Breaking News

ರಾಜಕೀಯ

ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಅವರು ಭಿನ್ನರ ಮಾತಿನ ಕುರಿತು ತಲೆಕೆಡಿಸಿಕೊಳ್ಳುವುದು ಬೇಡ ಎಂದು ಹೇಳಿದ್ದಾರೆ.

ಬೆಂಗಳೂರು : ಯಾರೋ ಒಂದಿಬ್ಬರು ಹಗುರವಾಗಿ ಮಾತನಾಡುತ್ತಿರಬಹುದು. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದು ಬೇಡ. ಹೈಕಮಾಂಡ್ ನಾಯಕರು ಕೈಕಟ್ಟಿ ಕೂತಿದ್ದಾರೆ ಎಂದು ಯಾರೂ ಭಾವಿಸಬೇಡಿ ಎಂದು ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಪರೋಕ್ಷವಾಗಿ ಭಿನ್ನರ ಬಗ್ಗೆ ಮಾತನಾಡಿದ್ದಾರೆ. ನಗರದ ಖಾಸಗಿ ಹೋಟೆಲ್​ನಲ್ಲಿ ನಡೆದ ಮಾಜಿ ಶಾಸಕರ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಸುಮ್ಮನೆ ಕುಳಿತಿಲ್ಲ. ಆ ರೀತಿ ನೀವು ಭಾವಿಸಿದರೆ ಅದು ತಪ್ಪು. ಯಾವ ಸಂದರ್ಭದಲ್ಲಿ ಏನು ಮಾಡಬೇಕು ಎನ್ನುವುದನ್ನು …

Read More »

ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು,

ಮೈಸೂರು: ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಸುರಕ್ಷತಾ ಕ್ರಮವಾಗಿ ಕಂಪನಿಯ ಟ್ರೈನಿ ಉದ್ಯೋಗಿಗಳಿಗೆ ಜನವರಿ 26ರವರೆಗೆ ರಜೆ ಘೋಷಣೆ ಮಾಡಲಾಗಿದೆ.   ಕಳೆದ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಚಿರತೆ, ಬೋನಿಗೆ ಬೀಳದೆ ಅರಣ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸುತ್ತಿದೆ. ಕ್ಯಾಮೆರಾದಲ್ಲಿ ಚಿರತೆಯ ಚಲನವಲನ ಸೆರೆಯಾಗಿದೆ. ಆದರೆ ಕಾರ್ಯಾಚರಣೆ ವೇಳೆ ಇನ್ನೂ ಪತ್ತೆಯಾಗದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.   …

Read More »

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಸೇರಿದಂತೆ ಇತರ ಆರೋಪಿಗಳು ಇಂದು ನ್ಯಾಯಾಲಯದೆದುರು ಹಾಜರ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳು ಷರತ್ತಿನ ಪ್ರಕಾರ ಇಂದು (ಶುಕ್ರವಾರ) ಬೆಂಗಳೂರಿನ ಸಿಸಿಹೆಚ್ 57ರ ನ್ಯಾಯಾಲಯದ ಮುಂದೆ ಹಾಜರಾದರು. ದರ್ಶನ್, ಪವಿತ್ರಾ ಗೌಡ, ಪ್ರದೋಶ್, ನಾಗರಾಜ್ ಸೇರಿದಂತೆ ಎಲ್ಲ 17 ಮಂದಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.   ಆರೋಪಿಗಳಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಪ್ರತಿ ತಿಂಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಅದರಂತೆ, ಎಲ್ಲಾ ಆರೋಪಿಗಳು ನ್ಯಾಯಾಧೀಶರೆದುರು ಹಾಜರಾಗಿದ್ದಾರೆ. ಆರೋಪಿಗಳ ಹಾಜರಿ ಪಡೆದುಕೊಂಡ ನ್ಯಾಯಾಧೀಶರು …

Read More »

ಶರಣಾದ ನಕ್ಸಲರ ಶಸ್ತ್ರಾಸ್ತ್ರಗಳೆಲ್ಲಿ? ‘ಪೊಲೀಸರು ಪತ್ತೆ ಹಚ್ತಾರೆ’- ಜಿ.ಪರಮೇಶ್ವರ್

ಬೆಂಗಳೂರು: ”ಶರಣಾಗತರಾದ ನಕ್ಸಲರು ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಬಿಸಾಕಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.   ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮವದವರ ಜೊತೆ ಮಾತನಾಡಿದ ಅವರು, ಸರ್ಕಾರವು ನಕ್ಸಲರಿಗೆ ಪರಿಹಾರ‌ ಮತ್ತು ಪುನರ್ ವಸತಿ ಕಲ್ಪಿಸುವ ವಿಚಾರದಲ್ಲಿ ತೋರಿದ ಮುತುವರ್ಜಿಯನ್ನು ಶಸ್ತ್ರಾಸ್ತ್ರ ಹುಡುಕುವುದರಲ್ಲಿ ತೋರುತ್ತಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸುತ್ತಾ, ”ನಾವು ಮಾಡುವ ಕೆಲಸ ಮಾಡುತ್ತೇವೆ. ಕಾಡಲ್ಲಿ ಎಲ್ಲಿ ಶಸ್ತ್ರಾಸ್ತ್ರ ಇಟ್ಟಿದ್ದಾರೆ …

Read More »

ಪಾರ್ಟಿ ವೇಳೆ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಕೊಲೆಗೆ ಕಾರಣವಾಗಿದ್ದ ಏಳು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಸಾವಿಗೆ ಕಾರಣರಾಗಿದ್ದ 7 ಜನ ಆರೋಪಿಗಳನ್ನು ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕುಶಾಲ್ (24) ಎಂಬಾತನ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ಮಾಡಿ ಆತನ ಸಾವಿಗೆ ಕಾರಣರಾಗಿದ್ದ ಆರೋಪದಡಿ ಸಾಗರ್, ದಿಲೀಪ್, ಗಂಗಾಧರ್, ವಿಜಯ್, ಮಾದೇಶ್ ಹಾಗೂ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ಬಂಧಿಸಲಾಗಿದೆ. ಡಿಸೆಂಬರ್ 31ರಂದು ರಾತ್ರಿ ಕುಶಾಲ್ ಹಾಗೂ ಆರೋಪಿಗಳು ಭುವನೇಶ್ವರಿ ನಗರದ ಗಾಂಧಿ ಬ್ರಿಡ್ಜ್ …

Read More »

ಡಿ.ಕೆ ಶಿವಕುಮಾರ್‌ (DK Shivakumar) ಬೇಜಾರಾಗಲು ಅವರ ಆಸ್ತಿ ಏನಾದರೂ ಬರೆಸಿಕೊಂಡಿದ್ದೇವಾ?:ಕೆಎನ್ ರಾಜಣ್ಣ

ತುಮಕೂರು: ಡಿ.ಕೆ ಶಿವಕುಮಾರ್‌ (DK Shivakumar) ಬೇಜಾರಾಗಲು ಅವರ ಆಸ್ತಿ ಏನಾದರೂ ಬರೆಸಿಕೊಂಡಿದ್ದೇವಾ? ಇದೆಲ್ಲ ಸುಮ್ಮನೆ ಅಷ್ಟೇ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ಸಹಕಾರಿ ಸಚಿವ ಕೆಎನ್ ರಾಜಣ್ಣ (KN Rajanna) ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಡಿನ್ನರ್ ಪಾರ್ಟಿ ವಿಚಾರದ ಕುರಿತು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿನ್ನರ್ ಪಾರ್ಟಿ (Dinner Party) ಕ್ಯಾನ್ಸಲ್ ಎಲ್ಲಿ ಆಗಿದೆ? ಮುಂದೂಡಿದ್ದೇವೆ ಅಷ್ಟೇ, ಕ್ಯಾನ್ಸಲ್ ಇಲ್ಲ. ಈಗಾಗಲೇ ಈ ಬಗ್ಗೆ ಪರಮೇಶ್ವರ್ …

Read More »

ಹೆಚ್.ಡಿ.ಕುಮಾರಸ್ವಾಮಿರವರನ್ನು ಭೇಟಿ ಮಾಡಿದರಮೇಶ ಜಾರಕಿಹೊಳಿರವರು

ಇಂದು ದೆಹಲಿಯಲ್ಲಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರೂ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿರವರನ್ನು ಭೇಟಿ ಮಾಡಿ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಹಾಗೂ ಅರಸೀಕೆರೆ ಪಕ್ಷ ಸಂಘಟನೆ ಬಲವರ್ಧನೆಯ ಬಗ್ಗೆ ಮಾಹಿತಿ ನೀಡಿದೆನು. ಈ ಸಂದರ್ಭದಲ್ಲಿ ಮಾಜಿ ಸಚಿವರುಗಳಾದ ಶ್ರೀ ರಮೇಶಣ್ಣ ಜಾರಕಿಹೊಳಿರವರು ಹಾಗು ಶ್ರೀ ಬಂಡೆಪ್ಪ ಕಾಶೆಪ್ಪನವರು ಉಪಸ್ಥಿತರಿದ್ದರು.

Read More »

ಗ್ರಾಮೀಣ ಪತ್ರಕರ್ತರಿಗೆ ರಕ್ಷಣೆ ಭದ್ರತೆ ನೀಡುವಂತೆ ಒತ್ತಾಯ

ಗ್ರಾಮೀಣ ಪತ್ರಕರ್ತರಿಗೆ ರಕ್ಷಣೆ ಭದ್ರತೆ ನೀಡುವಂತೆ ಒತ್ತಾಯ ತುಮಕೂರು ಬ್ರೇಕಿಂಗ್ ನ್ಯೂಸ್: ಅಕ್ರಮ ಸಂಬಂಧದ ಸುದ್ದಿ ಪ್ರಸಾರವಾದ ಹಿನ್ನಲೆಯಲ್ಲಿ ಹಿರಿಯ ಪತ್ರಕರ್ತನ ಮೇಲೆ ಮಾರಕ ದಾಳಿ. ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಘಟನೆ.. ಹಲ್ಲೆಗೊಳಗಾದ ಹಿರಿಯ ಪತ್ರಕರ್ತ ರಾಮಾಂಜಿನಪ್ಪ, ಗಡಿನಾಡು ದಿನಪತ್ರಿಕೆ ಹಾಗೂ ಗಡಿನಾಡು ನ್ಯೂಸ್ ಸಂಪಾದಕ. ಡಿಸೆಂಬರ್ 16ರಂದು ನಾರಾಯಣ ರೆಡ್ಡಿ ಎಂಬಾತನ ಅಕ್ರಮ ಸಂಬಂಧದ ಕುರಿತು ವರದಿ ಮಾಡಿದ್ದು ರಾಮಾಂಜಿನಪ್ಪ . ಮೂಲತಃ ನಾರಾಯಣ ರೆಡ್ಡಿ ಆಂದ್ರದವರು …

Read More »

ನಿಲ್ಲಿಸಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ

ಹಾವೇರಿ: ನಿಲ್ಲಿಸಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದು ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು ಕುಸುಮಾ (56) ಮತ್ತು ಕುಮಾರ (34) ಎಂದು ಗುರುತಿಸಲಾಗಿದೆ‌. ಮೃತರು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆರೂಡಿ ಗ್ರಾಮದ ನಿವಾಸಿಗಳು. ಹಂಸಭಾವಿಯ ತಮ್ಮ ಸಂಬಂಧಿಕರ ಮನೆಗೆ ಹೊರಟಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸ್ಥಳಕ್ಕೆ ಹಂಸಭಾವಿ ಠಾಣೆ ಪೊಲೀಸರು …

Read More »

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ

ನಿಮ್ಹಾನ್ಸನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಸಿ.ಎಂ ಸೂಚನೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ನಿಮ್ಹಾನ್ಸನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಸಿಎಂ ಸಿದ್ಧರಾಮಯ್ಯ ಸೂಚನೆ ರಾಜೀವ್‌ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ …

Read More »