Breaking News

ರಾಜಕೀಯ

ಅನಾರೋಗ್ಯದಿಂದ ತಾಯಮ್ಮ ಹುಲಿ ಸಾವು

ಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಹುಲಿ ತಾಯಮ್ಮ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮುಂಜಾನೆ 3.45ರ ಸಮಯದಲ್ಲಿ ಅಸುನೀಗಿದೆ. ಮೃಗಾಲಯದ ಸುಮಾರು 4 ವರ್ಷ 10 ತಿಂಗಳು ವಯಸ್ಸಿನ ತಾಯಮ್ಮ ಎಂಬ ಹೆಸರಿನ ಹೆಣ್ಣು ಹುಲಿಯನ್ನು 2014 ಮಾರ್ಚ್ 28ರಂದು ಬಂಡೀಪುರದಿಂದ ರಕ್ಷಿಸಿ ತರಲಾಗಿತ್ತು. ತಾಯಮ್ಮ ಹುಲಿಯು ಇತ್ತೀಚೆಗೆ ಆಹಾರವನ್ನು ತ್ಯಜಿಸಿ ರಕ್ತಕಣ (haemoprotozoa) ನಿಂದ ಬಳಲುತ್ತಿತ್ತು. ಹುಲಿಗೆ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಡಿ.17, 20 ಮತ್ತು 23ರಂದು ಮೃಗಾಲಯವು …

Read More »

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಭೀಕರ ಕೊಲೆ; ಅರ್ಧ ಗಂಟೆಯಲ್ಲೇ ಆರೋಪಿಗಳ ಬಂಧನ

ಹುಬ್ಬಳ್ಳಿ: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ‌. ವಿಠ್ಠಲ ಕರಾಡೆ(29) ಕೊಲೆಯಾದ ಯುವಕ. ಕೊಲೆ ಮಾಡಿದ ಆರೋಪಿಗಳನ್ನು ಘಟನೆ ನಡೆದ ಅರ್ಧ ಗಂಟೆಯಲ್ಲೇ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಿದ್ದೇನು? ಮೂಲತಃ ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪ ಗ್ರಾಮದ ನಿವಾಸಿಯಾದ ವಿಠ್ಠಲನನ್ನು, ಹುಣಸಿಕಟ್ಟಿ ಗ್ರಾಮಕ್ಕೆ ಪತ್ನಿ ಮನೆಗೆ ಬಂದಿದ್ದಾಗ ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಬಿಸಾಕಿದ್ದರು. ಹುಬ್ಬಳ್ಳಿ, ಕಲಘಟಗಿ, ತಡಸ ಸೇರಿದಂತೆ ಧಾರವಾಡ ಸುತ್ತಮುತ್ತಲು ಬೈಕ್ …

Read More »

ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್​​ ಲಾರಿ ಡಿಕ್ಕಿ 10 ಮಂದಿ ಸಜೀವ ದಹನ?

ಚಿತ್ರದುರ್ಗ: ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್​​ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 10 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಖಾಸಗಿ ಸ್ಲೀಪರ್ ಕೋಚ್ ಬಸ್​ ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ಹೊರಟಿತ್ತು. ಈ ಸಂದರ್ಭದಲ್ಲಿ ಚಿತ್ರದುರ್ಗದ ಹಿರಿಯೂರಿನ ಜವನಗೊಂಡನಹಳ್ಳಿ ಎಂಬಲ್ಲಿ ಅಪಘಾತ ಸಂಭವಿಸಿದೆ. ಡಿಕ್ಕಿ ಬಳಿಕ ಕಂಟೇನರ್ ಲಾರಿ ಹಾಗೂ ಬಸ್​ ಎರಡೂ ಬೆಂಕಿ …

Read More »

ಪೋಕ್ಸೊ ಪ್ರಕರಣ ದಾಖಲಿಸದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಒತ್ತಡ: ಸಂಜಯ ಪಾಟೀಲ ಆರೋಪ

ಪೋಕ್ಸೊ ಪ್ರಕರಣ ದಾಖಲಿಸದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಒತ್ತಡ: ಸಂಜಯ ಪಾಟೀಲ ಆರೋಪ ಬೆಳಗಾವಿ :ಗ್ರಾಮೀಣ ಕ್ಷೇತ್ರದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕನ ವಿರುದ್ಧ ಪೋ ಕಾಯ್ದೆಯಡಿ ಪ್ರಕರಣ ದಾಖಲಿಸದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಆರೋಪಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಂಭೀರವಾಗಿ ಪ್ರಕರಣವನ್ನು ಪರಿಗಣಿಸಿ ಸಂತ್ರಸ್ತೆ ವಿದ್ಯಾರ್ಥಿನಿಗೆ …

Read More »

ಚೆನ್ನೈ ಮಾಲಾಧಾರಿ ಜೀವ ಉಳಿಸಿದ ಗೋಕಾಕ ಹೊಟೆಲ್ ಉದ್ಯಮಿ ಪ್ರಭಾಕರ ಶೆಟ್ಟಿ

ಚೆನ್ನೈ ಮಾಲಾಧಾರಿ ಜೀವ ಉಳಿಸಿದ ಗೋಕಾಕ ಹೊಟೆಲ್ ಉದ್ಯಮಿ ಪ್ರಭಾಕರ ಬೆಟ್ಟ ಏರುವಾಗ ಕುಸಿದ ವ್ಯಕ್ತಿಯ ಜೀವ ಉಳಿಸಿದ ಪ್ರಭಾಕರ ಶೆಟ್ಟಿ ಅಯ್ಯಪ್ಪಸ್ವಾಮಿ ದರ್ಶನಕ್ಕೆ ತೆರಳುವ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಚೆನ್ನೈಮೂಲದ ಮಾಲಾಧಾರಿಯೊಬ್ಬರಿಗೆ ಬೆಳಗಾವಿ ನಗರದ ಹೋಟೆಲ್ ಉದ್ಯಮಿ ಪ್ರಭಾಕರ ಶೆಟ್ಟಿ ಅವರುತುರ್ತು ಚಿಕಿತ್ಸೆ ನೀಡಿ ಜೀವ ಉಳಿಸಿದ ಘಟನೆ ಕೇರಳದ ನೀಲಿಮಲೆ ಬೆಟ್ಟದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆಬಂದಿದೆ. ಬೆಳಗಾವಿ ನಗರದ ಪ್ರಭಾಕರ ಶೆಟ್ಟಿ ಅವರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ …

Read More »

ಪೌರಕಾರ್ಮಿಕರಿಗೆ ಜಾಕೀಟ್ ಹಾಗೂ ಸ್ವೆಟರ್ ವಿತರಣೆ

ಪೌರಕಾರ್ಮಿಕರಿಗೆ ಜಾಕೀಟ್ ಹಾಗೂ ಸ್ವೆಟರ್ ವಿತರಣೆ ಘಟಪ್ರಭಾ:2023-24,2024-25 ನೇ ಸಾಲಿನ ನಗರಸಭೆ ನಿಧಿಯ ಶೇ.24.10 ರ ಯೋಜನೆಯಡಿಯ ಪೌರಕಾರ್ಮಿಕರ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಸುರಕ್ಷತಾ ಜಾಕೀಟಗಳನ್ನು ಹಾಗೂ 2025-26 ನೇ ಸಾಲಿನ ಎಸ್ಎಫ್ ಸಿ ಶೇ.24.10 ರ ಅನುಧಾನದಲ್ಲಿ ಪೌರಕಾರ್ಮಿಕರಿಗೆ ಸ್ವೆಟರ್ ಗಳನ್ನು ಘಟಪ್ರಭಾ ಪುರಸಭೆ ಧೂಪದಾಳ ಕಾರ್ಯಾಲಯದ ಆವರಣದಲ್ಲಿ ಬುಧವಾರದಂದು ಹಂಚಿಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪುರಸಭೆಯ ಪುರಸಭೆಯ ಮುಖ್ಯಾಧಿಕಾರಿಗಳು ಶ್ರೀಮತಿ.ಎಂ.ಎಸ್.ಪಾಟೀಲ ಹಿರಿಯ ಮುಖಂಡರಾದ ಡಿ ಎಮ್ …

Read More »

ಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ

ಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದೆ. ಈ ವೇಳೆ ಡಾ.‌ ವಿಶ್ವನಾಥ ಶಿಂಧೋಳಿಮಠ, ಶಾಲೆಯ ಅಧ್ಯಕ್ಷರಾದ ಶ್ರೀ ಸಂದೀಪ ಅನಿಗೋಳ, ಶ್ರೀ ಮಂಜುನಾಥ ಅನಿಗೋಳ, ಶ್ರೀಮತಿ ಶಾಂತಾ ಅನಿಗೋಳ ಸೇರಿ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

Read More »

ಚಿರತೆಗಿಟ್ಟಿದ್ದ ಬೋನಿನಲ್ಲಿ 4 ತಾಸು ಲಾಕ್ ಆದ ವ್ಯಕ್ತಿ!

ಚಾಮರಾಜನಗರ: ಕುತೂಹಲವೊಂದು ಮನುಷ್ಯನನ್ನು ಪೀಕಲಾಟಕ್ಕೆ ನೂಕಿದ ಘಟನೆ ಯಳಂದೂರು ತಾಲೂಕಿನ ಗಂಗವಾಡಿಯಲ್ಲಿ ನಡೆದಿದೆ. ಚಿರತೆಗಾಗಿ ಇಟ್ಟಿದ್ದ ಬೋನಿನಲ್ಲಿ ವ್ಯಕ್ತಿ ಸಿಲುಕಿ 4 ತಾಸು ಒದ್ದಾಡಿದ್ದಾನೆ. ಗಂಗವಾಡಿ ಗ್ರಾಮದ ಕಿಟ್ಟಿ ಎಂಬಾತನೆ ಬೋನಿನಲ್ಲಿ ಸಿಲುಕಿದ ವ್ಯಕ್ತಿ. ಗಂಗವಾಡಿ ಗ್ರಾಮದಲ್ಲಿ ಶನಿವಾರ ರಾತ್ರಿ ರಾಮಯ್ಯ ಎಂಬುವರಿಗೆ ಸೇರಿದ ಜಮೀನಿನಲ್ಲಿ ಚಿರತೆ ದಾಳಿ ನಡೆಸಿ ಮೂರು ಜಾನುವಾರುಗಳನ್ನು ಕೊಂದು ಹಾಕಿತ್ತು. ಈ ಸಂಬಂಧ ಶಾಸಕ ಎ. ಆರ್. ಕೃಷ್ಣಮೂರ್ತಿ ಕೂಡ ಸ್ಥಳಕ್ಕೆ ಭೇಟಿ ನೀಡಿ, ಚಿರತೆ …

Read More »

ಪಾಸ್ ಪೋರ್ಟ್​ಗೆ ಸುಳ್ಳು ದಾಖಲೆಗೆ ಸಹಕಾರ: ಪೊಲೀಸ್ ಸಿಬ್ಬಂದಿ ಬಂಧನ

ಬಂಟ್ವಾಳ (ದಕ್ಷಿಣಕನ್ನಡ): ಪಾಸ್​ ಪೋರ್ಟ್ ಮಾಡಲು ಸುಳ್ಳು ದಾಖಲೆ ನೀಡಿದ ವ್ಯಕ್ತಿಗೆ ಸಹಕಾರ ನೀಡಿದ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣೆ ಸಿಬ್ಬಂದಿ ವಿರುದ್ಧ ಹಾಗೂ ಪಾಸ್​ ಪೋರ್ಟ್ ದಾಖಲೆ ಸೃಷ್ಟಿಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ಸಿಬ್ಬಂದಿ ಪ್ರದೀಪ್ ಮತ್ತು ದಾಖಲೆ ಮಾಡಲು ಹೊರಟ ಶಕ್ತಿದಾಸ್ ಆರೋಪಿಗಳು. ಪ್ರದೀಪ್​ನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮೇಲಧಿಕಾರಿಯಿಂ ಶಿಫಾರಸು ಮಾಡಿಸಿಕೊಟ್ಟಿರುವ ಆರೋಪ: ಇವರಲ್ಲಿ ಶಕ್ತಿದಾಸ್ ಯಾವ ಊರಿನವನು ಎಂಬ ಕುರಿತು ಸ್ಪಷ್ಟತೆ …

Read More »

ಜೈಲಿನಲ್ಲಿ ತಪಾಸಣೆಗೆ ಎಐ ಮಾದರಿ ತಂತ್ರಜ್ಞಾನ ಬಳಕೆ: ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್

ಮಂಗಳೂರು: ಜೈಲಿನಲ್ಲಿ ತಪಾಸಣೆಗೆ ಟ್ರಯಲ್ ಬೇಸಿಸ್ ಮೇಲೆ ಎಐ ಟೆಕ್ನಾಲಜಿ ಬಳಕೆ ಮಾಡುತ್ತೇವೆ.‌ ಅದು ಎಷ್ಟು ಪರಿಣಾಮಕಾರಿ ಆಗುತ್ತದೆ ಎಂದು ನೋಡಿ ಅಳವಡಿಕೆ ಮಾಡುತ್ತೇವೆ. ಪರಪ್ಪನ ಅಗ್ರಹಾರ, ಮೈಸೂರು ಜೈಲಿನಲ್ಲಿ ಟ್ರಯಲ್ ಆಗಿದೆ.‌ ಮಂಗಳೂರು ಜೈಲಿನಲ್ಲಿಯೂ ಬೇಕಾದ್ರೆ ಟ್ರಯಲ್ ಮಾಡುತ್ತೇವೆ ಎಂದು ಕಾರಾಗೃಹ ವಿಭಾಗದ ನೂತನ ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಂಗಳೂರು ಕಾರಾಗೃಹಕ್ಕೆ ಔಪಚಾರಿಕವಾಗಿ …

Read More »