Breaking News
Home / ರಾಜಕೀಯ (page 490)

ರಾಜಕೀಯ

ಮಾಂಜರಿ ಗ್ರಾಮದಲ್ಲಿ ನಿವೃತ್ತ ಯೋಧರಿಗೆ ಭರ್ಜರಿ ಸ್ವಾಗತ

ಚಿಕ್ಕೋಡಿ ತಾಲೂಕಿನ ‌ಮಾಂಜರಿ ಗ್ರಾಮದಲ್ಲಿ ಸೇನೆಯಿಂದ ನಿವೃತ್ತಿಯನ್ನು ಪಡೆದ ಯೋಧರಿಗೆ ತೆರೆದ ವಾಹನದಲ್ಲಿ ಪುಷ್ಪವೃಷ್ಠಿಯ ಮೂಲಕ ಅದ್ದೂರಿಯಾಗಿ ಸ್ವಾಗತವನ್ನು ‌ಕೋರಲಾಯಿತು. ನಿವೃತ್ತ ಯೋಧರಾದ ರಾವಸಾಹೇಬ ಲಗಡೆ ಹಾಗೂ ಸಂತೋಷ ಪೂಜಾರಿಯವರನ್ನು ಮಾಂಜರಿ,ಮಾಂಜರಿವಾಡಿ ಗ್ರಾಮದ ನಿವೃತ್ತ ಯೋಧರು ಹಾಗೂ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತವನ್ನು ಕೋರಿದರು.ಮಾಂಜರಿ ಗ್ರಾಮದ ಹೊಸ ಬಸ್ ನಿಲ್ದಾಣದ ಮೂಲಕ ನಿವೃತ್ತ ಯೋಧರಿಗೆ ಹೂವು‌ ಮಳೆಯನ್ನು ಸುರಿಸಿ,ಪಟಾಕಿ ಸಿಡಿಸಿ,ವಿವಿಧ ರೀತಿಯ ವಾದ್ಯದೊಂದಿಗೆ ತೆರೆದ ವಾಹನದಲ್ಲಿ ಸ್ವಾಗತಿಸಿಕೊಳ್ಳಲಾಯಿತು. ಇದೇ ಸಂಧರ್ಭದಲ್ಲಿ ಪ್ರಾಥಮಿಕ …

Read More »

ರಾಜ್ಯದ ಅನೇಕ ಕಡೆಗಳಲ್ಲಿ ಸಾರ್ವಜನಿಕರು ಕರೆಂಟ್ ಬಿಲ್ ಕಟ್ಟಲು ಹಿಂದೇಟು

ಧಾರವಾಡ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಅಧಿಕಾರಕ್ಕೆ ಬರುವ ಮುನ್ನ ಜೂ.1 ನೇ ತಾರೀಖಿನಿಂದ ಯಾರೂ ಕರೆಂಟ್ ಬಿಲ್ ಕಟ್ಟೋಹಾಗಿಲ್ಲ ಎಂದು ಹೇಳಿದ್ದೇ ಹೇಳಿದ್ದು, ರಾಜ್ಯದ ಅನೇಕ ಕಡೆಗಳಲ್ಲಿ ಸಾರ್ವಜನಿಕರು ಕರೆಂಟ್ ಬಿಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ ಅಲ್ಲದೇ ಬಿಲ್ ಪಾವತಿಸಿಕೊಳ್ಳಲು ಬರುವ ಕೆಇಬಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಇದೀಗ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಗ್ರಾಮದಲ್ಲೂ ಗ್ರಾಮಸ್ಥರು ಲೈನ್‌ಮ್ಯಾನ್ ಒಬ್ಬರನ್ನು ತೀವ್ರ ತರಾಟೆಗೆ …

Read More »

ರಂಗೋಲಿಯ ಮೂಲಕ “ಶಿವರಾಜ್ಯಾಭಿಷೇಕದ ಭವ್ಯವಾದ ಚಿತ್ರ”

ಶಿವರಾಜ್ಯಾಭಿಷೇಕ ಸಮಾರಂಭದ 350 ನೇ ವಾರ್ಷಿಕೋತ್ಸವದಲ್ಲಿ ರಂಗೋಲಿ ಕಲಾವಿದ ಅಜಿತ್ ಔರ್ವಾಡಕರ್ ಅವರು ರಂಗೋಲಿಯ ಮೂಲಕ “ಶಿವರಾಜ್ಯಾಭಿಷೇಕದ ಭವ್ಯವಾದ ಚಿತ್ರ” ವನ್ನು ಬಿಡಿಸಿದ್ದಾರೆ. ಈ ರಂಗೋಲಿಯು ವಡಗಾಂವದಲ್ಲಿ ಕಲಾರತ್ನ ಬಿಲ್ಡಿಂಗ್ ನಜರ್ ಕ್ಯಾಂಪ್ ಏಳೂರು ರಸ್ತೆಜ್ಯೋತಿ ಫೋಟೋ ಸ್ಟುಡಿಯೋ) ಬಳಿ ಇದೆ ಎಲ್ಲಾ ನಾಗರಿಕರು ಮತ್ತು ಶಿವಭಕ್ತರು ಇದನ್ನು ನೋಡಲು 12 ರಂದು ಬೆಳಿಗ್ಗೆ 9 ರಿಂದ ಸಂಜೆ 7 ರವರೆಗೆ ಲಭ್ಯವಿರುತ್ತದೆ

Read More »

ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ತೆಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ: ಸತೀಶ್‌ ಜಾರಕಿಹೊಳಿ

ಗೋಕಾಕ: ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ, ಸರ್ಕಾರದ ಆಡಳಿತ ಸರಿಯಾಗಿ ನಡೆಸದಿದ್ದರೆ ಅಷ್ಟೇ ಟೀಕಿಸಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಬಿಜೆಪಿಯವರಿಗೆ ಟಾಂಗ್‌ ನೀಡಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಆಂತರಿಕ ವಿಷಯಗಳ ಬಗ್ಗೆ ನಮ್ಮ ನಾಯಕರು ಸರಿಪಡಿಸುತ್ತಾರೆ, ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ತೆಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು. ಚಕ್ರವರ್ತಿ ಸೂಲಿಬೆಲೆ ಒಬ್ಬ …

Read More »

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಹೇಮಂತ ನಿಂಬಾಳ್ಕರ್ ನೇಮಕ

ಹೌದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರಿಗೆ ಕಾಂಗ್ರೆಸ್ ಸರಕಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

Read More »

ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಬೇಕು ‘ಶಕ್ತಿ ಸ್ಮಾರ್ಟ್​​ಕಾರ್ಡ್

: ರಾಜ್ಯ ಸರ್ಕಾರ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸೋಮವಾರ ಹೊರಡಿಸಿದೆ. ಅದರಂತೆ, ಮಹಿಳೆಯರು ಉಚಿತವಾಗಿ ಪ್ರಯಾಣಿಸಬೇಕಿದ್ದರೆ ‘ಶಕ್ತಿ ಸ್ಮಾರ್ಟ್​​ಕಾರ್ಡ್’ ಹೊಂದುವುದು ಕಡ್ಡಾಯವಾಗಿರಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಳನ್ನು ಪಡೆಯಬಹುದು. ಕಾರ್ಡ್​​ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯ …

Read More »

ವಿದ್ಯುತ್ ದರ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು, ಜೂ.6- ವಿದ್ಯುತ್ ದರ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ ವಿರೋಧಿಸಿ ವಿರೋಧ ಪಕ್ಷ ಬಿಜೆಪಿ ಬೀದಿಗಿಳಿದು ಹೋರಾಟ ನಡೆದಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಮತ್ತು ನಗರದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿ ಕಾರ್ಯಕರ್ತರು, ಪದಾಕಾರಿಗಳು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿ ಸರ್ಕಾರವಿದ್ದಾಗ ಹಾಲಿಗೆ ರೈತರಿಗೆ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್‍ಗೆ 5 ರೂ. ನೀಡಲಾಗುತ್ತಿತ್ತು. ಇದೀಗ ಬಂದಿರುವ ಕಾಂಗ್ರೆಸ್ …

Read More »

ವಾಹನ ಸವಾರರಿಗೆ ಇಲ್ಲಿದೆ ವಿಶೇಷ ಸುದ್ದಿ

ಬೆಂಗಳೂರು, ಜೂ.6- ಸಾರಿಗೆ ಇಲಾಖೆಯಿಂದ ನೀಡಲಾಗುವ ವಾಹನ ನೊಂದಣಿ ಪತ್ರ, ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಗಿಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಅರ್ಜಿದಾರರಿಗೆ ತಲುಪಿಸಲು ಅಂಚೆ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸರ್ಕಾರ ಸಮ್ಮತಿಸಿದೆ. ಸಾರಿಗೆ ಇಲಾಖಾ ಆಯುಕ್ತರು ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಿರುವ ಸಚಿವಾಲಯ ನೊಂದಣಿ ಪ್ರಮಾಣ ಪತ್ರ, ಸ್ಮಾರ್ಟ್ ಕಾರ್ಡ್ ನೀಡಲು ಪ್ರತಿ ಕಾರ್ಡಿಗೆ ಅರ್ಜಿದಾರರಿಂದ ಸಂಗ್ರಹಿಸುವ 212 ರೂ.ಗಳನ್ನು ಹಾಗು ಅಂಚೆ ಮೂಲಕ ರವಾನಿಸಲು 50 ರೂ.ಗಳ ಸೇವಾಶುಲ್ಕ ಒಳಗೊಂಡು …

Read More »

ಹಳೆಯ ರಾಜಕೀಯ ದ್ವೇಷವನ್ನು ಇಟ್ಟುಕೊಂಡು ಕಾಗವಾಡ ಶಾಸಕ ರಾಜು ಕಾಗೆ ಅವರು ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ

ಚಿಕ್ಕೋಡಿ: ಹಳೆಯ ರಾಜಕೀಯ ದ್ವೇಷವನ್ನು ಇಟ್ಟುಕೊಂಡು ಕಾಗವಾಡ ಶಾಸಕ ರಾಜು ಕಾಗೆ ಅವರು ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ರೂಪಿಸಿ ನಮಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಮಾಡಲಾದ ಆರೋಪವನ್ನ ಶಾಸಕ ರಾಜು ಕಾಗೆ ತಳ್ಳಿ ಹಾಕಿದ್ದಾರೆ. ತಮ್ಮ ವಿರುದ್ಧದ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಕಾಗೆ, ”ನನ್ನ ವಿರುದ್ಧ ಅವರೇ ರಾಜಕೀಯ ಷಡ್ಯಂತ್ರ ರೂಪಿಸಿ ತಮ್ಮ ಮಾನ ಕಳೆಯುವ ಕೆಲಸ ಮಾಡುತ್ತಿದ್ದಾರೆ. ಅವರು ನನ್ನ ಹಳೆಯ ಸ್ನೇಹಿತ. …

Read More »

ಪಾಠ ನಡೆಯುತ್ತಿದ್ದ ಸಂದರ್ಭದಲ್ಲೇ ಶಾಲಾ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ

ಬಳ್ಳಾರಿ: ಪಾಠ ನಡೆಯುತ್ತಿದ್ದ ಸಂದರ್ಭದಲ್ಲೇ ಶಾಲಾ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದಲ್ಲಿರುವ ಸುದೀಕ್ಷಾ ಇಂಟರ್​ ನ್ಯಾಷನಲ್ ಸ್ಕೂಲ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪವರ್ ಕಟ್ ಆಗಿ ಜನರೇಟರ್​ ಆನ್ ಮಾಡಿದಾಗ ಜನರೇಟರ್ ರೂಮ್ ಹಾಗೂ ಮತ್ತೊಂದು ರೂಮ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಶಾಲೆಯಲ್ಲಿದ್ದ 150 ವಿದ್ಯಾರ್ಥಿಗಳನ್ನು ಶಾಲಾ ಸಿಬ್ಬಂದಿ ರಕ್ಷಿಸಿದ್ದಾರೆ. ಶಾಲೆಯಲ್ಲಿ ಪಾಠ ನಡೆಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವಿದ್ಯುತ್ ಸ್ಥಗಿತ ಕೊಂಡಿತ್ತು. ಈ …

Read More »