Home / ರಾಜಕೀಯ (page 471)

ರಾಜಕೀಯ

ನೇಣಿಗೆ ಶರಣಾದ ಸವಿತಾ ನಾಯ್ಕರ್

ನವನಗರದಲ್ಲಿ ಇರುವ ಪಂಚಾಕ್ಷರಿ ನಗರದ ನಿವಾಸಿ ಆದ ಸವಿತಾ ನಾಯ್ಕರ್ ಅನ್ನೋ ಗೃಹಿಣಿ ನೇಣಿಗೆ ಶರಣಾದ ಘಟನೆ ನಡೆದಿದೆ.   ಮಧ್ಯಾನ 2.30 ರ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಘಟನೆಗೆ ಕೌಟುಂಬಿಕ ಕಲಹ ಎಂದು ತಿಳಿದುಬಂದಿದೆ. ಸಾವಿಗೀಡಾದ ಮಹಿಳೆಯ ಗಂಡ ಕೆ ಎಸ್ ಆರ್ ಪಿ ಪೊಲೀಸ ಸಿಬ್ಬಂದಿಯು ದಿನನಿತ್ಯ ಕುಡಿದು ಬಂದು ಹೆಂಡತಿಯ ಜೊತೆ ಜಗಳವಾಡುತ್ತಿದ್ದ ಎಂದು ಸವಿತಾಳ ತಾಯಿ …

Read More »

ಬಿಜೆಪಿಯ ಸುಳ್ಳಿನ ಫ್ಯಾಕ್ಟರಿ ಬಂದ್ ಮಾಡುತ್ತೇವೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು : ಕಾಂಗ್ರೆಸ್ ನಾಯಕರುಗಳ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸುತ್ತಿರುವ ಆರೋಪದಡಿ ಬಿಜೆಪಿಯ ಮಾಹಿತಿ ತಂತ್ರಜ್ಞಾನ ವಿಭಾಗದ (ಐಟಿ ಸೆಲ್) ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವಿಯಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ದ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆಯನಿಮೇಟೆಡ್ ವೀಡಿಯೋ ಮೂಲಕ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದೆ ಎಂದು ಉಲ್ಲೇಖಿಸಿ, ರಾಹುಲ್ ಗಾಂಧಿಯವರ ವಿರುದ್ದ ವಿಡಿಯೋ ಹರಿಬಿಟ್ಟ ಬಗ್ಗೆ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ …

Read More »

ನೀರು ಬಿಡುವ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಜತೆ ಮಾತನಾಡುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ನೀರು ಬಿಡುವುದಕ್ಕೆ ರೈತರಿಂದ ವ್ಯಕ್ತವಾಗಿರುವ ವಿರೋಧ ವಿಚಾರವಾಗಿ ಅಲ್ಲಿನ ಸರ್ಕಾರದ ಜತೆ ಮಾತನಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ನೀರು ಬಿಡಲು ಮಹಾರಾಷ್ಟ್ರ ರೈತರ ವಿರೋಧ ವಿಚಾರ ಕೇಳಿದ ಪ್ರಶ್ನೆಗೆ ಉತ್ತರಿಸಿ, ಈ ವಿಚಾರವಾಗಿ ಮಹಾರಾಷ್ಟ್ರದ ರೈತರ ಜೊತೆ ಮಾತನಾಡೋಕೆ ಆಗುತ್ತಾ? ಮಹಾರಾಷ್ಟ್ರ ಸಿಎಂ ಜೊತೆ ಮಾತನಾಡುತ್ತೇನೆ ಎಂದರು. ಇದೇ ವೇಳೆ, ಮಹದಾಯಿ ವಿಷಯದಲ್ಲಿ ಗೋವಾ …

Read More »

ಅನ್ನಭಾಗ್ಯ ಯೋಜನೆಗೆ ಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ- ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್​ ನಾಯಕರು ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಉಚಿತ ಎಂದು ಹೇಳಿದ್ದರು. ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದ್ದು ಅಕ್ಕಿ ವಿತರಣೆಯಲ್ಲಿ ಬಹಳ ಗೊಂದಲಗಳು ಸೃಷ್ಟಿಯಾಗಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್​ಸಿಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ ಕೇಂದ್ರೀಯ ಭಂಡಾರ, ಈ …

Read More »

ಮುರುಘಾ ಶರಣರ ಜಾರ್ಮಿನು ಅರ್ಜಿಯನ್ನು ರೋಸ್ಟರ್ ಪ್ರಕಾರ ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಾರ್ ಜನರಲ್​​ಗೆ ಹೈಕೋರ್ಟ್​ ಸೂಚನೆ ನೀಡಿದೆ.

ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗಳ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಫೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ರೋಸ್ಟರ್ ಪ್ರಕಾರ ನಿಗದಿ ಮಾಡುವಂತೆ ಹೈಕೋರ್ಟ್ ಪೀಠ ರಿಜಿಸ್ಟ್ರಾರ್ ಜನರಲ್​​ಗೆ ಸೂಚನೆ ನೀಡಿದೆ.   ಸೋಮವಾರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ನ್ಯಾಯಪೀಠ, ರೋಸ್ಟರ್ ಪ್ರಕಾರ ಅರ್ಜಿಯ ವಿಚಾರಣೆ ನಿಗದಿ …

Read More »

ತಂದೆ ತಾಯಿಯ ಪ್ರೋತ್ಸಾಹ ಇದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂಬುದಕ್ಕೆ ಬೆಳಗಾವಿಯ ಈ ಪುಟಾಣಿಯೇ ಸಾಕ್ಷಿ.

ಬೆಳಗಾವಿ : ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಮಾತಿನಂತೆ ತಂದೆ ತಾಯಿಯ ಪ್ರೋತ್ಸಾಹ ಇದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂಬುದಕ್ಕೆ ಬೆಳಗಾವಿಯ ಈ ಪುಟಾಣಿಯೇ ಸಾಕ್ಷಿ. ಇಂಗ್ಲಿಷ್​ ರೈಮ್ಸ್ ಹೇಳುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ದಾಖಲೆ ಬರೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ಹೌದು, ಬೆಳಗಾವಿಯ ಫುಲಬಾಗ ಗಲ್ಲಿಯ 2 ವರ್ಷ 11 ತಿಂಗಳ ಮಾನ್ವಿ ಭರತ್ ನಿಲಜಕರ್ ಇಂಡಿಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸಾಧನೆ ಮೆರೆದ ಪುಟ್ಟ …

Read More »

ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ,ಖಾನಾಪೂರದ ವ್ಯಕ್ತಿಯನ್ನು ಬಂಧಿಸಿ ಹಿಂಡಲಗಾ ಜೈಲಿಗೆ

ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ತಡರಾತ್ರಿ ಹೋಟೆಲ್ ಮುಚ್ಚುವಂತೆ ಹೊಟೇಲ್ ಮಾಲೀಕರಿಗೆ ಹೇಳಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಖಾನಾಪೂರದ ವ್ಯಕ್ತಿಯನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ. ಹೌದು ಬಂಧಿತ ಯುವಕನನ್ನು ಖಾನಾಪೂರದ ಬುರುಡ ಗಲ್ಲಿಯ ಶ್ರೀಧರ ಬಸವರಾಜ ಅಂಕಲಗಿ ಅಲಿಯಾಸ್ ಬಂಬು (ವಯಸ್ಸು 33) ಎಂದು ಗುರುತಿಸಲಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಲ್ಲಿ ಖಾನಾಪೂರ ಪೊಲೀಸರು ಪ್ರತಿ ರಾತ್ರಿ ನಗರ ವ್ಯಾಪ್ತಿಯಲ್ಲಿ ಗಸ್ತು …

Read More »

400 ಹೆಕ್ಟೇರ್​ ಪ್ರದೇಶದಲ್ಲಿ ಬಿತ್ತಿದ್ದ ಹತ್ತಿ ಬೆಳೆ ನಾಶ: ಕೃಷಿ ತಜ್ಞರ ಭೇಟಿ, ಪರಿಶೀಲನೆ…

ಗಂಗಾವತಿ :ಕನಕಗಿರಿ ತಾಲೂಕಿನಲ್ಲಿ ಒಣ ಬೇಸಾಯದ ಮಂಗಾರು ಮಳೆಯ ಪೂರ್ವದಲ್ಲಿ ರೈತರು ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆ ನಾಟಿ ಮಾಡಿದ್ದು, ಆದರೆ ಕಳಪೆ ಗುಣಮಟ್ಟದ ಬೀಜದಿಂದಾಗಿ ಹತ್ತಿ ಬೆಳೆ ನಾಶವಾಗುವ ಆತಂಕ ಎದುರಾಗಿದೆ.   ಕಳಪೆ ಬಿತ್ತನೆ ಬೀಜ ತಂದ ಆಪತ್ತು: ತಾಲೂಕಿನ ಚಿಕ್ಕಖೇಡಾ, ಹಿರೇಖ್ಯಾಡಾ, ಗುಡದೂರು, ಬಸರಿಹಾಳ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ರೈತರು ದೊಡ್ಡ ಪ್ರಮಾಣದಲ್ಲಿ ಹತ್ತಿ ಬೀಜ ಬಿತ್ತಿದ್ದಾರೆ. ಒಂದು ಕಡೆ ಕಳಪೆ ಬಿತ್ತನೆ ಬೀಜ ಮತ್ತೊಂದು …

Read More »

ಮೊದಲ ವಾರ 3 ಕೋಟಿಗೂ ಹೆಚ್ಚು ಮಹಿಳೆಯರಿಂದ ಉಚಿತ ಪ್ರಯಾಣ: ಟಿಕೆಟ್​ ಮೌಲ್ಯವೆಷ್ಟು ಗೊತ್ತಾ?

ಬೆಂಗಳೂರು: ಶಕ್ತಿ ಯೋಜನೆಗೆ ಮಹಿಳೆಯರಿಂದ ಭರ್ಜರಿ ಸ್ಪಂದನೆ ಸಿಗುತ್ತಿದೆ. ವೀಕೆಂಡ್​ನಲ್ಲಂತೂ ಸಾರಿಗೆ ಬಸ್​ಗಳು ಮಹಿಳಾ ಪ್ರಯಾಣಿಕರಿಂದ ಕಿಕ್ಕಿರಿದು ತುಂಬುತ್ತಿದ್ದು, ಶನಿವಾರ 54,30,150 ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಪ್ರಯಾಣ ಬೆಳೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಮಹಿಳೆಯರಿಗಾಗಿ ಬಸ್ ಪ್ರಯಾಣ ಉಚಿತವಾಗಿಸಿರುವ Shakti Schemeಗೆ ಉತ್ತಮ ಸ್ಪಂದನೆ ಸಿಗುತ್ತಿದೆ. ಮಹಿಳಾ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳಗೊಳ್ಳುತ್ತಿದೆ. ವೀಕೆಂಡ್​​ನಲ್ಲಂತೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪ್ರಯಾಣಿಕರು ಸರ್ಕಾರಿ ಬಸ್​​ಗಳಲ್ಲಿ ಪುಣ್ಯ ಕ್ಷೇತ್ರಗಳತ್ತ ಪಯಣ ಬೆಳೆಸಿದ್ದಾರೆ. …

Read More »

ಸ್ನೇಹಿತರ ಜಾಲಿ ರೈಡ್​ಗೆ ಫುಡ್ ಡೆಲಿವರಿ ಬಾಯ್​​ ಬಲಿ.. ಅಪಘಾತ ಎಸಗಿ ಮೃತದೇಹ 100 ಮೀಟರ್​ ಎಳೆದೊಯ್ದರು!

ಬೆಂಗಳೂರು: ಸ್ನೇಹಿತರ ಎಡವಟ್ಟಿಗೆ ಅಮಾಯಕ ಫುಡ್ ಡೆಲಿವರಿ ಬಾಯ್​ ಬಲಿಯಾಗಿರುವ ಘಟನೆ ತಡರಾತ್ರಿ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರ್​ ಆರ್​​​ ನಗರ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ಜೊಮ್ಯಾಟೊದಲ್ಲಿ ಫುಡ್ ಡೆಲಿವರಿ ಮಾಡಿಕೊಂಡಿದ್ದ ಹೆಚ್.ಡಿ.ಕೋಟೆ ಮೂಲದ ಪ್ರಸನ್ನ ಕುಮಾರ್ ಮೃತ ದುರ್ದೈವಿ. ಹೌದು ಮದ್ಯಪಾನದ ಮತ್ತಿನಲ್ಲಿದ್ದರು ಎನ್ನಲಾಗಿರುವ ಸ್ನೇಹಿತರು ಅಜಾಗರೂಕತೆಯಿಂದ ಕಾರನ್ನು ಓಡಿಸಿ ಬೈಕ್​ನಲ್ಲಿ ಹೋಗುತ್ತಿದ್ದ ಪ್ರಸನ್ನ ಕುಮಾರ್​ಗೆ ಡಿಕ್ಕಿ ಹೊಡೆದು ಆತನ ಸಾವಿಗೆ ಕಾರಣರಾಗಿದ್ದಾರೆ. ಅಪಘಾತದ ನಂತರ …

Read More »