Breaking News
Home / ರಾಜಕೀಯ (page 368)

ರಾಜಕೀಯ

ಇಸ್ರೋ ಚಂದ್ರೋದಯ! ‘ನಾಲ್ಕು ವರ್ಷದ ಪರಿಶ್ರಮಕ್ಕೆ ಪ್ರತಿಫಲ ಸಿಕ್ಕಿದೆ’- ಇಸ್ರೋ ಅಧ್ಯಕ್ಷ ಸೋಮನಾಥ್​

ಬೆಂಗಳೂರು : ಚಂದ್ರಯಾನ-3 ಯೋಜನೆ ಸಕ್ಸಸ್​ ಕಂಡು ವಿಕ್ರಮ್​ ಲ್ಯಾಂಡರ್​ ಚಂದ್ರಸ್ಪರ್ಶವಾಗಿದೆ. ಭಾರತ ಚಂದ್ರನ ಮೇಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮುಖ್ಯಸ್ಥ ಎಸ್.ಸೋಮನಾಥ್ ಇಂದು ಸಂಜೆ (ಬುಧವಾರ) ಘೋಷಿಸಿದರು. ಚಂದ್ರಯಾನ-3 ಯೋಜನೆಯು ಅಭೂತಪೂರ್ವ ಯಶಸ್ಸು ಕಂಡ ಬಳಿಕ ಎಲ್ಲರಿಗೂ ಧನ್ಯವಾದ ತಿಳಿಸಿ ಮಾತನಾಡಿದ ಅವರು, ಇನ್ನು ನಾವು ಚಂದ್ರನ ಊರಿನ ಪಯಣಿಗರು. ಶಶಿಯ ಮೇಲೆ ನಮ್ಮ ನೌಕೆ ನಿಂತಿದೆ. ನಾಲ್ಕು ವರ್ಷಗಳ ಶ್ರಮ ಇಂದು ಪ್ರತಿಫಲ ಕಂಡಿತು. …

Read More »

ವಿದ್ಯುತ್‌ ಕಂಬಗಳ ಮೇಲಿನ ಅನಧಿಕೃತ ಕೇಬಲ್​ಗಳ ತೆರವಿಗೆ ಬೆಸ್ಕಾಂ ಒಂದು ವಾರದ ಗಡುವು

ಬೆಂಗಳೂರು : ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಒಎಫ್‌ಸಿ ಕೇಬಲ್‌, ಡೇಟಾ ಕೇಬಲ್‌ ಹಾಗೂ ಡಿಶ್ ಕೇಬಲ್‌ ಗಳನ್ನು ಒಂದು ವಾರದೊಳಗೆ ತೆರವುಗೊಳಿಸಲು ಸಂಬಂಧಿಸಿದ ಇಂಟರ್‌ ನೆಟ್‌ ಸೇವಾ ಕಂಪನಿಗಳು, ಟಿವಿ ಕೇಬಲ್‌ ಆಪರೇಟರ್‌ ಗಳಿಗೆ ಬೆಸ್ಕಾಂ ಕಟ್ಟುನಿಟ್ಟಿನ ಸೂಚನೆ ನೀಡಿದೆ.   ಬೆಸ್ಕಾಂ ವಿದ್ಯುತ್‌ ಕಂಬಗಳ ಮೇಲೆ ಅನಧಿಕೃತವಾಗಿ ಒಎಫ್‌ಸಿ ಕೇಬಲ್‌ ಹಾಗೂ ಇನ್ನಿತರ ಕೇಬಲ್‌ ಗಳನ್ನು ಅಳವಡಿಸಿದ್ದ ಪರಿಣಾಮ ವಿದ್ಯುತ್‌ ಕಂಬ ಉರುಳಿ …

Read More »

ಬಸವನಕುಡಚಿಯ ಗ್ರಾಮದಲ್ಲಿನ ಸಮಸ್ಯೆ ಆಲಿಸಲು ಪಾಲಿಕೆಯ ಆಯುಕ್ತರು ಭೇಟಿ ನೀಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಬೆಳಗಾವಿ : ಮಹಾನಗರ ಪಾಲಿಕೆಯ 48ನೇ ವಾರ್ಡ್​ಗೆ ಒಳಪಡುವ ಬಸವನಕುಡಚಿಯ ಜನರ ಸಮಸ್ಯೆ ಆಲಿಸಲು ಕಳೆದ ನಾಲ್ಕು ದಶಕಗಳಿಂದ ಒಬ್ಬ ಪಾಲಿಕೆ ಆಯುಕ್ತರು ಭೇಟಿ ಕೊಟ್ಟಿಲ್ಲ ಎಂಬ ಆರೋಪ ಕೇಳಿಬಂದಿದೆ. 1984ರಲ್ಲಿ ಈ ಪಾಲಿಕೆ ಅಸ್ತಿತ್ವಕ್ಕೆ ಬಂದಿದೆ. ಆದರೆ ಈವರೆಗೆ ಒಬ್ಬರೇ ಒಬ್ಬ ಪಾಲಿಕೆ ಆಯುಕ್ತರು ಬಂದು ಜನರ ಸಮಸ್ಯೆ ಆಲಿಸಿಲ್ಲವಂತೆ. ನಾವು ಹೆಸರಿಗಷ್ಟೇ ಪಾಲಿಕೆ ವ್ಯಾಪ್ತಿಯಲ್ಲಿದ್ದೇವೆ. ಹಾಗಾಗಿ ನಾವು ಪಾಲಿಕೆಯಲ್ಲಿ ಮುಂದುವರಿಯಲ್ಲ. ನಮ್ಮ ಊರಿಗೆ ಪ್ರತ್ಯೇಕ ಗ್ರಾಮ ಪಂಚಾಯತಿ ರಚಿಸಿ …

Read More »

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಪೂರ್ಣವಾಗಿ ಕಡೆಗಣಿಸಿದೆ

ಬೆಂಗಳೂರು : ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಪೂರ್ಣವಾಗಿ ಕಡೆಗಣಿಸಿದೆ. ತಮಿಳುನಾಡಿಗೆ ನೀರು ಬಿಟ್ಟ ಬಳಿಕ ಇದೀಗ ತರಾತುರಿಯಲ್ಲಿ ಸರ್ವಪಕ್ಷ ಸಭೆ ಕರೆದಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್​ ನಾರಾಯಣ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಊರು ಕೊಳ್ಳೆ ಹೊಡೆದ ಮೇಲೆ ಡಿಡ್ಡಿ ಬಾಗಿಲು ಹಾಕಿದ ರೀತಿ ರಾಜ್ಯ ಸರ್ಕಾರದ ವರ್ತನೆ ಇದೆ ಎಂದು ಅವರು ಟೀಕಿಸಿದ್ದಾರೆ. ಇಂದಿನ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ಮುಖಂಡರು, …

Read More »

ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡರ್‌ ಇಳಿಸಿದ ಮೊದಲ ದೇಶ ಭಾರತ! ಇತಿಹಾಸ ಸೃಷ್ಟಿಸಿದ ಇಸ್ರೋ!

ನವದೆಹಲಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಇಂದು ಭಾರತ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿತು. ಇಡೀ ವಿಶ್ವವೇ ಎದುರು ನೀಡುತ್ತಿದ್ದ ಚಂದ್ರಯಾನ-3 ಗಗನ ನೌಕೆಯ ಲ್ಯಾಂಡರ್‌ ವಿಕ್ರಮ್‌ ಅನ್ನು ಇಸ್ರೋ ವಿಜ್ಞಾನಿಗಳು ಸಂಜೆ 6:04ಕ್ಕೆ ಸರಿಯಾಗಿ ಚಂದ್ರನ ಮೇಲೆ ಸಾಫ್ಟ್‌ ಲ್ಯಾಂಡಿಂಗ್ ಮಾಡಿದರು. ಈ ಮೂಲಕ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಯಶಸ್ವಿಯಾಗಿ ಇಳಿಸಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು.     ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್‌ ಬ್ಯಾಹಾಕಾಶ ಕೇಂದ್ರದಿಂದ …

Read More »

ರೇಷನ್ ಸರಿಯಾಗಿ ವಿತರಿಸುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ತಹಶಿಲ್ದಾರ ಕಚೇರಿ ಎದುರು ನಡೆದಿದೆ.ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ಅಕ್ಕಿ ಸರಿಯಾಗಿ ವಿತರಣೆ ಮಾಡಲ್ಲ ಜೊತೆಗೆ ರೇಷನ್ ಅಂಗಡಿಯಲ್ಲಿ ಮರ್ಯಾದೆ ಕೊಟ್ಟು ಮಾತನಾಡಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಅಂಗಡಿ ಮಾಲೀಕ ಸರಿಯಾಗಿ ರೇಷನ್ ವಿತರಣೆ ಮಾಡುವದಿಲ್ಲ,ಕೇಳಲು ಹೋದರೆ ಗಲಾಟೆ ಮಾಡುತ್ತಾರೆ ಅವರನ್ನು ಬದಲಿಸಿ ಬೇರೆಯವರಿಗೆ ರೇಷನ್ ಹಂಚಲು ಕೊಡಬೇಕು ಎಂದು ಸಿಂದಗಿ ತಹಶಿಲ್ದಾರ ಕಚೇರಿ ಎದುರು ಬಸವ್ವ ಡಾಂಗಿ ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡುತ್ತಾ ಅಧಿಕಾರಿಗಳಿಗೆ ಮನವಿ ಮಾಡಿದರು.

ರೇಷನ್ ಸರಿಯಾಗಿ ವಿತರಿಸುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ತಹಶಿಲ್ದಾರ ಕಚೇರಿ ಎದುರು ನಡೆದಿದೆ. ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ಅಕ್ಕಿ ಸರಿಯಾಗಿ ವಿತರಣೆ ಮಾಡಲ್ಲ ಜೊತೆಗೆ ರೇಷನ್ ಅಂಗಡಿಯಲ್ಲಿ ಮರ್ಯಾದೆ ಕೊಟ್ಟು ಮಾತನಾಡಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಅಂಗಡಿ ಮಾಲೀಕ ಸರಿಯಾಗಿ ರೇಷನ್ ವಿತರಣೆ ಮಾಡುವದಿಲ್ಲ, ಕೇಳಲು ಹೋದರೆ ಗಲಾಟೆ ಮಾಡುತ್ತಾರೆ ಅವರನ್ನು ಬದಲಿಸಿ …

Read More »

ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಪ್ರತಿಕ್ರಿಯೆ ನೀಡಿದ್ದಾರೆ.

ತಮಿಳುನಾಡು : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ನೀರಿನ ಸಮಸ್ಯೆ ಪ್ರಾರಂಭವಾಗಿದೆ. ಅವರು ಅಲ್ಪಾವಧಿಯ ರಾಜಕೀಯ ಲಾಭಕ್ಕಾಗಿ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ತಮಿಳುನಾಡಿಗೆ ಒಂದು ಹನಿ ನೀರನ್ನು ಕೊಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ ಬಳಿಕ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿತು” ಎಂದು ವಾಗ್ದಾಳಿ ನಡೆಸಿದರು.   …

Read More »

ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್: ಉಸಿರು ಬಿಗಿಹಿಡಿದುಕೊಂಡು ಕಾಯುತ್ತಿರುವ ಭಾರತ,

ನವದೆಹಲಿ: ಇಸ್ರೋ ಚಂದ್ರಯಾನ-3ರ ಸಾಫ್ಟ್ ಲ್ಯಾಂಡಿಂಗ್​ ಕಾರ್ಯಾಚರಣೆಯ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಿದೆ. ಇಂದು (ಬುಧವಾರ) ಸಂಜೆ 5.20ಕ್ಕೆ ನೇರ ಪ್ರಸಾರ ಪ್ರಾರಂಭವಾಗುತ್ತದೆ. ದೇಶದ ಚಂದ್ರಯಾನ-3 ಮಿಷನ್​ನ ಮೇಲೆ ನಿರೀಕ್ಷೆಗಳು ಗಗನಕ್ಕೇರಿವೆ. ಇಸ್ರೋದ ಚಂದ್ರಯಾನ-3 ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಇಳಿಯಲು ನಿರ್ಧರಿಸಿರುವುದರಿಂದ ದೇಶಾದ್ಯಂತ ತಾರಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ವಿವಿಧ ಸಂಸ್ಥೆಗಳು ಇಂದು ದೊಡ್ಡ ಕ್ಷಣಕ್ಕಾಗಿ ತಯಾರಿ ನಡೆಸುತ್ತಿವೆ. ಶಾಲಾ-ಕಾಲೇಜುಗಳಲ್ಲಿ ಐತಿಹಾಸಿಕ ಕ್ಷಣದ ನೇರ ಪ್ರಸಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಜ್ಞಾನಿಗಳು ಮತ್ತು …

Read More »

ಅಶುದ್ಧ ನೀರು ಸೇವನೆಯಿಂದ ಸಾವು ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಸಿಎಂ ಎಚ್ಚರಿಕೆ

ಬೆಂಗಳೂರು: ಅಶುದ್ಧ ನೀರು ಕುಡಿದು ಸಾವನ್ನಪ್ಪುವ ಪ್ರಕರಣಗಳು ಭವಿಷ್ಯದಲ್ಲಿ ಮರುಕಳಿಸಿದರೆ ಜಿಲ್ಲಾ ಪಂಚಾಯಿತಿ ಸಿಇಒಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಅಲ್ಲದೇ ನಗರ ಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ನೀರಿನ ಸಮಸ್ಯೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ (ಮಂಗಳವಾರ) ನಡೆದ ಸಭೆಯಲ್ಲಿ ಅವರು ಮಾತನಾಡಿದರು. ನೀರಿನ ಸಮಸ್ಯೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಡವರು ವಾಸಿಸುವ …

Read More »

ಚಂದ್ರಯಾನ 3 ಯಶಸ್ವಿಯಾಗಲೆಂದು ದೇಶ, ವಿದೇಶಗಳಲ್ಲಿ ಪ್ರಾರ್ಥನೆ: ಹೋಮ, ಹವನ, ಪೂಜೆ ನಡೆಸುತ್ತಿರುವ ಭಕ್ತರು

ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಕೈಗೊಂಡಿರುವ ಅತ್ಯಂತ ಮಹತ್ವದ ಸಾಹಸಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ದೇಶ ಮಾತ್ರವಲ್ಲದೇ ಜಗತ್ತಿನಾದ್ಯಂತ ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಇನ್ನೊಂದೆಡೆ, ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡಿಂಗ್‌ ಆಗಲೆಂದು ಪ್ರಪಂಚಾದ್ಯಂತ ವಿವಿಧ ಧಾರ್ಮಿಕ ಸಮುದಾಯಗಳಿಂದ ಹೋಮ, ಹವನ, ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಕೆ ಮಾಡಲಾಗುತ್ತಿದೆ.     ಚಂದ್ರಯಾನ 3 ಮಿಷನ್‌ ಯಶಸ್ಸಿಯಾಗಲಿ ಎಂದು ಭಾರತಾದ್ಯಂತ ವಿವಿಧ …

Read More »