ಹುಬ್ಬಳ್ಳಿ: ಕಳೆದ ನಾಲ್ಕು ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿದ್ದ ಚೆನ್ನಮ್ಮ ವೃತ್ತದ ಬಳಿಯ ಫ್ಲೈ ಓವರ್ ಕಾಮಗಾರಿ ತ್ವರಿತಗತಿಯಲ್ಲಿ ನಡೆಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಮೆಲ್ಸೇತುವೆ ಕಾಮಗಾರಿ ತ್ವರಿತಗೊಳಿಸುವ ಸಂಬಂಧ ಏ. 20ರಿಂದ ನಾಲ್ಕು ತಿಂಗಳ ಹಿಂದಷ್ಟೆ ಹೊಸದಾಗಿ ನಿರ್ಮಿಸಿರುವ ಹಳೇ ಬಸ್ ನಿಲ್ದಾಣ (ನಗರ ಪ್ರಾದೇಶಿಕ ಬಸ್ ನಿಲ್ದಾಣ) ವನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ. ಬಸವವನದಿಂದ ಚನ್ನಮ್ಮ ವೃತ್ತದವರೆಗೆ 500 ಮೀಟರ್, ಚನ್ನಮ್ಮ ವೃತ್ತದಿಂದ ಹಳೇ ಕೋರ್ಟ್ ವೃತ್ತದವರೆಗೆ 150 …
Read More »ಸಿಎಂ ಸಿದ್ದರಾಮಯ್ಯ ಅವರು ಮುಂದಿನ ಎರಡು ವರ್ಷಗಳಲ್ಲಿ ಪೋಡಿಮುಕ್ತ ಗ್ರಾಮಗಳಾಗಬೇಕು ಎಂದು ಸೂಚನೆ ನೀಡಿದ್ದಾರೆ.
ಬೆಂಗಳೂರು : ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ, ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ಎಡಿಎಲ್ಆರ್ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಇಂದು ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು …
Read More »ಇಳಕಲ್ ನಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಕಳ್ಳತನ ಮಾಡಿ ಬಂಗಾರ, ಬೆಳ್ಳಿ ನಗದು ದೋಚಿ ಪರಾರಿಯಾದ ಕಳ್ಳರು
ಬಾಗಲಕೋಟೆ : ಇಳಕಲ್ ನಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಕಳ್ಳತನ ಮಾಡಿ ಬಂಗಾರ, ಬೆಳ್ಳಿ ನಗದು ದೋಚಿ ಪರಾರಿಯಾದ ಕಳ್ಳರು ಬಾಗಲಕೋಟೆ ಜಿಲ್ಲೆ ಇಳಕಲ್ಲ ನಗರದಲ್ಲಿ ಹಾಡಹಗಲೇ ಕಳ್ಳತನ ಮಾಡಿ ಪರಾರಿಯಾಗಿದ್ದು ಕಳ್ಳರ ಹಾವಳಿ ಹೆಚ್ಚಾಗಿದ್ದರಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ ಕಳೆದ ಒಂದು ವರ್ಷದಿಂದ ನಗರದಲ್ಲಿ ಅಲ್ಲಲ್ಲಿ ಮನೆಗಳ್ಳತನಗಳು ನಡೆಯುತ್ತಲೇ ಇವೆ. ಬುಧವಾರ ಹಾಡ ಹಗಲೇ ಯಾರೂ ಇಲ್ಲದ ವೇಳೆ ಹೂಂಚು ಹಾಕಿದ ಖದೀಮರು ಬಸವ ನಗರದ ಸಾಯಿ ಬಡಾವಣೆಯಲ್ಲಿರುವ …
Read More »ಬೆಳಗಾವಿ ಸ್ಮಾರ್ಟ್ ಸಿಟೀಜ 2 ಪ್ರೊಜೆಕ್ಟ್,ಅಂ.ರಾ. ತಂಡ, ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಜಂಟಿ ಸಭೆ
ಬೆಳಗಾವಿ ಸ್ಮಾರ್ಟ್ ಸಿಟೀಜ 2 ಪ್ರೊಜೆಕ್ಟ್,ಅಂ.ರಾ. ತಂಡ, ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಜಂಟಿ ಸಭೆ ಬೆಳಗಾವಿ ಸ್ಮಾರ್ಟ್ ಸಿಟಿ ಅಡಿಯಲ್ಲಿ ಸಿಟಿಸ್ 2 ಪ್ರೊಜೆಕ್ಟಗಾಗಿ ಅಂತರಾಷ್ಟ್ರೀಯ ಟೀಮ್ ಫ್ರಾನ್ಸ್ ಮತ್ತು ಜರ್ಮನಿ ಹಾಗೂ ಕೇಂದ್ರ ಸರ್ಕಾರದ ಟೀಮ್ ಬೆಳಗಾವಿ ಮಹಾನಗರ ಪಾಲಿಕೆಗೆ ಭೇಟಿ ನೀಡಿ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಮಹಾಪೌರರು ಹಾಗೂ ಉಪ ಮಹಾಪೌರರು ಮಹಾನಗರ ಪಾಲಿಕೆ ಬೆಳಗಾವಿ ರವರ ಉಪಸ್ಥಿತಿಯಲ್ಲಿ ಸಭೆಯನ್ನು ಜರುಗಿಸಿದರು.. ಮಹಾನಗರ ಪಾಲಿಕೆ ಆಯುಕ್ತರು …
Read More »ಜಮೀನು ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ
ರಾಮನಗರ, ಏಪ್ರಿಲ್ 10: ಹಾಡಹಗಲೇ ಬಾರ್ ಮುಂದೆ ಅಟ್ಟಾಡಿಸಿ ಕೊಲೆಗೈದಿದ್ದ (kill) 12 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ (Life Sentences) ಕನಕಪುರ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಕುಮಾರ ಎಚ್ಎನ್ ಅವರಿಂದ ಗುರುವಾರ ಆದೇಶ ಹೊರಡಿಸಲಾಗಿದೆ. ಮಾದೇಶ್, ಶಿವಕುಮಾರ್, ಲೋಕೇಶ್, ಕಾರ್ತಿಕ್, ವೇಣುಗೋಪಾಲ್, ದಿಲೀಪ್ ರಾಜ್, ರಾಮಚಂದ್ರ, ಗುರಪ್ಪ, ರಘು, ದಶರಥ, ಹರೀಶ್ ಮತ್ತು ಸುರೇಶ್ ಜೀವಾವಧಿ ಶಿಕ್ಷೆಗೆ ಗುರಿಯಾದವರು. ನಡೆದದ್ದೇನು? 2021ರ ಆಗಸ್ಟ್ 8 ರಂದು ಜಿಲ್ಲೆಯ ಕನಕಪುರ ತಾಲೂಕಿನ …
Read More »ಕುಡಿವ ನೀರಿನ ದರ ಹೆಚ್ಚಳದ ಶಾಕ್
ಬೆಂಗಳೂರು: ಬೆಂಗಳೂರು ಜಲ ಮಂಡಳಿ ಅಳೆದೂ ತೂಗಿ ಕೊನೆಗೂ ಕುಡಿಯುವ ನೀರಿನ ದರ ಏರಿಕೆ ಮಾಡಿದೆ. ಹನ್ನೊಂದು ವರ್ಷಗಳ ನಂತರ ನೀರಿನ ದರ ಪರಿಷ್ಕರಣೆ ಮಾಡುತ್ತಿದ್ದು ನಾಳೆ ನೀರಿನ ದರ ಹೆಚ್ಚಳ ಕುರಿತು ಅಧಿಕೃತ ಆದೇಶ ಪ್ರಕಟವಾಗಲಿದೆ. ಗೃಹ ಬಳಕೆದಾರರಿಗೆ ಪ್ರತಿ ಲೀಟರ್ಗೆ ಕನಿಷ್ಠ 0.15 ಪೈಸೆಯಿಂದ ಗರಿಷ್ಠ 1 ಪೈಸೆವರೆಗೆ ಹೆಚ್ಚಳ ಮಾಡಲಾಗಿದೆ. ಹೈ-ರೈಸ್ ಗೃಹ ಬಳಕೆದಾರರಿಗೆ ಪ್ರತಿ ಲೀಟರ್ಗೆ ಕನಿಷ್ಠ 0.30 ಪೈಸೆಯಿಂದ ಗರಿಷ್ಠ 1 ಪೈಸೆ ಪ್ರತಿ …
Read More »ವೃತ್ತಿಯ ಕೊನೆ ದಿನ ಲಂಚದ ಬೇಡಿಕೆ ಇಟ್ಟ ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ
ಶಿವಮೊಗ್ಗ: ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಆಗಿದ್ದ ಕೃಷ್ಣಪ್ಪ ಅವರು ಬಿಲ್ ಪಾಸ್ ಮಾಡಲು ರೂ.1 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದಿದ್ದಾರೆ. ಕೃಷ್ಣಪ್ಪ ಶಿವಮೊಗ್ಗ ಸ್ಮಾರ್ಟ್ ಸಿಟಿಯ ಪ್ರಭಾರ ಚೀಫ್ ಇಂಜಿನಿಯರ್ ಆಗಿದ್ದರು. ಇವರು ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ವಿವಿಧ ಎಲ್ಇಡಿ ಪರದೆಯ ಅಳವಡಿಕೆ ಹಾಗೂ ನಿರ್ವಹಣೆಯ ಮಾಡುತ್ತಿದ್ದ ಖಾಸಗಿ ಕಂಪನಿಯಿಂದ ಇಂಜಿನಿಯರ್ ಬಿಲ್ ಪಾಸ್ ಮಾಡಲು 1 ಲಕ್ಷ ರೂ. ಲಂಚ ಕೇಳಿದ್ದರು ಎಂದು ದೂರು ಬಂದಿತ್ತು. …
Read More »ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ 14 ದಿನಗಳ ಕಾಲ ED ವಶಕ್ಕೆ
ಬೆಂಗಳೂರು: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನಲ್ಲಿ (ಡಿಸಿಸಿ) ನಕಲಿ ಚಿನ್ನಾಭರಣ ಅಡವಿಟ್ಟು 62 ಕೋಟಿ ರೂ ಸಾಲ ಪಡೆದಿದ್ದ ಪ್ರಕರಣದಲ್ಲಿ, ಬ್ಯಾಂಕ್ನ ಹಾಲಿ ಅಧ್ಯಕ್ಷ ಮಂಜುನಾಥ ಗೌಡ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಬಂಧಿಸಿ, 14 ದಿನಗಳವರೆಗೆ ವಶಕ್ಕೆ ಪಡೆದಿದೆ. 2014ರಲ್ಲಿ ಮಂಜುನಾಥ ಗೌಡ ಅವರು ಬ್ಯಾಂಕ್ನ ಅಧ್ಯಕ್ಷರಾಗಿದ್ದಾಗ ಈ ಅಕ್ರಮ ಬೆಳಕಿಗೆ ಬಂದಿತ್ತು. ಆಗ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು, ಮಂಜುನಾಥ ಗೌಡ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. …
Read More »ಚೆಕ್ ಬೌನ್ಸ್ ಮತ್ತು ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಡಬಲ್ ಶಾಕ್
ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಎಸಿಜೆಂಎಂ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿ ದಂಡ ವಿಧಿಸಿದೆ. ಮತ್ತೊಂದೆಡೆ, ವಾಲ್ಮೀಕಿ ನಿಗಮದಲ್ಲಿನ ಅವ್ಯವಹಾರ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಹಿಂದುಳಿದ ವರ್ಗಗಳ ಇಲಾಖೆ ಮಾಜಿ ಸಚಿವರಾಗಿದ್ದ ನಾಗೇಂದ್ರ, ಅನಿಲ್ ರಾಜಶೇಖರ್ ಮತ್ತು ಚುಂಡೂರು ಭಾಸ್ಕರ್ ಈ ಮೂವರು ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ದೋಷಿ ಎಂದು 42ನೇ ಎಸಿಜೆಂಎಂ ನ್ಯಾಯಾಧೀಶರಾದ …
Read More »ಚಾಲಕನ ನಿಯಂತ್ರಣ ಕಳೆದುಕೊಂಡು ಮನೆ ಮೇಲೆ ಬಿದ್ದ ಸರ್ಕಾರಿ ಬಸ್
ಚಿಕ್ಕಮಗಳೂರು: ಕೆಎಸ್ ಆರ್ ಟಿಸಿ ಬಸ್ ರಸ್ತೆ ಬದಿಯ ಕಂದಕಕ್ಕೆ ನುಗ್ಗಿ, ಕಂದಕದಲ್ಲಿದ್ದ ಮನೆಯ ಮೇಲ್ಛಾವಣಿ ಮೇಲೆ ಬಿದ್ದ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗದಲ್ಲಿ ಇಂದು ನಡೆಯಿತು. ಘಟನೆಯಲ್ಲಿ ಚಾಲಕ ಹಾಗೂ ಕೆಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದ ಸಾಕಷ್ಟು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 40 ಮಂದಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ತುಂತುರು ಮಳೆಯ ನಡುವೆ ಬಸ್, ಚಾಲಕನ ನಿಯಂತ್ರಣ ತಪ್ಪಿದ್ದು, ಚಿಕ್ಕಮಗಳೂರಿನಿಂದ ಶೃಂಗೇರಿಗೆ ತೆರಳುತ್ತಿತ್ತು ಎಂದು …
Read More »
Laxmi News 24×7