Breaking News
Home / ರಾಜಕೀಯ (page 460)

ರಾಜಕೀಯ

ವಂದೇ ಭಾರತ್ ಎಕ್ಸ್‌ಪ್ರೆಸ್‌ʼ ರೈಲುಗಳಿಗೆ ‘ಪ್ರಧಾನಿ ಮೋದಿ’ ಚಾಲನೆ

ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಐದು ವಂದೇ ಭಾರತ್ ಎಕ್ಸ್‌ಪ್ರೆಸ್‌(Vande Bharat Express) ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್ಪ್ರೆಸ್, ಮಡಗಾಂವ್-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಹಟಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಭೋಪಾಲ್ನಿಂದ ಮೋದಿ ಚಾಲನೆ ನೀಡಲಿದ್ದಾರೆ.    

Read More »

ನೀರು ಸರಬರಾಜಿನಲ್ಲಿ ಸಮಸ್ಯೆ ಎದುರಾಗದಂತೆ ತಾಲ್ಲೂಕು ಪ್ರವಾಸ ಕೈಗೊಳ್ಳಿ: ಜಿ.ಪಂ ಸಿಇಒಗಳಿಗೆ ಪ್ರಿಯಾಂಕ್‌ ಖರ್ಗೆ ಸೂಚನೆ

ಬೆಂಗಳೂರು : ರಾಜ್ಯದ ಗ್ರಾಮೀಣ ಭಾಗಗಳ ಕೆಲವು ಸ್ಥಳಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಅರಿತು, ಪರಿಹಾರ ಕಂಡುಕೊಳ್ಳುವ ಸಲುವಾಗಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ತಕ್ಷಣವೇ ತಾಲ್ಲೂಕು ಪ್ರವಾಸ ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ಹಾಗೂ ತಂತ್ರಜ್ಞಾನ ಇಲಾಖೆಗಳ ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶಿಸಿದರು. ವಿಧಾನಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು …

Read More »

ಇಳಿವಯಸ್ಸಿನಲ್ಲೂ ಬತ್ತದ ಉತ್ಸಾಹ: 100, 200 ಮೀಟರ್‌ ಓಟದ ಸ್ಪರ್ಧೆಯಲ್ಲಿ ಚಿನ್ನ ಗೆದ್ದ 106ರ ಅಜ್ಜಿ!

ಡೆಹ್ರಾಡೂನ್ (ಉತ್ತರಾಖಂಡ): ಯುವರಾಣಿ ಮಹೇಂದ್ರ ಕುಮಾರಿ ಅವರ ಸ್ಮರಣಾರ್ಥ ಆಯೋಜಿಸಿರುವ 18ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಸೋಮವಾರ ಆರಂಭವಾಯಿತು. ಎರಡು ದಿನಗಳ ಕಾಲ ನಡೆಯಲಿರುವ ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳಿಂದ 800ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ 5 ವರ್ಷದಿಂದ 106 ವರ್ಷದೊಳಗಿನ ಆಟಗಾರರು ಭಾಗವಹಿಸುತ್ತಿರುವುದು ವಿಶೇಷ. ಯುವಕರಲ್ಲಿ ಕ್ರೀಡೆಗಳ ಕುರಿತು ಆಸಕ್ತಿ ಬೆಳೆಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಈ ಸ್ಪರ್ಧೆಯನ್ನು ಕಾಂಗ್ರೆಸ್ ಮುಖಂಡ ಸೂರ್ಯಕಾಂತ ದಶಮಾನ ನಡೆಸುತ್ತಿದ್ದಾರೆ. ಇಂದು ಈ ಸ್ಪರ್ಧೆಯ …

Read More »

ಗ್ರಾಮ ಒನ್​ನಲ್ಲಿ ಯಾರಾದರೂ ಲಂಚ ಕೇಳಿದರೆ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್​

ರಾಮನಗರ: ನಮ್ಮನ್ನು ಜನ ಆಯ್ಕೆ ಮಾಡಿದ್ದಾರೆ. ಜನ ಸೇವೆ ಮಾಡಲು ಅವಕಾಶ ಕೊಟ್ಟಿದ್ದಾರೆ. ಸರ್ಕಾರದ ಸೇವೆ ಮಾಡಲು ನೀವಿದ್ದಿರಿ. ರಾಜಕಾರಣಿಗಳು ಅಧಿಕಾರಿಗಳ ಬಳಿ ಜನ ಬರೋದು ಸಮಸ್ಯೆ ಬಗೆಹರಿಯದೇ ಇದ್ದಾಗ. ಆ ಸಮಸ್ಯೆ ಬಗೆಹರಿಸಬೇಕಾದ್ದು ನಮ್ಮ ಕರ್ತವ್ಯ. ಕಾನೂನು ಚೌಕಟ್ಟಿನೊಳಗೆ ಸಮಸ್ಯೆಗಳನ್ನು ಪರಿಹರಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ರಾಮನಗರ ಜಿಲ್ಲಾ ಪಂಚಾಯಿತಿಯಲ್ಲಿ ಇಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರವನ್ನು …

Read More »

ವಿದ್ಯಾರ್ಥಿಗಳು, ಸಾರ್ವಜನಿಕರು ಬಸ್ ವ್ಯವಸ್ಥೆ ಇಲ್ಲದೇ ವನ್ಯಮೃಗಗಳ ಭೀತಿಯಲ್ಲಿ ಓಡಾಡಬೇಕಾದ ದುಸ್ಥಿತಿ

ಬೆಳಗಾವಿ : ಒಂದೆಡೆ ಮಹಿಳೆಯರಿಗೆ ಶಕ್ತಿ ಯೋಜನೆ ಮೂಲಕ ಉಚಿತ ಬಸ್ ಪ್ರಯಾಣಕ್ಕೆ ರಾಜ್ಯ ಸರ್ಕಾರ ಚಾಲನೆ ಕೊಟ್ಟಿದೆ. ಆದರೆ ಇಲ್ಲಿನ ಕಾಡಂಚಿನ ಗ್ರಾಮಗಳಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಬಸ್ ವ್ಯವಸ್ಥೆ ಇಲ್ಲದೇ ವನ್ಯಮೃಗಗಳ ಭೀತಿಯಲ್ಲಿ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡಬೇಕಾದ ದುಸ್ಥಿತಿ ಎದುರಿಸುತ್ತಿದ್ದಾರೆ. ಜಿಲ್ಲೆಯ ಖಾನಾಪುರ ತಾಲೂಕಿನ ಹಲವು ಗ್ರಾಮಗಳಲ್ಲಿನ ಜನರು ಸರಿಯಾದ ಬಸ್​ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದಾರೆ. ಇಲ್ಲಿನ ಬಾಲಕೆ ಕೆಎಚ್, ಶಿಂಧೊಳ್ಳಿ, ಹೊನಕಲ್, ಗವ್ವಾಳಿ, ಪಾಸ್ತೊಳಿ, ಅಮಗಾಂವ, ತಳೇವಾಡಿ, …

Read More »

ಮಧ್ಯಪ್ರದೇಶದಲ್ಲೂ ಪೇಸಿಎಂ ಪೋಸ್ಟರ್ ವಾರ್

ಭೋಪಾಲ್ (ಮಧ್ಯ ಪ್ರದೇಶ) : ಈ ವರ್ಷಾಂತ್ಯದಲ್ಲಿ ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಮಧ್ಯೆ ರಾಜಕೀಯ ಪಕ್ಷಗಳ ನಡುವಿನ ಮಾತಿನ ಚಕಮಕಿ ತಾರಕಕ್ಕೇರಿದ್ದು, ಇದೀಗ ಪೋಸ್ಟರ್ ವಾರ್​ನಿಂದಾಗಿ ರಾಜ್ಯದ ರಾಜಕೀಯ ಮತ್ತಷ್ಟು ರಂಗೇರುತ್ತಿದೆ. ಮಾಜಿ ಸಿಎಂ ಕಮಲ್ ನಾಥ್ ಮತ್ತು ಹಾಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ಚಿತ್ರಗಳಿರುವ ಆಕ್ಷೇಪಾರ್ಹ ಪೋಸ್ಟರ್‌ಗಳು ಅಲ್ಲಲ್ಲಿ ಕಾಣಿಸಿಕೊಂಡ ಮೂರು ದಿನಗಳ ನಂತರ, ಈಗ ಮತ್ತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ …

Read More »

ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಸನ್ಮಾನಿಸಿದ ಸಚಿವರಾದ ಸತೀಶ್ ಜಾರಕಿಹೊಳಿ ಅವರು

ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಇಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಭೇಟಿಯಾಗಿ ಸನ್ಮಾನಿಸಿದರು.   ರಾಜ್ಯದಲ್ಲಿನ ರಸ್ತೆಗಳು ಹಾಗೂ ಮೇಲ್ಸೆತುವೆಗಳ ಮೇಲ್ದರ್ಜೆಗೆ ಏರಿಸುವುದು ಹಾಗೂ ವಿವಿಧ ನಗರಗಳಲ್ಲಿ ಬೈಪಾಸ್ ರಸ್ತೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ವಿವಿಧ ಯೋಜನೆಗಳ ಅನುಮೋದನೆ ಬಗ್ಗೆ ಕೂಡ ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಯಿತು.

Read More »

ಉಸ್ತುವಾರಿ ಸಚಿವ ಲಾಡ್ ಅವರಿಂದ ಅಬಕಾರಿ ಅಧಿಕಾರಿಗೆ ಖಡಕ್ ಎಚ್ಚರಿಕೆ

ಧಾರವಾಡ ಜಿಲ್ಲೆಯಲ್ಲಿ ಅಕ್ರಮ ಸಾರಾಯಿ ಧಂಧೆ ಎಗ್ಗಿಲ್ಲದೆ ಸಾಗುತ್ತಿದ್ದು. ಈಗ ಮುಂದುವರಿದು ಹಳ್ಳಿಗಳಿಗೂ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ ಈ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ಅಬಕಾರಿ ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡರು.   ಅಕ್ರಮ ಸಾರಾಯಿ ಮಾರಾಟ ಮಾಡುವುದು ಧಾರವಾಡದಲ್ಲಿ ಅತಿಯಾಗಿ ನಡೆಯುತ್ತಿದೆ. ನೀವು ಇನ್ನೂ 2 ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನಾನು ನಿಮ್ಮ ಮೇಲೆ ಕಠಿಣ …

Read More »

ಗ್ರಾಮೀಣ ಶಾಲೆಗಳ ಮಕ್ಕಳ ಕೈ, ಪಾದಗಳಲ್ಲಿ ಕಪ್ಪು ಚುಕ್ಕೆಗಳು, ಪೋಷಕರಲ್ಲಿ ಆತಂಕ

ತುಮಕೂರು: ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಶಾಲಾ ಮಕ್ಕಳ ಕೈ ಹಾಗೂ ಪಾದಗಳಲ್ಲಿ ಇದ್ದಕ್ಕಿದ್ದಂತೆ ಕಪ್ಪು ಚುಕ್ಕೆಗಳು ಕಾಣಿಸಿಕೊಂಡಿವೆ. ಮಕ್ಕಳಿಗೆ ಅನಾರೋಗ್ಯ ಕಾಡುತ್ತಿದ್ದು ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ತುರುವೇಕೆರೆ ಹಾಗೂ ಕೊರಟಗೆರೆ ತಾಲೂಕುಗಳ ಗ್ರಾಮಗಳ ಶಾಲಾ ಮಕ್ಕಳ ಕೈ ಮತ್ತು ಪಾದಗಳಲ್ಲಿ ಚರ್ಮದ ಸೋಂಕು ಕಂಡುಬಂದಿದೆ. ತುರುವೇಕೆರೆ ತಾಲ್ಲೂಕಿನ ಕುಣಿಕೇನಹಳ್ಳಿಯ ಗ್ರಾಮದ 21 ಮಕ್ಕಳ ಪಾದಗಳಲ್ಲಿ ಕಪ್ಪು ಚುಕ್ಕೆಗಳು ಕಂಡುಬಂದಿವೆ. ಕೊರಟಗೆರೆ ತಾಲ್ಲೂಕಿನ ಯಲಚೇನಹಳ್ಳಿ ಗ್ರಾಮದ 5 ಮಕ್ಕಳ ಕೈ ಹಾಗೂ ಪಾದಗಳಲ್ಲಿ …

Read More »

ಮಾಜಿ ಸಿಎಂ ಯಡಿಯೂರಪ್ಪ ಪ್ರತಿಭಟನೆ ಹೇಳಿಕೆ ಒಂದು ರಾಜಕೀಯ ಗಿಮಿಕ್ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ಧರಣಿ ಸತ್ಯಾಗ್ರಹ ಒಂದು ರಾಜಕೀಯ ಗಿಮಿಕ್ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನೆಲಮಂಗಲದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಎಸ್​ವೈ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಯಡಿಯೂರಪ್ಪರಿಗೆ ಪ್ರತಿಭಟನೆ ಮಾಡುವ ಯಾವುದೇ ನೈತಿಕ ಹಕ್ಕು ಇಲ್ಲ. ಯಡಿಯೂರಪ್ಪ ಸರ್ಕಾರದಲ್ಲಿದ್ದಾಗ ಅವರು ತಮ್ಮ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಿದ್ದರಾ? ಎಂದು ಪ್ರಶ್ನಿಸಿದರು.   ನಾವು ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು …

Read More »