ಹುಬ್ಬಳ್ಳಿ: ಕಾಂಗ್ರೆಸ್ನ ಕುರ್ಚಿ ಗುದ್ದಾಟ ಜೋರಾಗಿದೆ. ಸಿಎಂ ಕುರ್ಚಿಗಾಗಿ ಅವರಲ್ಲೇ ಗುದ್ದಾಟ ನಡೆದಿದೆ. ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಿಂದ ಕಾಂಗ್ರೆಸ್ ಸರ್ಕಾರ ಪತನವಾಗುವುದು ಖಚಿತ ಎಂದು ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಇದು ಒಂದಲ್ಲ ಒಂದು ದಿನ ಇದು ಹೊರ ಬರುತ್ತೆ ಅಂತ ಹೇಳಿದ್ದೆ. ಈಗಾಗಲೇ ಔತಣಕೂಟ ಆರಂಭವಾಗಿದೆ. ಕೆಲ ಸಚಿವರು ಸೇರಿ ಔತಣಕೂಟ ಆಯೋಜನೆ ಮಾಡಿದರು. ಆದರೆ, ಎಸ್ಸಿ, ಎಸ್ಟಿ …
Read More »ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್; ಡಿಸಿಎಂ ಡಿಕೆ ಶಿವಕುಮಾರ್
ಸಿ ಟಿ ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್. ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸಿಮ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಟೀಕಿಸಿದ್ದಾರೆ. ಶೃಂಗೇರಿಯಲ್ಲಿ ಅವರು ಮಾಧ್ಯಮದವರಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಲಕ್ಷ್ಮಿ ಹೆಬ್ಬಾಳ್ಳರ್ ಅವರಿಗೆ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಸಿ.ಟಿ. ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ ಎಂದು ಕೇಳಿದಾಗ, “ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್ ಆಗಿದ್ದಾರೆ. ಅವರನ್ನು ರಾಷ್ಟ್ರೀಯ ನಾಯಕರು, …
Read More »ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : “ಕೇಂದ್ರದ ಬಳಿ ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಲೇ ಬೇಕು. ನಮ್ಮ ರಾಜ್ಯದ ಹಿತವನ್ನು ಕಾಪಾಡಲೇಬೇಕು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮುಂದುವರೆಯಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಜೆಪಿಯ ಇಷ್ಟೊಂದು ಜನ ಸಂಸದರು ಏಕೆ ಮೌನವಾಗಿ …
Read More »ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್
ಚಿಕ್ಕಮಗಳೂರು : “ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಶೃಂಗೇರಿಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಶನಿವಾರ ಉತ್ತರಿಸಿದರು. ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಅವರು ಆಗಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ ಎಂದು …
Read More »ದರ ಏರಿಕೆ ಸಮರ್ಥಿಸಿಕೊಂಡ ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ
ದರ ಏರಿಕೆ ಸಮರ್ಥಿಸಿಕೊಂಡ ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅಥಣಿ: ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಕೇಂದ್ರ ಟ್ಯಾಕ್ಸ್ ಕಡಿಮೆ ಮಾಡಲಿ ಎಂದು ಕೇಂದ್ರದ ಕಡೆಗೆ ಬೊಟ್ಟು ಮಾಡಿದ್ದಾರೆ. ಅಥಣಿ ಪಟ್ಟಣದ ಭೂ ಸುರಕ್ಷಾ ಯೋಜನೆ ಅಡಿಯಲ್ಲಿ ಅಭಿಲೇಖಾಲಯದ ಶಾಖೆಗಳ ಗಣಕೀಕರ ಯಂತ್ರಗಳ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ನಾನು ಬಿಜೆಪಿ ಸರ್ಕಾರದ …
Read More »ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಅರ್ಬನ್ ನಕ್ಸಲರ ಕುರಿತು ವಾಗ್ದಾಳಿ ನಡೆಸಿದ ಶಾಸಕ ಸಿ.ಟಿ.ರವಿ
ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಅರ್ಬನ್ ನಕ್ಸಲರ ಕುರಿತು ವಾಗ್ದಾಳಿ ನಡೆಸಿದ ಶಾಸಕ ಸಿ.ಟಿ.ರವಿ ರಾಜ್ಯದಲ್ಲಿ ನಕ್ಸಲರ್ ಶರಣಾಗತಿಗೆ ಸಂಬಂಧಿಸಿದಂತೆ ಸರ್ಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಅವರು ನಕ್ಸಲರು ಸರ್ಕಾರಕ್ಕೆ ಕಂಡಿಷನ್ ಹಾಕುತ್ತಿದ್ದಾರೆ. ಶರಣಾಗಿರುವದು ನಕ್ಸಲರೋ ಅಥವಾ ಸರ್ಕಾರವೋ ಎಂದು ಪ್ರಶ್ನಿಸಿದರು. ಸಿಎಂ ಸಿದ್ದರಾಮಯ್ಯ ನವರ ಸಾಪ್ಟ್ ವೇ ಯಿಂದ ಅರ್ಬನ್ ನಕ್ಸಲರು ಡಿಪೆಂಡ್ ಮಾಡ್ತಾ ಇದ್ಸಾರೆ . …
Read More »ಪ್ರಧಾನಿ ಮೊದಿಯೊಂದಿಗೆ ನಡೆಯುವ ಸಂವಾಧದಲ್ಲಿ ಪಾಲ್ಗೊಳ್ಳಲು ತೆರಳಿದ ವಿಜಯಪುರದ ಯುವಕ, ಮನೆಯಲ್ಲಿ ಸಂಭ್ರಮಾಚರಣೆ
: ದೇಶದ ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಕಾಲ ದೆಹಲಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಈ ಕಾರ್ಯಕ್ರಮ ದಲ್ಲಿ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. ಈ ಸಂವಾದಕ್ಕೆ ಗುಮ್ಮಟ ನಗರಿಯ ಯುವಕ ಸೆಲೆಕ್ಟ್ ಆಗಿದ್ದು ಯುವಕನ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಹಾಗಾದರೆ ಅಲ್ಲಿ ನಡೆಯುವ ಕಾರ್ಯಕ್ರಮವಾದರೂ ಏನು ಅಂತೀರಾ ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್… ದೇಶದ ಪ್ರಧಾನಿ ನರೇಂದ್ರ ಮೋದಿ ಇದೇ ಜನವರಿ …
Read More »ಮೈಕ್ರೋ ಫೈನಾನ್ಸ್ ಕಂಪನಿಗಳ ಟಾರ್ಚರ್: ಗ್ರಾಮ ತೊರೆದ ನೂರಾರು ಕುಟುಂಬಗಳು
ಚಾಮರಾಜನಗರ, ಜನವರಿ 10: ಗ್ರಾಮಾಂತರ ಪ್ರದೇಶಗಳಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ (Microfinance) ಕಂಪನಿಗಳ ಕಿರುಕುಳ ಮಿತಿ ಮೀರಿದೆ. ಇವರ ಕಿರುಕುಳ ತಾಳಲಾರದೆ ಜಿಲ್ಲೆಯ ಗ್ರಾಮಗಳಲ್ಲಿ ನೂರಾರು ಕುಟುಂಬಗಳು ಗ್ರಾಮ ತೊರೆದಿವೆ. ಈ ಫೈನಾನ್ಸ್ಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆ ಮೂಲಕ ಗಡಿ ನಾಡು ಚಾಮರಾಜನಗರದಲ್ಲಿ ಎಗ್ಗಿಲ್ಲದೆ ಕರಾಳ ದಂಧೆ ಸಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.ಹೌದು.. ಕೆಲವು ಮೈಕ್ರೋ ಫೈನಾನ್ಸ್ ಕಂಪನಿಗಳು ಬಡ ಜನರ ರಕ್ತ ಹೀರುತ್ತಿವೆ. ಯಾವುದೇ ಭದ್ರತೆ ಇಲ್ಲದೆ ಕೇವಲ ಒಂದು …
Read More »ನಾಲ್ಕು ದಿನದ ಪ್ರತಿಭಟನೆಗೆ ಕೊನೆಗೂ ಜಯ
ಬೆಂಗಳೂರು, ಜನವರಿ 10: ಅವರೆಲ್ಲ ಕೋವಿಡ್ ಸಮಯದಲ್ಲಿ ಟೊಂಕಕಟ್ಟಿ ದುಡಿದವರು. ಇಡೀ ದೇಶವೇ ಲಾಕ್ ಡೌನ್ನಲ್ಲಿ ಸ್ತಬ್ಧವಾಗಿದ್ದಾಗ ಜೀವದ ಹಂಗು ತೊರೆದು ಫೀಲ್ಡ್ಗಿಳಿದು ದುಡಿದವರು. ಆದರೆ ಇದೀಗ ಸರ್ಕಾರದ ಭರವಸೆಗಳು ಬರೀ ಮಾತಾಗಿ ಉಳಿದಿದ್ದರಿಂದ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ಹಾದಿ ಹಿಡಿದಿದ್ದರು. ಇತ್ತ ಆಶಾ ಕಾರ್ಯಕರ್ತೆಯರ (ASHA workers) ಪ್ರತಿಭಟನೆ ಬಗ್ಗೆ ಹಲವು ಭಾರೀ ಸಂಧಾನ ನಡೆಸಿ ಸುಸ್ತಾಗಿದ್ದ ಸರ್ಕಾರ, ಇದೀಗ ಆಶಾಕಾರ್ಯಕರ್ತೆಯರ ಮನವೊಲಿಸುವುದರಲ್ಲಿ ಕೊನೆಗೂ ಸಕ್ಸಸ್ ಆಗಿದೆ. ಇತ್ತ ಮೈಕೊರೆವ ಚಳಿ …
Read More »ಕಾರಾಗೃಹದಲ್ಲಿ ಎಸೆನ್ಸ್ ಸೇವಿಸಿ ಮೂವರು ಕೈದಿಗಳು ಸಾವು ಪ್ರಕರಣದ ಹಿನ್ನೆಲೆಯಲ್ಲಿ ಕಾರಾಗೃಹ ಹಾಗೂ ಸುಧಾರಣಾ ಸೇವಾ ಇಲಾಖೆಯು ಖಡಕ್ ಸೂಚನೆ
ಬೆಂಗಳೂರು: ಮೈಸೂರು ಕೇಂದ್ರ ಕಾರಾಗೃಹದಲ್ಲಿ ಕೇಕ್ ತಯಾರಿಕೆಗೆ ಬಳಸಲಾಗುವ ಸುಗಂಧದ್ರವ್ಯ (ಎಸೆನ್ಸ್) ಸೇವಿಸಿ ಮೂವರು ಸಜಾ ಕೈದಿಗಳು ಸಾವನ್ನಪ್ಪಿರುವ ಪ್ರಕರಣವನ್ನು ಕಾರಾಗೃಹ ಹಾಗೂ ಸುಧಾರಣಾ ಸೇವಾ ಇಲಾಖೆಯು ಗಂಭೀರವಾಗಿ ಪರಿಗಣಿಸಿದ್ದು, ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಿರಲು ರಾಜ್ಯದ ಎಲ್ಲಾ ಜೈಲುಗಳಿಗೆ ನಿರ್ದೇಶನ ನೀಡಿದೆ. ಬೆಂಗಳೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ ಸೇರಿದಂತೆ ಇತರ ರಾಜ್ಯ ಹಾಗೂ ಜಿಲ್ಲಾ ಕಾರಾಗೃಹಗಳ ಅಧೀಕ್ಷಕರಿಗೆ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ನಿರ್ದೇಶನ …
Read More »
Laxmi News 24×7