Breaking News

ರಾಜಕೀಯ

ನಗರದಲ್ಲಿ ಇಂದು ಮಾಂಸ ಮಾರಾಟ ನಿಷೇಧ

ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೋಮವಾರ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಸೋಮವಾರ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು. ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಪಶುಪಾಲನೆ …

Read More »

ಅಣ್ಣನನ್ನೇ ಹತ್ಯೆಗೈದ ತಮ್ಮ, ತಿಂಗಳ ಹಿಂದೆ ನಡೆದ ಘಟನೆ ಪೊಲೀಸರ ತನಿಖೆಯಿಂದ ಬಯಲು

ಚಿತ್ತಾಪುರ: ತನ್ನ ಹೆಂಡತಿಯೊಡನೆ ಸಲುಗೆಯಿಂದ ಇದ್ದ ತಮ್ಮನನ್ನು ಬೈದಿದ್ದಕ್ಕೆ ಸಿಟ್ಟಿಗೆದ್ದ ತಮ್ಮ ಅಣ್ಣನನ್ನೇ ಕೊಲೆ ಮಾಡಿದ ಘಟನೆ ತಾಲೂಕಿನ ಇಟಗಾ ಗ್ರಾಮದಲ್ಲಿ ನಡೆದಿದೆ. ಕಾಮಣ್ಣ ದೊಡ್ಡ ಹಣಮಂತ (35) ಮೃತ ದುರ್ದೈವಿಯಾಗಿದ್ದು ತಮ್ಮ ಸುರೇಶ ದೊಡ್ಡ ಹಣಮಂತ ಆರೋಪಿಯಾಗಿದ್ದಾನೆ.   ಕಾಮಣ್ಣನ ಅನುಮಾನಾಸ್ಪದ ಸಾವಿನ ಕುರಿತು ಪೋಷಕರು ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ವೇಳೆ ತಮ್ಮನ ಕೃತ್ಯ ಬಯಲಿಗೆ ಬಂದಿದೆ. ಸದ್ಯ ಆರೋಪಿ ಸುರೇಶ ದೊಡ್ಡ …

Read More »

ಜೈಲಲ್ಲಿರುವ ದರ್ಶನ್‌ ಮತ್ತೊಂದು ಫೋಟೋ ಲೀಕ್; ನಿನ್ನೆ ಕೈಲಿ ಸಿಗ್ರೇಟ್​ ಇಂದು ಮೊಬೈಲ್

ಬೆಂಗಳೂರು:​ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಚಿತ್ರದುರ್ಗದ ಮೂಲವ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಸಹಿಸಿದ್ದಾನೆ ಎಂದು ಸ್ಯಾಂಡಲ್​ವುಡ್ ನಟ ದರ್ಶನ್ ಆತನನ್ನು ಕೊಲೆ ಮಾಡಿದ್ದಾರೆ ಎನ್ನುವ ಆರೋಪದಲ್ಲಿ ಡಿ ಗ್ಯಾಂಗ್​ ಜೈಲಿನಲ್ಲಿದೆ. ಈ ಪ್ರಕರಣ ತನಿಕೆ ಹಂತದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವಾಗ ಈಗ ಕೆಲವು ಫೋಟೋ ಹಾಗೂ ವಿಡಿಯೋಗಳು ಮತ್ತೊಂದು ಹಂತದಲ್ಲಿ ಸುದ್ದಿ ಮಾಡುತ್ತಿವೆ. ನಿನ್ನೆ ಒಂದು ಫೋಟೋ ವಿಡಿಯೋ ಆದ್ರೆ ಇಂದೂ ಒಂದು ಫೋಟೋ ವೈರಲ್​​ ಆಗಿದೆ. ಕೊಲೆ ಪ್ರಕರಣದಲ್ಲಿ …

Read More »

ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ. ನಗರಸಭೆಗೆ ಬಿಗಿ ಪೊಲೀಸ್ ಬಂದೋಬಸ್ತ್

ಮುಧೋಳ : ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ನಗರಸಭೆ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಮಧ್ಯಾಹ್ನ ಎರಡು ಗಂಟೆ ವೇಳೆಗೆ ಆಯ್ಕೆ‌ಪ್ರಕ್ರಿಯೆ ಪೂರ್ಣಗೊಳ್ಳಲಿದೆ.   ಮುಂಜಾಗೃತ ಕ್ರಮವಾಗಿ ನಗರಸಭೆ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಿದ್ದಾಜಿದ್ದಿನ‌ ಕಾಳಗಕ್ಕೆ ಸಿದ್ದವಾಗಿರುವ ನಗರಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಕೈ-ಕಮಲ‌ ಪಡೆಗಳ …

Read More »

ಶಾಸಕರ ಹೆಸರಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿಸಿ ವಂಚನೆ: ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಶಾಸಕರ ಹೆಸರಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿಸಿ ವಿಧನಸೌಧದಲ್ಲಿ ಕೆಲಸ ಕೊಡಿಸುರುವ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂದ್ಜಿಸಿದ್ದಾರೆ. ರಾಮನಗರದ ಸ್ವಾಮಿ (35) ಹಾಗೂ ಅಂಜನ್ ಕುಮಾರ್ (25) ಬಂಧಿತ ಆರೋಪಿಗಳು. ಸ್ವಾಮಿ ವಿಧಾನಸೌಧದಲ್ಲಿ ಇ ಹಿಂದೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ಬಳಿಕ ಕೆಲಸ ಬಿಟ್ಟು ರಾಜಕಾರಣಿಗಳ ಜೊತೆ ಓಡನಾಟ ಬೆಳೆಸಿಕೊಂಡಿದ್ದ. ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಕಲಿ ಲೆಟರ್ ಹೆಡ್ ಸೃಷ್ಟಿಸಿ, ನಕಲಿ ಸಹಿ ಮಾಡಿ …

Read More »

ರಾಜ್ಯಾದ್ಯಂತ ‘ ಶ್ರೀಕೃಷ್ಣ ಜನ್ಮಾಷ್ಟಮಿ’ ಆಚರಣೆ

ಬೆಂಗಳೂರು : ಇಂದು ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಇಂದು ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳ ವಿವರವನ್ನೂ ಪೊಲೀಸರು ನೀಡಿದ್ದಾರೆ. ಬೆಂಗಳೂರು ನಗರ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವೆಸ್ಟ್‌ಆಫ್ ಕಾರ್ಡ್ ರಸ್ತೆಯಲ್ಲಿರುವ ಇಸ್ಕಾನ್ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಇಂದು ಲಕ್ಷಾಂತರ ಭಕ್ತಾದಿಗಳು ಸೇರಿದಂತೆ ಗಣ್ಯ ವ್ಯಕ್ತಿಗಳು ದೇವರ ದರ್ಶನಕ್ಕೆ ಬರುವ ನಿರೀಕ್ಷೆ ಇದೆ. ಹೀಗಾಗಿ ದೇವಾಲಯದ ಸುತ್ತಮುತ್ತಲಿನ ರಸ್ತೆಗಳಲ್ಲಿ …

Read More »

ಸದ್ದಿಲ್ಲದೆ ಆಪರೇಷನ್‌ ಕಮಲ?ಕಾಂಗ್ರೆಸ್‌ ಶಾಸಕರಿಗೆ 100 ಕೋಟಿ ರೂ. ಆಫರ್‌? ಗಂಭೀರ ಆರೋಪ

ಒಂದೆಡೆ ಮುಡಾ ಹಗರಣ ಮುಂದಿಟ್ಟುಕೊಂಡು ಬಿಜೆಪಿವಯವರು ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಉರುಳಿಸಲು ಕಸರತ್ತು ನಡೆಸುತ್ತಿದ್ದಾರೆ ಎಂಬ ಆರೋಪಗಳ ನಡುವೆಯೇ ಸದ್ದಿಲ್ಲದೆ ಆಪರೇಷನ್‌ ಕಮಲ ಕೂಡ ನಡೆಯುತ್ತಿದೆ ಎಂದು ಕಾಂಗ್ರೆಸ್‌ ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ ಶಾಸಕರಾದ ಗಣಿಗ ರವಿ ಈ ರೀತಿ ಬಿಜೆಪಿ ವಿರುದ್ಧ ಆರೋಪ ಮಾಡಿದ್ದು, ಕಾಂಗ್ರೆಸ್‌ ಶಾಸಕರನ್ನು ಸೆಳೆಯಲು ಬಿಜೆಪಿಯವರು ಬರೋಬ್ಬರಿ 100 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಇಂದು …

Read More »

ನಗರಸಭೆ ಗದ್ದುಗೆಗೇರಲು ಕೈ-ಕಮಲ ಕಸರತ್ತು

ಮುಧೋಳ: ಮುಧೋಳ ನಗರಸಭೆ ಅಧಿಕಾರದ ಗದ್ದುಗೆ ಹಿಡಿಯಲು ಶತಾಯ ಗತಾಯ ಕಸರತ್ತು ನಡೆಸುತ್ತಿರುವ ಕೈ-ಕಮಲ ಕಲಿಗಳು ಅಧಿಕಾರಕ್ಕಾಗಿ ತಂತ್ರ-ಪ್ರತಿತಂತ್ರ ಹೆಣೆಯುತ್ತಿದ್ದಾರೆ. ಪ್ರಕಟಗೊಂಡಿರುವ ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಅಧಿಕಾರ ಹಿಡಿಯಲು ತೆರೆಮರೆಯ ಕಸರತ್ತು ನಡೆಸಿರುವ ಎರಡೂ ಪಕ್ಷಗಳ ಮುಖಂಡರು ನಗರಸಭೆ ಸದಸ್ಯರನ್ನು ವಿಶ್ವಾಸಕ್ಕೆ ಪಡೆಯಲು ಎಲ್ಲ ಬಗೆಯ ಪ್ರಯತ್ನಕ್ಕೆ ಮುಂದಾಗುತ್ತಿದ್ದಾರೆ. 31 ಸದಸ್ಯ ಬಲ: ಮುಧೋಳ ನಗರಸಭೆ ಒಟ್ಟು 31ಸದಸ್ಯ ಬಲ …

Read More »

ಬಿಗ್ ಬಾಸ್ – 11 ನೇ ಸೀಜನ್ ಗೆ ಅಚ್ಚರಿ ಹೆಸರುಗಳು ಕೇಳಿಬರುತ್ತಿವೆ.

ಬಿಗ್ ಬಾಸ್ – ಕನ್ನಡ 10 ರ ಸೀಸನ್ ಯಶಸ್ವಿ ಪ್ರದರ್ಶನದ ನಂತರ ಈಗ 11 ನೇ ಸೀಜನ್ ಗೆ ಅಚ್ಚರಿ ಹೆಸರುಗಳು ಕೇಳಿಬರುತ್ತಿವೆ. ಈ ಮಧ್ಯೆ ಚಿಕ್ಕಮಗಳೂರಿನ ಗೌದಿಗದ್ದೆಯ ವಿನಯ್ ಗುರುಜಿ ಹಾಗೂ ಮಾಜಿ ಕೊಡಗು – ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಹೆಸರು ಜೋರಾಗಿ ಕೇಳಿಬರುತ್ತಿವೆ. ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಮೈಸೂರು ಲೋಕಸಭಾ ಟಿಕೆಟ್ ಮಿಸ್ ಮಾಡಿದ್ದ ಹಿನ್ನಲೆಯಲ್ಲಿ ಕಳೆದ ಲೋಕಸಭಾ ಚುನಾವಣೆ …

Read More »

ವಿಟಿಯು: ಪ್ರಮಾಣಪತ್ರ ನಕಲು ತಡೆದ ತಂತ್ರಜ್ಞಾನ

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (ವಿಟಿಯು) ವಿದ್ಯಾರ್ಥಿಗಳಿಗೆ ವಿತರಿಸುವ ಅಂಕಪಟ್ಟಿ ಮತ್ತು ಘಟಿಕೋತ್ಸವ ಪ್ರಮಾಣಪತ್ರಗಳು ನಕಲು ಆಗುವುದನ್ನು ತಡೆಯಲು ಕ್ಯುಆರ್‌ ಕೋಡ್ ಸಹಿತ 15 ಬಗೆಯ ಸುರಕ್ಷತಾ ಕ್ರಮ ಅಳವಡಿಸಿಕೊಂಡಿದೆ. ಈ ಕ್ರಮಗಳಿಂದಾಗಿ ಪ್ರಮಾಣಪತ್ರಗಳನ್ನು ನಕಲು ಮಾಡುವ ಅಥವಾ ತಿದ್ದುವ ಪ್ರಕರಣಗಳ ಪ್ರಮಾಣ ತಗ್ಗಿದೆ. ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾಲಯಗಳಲ್ಲಿ ಒಂದಾದ ವಿಟಿಯು ವ್ಯಾಪ್ತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜು, ಸ್ನಾತಕೋತ್ತರ ಅಧ್ಯಯನ ಕೇಂದ್ರ ಸೇರಿ ಒಟ್ಟು 215 ಕಾಲೇಜುಗಳು ಇವೆ. ಪ್ರತಿ …

Read More »