Breaking News
Home / ರಾಜಕೀಯ (page 332)

ರಾಜಕೀಯ

ಕಡೋಲಿ ಗ್ರಾಮದಲ್ಲಿ ಪ್ರೌಡಶಾಲೆ ಸಶ್ಯ ಶಾಮಲಾ ಕಾರ್ಯಕ್ರಮ

ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿನ ಸರಕಾರಿ ಕನ್ನಡ ಮಾದ್ಯಮದ ಪ್ರೌಡಶಾಲೆ ಶಾಲೆಯಲ್ಲಿ ಜಿಲ್ಹಾ ಮಟ್ಟದ ಸಶ್ಯ ಶಾಮಲಾ ಕಾರ್ಯಕ್ರಮ ಜರುಗಿತು ಸಸಿಗೆ ನಿರು ಹಾಕುವ ಮುಲಕ ಕಾರ್ಯಕ್ರಮಕ್ಕೆ ಚಾಲನೆ ನಿಡಲಾಯಿತು.ಶಾಲೆಯಲ್ಲಿನ ಕಾರ್ಯನಿರತ ಶಿಕ್ಷಕಿ ಶ್ರೀಮತಿ ಎಮ್ಮ.ಆಯ್.ಬುಳ್ಳಾ ಇವರಿಗೆ ಜಿಲ್ಹಾ ಆದರ್ಶ ಶಿಕ್ಷಕಿ ಪುರಸ್ಕಾರ ದೊರೆತ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯಿಂದ ಗೌರವಿಸಲಾಯಿತು. ಪ್ಲೊ ಕೆಪಿಸಿಸಿ ಸದಸ್ಯ ಮಲಗೌಡ ಅವರು ಮಾತನಾಡುತ್ತಾ ಇವತ್ತು ಇಡಿ ವಿಶ್ವದಲ್ಲಿಯೇ ಪರಿಸರ ರಕ್ಷಣೆ ಒಂದು ಗಂಭಿರ ಪ್ರಶ್ನೆಯಾಗಿದೆ …

Read More »

ಸುಕ್ಷೇತ್ರ ಸುಳೇಭಾವಿ ಶ್ರೀ ಮಹಾಲಕ್ಷಿ ದೇವಿಗೆ ಶ್ರಾವಣ ಮಾಸದ ಕೊನೆಯ ಮಂಗಳವಾರ ಬಳೆಯ ಅಲಂಕಾರ

ಸುಕ್ಷೇತ್ರ ಸುಳೇಭಾವಿ ಶ್ರೀ ಮಹಾಲಕ್ಷಿ ದೇವಿಗೆ ಶ್ರಾವಣ ಮಾಸದ ಕೊನೆಯ ಮಂಗಳವಾರ ಬಳೆಯ ಅಲಂಕಾರ ಮಾಡಲಾಗಿದ್ದು, ಭಕ್ತರು ಶ್ರದ್ಧಾಭಕ್ತಿಯಿಂದ ದೇವಿಗೆ ಉಡಿ ತುಂಬಿದರು. ಬೆಳಗ್ಗೆಯಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತ ಸಾಗರ ದೇವಸ್ಥಾನಕ್ಕೆ ಆಗಮಿಸಿತ್ತು. ಬೆಳಗ್ಗೆ 4 ಗಂಟೆಯಿಂದ ಸರದಿ ಸಾಲಿನಲ್ಲಿ ನಿಂತಿದ್ದ ಭಕ್ತರು ದೇವಿಗೆ ಉಡಿ ತುಂಬಿದರು. ಶ್ರಾವಣ ಮಾಸದ ಕೊನೆಯ ಮಂಗಳವಾರ ಪ್ರತಿ ವರ್ಷ ಗ್ರಾಮಸ್ಥರು ಉಡಿ ತುಂಬುವ ಸಂಪ್ರದಾಯವಿದ್ದು, ಅದರಂತೆ ಗ್ರಾಮಸ್ಥರು ದೇವಿಗೆ ಉಡಿ ತುಂಬಿ ಪುನೀತರಾದರು. …

Read More »

ಕಸ ಎಸೆಯದಂತೆ ಹೇಳಿದ್ದಕ್ಕೆ ಪೌರಕಾರ್ಮಿಕರ ಮೇಲೆ ಹಲ್ಲೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಕಾರವಾರ (ಉತ್ತರಕನ್ನಡ): ಕಸ ಎಸೆಯದಂತೆ ಹೇಳಿದ್ದಕ್ಕೆ ಪೌರಕಾರ್ಮಿಕನ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನೊಬ್ಬ ರಸ್ತೆ ಬದಿ ಕಸ ಹಾಕಲು ಮುಂದಾಗಿದ್ದಾನೆ. ಈ ವೇಳೆ ಕಸ ಹಾಕದಂತೆ ತಡೆದ ಪೌರಕಾರ್ಮಿಕನಿಗೆ ಭಯಂಕರವಾಗಿ ಥಳಿಸಲಾಗಿದೆ. ಚೇತನಕುಮಾರ್ ಕೊರಾರ ಹಲ್ಲೆಗೊಳಗಾದ ಪೌರಕಾರ್ಮಿಕ ಆಗಿದ್ದಾನೆ. ಈ ಸಂಬಂಧ ಪೌರಕಾರ್ಮಿಕರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ಕೂಡಾ ನಡೆಸಿದ್ದಾರೆ. ಹಲ್ಲೆಗೊಳಗಾದ ಚೇತನ್​ ಕುಮಾರ್​ ಕಾರವಾರ …

Read More »

ಐಫೋನ್​ 15 ಪ್ರೊ, ಪ್ರೊ ಮ್ಯಾಕ್ಸ್​ ಬಿಡುಗಡೆ: 48 MP ಕ್ಯಾಮರಾ, ಯುಎಸ್‌ಬಿ-ಸಿ ಟೈಪ್ ಚಾರ್ಜರ್‌ ಇನ್ನೂ ಏನೆಲ್ಲಾ!

ಕ್ಯಾಲಿಫೋರ್ನಿಯಾ (ಯುಎಸ್‌ಎ): ಆಯಪಲ್ ಕಂಪೆನಿಯು ತನ್ನ ಪ್ರಧಾನ ಕಚೇರಿ ಇರುವ ಅಮೆರಿಕದ ಆಯಪಲ್ ಪಾರ್ಕ್ ಕ್ಯುಪರ್ಟಿನೊದಲ್ಲಿ ಮಂಗಳವಾರ ‘ವಾಂಡರ್‌ಲಸ್ಟ್’ ಹೆಸರಿನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದು, ಆಯಪಲ್‌ ಮೊಬೈಲ್‌ಪ್ರಿಯರಿಗೆ ಸಿಹಿಸುದ್ದಿ ನೀಡಿದೆ. ಟೆಕ್ ದೈತ್ಯ ತನ್ನ ಹೊಸ, ಉನ್ನತ ಮಟ್ಟದ ಐಫೋನ್‌ಗಳನ್ನು (iPhone 15 Pro ಮತ್ತು 15 Pro Max) ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಮೊಬೈಲ್‌ಗಳಲ್ಲಿ ಹೆಚ್ಚು ಪ್ರೀಮಿಯಂ ಅನ್ನಿಸುವ ವಸ್ತುಗಳನ್ನು ಬಳಸಲಾಗಿದೆ ಎಂದು ಕಂಪೆನಿ ಹೇಳಿಕೊಂಡಿದೆ. ಇದೇ ಮೊದಲ …

Read More »

ಬೀದರ್​: ಕುಡಿಯಲು ಹಣ ನೀಡುವಂತೆ ಪೀಡಿಸಿ ಹೆತ್ತ ತಾಯಿಯನ್ನೇ ಕೊಂದ ಪುತ್ರ

ಬೀದರ್: ಹೆತ್ತ ತಾಯಿಯನ್ನೇ ಮಗ ಕೊಡಲಿಯಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಟ್ಟಣದ ಚೆಟ್ಟಿ ಗಲ್ಲಿಯಲ್ಲಿ ಮಂಗಳವಾರ ನಡೆದಿದೆ. ಶಂಕುತಲಾ ರಾಜಕುಮಾರ ಸಿಂಧೆ (55) ಹತ್ಯೆಯಾದವರು. ಮಗ ದೀಪಕ ಆರೋಪಿ. ದೀಪಕ ಕುಡಿತದ ಚಟಕ್ಕೆ ದಾಸನಾಗಿದ್ದ. ಪ್ರತಿನಿತ್ಯ ಹಣ ನೀಡುವಂತೆ ತಾಯಿಯೊಂದಿಗೆ ಜಗಳವಾಡುತ್ತಿದ್ದ ಎಂದು ಸಂಬಂಧಿಕರು ತಿಳಿಸಿದ್ದಾರೆ. ಮಂಗಳವಾರವೂ ಸಹ ಕುಡಿಯಲು ಹಣ ನೀಡುವಂತೆ ಜಗಳ ಮಾಡಿದ್ದಾನೆ. ಈ ಜಗಳ ವಿಕೋಪಕ್ಕೆ ತಿರುಗಿದೆ. ಕುಪಿತ ಆರೋಪಿ ಕೊಡಲಿಯಿಂದ ತಾಯಿಯ …

Read More »

ಗಣೇಶ ಹಬ್ಬಕ್ಕೆ ವಿಶೇಷ ಬಸ್ ಗಳ ವ್ಯವಸ್ಥೆ

ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ ಘೋಷಣೆ ಬೆನ್ನಲ್ಲೆ NWKRTC ಸಹ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಬಿಡುವುದಾಗಿ ತಿಳಿಸಿದೆ.  ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC)ಯಿಂದ ಗೌರಿ ಗಣೇಶದ ಮುಗಿಸಿ ಉತ್ತರ ಕರ್ನಾಟಕದಿಂದ ತಮ್ಮ ಕೆಲಸದ ಊರುಗಳಿಗೆ ತೆರಳುವವರಿಗೆ ನೆರವಾಗಲೆಂದು 500ಕ್ಕೂ ಅಧಿಕ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ನಡೆಸುವುದಾಗಿ ತಿಳಿಸಿದೆ. ಸೋಮವಾರ ಗಣೇಶ ಚತುರ್ಥಿ ಇದೆ. ಅಲ್ಲದೇ ಶನಿವಾರ, ಭಾನುವಾರ ವಾರಾಂತ್ಯ ಇರುವುದರಿಂದ ಬಹುತೇಕ ಮಂದಿ …

Read More »

ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಸೇರಿ 6 ಆರೋಪಿಗಳ ಬಂಧನ

ಬೆಂಗಳೂರು/ಉಡುಪಿ: ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ, ಹಾಗು ಸಾಮಾಜಿಕ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ 6 ಮಂದಿ ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ‌.   ಚೈತ್ರಾ ಕುಂದಾಪುರ, ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್ (ವಿಶ್ವನಾಥ್ ಪಾತ್ರಧಾರಿ), ಧನರಾಜ್, ಶ್ರೀಕಾಂತ್ ಹಾಗೂ ಪ್ರಜ್ವಲ್ ಬಂಧಿತರು. ವಂಚನೆಗೊಳಗಾದ ಉದ್ಯಮಿ ಗೋವಿಂದ ಬಾಬು ಪೂಜಾರಿ ಬಂಡೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿತ್ತು. 3 ಪ್ರತ್ಯೇಕ …

Read More »

ಮಾರುಕಟ್ಟೆಯಲ್ಲಿ ಮಹಾರಾಷ್ಟ್ರದ ಈರುಳ್ಳಿಯದ್ದೇ ದರ್ಬಾರ್

ದಾವಣಗೆರೆ: ಜಿಲ್ಲೆಯಲ್ಲಿ ಮಳೆ ಅಭಾವದಿಂದ ಈರುಳ್ಳಿ ಬೆಳೆ ಕುಂಠಿತವಾಗಿದೆ. ಇದರ ಪರಿಣಾಮ, ಸ್ಥಳೀಯ ಮಾರುಕಟ್ಟೆಯಲ್ಲಿ ಮಹಾರಾಷ್ಟ್ರದ ನಾಸಿಕ್ ಈರುಳ್ಳಿಯದ್ದೇ ದರ್ಬಾರ್ ಮುಂದುವರೆದಿದೆ. ಸಾಮಾನ್ಯವಾಗಿ ಗಣೇಶ ಹಬ್ಬ ಹಾಗೂ ದಸರಾ ನಂತರ ಈರುಳ್ಳಿ ಬೆಲೆ ಗಗನಕ್ಕೇರುತ್ತಿತ್ತು. ಈ ಬಾರಿ ಅದಕ್ಕೂ ಮುನ್ನವೇ ಬೆಲೆ ಏರಿದೆ. ಸ್ಥಳೀಯವಾಗಿ ಈರುಳ್ಳಿ ಬೆಳೆಯಲು ಮಳೆ ಕೊರತೆಯಾಗಿದೆ. ದಾವಣಗೆರೆಗೆ ನಾಸಿಕ್‌ ಈರುಳ್ಳಿ ಲಗ್ಗೆಯಿಟ್ಟಿದ್ದು, ಕೆಜಿಗೆ 27 ರೂಪಾಯಿಗೆ ಮಾರಾಟವಾಗುತ್ತಿದೆ. ಟೊಮೆಟೊ ಬಳಿಕ ಈರುಳ್ಳಿ ಬೆಲೆ ಗಗನಕ್ಕೇರಲಿದೆ ಎಂಬುದನ್ನು ಮನಗಂಡು …

Read More »

ಕೃಷ್ಣಾ, ತುಂಗಭದ್ರಾ ನದಿಗಳಲ್ಲಿ ಮೊಸಳೆ ಸಂತತಿ: ಜನರಲ್ಲಿ ಆತಂಕ

ರಾಯಚೂರು: ಜಿಲ್ಲೆಯ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳು ವಿಶಾಲ ಪ್ರದೇಶದಲ್ಲಿ ಹರಿಯುತ್ತಿವೆ. ನದಿಗಳ ಎರಡೂ ತೀರಗಳ ಸಮೀಪದಲ್ಲಿ ರೈತರು ವ್ಯವಸಾಯ ಮಾಡುತ್ತಿದ್ದಾರೆ. ಈ ನದಿಗಳಲ್ಲಿ ಮೊಸಳೆಗಳ ಸಂತತಿ ಹೆಚ್ಚಾಗುತ್ತಿದೆ. ಜನರನ್ನು ಮೊಸಳೆ ಕಾಟದ ಭಯ ಆವರಿಸಿದೆ. ಜಿಲ್ಲೆಯ ಬಲಭಾಗದಲ್ಲಿ ಕೃಷ್ಣಾ ಹಾಗೂ ಎಡ ಭಾಗದಲ್ಲಿ ತುಂಗಭದ್ರಾ ನದಿಗಳು ಹರಿಯುತ್ತವೆ. ಕೃಷ್ಣಾ ನೂರಕ್ಕೂ ಹೆಚ್ಚು ಕಿಲೋ‌ ಮೀಟರ್ ಮತ್ತು ತುಂಗಭದ್ರಾ 80 ಕಿಲೋ ಮೀಟರ್​ಗಳವರೆಗೆ ಜಿಲ್ಲೆಯಲ್ಲಿ ಹರಿಯುತ್ತದೆ. ಈಗ ನದಿಯಲ್ಲಿ ನೀರಿನ ಪ್ರಮಾಣ …

Read More »

ಮೈಸೂರು ವಿವಿ ಕುಲಪತಿ ಲೋಕನಾಥ್​ ನೇಮಕಾತಿ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ಕುಲಪತಿಯಾಗಿ ಪ್ರೊ. ಎನ್ ಕೆ ಲೋಕನಾಥ್ ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಮೈಸೂರು ವಿವಿ ಕುಲಪತಿ ಹುದ್ದೆಗೆ ಲೋಕನಾಥ್‌ ಅವರನ್ನು ನೇಮಿಸಿ 2023ರ ಮಾರ್ಚ್ 23ರಂದು ರಾಜ್ಯಪಾಲರು ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಪ್ರೊ. ಶರತ್ ಅನಂತಮೂರ್ತಿ ಮತ್ತು ಡಾ. ಜಿ ವೆಂಕಟೇಶ್‌ ಕುಮಾರ್‌ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್‌ ಎಸ್‌ ಸಂಜಯ್‌ ಗೌಡ ಅವರ …

Read More »