಎಂಬ ಆದೇಶ ಶೀಘ್ರದಲ್ಲೇ ಹೊರಬೀಳಲಿದೆ. ದೇವಾಲಯದ ಹೊರಭಾಗದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹೆಚ್ಚಾಗಿದ್ದು, ಗುಟ್ಕಾ ತಿಂದು ಕಾಂಪೌಂಡ್ ಸುತ್ತಮುತ್ತ ಉಗಿಯುತ್ತಾರೆ. …

Read More »

ಮೊರಾರ್ಜಿ ದೇಸಾಯಿ ವಸತಿ‌ ಶಾಲೆಗೆ ಅಥಣಿ ಶಾಸಕ‌ ಲಕ್ಷ್ಮಣ ಸವದಿ ಭೇಟಿ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ‌ ಶಾಲೆಗೆ ಅಥಣಿ ಶಾಸಕ‌ ಲಕ್ಷ್ಮಣ ಸವದಿ ಭೇಟಿ ನೀಡಿದರು. ಈ ವೇಳೆ ವಿದ್ಯಾರ್ಥಿಗಳು ಹೂಗುಚ್ಛ ನೀಡಿ ಸ್ವಾಗತಿಸಿದರು. ಮೊರಾರ್ಜಿ ದೇಸಾಯಿ ವಸತಿ‌ ಶಾಲೆಗೆ ಭೇಟಿ ನೀಡಿದ ವೇಳೆ ಮಕ್ಕಳೊಂದಿಗೆ ಊಟ ಮಾಡಿದರು. ಅನಂತರ ವಸತಿ ನಿಲಯದಲ್ಲಿ ಸರಿಯಾದ ಸಮಯಕ್ಕೆ ಮೆನು ಪ್ರಕಾರ ಉಪಹಾರ, ಊಟ ನೀಡುತ್ತಿದ್ದಾರೆಯೇ? ಇಲ್ಲಿ ಏನಾದರೂ ಸಮಸ್ಯೆಗಳಿವೆಯೇ? ಎನ್ನುವುದನ್ನು ವಿದ್ಯಾರ್ಥಿಗಳಿಗೆ ಪ್ರಶ್ನೆ ಮಾಡಿ ಕೇಳಿ …

Read More »

ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್​ಗಳ ಪಾತ್ರ ಪ್ರಮುಖವಾಗಿದೆ.: ಪ್ರಧಾನಿ

ಬೆಂಗಳೂರು: ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್​ಗಳ ಪಾತ್ರ ಪ್ರಮುಖವಾಗಿದೆ. ಇಂಜಿನಿಯರಿಂಗ್​ ಕ್ಷೇತ್ರಕ್ಕೆ ದೇಶಕ್ಕೆ ಅಪಾರ ಕೊಡುಗೆಯನ್ನು ನೀಡಿದವರಲ್ಲಿ ಪ್ರಮುಖರು ಕರ್ನಾಟಕದ ಮೋಕ್ಷಗುಂಡಂ ವಿಶ್ವೇಶ್ವರಯ್ಯ. ಇಂಜಿನಿಯರಿಂಗ್​ ಕ್ಷೇತ್ರದಲ್ಲಿ ಅವರು ನೀಡಿದ ಕೊಡುಗೆ ಸ್ಮರಣಾರ್ಥವಾಗಿ ಪ್ರತಿ ವರ್ಷ ಅವರ ಜನ್ಮ ದಿನವನ್ನು ಅಂದರೆ ಸೆಪ್ಟೆಂಬರ್​ 15ರಂದು ರಾಷ್ಟ್ರೀಯ ಇಂಜಿನಿಯರ್ಸ್​​​ ದಿನ ಎಂದು ಗುರುತಿಸಲಾಗಿ, ಆಚರಣೆ ಮಾಡಲಾಗುತ್ತಿದೆ. ರಾಷ್ಟ್ರೀಯ ಇಂಜಿನಿಯರ್ಸ್​​​ ದಿನವನ್ನು ಮೊದಲ ಬಾರಿಗೆ 1968ರಲ್ಲಿ ಆಚರಿಸಲಾಯಿತು. ಈ ದಿನವನ್ನು ತಾಂತ್ರಿಕ ಶಿಕ್ಷಣದಲ್ಲಿ ಅತ್ಯಂತ ಪ್ರಮುಖ ದಿನವಾಗಿ …

Read More »

ವಿಚಾರಣೆ ವೇಳೆ ಚೈತ್ರಾ ಕುಂದಾಪುರ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಉದ್ಯಮಿಯೊಬ್ಬರಿಗೆ ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ವಂಚನೆ ಮಾಡಿರುವ ಆರೋಪ ಸಂಬಂಧ ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಅವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಮಹಿಳಾ ಸಾಂತ್ವನ ಕೇಂದ್ರದಿಂದ ಬಂದ ಅರ್ಧ ಗಂಟೆಯಲ್ಲೇ ಚೈತ್ರಾ ಮೂರ್ಛೆ ಹೋಗಿದ್ದಾರೆ. ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಚೈತ್ರಾ ಬೆಳಗಿನ ಟಿಫಿನ್ ಕೂಡ ಮಾಡಿರಲಿಲ್ಲ ಎಂಬ ಮಾಹಿತಿ ಇದೆ. ಏನಿದು ಪ್ರಕರಣ: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ …

Read More »