Breaking News
Home / ರಾಜಕೀಯ (page 487)

ರಾಜಕೀಯ

ಬುಡಾ ಭ್ರಷ್ಟಾಚಾರದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರು ಕ್ರಮ ಕೈಗೊಳ್ಳಲಿ: ಟೋಪಣ್ಣವರ

ಬೆಳಗಾವಿ: ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರದ ವಿರುದ್ಧ ಕೆಲಸ ಮಾಡುತ್ತಿದ್ದಾರೋ ಅಥವಾ ಭ್ರಷ್ಟಾಚಾರದ ಪರ ಕೆಲಸ ಮಾಡುತ್ತಿದ್ದಾರೋ ಗೊತ್ತಾಗುತ್ತಿಲ್ಲ ಎಂದು‌ ಆಮ್ ಆದ್ಮಿ ಪಕ್ಷದ ಉತ್ತರ ಕರ್ನಾಟಕ ಉಸ್ತುವಾರಿ‌ ರಾಜಕುಮಾರ ಟೋಪಣ್ಣವರ ಆರೋಪಿಸಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ 2022 ಮಾರ್ಚ್​ 18 ರಂದು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಕ್ಷನ್ ಮಾಡದೆ ಸೈಟ್ ಹಂಚಿಕೆ ಮಾಡಿರುವ ಕುರಿತು ನಗರ ಪೊಲೀಸ್ ಇಲಾಖೆ, ಲೋಕಾಯುಕ್ತಕ್ಕೆ ದೂರು ನೀಡಿದರೂ ಇಲ್ಲಿಯವರೆಗೆ ಕ್ರಮ ಕೈಗೊಂಡಿರಲಿಲ್ಲ. …

Read More »

ಕುಡಿದ ಅಮಲಿನಲ್ಲಿ ಮನೆಯಲ್ಲಿ ಮಲಗಿದ್ದ ಪತ್ನಿಯನ್ನು ಹತ್ಯೆ ಮಾಡಿ ಬಳಿಕ ತಾನು ಆತ್ಮಹತ್ಯೆಗೆ ಶರಣಾದ

ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿಯ ಉಪ್ಪಾರವಾಡಿಯಲ್ಲಿ ಪತಿಯೋರ್ವ ಕುಡಿದ ಅಮಲಿನಲ್ಲಿ ಮನೆಯಲ್ಲಿ ಮಲಗಿದ್ದ ಪತ್ನಿಯನ್ನು ಹತ್ಯೆ ಮಾಡಿ ಬಳಿಕ ತಾನು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತ ಮಹಿಳೆ ಉಪ್ಪರವಾಡಿ ಗಲ್ಲಿಯ ಉಷಾ ಖೋತ (29) ಎಂದು ತಿಳಿದುಬಂದಿದೆ. ಇನ್ನು ಪತಿ ಧರೆಪ್ಪ ಖೋತ ಕೊಲೆಗೈದ ಆರೋಪಿಯಾಗಿದ್ದಾನೆ‌. ಮೃತ ಉಷಾ ಮನೆಯ ಕೊಠಡಿಯಲ್ಲಿ ಮಲಗಿದ್ದಾಗ ಪತಿ ಧರೆಪ್ಪ ಖೋತಾ ಚಾಕುವಿನಿಂದ ಕತ್ತಿಗೆ ಇರಿದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.ಬಳಿಕ …

Read More »

ಕೆಲಸ ಇಲ್ಲದವನೆಂದು ಬೈದು ಬುದ್ಧಿವಾದ ಹೇಳಿದ್ದ ಅಜ್ಜಿಯನ್ನು ಕೊಂದು ಸುಟ್ಟುಹಾಕಿದ್ದ ಮೊಮ್ಮಗ

ಮೈಸೂರು: ಅಜ್ಜಿ ದಿನನಿತ್ಯ ಬೈಯುತ್ತಿದ್ದಕ್ಕೆ ಬೇಸತ್ತು ಕೋಪದಿಂದ ಮೊಮ್ಮಗ ಅಜ್ಜಿಯನ್ನೇ ಕೊಂದು ನಂತರ ಸುಟ್ಟುಹಾಕಿದ ಘಟನೆ ನಗರದ ಗಾಯತ್ರಿ ಪುರಂನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.   ಮೈಸೂರು ನಗರದ ಗಾಯತ್ರಿ ಪುರಂ ನಿವಾಸಿ ಸುಪ್ರೀತ್ (23) ಬಂಧಿತ ಆರೋಪಿ. ಈತ ತನ್ನ ಅಜ್ಜಿ ಸುಲೋಚನಾ (75) ಅವರನ್ನು ಕೊಲೆಗೈದಿದ್ದ. ಮನೆಯಲ್ಲಿ ಸದಾ ತನಗೆ ಕೆಲಸ ಇಲ್ಲದವನು ಎಂದು ಅಜ್ಜಿ ಬೈಯುತ್ತಿದ್ದಳು. ಇದರಿಂದ ಬೇಸತ್ತು ಅಜ್ಜಿಯನ್ನು ಹೊಡೆದು ಸಾಯಿಸಿ, ಶವವನ್ನು …

Read More »

ಲೋಕಸಭೆ ಚುನಾವಣೆಗೆ ಶಾಸಕರಿಗೆ ಗುರಿ ನೀಡುವ‌ ಕುರಿತು ಚರ್ಚೆ- ಬೊಮ್ಮಾಯಿ

ಬೆಂಗಳೂರು: ”ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕರಿಗೆ ಗುರಿ ನೀಡುವ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ಮಾಡಲಾಗಿದೆ” ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ನೂತನ ಶಾಸಕರ ಅಭಿನಂದನಾ ಸಮಾರಂಭದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ”ಹೊಸ ಶಾಸಕರಿಗೆ ಅಭಿನಂದನೆ ಸಲ್ಲಿಸಲಾಗಿದೆ. ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಏನೆಲ್ಲ ಮಾಡಬಹುದಿತ್ತು ಎನ್ನುವ ಬಗ್ಗೆಯೂ ಚರ್ಚೆ ನಡೆದಿದೆ” ಎಂದರು. ಇದೇ ವೇಳೆ ವಿಧಾನಸಭೆ ಪ್ರತಿಪಕ್ಷದ ನಾಯಕನ ಆಯ್ಕೆ …

Read More »

ಕುಡಿಯುವ ನೀರಿನ ಸಮಸ್ಯೆಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ

ಚಿಕ್ಕೋಡಿ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನಲೆಯಲ್ಲಿ ಮಹಿಳೆಯರು ಪುರಸಭೆ ಎದುರು ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಒಂದು ತಿಂಗಳೊಳಗೆ ಸಮರ್ಪಕ ನೀರು ಪೂರೈಕೆ ಆಗದಿದ್ದರೆ ಚಿಕ್ಕೋಡಿ ಬಂದ್ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆಯನ್ನು ನೀಡಿದರು. ಚಿಕ್ಕೋಡಿ ಪುರಸಭೆ ಎದುರು ಮಹಿಳೆಯರು ಹಾಗೂ ಕಾಂಗ್ರೆಸನ ಸದಸ್ಯರು ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ಪ್ರಮೀಳಾ ದೇಶಪಾಂಡೆ ಅವರಿಗೆ ಮನವಿಯನ್ನು ನೀಡಲಾಯಿತು. ಕಳೆದ ತಿಂಗಳಿನಿಂದ ಚಿಕ್ಕೋಡಿ ಪಟ್ಟಣದ ಎಲ್ಲ …

Read More »

ಹಿಂದೂಗಳ ಭಾವನೆಗೆ ದಕ್ಕೆಮಾಡಿದವರನ್ನು ಕೂಡಲೆ ಪೋಲಿಸರು ಬಂಧಿಸುವಂತೆ ಮನವಿ

ಸಾಮಾಜಿಕ ಜಾಲತಾಣಗಳ ಮೂಲಕ ಹಿಂದೂಗಳ ಭಾವನೆಗೆ ದಕ್ಕೆಮಾಡಿದವರನ್ನು ಕೂಡಲೆ ಪೋಲಿಸರು ಬಂಧಿಸುವಂತೆ ವಿವಿಧ ಹಿಂದೂ ಸಂಘಟನೆಗಳು ಮನವಿ ಬೆಳಗಾವಿಯ ಕೊಲ್ಲಾಪುರ ನಿಪ್ಪಾಣಿಗಳಲ್ಲಿ ನಡೆದ ಘಟನೆಗೆ ಸಂಭದಿಸಿದಂತೆ ನಗರದಲ್ಲಿಯು ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವವರನ್ನು ಕೂಡಲೆ ಬಂಧಿಸುವಂತೆ ವಿವಿಧ ಹಿಂದೂಪರ ಸಂಘಟನೆಗಳು ಇಂದು ಎಸಿಪಿ ನಾರಾಯಣ ಭರಮನಿಗೆ ಅವರಿಗೆ ಮನವಿಯನ್ನು ಸಲ್ಲಿಸಿದರು. ಮಾಧ್ಯಮಗಳಿಗೆ ಪ್ರತಿಕ್ರೀಯಿಸಿದ ಶ್ರೀರಾಮ ಸೇನೆ ಹಿಂದೂ ರಾಷ್ಟ್ರದ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್ ಕೊಲ್ಲಾಪುರ ನಿಪ್ಪಾಣಿಗಳಲ್ಲಿನಡೆದ ಘಟನೆಗಳು ಹಿಂದೂಗಳ ಭಾವನೆ …

Read More »

ಫೈನಾನ್ಸ್ ಕಂಪನಿಗೆ 5.47 ಲಕ್ಷ ಪಂಗನಾಮ

ವಾಣಿಜ್ಯನಗರಿ ಹುಬ್ಬಳ್ಳಿಯ ಜೆಸಿ ನಗರದ ಶ್ರೀರಾಮ ಸಿಟಿ ಯೂನಿಯನ್‌ ಫೈನಾನ್ಸ್‌ ಕಂಪನಿಯಲ್ಲಿ ಶಾಖಾ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿವಾಕರ ಜಯರಾಜ ಅವರು, ಗ್ರಾಹಕರು ತುಂಬಿದ 5.47 ಲಕ್ಷವನ್ನು ಸ್ವಂತಕ್ಕೆ ಬಳಸಿಕೊಂಡು ಕಂಪನಿಗೆ ವಂಚನೆ ಮಾಡಿದ ಪ್ರಕರಣ ಶಹರ ಠಾಣೆಯಲ್ಲಿ ದಾಖಲಾಗಿದೆ. ಅರವಿಂದ ನಗರದ ದಿವಾಕರ ಅವರು ಫೈನಾನ್ಸ್‌ ಕಂಪನಿಯಲ್ಲಿ ಶಾಖಾ ವ್ಯವಸ್ಥಾಪಕ, ಶಾಖಾ ಹಿರಿಯ ವ್ಯವಸ್ಥಾಪಕ, ವಿಭಾಗೀಯ ವ್ಯವಸ್ಥಾಪಕ ಮತ್ತು ಪ್ರಾದೇಶಿಕ ವ್ಯವಹಾರಗಳ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆ ವೇಳೆ …

Read More »

ಶಕ್ತಿ ಯೋಜನೆಯಿಂದ ಹೊರಗುಳಿದ ಚಿಗರಿ: ಹು-ಧಾ ಮಹಿಳೆಯರಿಗೆ ಎಸಿ ಬಸ್ ಪ್ರಯಾಣ ಭಾಗ್ಯವಿಲ್ಲ

ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಹುಬ್ಬಳ್ಳಿ- ಧಾರವಾಡದ ಪ್ರತಿಷ್ಠಿತ ಬಿ.ಆರ್.ಟಿ.ಎಸ್ ಯೋಜನೆ ಈಗ ಸರ್ಕಾರಕ್ಕೆ ತಲೆನೋವಾಗಿದೆ. ಉಚಿತ ಬಸ್ ಪ್ರಯಾಣದ ಭರವಸೆ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರದಿಂದ ಈಗ ಚಿಗರಿ ಚಿಂತಿಸುವ ಕಾಲಘಟ್ಟಕ್ಕೆ ಬಂದು ತಲುಪಿದೆ. ಹುಬ್ಬಳ್ಳಿ- ಧಾರವಾಡ ವ್ಯಾಪ್ತಿಯ ಚಿಗರಿ ಬಸ್, ಸಾರಿಗೆ ವ್ಯಾಪ್ತಿಯ ಹವಾ ನಿಯಂತ್ರಿತ ಬಸ್ ಆಗಿದ್ದು, ಚಿಗರಿ ಬಸ್​ನಲ್ಲೂ ಫ್ರೀ ಬಿಡಬೇಕು ಎಂಬ ಮಾತು ಕೇಳಿಬಂದಿದೆ. ಆದರೆ ಹುಬ್ಬಳ್ಳಿ- ಧಾರವಾಡ ನಡುವೆ ಸಂಚರಿಸುವ ಹವಾನಿಯಂತ್ರಿತ …

Read More »

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅರ್ಜಿ ನಮೂನೆ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅರ್ಜಿ ನಮೂನೆ ಬಿಡುಗಡೆ ಮಾಡಿದೆ. ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಜೂನ್ 15ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅರ್ಜಿ ನಮೂನೆ ಬಿಡುಗಡೆ ಮಾಡಿದ್ದು, ಅರ್ಜಿ ಯಾವ ರೀತಿಯಾಗಿರಲಿದೆ? ಯಾವೆಲ್ಲ ದಾಖಲೆಗಳ ಅಗತ್ಯವಿದೆ ಎಂಬ ಬಗ್ಗೆ ಅರ್ಜಿಯಲ್ಲಿ ಸ್ಪಷ್ಟ ಚಿತ್ರಣವಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ …

Read More »

ಒಂದೆಡೆ ಉಚಿತ, ಇನ್ನೊಂದೆಡೆ ಏರಿಕೆಯಾದ ವಿದ್ಯುತ್ ದರ: ಬಾಗಲಕೋಟೆ ಮಹಿಳಾ ನೇಕಾರರ ಪರದಾಟ

ಬಾಗಲಕೋಟೆ: 200 ಯುನಿಟ್ ವಿದ್ಯುತ್ ಉಚಿತ ನೀಡುವುದಾಗಿ ಘೋಷಣೆ ಮಾಡಿದ ಕಾಂಗ್ರೆಸ್ ಸರ್ಕಾರ ಈಗ ವಿದ್ಯುತ್ ದರ ಏರಿಕೆ ಮಾಡಿರುವುದು ನೇಕಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಒಂದೆಡೆ ಉಚಿತ ವಿದ್ಯುತ್ ಘೋಷಣೆ ಮಾಡಿ, ಇನ್ನೊಂದೆಡೆ ವಿದ್ಯುತ್ ದರ ಏರಿಕೆ ಮಾಡಿರುವುದು ಜಿಲ್ಲೆಯ ನೇಕಾರರಿಗೆ ಸಂಕಷ್ಟ ಎದುರಾಗಿದೆ. ರಬಕವಿ, ಬನ್ನಹಟ್ಟಿ, ಮಹಾಲಿಂಗಪುರ, ತೇರದಾಳ, ಕೆರೂರ, ಗುಳೇದಗುಡ್ಡ, ಇಳಕಲ್​​ ಸೇರಿದಂತೆ ಇತರ ಪ್ರದೇಶದಲ್ಲಿ ನೇಕಾರರ ಸಂಖ್ಯೆ ಹೆಚ್ಚಾಗಿದೆ. ಇದರ ಜೊತೆಗೆ ಮಹಿಳೆಯರೇ ಈಗ …

Read More »