Breaking News
Home / ರಾಜಕೀಯ (page 4)

ರಾಜಕೀಯ

ಚಿಕ್ಕೋಡಿ: ಹಿಮ್ಮುಖವಾಗಿ ಟ್ರ್ಯಾಕ್ಟರ್ ಚಲಾಯಿಸಿ ವಿಶಿಷ್ಟ ರೀತಿಯಲ್ಲಿ ಹರಕೆ ತೀರಿಸಿದ ಭಕ್ತ

ಚಿಕ್ಕೋಡಿ(ಬೆಳಗಾವಿ): ದೇವರಿಗೆ ಹರಕೆ ತೀರಿಸುವುದು ಎಂದರೆ ಉರುಳು ಸೇವೆ ಮಾಡುವುದು, ಪಾದಯಾತ್ರೆ ಮಾಡುವುದು, ಉಪವಾಸ, ಬರಿಗಾಲಲ್ಲಿ ಬೆಟ್ಟ ಹತ್ತುವುದನ್ನು ನೋಡಿದ್ದೇವೆ. ಆದ್ರೆ ಇಲ್ಲೋರ್ವ ಭಕ್ತ ತನ್ನ ಹರಕೆಯನ್ನು ವಿಶಿಷ್ಟವಾಗಿ ತೀರಿಸುವ ಮೂಲಕ ಗಮನ ಸೆಳೆದಿದ್ದಾನೆ. ಈ ಯುವಕ ಬರೋಬ್ಬರಿ 48 ಕಿ.ಮೀ ದೂರ ಟ್ರ್ಯಾಕ್ಟರ್​ಗೆ ಟ್ರಾಲಿ ಜೋಡಿಸಿಕೊಂಡು ರಿವರ್ಸ್ ಡ್ರೈವ್ ಮಾಡಿಕೊಂಡು ಹೋಗಿ ಹರಕೆ ತೀರಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದ ನಿವಾಸಿ 25 ವರ್ಷದ ಮಹೇಶ ಅಥಣಿ …

Read More »

ಮದ್ಯದ ಅಂಗಡಿಗಳನ್ನು ತೆರೆಯಲು ಪರವಾನಗಿ ನೀಡುವುದನ್ನು ವಿರೋಧಿಸಿ ಎಐಎಂಎಸ್‌ಎಸ್‌ ಪ್ರತಿಭಟನೆ

ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ 1000ಕ್ಕೂ ಹೆಚ್ಚು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡಲು ಅಬಕಾರಿ ಇಲಾಖೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್)ಯು ಖಂಡಿಸಿದ್ದು, ಬೆಂಗಳೂರು ಜಿಲ್ಲಾ ಸಮಿತಿಯಿಂದ ಬುಧವಾರ ನಗರದ ಫ್ರೀಡಂಪಾರ್ಕನಲ್ಲಿ ಪ್ರತಿಭಟನೆ ನಡೆಸಲಾಯಿತು.   ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಎಂಎಸ್‌ಎಸ್‌ ಜಿಲ್ಲಾ ಕಾರ್ಯದರ್ಶಿ ಎ ಶಾಂತ ಅವರು, ಈಗಾಗಲೇ ಮದ್ಯಪಾನದಂತಹ ದುಶ್ಚಟದಿಂದಾಗಿ ಲಕ್ಷಾಂತರ ಕುಟುಂಬಗಳು ಬೀದಿಗೆ ಬಿದ್ದಿವೆ. ಇಂತಹ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳು ಹಾಗೂ …

Read More »

ಕಾವೇರಿ ನೀರು ವಿಚಾರವಾಗಿ ಕಮಲ-ದಳ ಜಂಟಿ ಹೋರಾಟ; ಸರ್ಕಾರಕ್ಕೆ ಬಿಎಸ್​ವೈ, ಹೆಚ್​ಡಿಕೆ ಎಚ್ಚರಿಕೆ ಸಂದೇಶ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಜಂಟಿ ಪ್ರತಿಭಟನೆ ನಡೆಸಿದರು.‌ ಪ್ರತಿಪಕ್ಷ ನಾಯಕರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್​ ಅವರನ್ನು ಡಿಎಂಕೆ ಏಜೆಂಟ್ ಎಂದು ವಾಗ್ದಾಳಿ ನಡೆಸಿದರು.   ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಳಿಕ ಇದು ಮೊದಲ ಜಂಟಿ ಹೋರಾಟವಾಗಿದ್ದು, ಧರಣಿಯಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಹೆಚ್ …

Read More »

ಇನ್ಸ್​ಟಾಗ್ರಾಮ್​ನಲ್ಲಿ ಚಾಟಿಂಗ್ ಮಾಡುತ್ತಿದ್ದಾಗ ವಾಗ್ವಾದ ಬಾಲಕನ ಜೀವ ತೆಗೆಯುವ ಮಟ್ಟಕ್ಕೂ ಹೋಗಿರುವ ಘಟನೆ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ: ಇನ್ಸ್​ಟಾಗ್ರಾಮ್​ನಲ್ಲಿ ಚಾಟಿಂಗ್ ಮಾಡುತ್ತಿದ್ದಾಗ ಒಂದೇ ಊರಿನ ಬಾಲಕರ ನಡುವೆ ವಾಗ್ವಾದ ನಡೆದಿದೆ. ಈ ವಾಗ್ವಾದ ಓರ್ವ ಬಾಲಕನ ಜೀವ ತೆಗೆಯುವ ಮಟ್ಟಕ್ಕೂ ಹೋಗಿರುವ ಘಟನೆ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪ್ರಜ್ವಲ್ ಸುಂಕದ(16) ಮೃತ ಬಾಲಕ. ಮಲ್ಲಪ್ಪ ಹಾಗೂ ಮಲ್ಲವ್ವ ದಂಪತಿಯ ಎರಡನೇ ಮಗನಾದ ಪ್ರಜ್ವಲ್, ಈಗತಾನೇ ಕಾಲೇಜು ಮೆಟ್ಟಿಲು ಹತ್ತಿದ್ದ. ಇತ್ತೀಚೆಗೆ ತಮ್ಮದೇ ಊರಿನ ಗೆಳೆಯರ ಜೊತೆಗೆ ಇನ್ಸ್​ಟಾಗ್ರಾಮ್​ನಲ್ಲಿ ಜಗಳವಾಗಿತ್ತು. ಇದು ಕೇವಲ ವಾಗ್ವಾದಕ್ಕೆ ಸಿಮೀತವಾಗದೇ ಆತನ …

Read More »

ಬೆಳಗಾವಿಯಲ್ಲಿ ಅಕ್ಕಲಕೋಟ ಸ್ವಾಮಿ ಸಮರ್ಥ‌ ಮಹಾರಾಜರ ಮಂದಿರದ ಪ್ರತಿರೂಪ ನಿರ್ಮಿಸಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

ಬೆಳಗಾವಿ: ಇಲ್ಲಿಯ ಸೋಮನಾಥ ನಗರದ ಜೈ ಕಿಸಾನ್ ಹೋಲ್​ಸೇಲ್ ಬಾಜಿ ಮಾರ್ಕೆಟ್ ಸಾರ್ವಜನಿಕ ಗಣೇಶೋತ್ಸವ ಮಂಡಳಿಯು 35ನೇ ವರ್ಷದ ಗಣೇಶೋತ್ಸವ ನಿಮಿತ್ತ ಈ ಬಾರಿ ಮಹಾರಾಷ್ಟ್ರದ ಅಕ್ಕಲಕೋಟ ಸ್ವಾಮಿ ಸಮರ್ಥ‌ ಮಹಾರಾಜರ ಮಂದಿರದ ಪ್ರತಿರೂಪವನ್ನು ನಿರ್ಮಿಸಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿದೆ.   ಮಂದಿರದ ಒಳಗಡೆ ಸ್ವಾಮಿ ಸಮರ್ಥ‌ ಮಹಾರಾಜರ ಮೂರ್ತಿ ಹಾಗೂ ಅವರ ಜೀವನದ ವಿವಿಧ ಕಾಲಘಟ್ಟದ ಭಾವಚಿತ್ರಗಳು ಕಣ್ಮನ ಸೆಳೆಯುತ್ತಿವೆ. ಇನ್ನು ರಾತ್ರಿ ಹೊತ್ತು ಇಡೀ ಮಂದಿರವು ವಿದ್ಯುತ್ ದೀಪಗಳಿಂದ …

Read More »

ರೈಲಿನಲ್ಲಿ ದರೋಡೆ ನಡೆಸುತ್ತಿದ್ದ ಚಾಕೊಲೇಟ್​ ಗ್ಯಾಂಗ್​ ಬಂಧನ​

ಬೆಳಗಾವಿ: ರೈಲಿನಲ್ಲಿ ಆಕ್ಟೀವ್ ಆಗಿದ್ದ ಚಾಕೊಲೇಟ್​ ಗ್ಯಾಂಗ್ ಅನ್ನು ಹೆಡೆಮುರಿ ಕಟ್ಟುವಲ್ಲಿ ಗೋವಾದ ಆರ್ ಪಿ ಎಫ್ ಪೊಲೀಸರು ಯಶಸ್ವಿಯಾಗಿದ್ದಾರೆ. ದಿನನಿತ್ಯ ಗೋವಾ-ಬೆಳಗಾವಿ ಮಾರ್ಗವಾಗಿ ಸಂಚರಿಸುವ ರೈಲಿನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಂದು ಪ್ರಯಾಣಿಕರ ಜೊತೆಗೆ ಸಲುಗೆ ಬೆಳಸಿ ದರೋಡೆ ಮಾಡ್ತಿದ್ದ ಗ್ಯಾಂಗ್ ಗೋವಾ ಮತ್ತು ಕರ್ನಾಟಕ ರೈಲ್ವೆ ಪೊಲೀಸರಿಗೆ ದೊಡ್ಡ ತಲೆ ನೋವಾಗಿದ್ದರು. ಕಳೆದ 20 ದಿನಗಳ ಹಿಂದೆ ಗೋವಾ-ಬೆಳಗಾವಿ ಮಾರ್ಗದಲ್ಲಿ ಮಧ್ಯಪ್ರದೇಶ ಮೂಲದ ಎಂಟು ಜನ ಪ್ರಯಾಣಿಕರಿಗೆ ತಮ್ಮ ಕೈಚಳಕ …

Read More »

ಟೆಕ್ ದಿಗ್ಗಜ ‘ಗೂಗಲ್‌’ ಇಂದು ತನ್ನ 25ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷ ಡೂಡಲ್​​ ಮೂಲಕ ಆಚರಿಸಿಕೊಂಡಿದೆ.

ಟೆಕ್ ದಿಗ್ಗಜ ‘ಗೂಗಲ್‌’ ಇಂದು ತನ್ನ 25ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷ ಡೂಡಲ್​​ ಮೂಲಕ ಆಚರಿಸಿಕೊಂಡಿದೆ. Google 25th Birthday: ಜಾಗತಿಕ ಟೆಕ್​ ದೈತ್ಯ, ಎಲ್ಲರ ನೆಚ್ಚಿನ ಸರ್ಚ್ ಇಂಜಿನ್ ‘ಗೂಗಲ್’​ಗೆ ಇಂದು 25 ವರ್ಷ ತುಂಬಿದ್ದು, ಡೂಡಲ್ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದೆ. “ವಾಕ್ ಡೌನ್ ಮೆಮೊರಿ ಲೇನ್” ಮೂಲಕ ಕಂಪನಿಯು ತನ್ನ ಜನ್ಮದಿನದಂದು ವಿಭಿನ್ನ ಡೂಡಲ್‌ಗಳನ್ನು ಪ್ರದರ್ಶಿಸಿತು.     ಹೊಸ ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಮಾಡುವ ಮೂಲಕ ವಿಶ್ವದ …

Read More »

ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಚಾಲೆಂಜ್‌ ಮಾಡ್ತೀವಿ: ಸಿದ್ದರಾಮಯ್ಯ

ಚಾಮರಾಜನಗರ : ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿಯು (CWRC) ತಮಿಳುನಾಡಿಗೆ 18 ದಿನಗಳಲ್ಲಿ 3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್​ನಲ್ಲಿ ಚಾಲೆಂಜ್ ಮಾಡುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹನೂರು ತಾಲೂಕಿನ ಮಾದಪ್ಪನ ಸನ್ನಿಧಾನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿಚಾರವನ್ನು ಸುಪ್ರೀಂ ಕೋರ್ಟ್​ನಲ್ಲಿ ಚಾಲೆಂಜ್ ಮಾಡುತ್ತೇವೆ. ಸದ್ಯ ನಮ್ಮ ಬಳಿ ನೀರು ಇಲ್ಲ, ಈಗಾಗಲೇ ಕಾನೂನು …

Read More »

ಕ್ಷುಲ್ಲಕ ಕಾರಣಕ್ಕೆ ಇಬ್ಬರ ಭೀಕರ ಕೊಲೆ: ಬೆಳಗಾವಿ-ಹುಬ್ಬಳ್ಳಿಯಲ್ಲಿ ಪ್ರತ್ಯೇಕ ಘಟನೆ

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ಗುಂಪು ತಲವಾರ್​ನಿಂದ ಬಾಲಕನೋರ್ವನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಚನ್ನಮ್ಮ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಾಪೂರ ಗ್ರಾಮದ ಪ್ರಜ್ವಲ್ ಸುಂಕದ (16) ಮೃತ ಬಾಲಕ. ನಾಲ್ವರು ಬಾಲಕರು ಸೇರಿಕೊಂಡು ಮಂಗಳವಾರ ಪ್ರಜ್ವಲ್ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಆತ​ನನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ತಡರಾತ್ರಿ ಮೃತಪಟ್ಟಿದ್ದಾನೆ. ಕೊಲೆಗೆ ನಿಖರ ಕಾರಣ …

Read More »

ಬೆಳಗಾವಿ: ಹಣಕಾಸು ವಿಚಾರವಾಗಿ ಇಬ್ಬರು ಸೈನಿಕರ ಜಗಳ, ಗುಂಡಿನ ದಾಳಿಯಿಂದ ಓರ್ವನಿಗೆ ಗಾಯ

ಬೆಳಗಾವಿ: ಸೈನಿಕರಿಬ್ಬರ ನಡುವೆ ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆದು ಓರ್ವ ಸೈನಿಕ ಮತ್ತೊಬ್ಬ ಸೈನಿಕನಿಗೆ ಬಂದೂಕಿನಿಂದ ಗುಂಡು ಹಾರಿಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಗೋಕಾಕ ತಾಲ್ಲೂಕಿನ ರಾಜನಕಟ್ಟೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.   ನಂಜುಂಡಿ ಲಕ್ಷ್ಮಣ ಬೂದಿಹಾಳ (32) ಗುಂಡು ಹಾರಿಸಿದ ಆರೋಪಿ. ಬಸಪ್ಪ ಮೈಲಪ್ಪ ಬಂಬರಗಾ (32) ಗಾಯಗೊಂಡಾತ. ಇಬ್ಬರೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಇಬ್ಬರೂ ಕೂಡ ರಾಜನಕಟ್ಟೆ ಗ್ರಾಮದವರೇ ಆಗಿದ್ದಾರೆ. ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ವೈಷಮ್ಯ …

Read More »