Breaking News

ರಾಜಕೀಯ

ವಕ್ಫ್ ಬೋರ್ಡ್ ನೋಟಿಸ್: ರೈತರ ಅಹವಾಲು ಸ್ವೀಕರಿಸಲು ಬಿಜೆಪಿ ತಂಡ ರಚನೆ

ಬೆಂಗಳೂರು: ವಿಜಯಪುರ ಜಿಲ್ಲೆಯಾದ್ಯಂತ ವಕ್ಫ್ ಬೋರ್ಡ್ ಕಾಯ್ದೆಯಿಂದ ಆಗುತ್ತಿರುವ ತೊಂದರೆ ಹಾಗೂ ರೈತರಿಂದ ಅಹವಾಲು ಸ್ವೀಕರಿಸಲು ರಾಜ್ಯ ಬಿಜೆಪಿಯಿಂದ ತಂಡವೊಂದನ್ನು ರಚಿಸಲಾಗಿದೆ. ಸಂಸದ ಗೋವಿಂದ ಕಾರಜೋಳ, ಶಾಸಕರಾದ ಹರೀಶ್ ಪೂಂಜಾ, ಮಹೇಶ್ ಟೆಂಗಿನಕಾಯಿ, ಮಾಜಿ ವಿಧಾನಪರಿಷತ್ ಸದಸ್ಯ ಅರುಣ್ ಶಹಾಪುರ , ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ ಈ ತಂಡದಲ್ಲಿದ್ದಾರೆ. ಈ ತಂಡ ಅಕ್ಟೋಬರ್ 24 ರಂದು ವಿಜಯಪುರಕ್ಕೆ ಭೇಟಿ ಭೇಟಿ ನೀಡಲಿದೆ. ತಂಡದ ಸದಸ್ಯರು ರೈತರ ಸಮಸ್ಯೆ …

Read More »

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕೊಂದ ಮಗ!

ಚಿತ್ರದುರ್ಗ: ಯುವಕನೊಬ್ಬ ಕ್ಷುಲ್ಲಕ ಕಾರಣಕ್ಕೆ‌ ತನ್ನ ತಂದೆಯನ್ನೇ ಕೊಲೆ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕುಂದಲಗುರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಮಗನಿಂದಲೇ ಹತ್ಯೆಯಾದ ತಂದೆಯನ್ನು ರಂಗಸ್ವಾಮಿ(50) ಎಂದು ಗುರುತಿಸಲಾಗಿದ್ದು, ಆರೋಪಿ ಪುತ್ರ ದೇವರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.   ಮನೆಯಲ್ಲಿ ರಾತ್ರಿ ಊಟದ ವೇಳೆ ತನಗೆ ಮೊಟ್ಟೆ ಕೊಡಲಿಲ್ಲ ಎಂದು ದೇವರಾಜ್‌ ತಂದೆ ಜತೆ ಜಗಳ ಆರಂಭಿಸಿದ್ದ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿದ್ದು, ತೀವ್ರ …

Read More »

ಸಂಡೂರು ಉಪಚುನಾವಣೆ; ಮತ್ತೆ ಒಗ್ಗೂಡಿದ ಶ್ರೀರಾಮುಲು-ಜನಾರ್ಧನ ರೆಡ್ಡಿ

ಬಳ್ಳಾರಿ: ಸಂಡೂರು ಉಪಚುನಾವಣೆ ಅಖಾಡ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಬಂಗಾರು ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಇದುವರೆಗೂ ಪ್ರಚಾರದಿಂದ ದೂರವೇ ಉಳಿದಿದ್ದ ಮಾಜಿ ಸಚಿವ ಶ್ರೀರಾಮುಲು ಕೊನೆಗೂ ಸಂಡೂರು ಉಪಚುನಾವಣೆ ಪ್ರಚಾರಕ್ಕೆ ಎಂಟ್ರಿ ಕೊಟ್ಟಿದ್ದು, ಜನಾರ್ದನ ರೆಡ್ಡಿ ಜೊತೆ ಜಂಟಿ ಪ್ರಚಾರ ಆರಂಭಿಸಿದ್ದಾರೆ. ಇಬ್ಬರು ನಾಯಕರ ಜಂಟಿ ಪ್ರಚಾರ ಹಲವರ ಹುಬ್ಬೇರುವಂತೆ ಮಾಡಿದೆ. 2023ರ ಚುನಾವಣೆ ವೇಳೆ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಆಂತರಿಕ ಭಿನ್ನಾಭಿಪ್ರಾಯದಿಂದ ದೂರವಾಗಿದ್ದರು. ಬಳಿಕ ರೆಡ್ಡಿಯವರು ಕಲ್ಯಾಣ …

Read More »

ವಕ್ಫ್ ಮಂಡಳಿ ನಿಷೇಧಿಸಿ: ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಮೈಸೂರು: ವಕ್ಫ್ ಮಂಡಳಿ ರೈತರ ಜಮೀನು ಕಿತ್ತುಕೊಳ್ಳುತ್ತಿದ್ದು, ರೈತರಿಗೆ ನೋಟಿಸ್ ನೀಡಿದೆ. ಈ ಮಂಡಳಿಯನ್ನು ಕೂಡಲೇ ಸರ್ಕಾರ ನಿಷೇಧಿಸಬೇಕೆಂದು ರಾಜ್ಯ ಸರ್ಕಾರಕ್ಕೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 70 ವರ್ಷಗಳಿಂದ ವಕ್ಫ್ ಬೋರ್ಡ್‌ಗೆ ಅಧಿಕಾರ ನೀಡುವ ಮೂಲಕ ಸಮಸ್ಯೆ ಮತ್ತು ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಪಕ್ಷವೇ ಕಾರಣವಾಗಿದೆ. ವಕ್ಫ್ ಬೋರ್ಡ್ 16,000 ಎಕರೆಯಲ್ಲಿ ಮಾಲೀಕತ್ವ ಪಡೆದಿರುವ ರೈತರಿಗೆ ನೋಟಿಸ್ ನೀಡಿದೆ. …

Read More »

ನಿಖಿಲ್ 2 ಬಾರಿ ಸೋತಿದ್ದಾಗ ಅಭಿಮನ್ಯು ಆಗಿರಲಿಲ್ಲವಾ: HDKಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ನಿಖಿಲ್ ಕುಮಾರಸ್ವಾಮಿಯವರು ಎರಡು ಬಾರಿ ಸೋತಿದ್ದರು ಆಗ ಅಭಿಮನ್ಯು ಆಗಿರಲಿಲ್ಲವಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಭಾನುವಾರ ತಿರುಗೇಟು ನೀಡಿದರು. ಅರಮನೆ ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ನಿಖಿಲ್ ಅಭಿಮನ್ಯು ಅಲ್ಲ, ಅರ್ಜುನ ಆಗಿ ಬರುತ್ತಾನೆ ಎಂಬ ಹೆಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ಎರಡು ಬಾರಿ ಚುನಾವಣೆಯಲ್ಲಿ ಸೋತಾಗ ನಿಖಿಲ್ ಅಭಿಮನ್ಯು ಆಗಿರಲಿಲ್ವಾ?. ಮಂಡ್ಯ, ರಾಮನಗರದಲ್ಲಿ ಸೋತಿದ್ದಾರೆ. ಈಗ …

Read More »

ಇಂದು ಸಚಿವ ಸಂಪುಟ ಸಭೆ: ಒಳಮೀಸಲಾತಿ-ಜಾತಿಗಣತಿ ಕುರಿತು ಅನೌಪಚಾರಿಕ ಚರ್ಚೆ?

ಬೆಂಗಳೂರು: ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಹಾಗೂ ಜಾತಿ ಗಣತಿ ವರದಿ ಬಿಡುಗಡೆ ಕುರಿತು ರಾಜ್ಯ ಸರ್ಕಾಕ ಇಕ್ಕಟ್ಟಿಗೆ ಸಿಲುಕಿದ್ದು, ಸೋಮವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕವಾಗಿ ಚರ್ಚಿಸಿ ಸಂಬಂಧಪಟ್ಟ ಸಮುದಾಯಗಳಿಗೆ ಸಂದೇಶ ರವಾನಿಸುವ ಸಾಧ್ಯತೆ ಇದೆ.   ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ನ.13 ರಂದು ಉಪಚುನಾವಣೆ ನಡೆಯಲಿದ್ದು, ಚುನಾವಣಾ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವುದರಿಂದ ಯಾವುದೇ ದೃಢ ನಿರ್ಧಾರ ಕೈಗೊಳ್ಳಲು ಸರ್ಕಾರಕ್ಕೆ ಸಾಧ್ಯವಿಲ್ಲ. ಆದರೆ …

Read More »

ಕಪ್ಪತಗುಡ್ಡ ಪರಿಸರದಲ್ಲಿ ಗಣಿಗಾರಿಕೆ ಪ್ರಸ್ತಾವನೆ ತಿರಸ್ಕರಿಸಿ: ಸಿಎಂ ಸಿದ್ದರಾಮಯ್ಯಗೆ ಸಭಾಪತಿ ಹೊರಟ್ಟಿ ಪತ್ರ

ಗದಗ: ಕಪ್ಪತಗುಡ್ಡದಲ್ಲಿನ ಎಲ್ಲಾ 28 ಗಣಿಗಾರಿಕೆ ಪ್ರಸ್ತಾವನೆಗಳನ್ನು ತಿರಸ್ಕರಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾರಿಯಿದ್ದಾರೆ. ಇತ್ತೀಚೇಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಗಣಿಗಾರಿಕೆ ಪ್ರಸ್ತಾವನೆಗಳನ್ನು ಮುಂದೂಡಿದ್ದರು.   ಇದೀಗ ಬಸವರಾಜ ಹೊರಟ್ಟಿ ಸಿಎಂಗೆ ಪತ್ರ ಬರೆದು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಗಣಿಗಾರಿಕೆ ಪ್ರಸ್ತಾವನೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ. ಈ ವಾರ ತೋಂಟದಾರ್ಯ ಮಠಾಧೀಶರು, ಸಾಮಾಜಿಕ ಕಾರ್ಯಕರ್ತರು, ಪರಿಸರವಾದಿಗಳು ಡಿಸಿ ಮೂಲಕ ಸಿಎಂಗೆ …

Read More »

ಪಿಜಿಯಲ್ಲಿ ಯುವತಿಯನ್ನು ತಬ್ಬಿ ಮುತ್ತಿಕ್ಕಿ ಅಸಭ್ಯ ವರ್ತನೆ

ಬೆಂಗಳೂರು : ಬೆಂಗಳೂರು: ಪಿಜಿಯಲ್ಲಿ ಯುವತಿಯನ್ನು ತಬ್ಬಿ ಮುತ್ತಿಕ್ಕಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೀಣ್ಯ ಠಾಣೆ ಪೊಲೀಸರು ಸೆಕ್ಯುರಿಟಿ ಗಾರ್ಡ್ ನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಪೀಣ್ಯದಲ್ಲಿರುವ ಪಿಜಿಯೊಂದರಲ್ಲಿ ಈ ಘಟನೆ ನಡೆದಿದೆ.ಯುವತಿಯೋರ್ವಳ ಹೆಸರಿಗೆ ಕೊರಿಯರ್ ಬಂದಿದ್ದು, ಅದನ್ನು ತೆಗೆದುಕೊಳ್ಳಲು ಹೊರಗಡೆ ಬಂದ ಯುವತಿ ಜೊತೆ ಸೆಕ್ಯೂರಿಟಿ ಗಾರ್ಡ್ ಅಸಭ್ಯವಾಗಿ ವರ್ತಿಸಿದ್ದು, ಘಟನೆ ಸಂಬಂಧ ಸೆಕ್ಯೂರಿಟಿ ಗಾರ್ಡ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪಶ್ಚಿಮ ಬಂಗಾಳ ಮೂಲದ ಯುವತಿ ಪೀಣ್ಯ ಸಮೀಪದ …

Read More »

`HSRP’ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ವಾ? ನವೆಂಬರ್ 20 ರ ಬಳಿಕ ದಂಡ ಕಟ್ಟಲು ರೆಡಿ ಆಗಿ!

ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿತ್ತು. ಅಳವಡಿಸದೇ ಇದ್ದರೇ ದಂಡ ಕಟ್ಟೋದಕ್ಕೆ ರೆಡಿಯಾಗಿ ಎನ್ನಲಾಗಿತ್ತು. ಆದರೇ ಈಗ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ನವೆಂಬರ್.20ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಹೈಕೋರ್ಟ್ ಗಡುವು ವಿಸ್ತರಿಸಿದೆ. ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plates- HSRP) ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಅರ್ಜಿಯ …

Read More »

ಹೋಗು ಮಗನೇ.. ನೀನು ಗೆಲ್ಲುತ್ತಿಯಾ: ನಿಖಿಲ್‌ ಕುಮಾರಸ್ವಾಮಿಗೆ ಆಶೀರ್ವಾದ ಮಾಡಿದ ಅಜ್ಜಿ

ಚನ್ನಪಟ್ಟಣ, ಅಕ್ಟೋಬರ್‌ 28: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಭಾನುವಾರ ಬಿರುಸಿನ ಪ್ರಚಾರ ನಡೆಸಿದ್ದಾರೆ. ಪ್ರಚಾರದ ನಡುವೆ ದಶಾವರ ಗ್ರಾಮಕ್ಕೆ ಬಂದ ನಿಖಿಲ್ ಅವರನ್ನು ಆಶೀರ್ವದಿಸಿದ ಅಜ್ಜಿಯೊಬ್ಬರು, ಹೋಗು ಮಗನೇ.. ನಿನಗೆ ಒಳ್ಳೆಯದಾಗುತ್ತದೆ. ನೀನು ಗೆದ್ದೇ ಗೆಲ್ಲುವೆ ಎಂದು ಆಶೀರ್ವದಿಸಿದರು. ಅಜ್ಜಿಯಿಂದ ಮಾತಿನಿಂದ ಭಾವುಕರಾದ ನಿಖಿಲ್ ಅವರು, ಕಣ್ಣಲ್ಲಿ ನೀರು ತುಂಬಿಕೊಂಡರು. ನಿಮ್ಮ ಆಶೀರ್ವಾದ ಇದ್ದರೆ ಗೆದ್ದೇ ಗೆಲ್ಲುತ್ತೇನೆ ಎಂದು ಹೇಳಿದರು. …

Read More »