ಬೆಂಗಳೂರು: ದಸರಾ ಮಹೋತ್ಸವ ಸಂದರ್ಭದಲ್ಲಿ ವಾರಾಂತ್ಯ ಮೂರು ದಿನಗಳು ರಜೆ ಇರುವುದರಿಂದ ಪ್ರವಾಸ, ಧಾರ್ಮಿಕ ಸ್ಥಳ ಹಾಗೂ ಊರಿಗೆ ತೆರಳುವರ ಸಂಖ್ಯೆ ಹೆಚ್ಚಾಗಿದ್ದು, ನಗರದ ಬಸ್ ನಿಲ್ದಾಣಗಳೆಲ್ಲ ಗುರುವಾರ ಪ್ರಯಾಣಿಕರಿಂದ ಭರ್ತಿಯಾಗಿದ್ದವು. ನಗರದಿಂದ ಹೊರಟ ಎಲ್ಲ ಬಸ್ಗಳು ಪ್ರಯಾಣಿಕರಿಂದ ತುಂಬಿದ್ದವು. ಬುಧವಾರ ರಾತ್ರಿಯಿಂದಲೇ ಜನರು ಊರಿನತ್ತ ತೆರಳಿದ್ದು ಕಂಡುಬಂತು. ಕೆಂಪೇಗೌಡ ಬಸ್ನಿಲ್ದಾಣ, ಯಶವಂತಪುರ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಕಂಟೋನ್ಮೆಂಟ್ ಹಾಗೂ ಬೈಯಪ್ಪನಹಳ್ಳಿ ನಿಲ್ದಾಣದಲ್ಲೂ ಪ್ರಯಾಣಿಕರ ದಟ್ಟಣೆಯಿತ್ತು. ಸುತ್ತಮುತ್ತಲಿನ ರಸ್ತೆಗಳಲ್ಲಿ …
Read More »ದರ್ಶನ್ ಜಾಮೀನು ಅರ್ಜಿ: ಅ.14ಕ್ಕೆ ಆದೇಶ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಅಪಹರಣ, ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ 57ನೇ ಸಿಸಿಎಚ್ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತು. ಮುಂದುವರಿದ ವಾದ-ಪ್ರತಿವಾದವನ್ನು ಗುರುವಾರವೂ ಆಲಿಸಿದ ನ್ಯಾಯಾಧೀಶ ಜೈಶಂಕರ್ ಅವರು ಅಕ್ಟೋಬರ್ 14ಕ್ಕೆ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಪ್ರಕಟಿಸುವುದಾಗಿ ಹೇಳಿದರು. ಅದೇ ದಿನವೇ, ದರ್ಶನ್ ಆಪ್ತರಾದ ಪವಿತ್ರಾಗೌಡ, ರವಿಶಂಕರ್, ನಾಗರಾಜ್, ಲಕ್ಷ್ಮಣ್ ಹಾಗೂ ದೀಪಕ್ ಅವರ ಜಾಮೀನು ಅರ್ಜಿ ಆದೇಶವೂ ಪ್ರಕಟ …
Read More »9600 Bus: ರಸ್ತೆಗಳಿಯಲಿವೇ ‘ಐರಾವತ ಕ್ಲಬ್ ಕ್ಲಾಸ್ 2.0’ ಬಸ್: ರಾಮಲಿಂಗಾ ರೆಡ್ಡಿ
ಬೆಂಗಳೂರು, ಅಕ್ಟೋಬರ್ 07: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಹೊಸ ಬಸ್ ಖರೀದಿ ಪ್ರಕ್ರಿಯೆ ಮುಂದುವರೆಸಿದೆ. ಜನ ಸಾಮಾನ್ಯರಿಗೆ ಉತ್ತಮ ಅನುಭವ ನೀಡುವ ಉದ್ದೇಶದಿಂದ ಹೊಸ 9600 ವೋಲ್ವೊ ಮಲ್ಟಿಎಕ್ಸೆಲ್ ಮಾದರಿಯ ‘ಐರಾವತ ಕ್ಲಬ್ ಕ್ಲಾಸ್ 2.0’ ಬಸ್ಗಳನ್ನು ಖರೀದಿಸುತ್ತಿದೆ. ಈಗಾಗಲೇ ಒಂದನ್ನು ಪ್ರಾಯೋಗಿಕವಾಗಿ ಪರಿಶೀಲಿಸಿರುವ ಸಾರಿಗೆ ಸಚಿವರು ಇಂದು ಖುದ್ದು ತಯಾರಿಕಾ ಘಟಕ್ಕೆ ಭೇಟಿ ನೀಡಿ ವೀಕ್ಷಿಸಿದ್ದಾರೆ. ಹೌದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಸೋಮವಾರ …
Read More »ಮುಖ್ಯಮಂತ್ರಿ ಆಕಾಂಕ್ಷಿತರಲ್ಲಿ ಡಿ.ಕೆ.ಶಿವಕುಮಾರ್ ಮೊದಲಿಗರು: ಬಿ.ವೈ.ವಿಜಯೇಂದ್ರ
ಹುಬ್ಬಳ್ಳಿ: ‘ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇರುವವರೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷ ಅವಧಿ ಪೂರ್ಣಗೊಳಿಸುವರು ಎಂದು ಹೇಳುವವರೇ ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ. ಅವರಲ್ಲಿ ಡಿ.ಕೆ.ಶಿವಕುಮಾರ್ ಮೊದಲಿಗರು’ ಎಂದರು. ‘ಸಿದ್ದರಾಮಯ್ಯ ಅವರು ಸೂಚಿಸುವ ವ್ಯಕ್ತಿಗಳೇ ಸಹಜವಾಗಿ ಮುಖ್ಯಮಂತ್ರಿಯಾಗುತ್ತಾರೆ. ಹೀಗಾಗಿ ಅವರನ್ನು ಓಲೈಸಿಕೊಳ್ಳಲು ಪದೇ ಪದೇ …
Read More »ಆಯುಧ ಪೂಜೆಗೆ ಸಿದ್ಧತೆ: ಕುಂಬಳಕಾಯಿ ಮಾರಾಟ ಜೋರು
ಆಯುಧ ಪೂಜೆಗೆ ಸಿದ್ಧತೆ: ಕುಂಬಳಕಾಯಿ ಮಾರಾಟ ಜೋರು ಹುಬ್ಬಳ್ಳಿ: ದಸರಾ ಹಬ್ಬದ ನಿಮಿತ್ತ ಅ.11ರಂದು ನಡೆಯುವ ಆಯುಧ ಪೂಜೆಯ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಕುಂಬಳಕಾಯಿ, ಬೂದ ಕುಂಬಳಕಾಯಿ, ಬಾಳೆ ಕಂದು, ನಿಂಬೆಹಣ್ಣು ಹಾಗೂ ಹೂವಿನ ಮಾರಾಟ ಜೋರಾಗಿದೆ. ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತ, ದುರ್ಗದ ಬೈಲು ಮಾರುಕಟ್ಟೆ, ಜನತಾ ಬಜಾರ್, ಕೇಶ್ವಾಪುರ, ಹಳೇ ಹುಬ್ಬಳ್ಳಿ ಹಾಗೂ ಗೋಕುಲ ರಸ್ತೆಯ ಬದಿ ಸೇರಿದಂತೆ ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಈಗಾಗಲೇ …
Read More »ಬೆಳಗಾವಿ: ಬಡ ವಿದ್ಯಾರ್ಥಿಗಳ ಭರವಸೆ ‘ಸಿಇಟಿ-ಸಕ್ಷಮ
ಬೆಳಗಾವಿ: ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ರೂಪಿಸಿದ ‘ಸಿಇಟಿ- ಸಕ್ಷಮ’ಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಗ್ರಾಮೀಣ, ಬಡ ವಿದ್ಯಾರ್ಥಿಗಳು ಕೂಡ ಸಿಇಟಿ-ನೀಟ್ಗಳಲ್ಲಿ ಉತ್ತಮ ರ್ಯಾಂಕ್ ಗಳಿಸಲು ಈ ವಿನೂತನ ಪ್ರಯೋಗ ಮಾಡಲಾಗಿದೆ. ಇದರಿಂದ ಜಿಲ್ಲೆಯ 6,063 ವಿದ್ಯಾರ್ಥಿಗಳಲ್ಲಿ ಭರವಸೆ ಮೂಡಿದೆ. ಪ್ರಥಮ ಹಾಗೂ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ತರಬೇತಿ ನೀಡುವುದು, ಪ್ರತಿ ತಿಂಗಳು ಮಾದರಿ ಪರೀಕ್ಷೆ ನಡೆಸುವುದು ಇದರ ಉದ್ದೇಶ. ಕರ್ನಾಟಕ ಪರೀಕ್ಷಾ …
Read More »ಸಾಂಬ್ರಾ ವಿಮಾನ ನಿಲ್ದಾಣ ಪ್ರಾಧಿಕಾರ ₹3.69 ಕೋಟಿ ಆಸ್ತಿ ತೆರಿಗೆ ಬಾಕಿ
ಬೆಳಗಾವಿ: ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣ ಪ್ರಾಧಿಕಾರ ₹3.69 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ಅದರ ವಸೂಲಾತಿಗಾಗಿ ಸಾಂಬ್ರಾ ಗ್ರಾಮ ಪಂಚಾಯಿತಿ ನೋಟಿಸ್ ಜಾರಿಗೊಳಿಸಿದೆ. ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲಿ ಪ್ರಯತ್ನ ನಡದಿವೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಿರಂತರವಾಗಿ ಸಭೆ ನಡೆಸಿ, ಇದಕ್ಕೆ ಪೂರಕವಾಗಿ ಮೂಲಸೌಕರ್ಯ ಸಿದ್ಧಪಡಿಸುತ್ತಿದ್ದಾರೆ. ಹೊಸ ಟರ್ಮಿನಲ್ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿ ಆರಂಭಗೊಂಡಿವೆ. ಆದರೆ, ವಿಮಾನ ನಿಲ್ದಾಣದವರು ಕಳೆದ ಏಳು …
Read More »ಅನುಮತಿ ಇಲ್ಲದೇ ಮರಕ್ಕೆ ಕೊಡಲಿ: ಸಚಿವರಿಗೆ ದೂರು
ಖಾನಾಪುರ (ಬೆಳಗಾವಿ ಜಿಲ್ಲೆ): ‘ತಾಲ್ಲೂಕಿನ ಲೋಂಡಾ ಅರಣ್ಯ ವಲಯ ವ್ಯಾಪ್ತಿಯ ಶಿರೋಲಿ ಗ್ರಾಮದ ಕೃಷಿ ಭೂಮಿಯಲ್ಲಿ ಬೆಳೆದ 40 ಮರಗಳನ್ನು ಅನುಮತಿ ಇಲ್ಲದೇ ಕತ್ತರಿಸಲಾಗಿದೆ. ಪ್ರಕರಣ ನಡೆದು ಆರು ತಿಂಗಳಾಗಿದೆ. ಈ ಬಗ್ಗೆ ಕಾಂಗ್ರೆಸ್ ಹೋರಾಟ ಮಾಡಿದರೂ ಅರಣ್ಯಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಖುದ್ದಾಗಿ ತಾವೇ ಶಿಸ್ತುಕ್ರಮ ಜರುಗಿಸಬೇಕು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಅಂಜಲಿ ನಿಂಬಾಳಕರ ಅವರು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಮಂಗಳವಾರ ಭೇಟಿ ಮಾಡಿ …
Read More »ಬೆಳಗಾವಿಗೆ ಇಂದು ವಿಜಯೇಂದ್ರ
ಬೆಳಗಾವಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅ.10ರಂದಿ ಬೆಳಿಗ್ಗೆ 11ಕ್ಕೆ ಜಿಲ್ಲೆಯ ಹುಕ್ಕೇರಿ ಹುರೇಮಠದ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2ಕ್ಕೆ ಬೆಳಗಾವಿ ನಗರಕ್ಕೆ ಬಂದು ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಸುವರು. ನಂತರ ಪತ್ರಿಕಾಗೋಷ್ಠಿ ನಡಸಲಿದ್ದಾರೆ ಎಂದು ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ತಿಳಿಸಿದ್ದಾರೆ.
Read More »ಪಡಿತರ ಚೀಟಿದಾರರೇ ಗಮನಿಸಿ : ` E-KYC’ ಮಾಡದಿದ್ರೆ ನಿಮ್ಮ ‘BPL’ ಕಾರ್ಡ್ ಕ್ಯಾನ್ಸಲ್ !
ಅಕ್ಟೋಬರ್ 2024 ರ ಮಾಹೆಗೆ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರಿಗೆ ಪಡಿತರ ಆಹಾರಧಾನ್ಯವನ್ನು ಬಿಡುಗಡೆ ಮಾಡಲಾಗಿದ್ದು, ಪಡಿತರ ಚೀಟಿದಾರರು ಇ-ಕೆವೈಸಿ ಮಾಡದಿದ್ದರೆ ರೇಷನ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಆಹಾರ ಇಲಾಖೆ ಎಚ್ಚರಿಕೆ ನೀಡಿದೆ. ಅಕ್ಟೋಬರ್ ಮಾಹೆ 1ನೇ ತಾರೀಖಿನಿಂದ ತಿಂಗಳ ಕೊನೆಯವರೆಗೆ ಬೆಳಿಗ್ಗೆ 07 ರಿಂದ ಮಧ್ಯಾಹ್ನ 12 ಗಂಟೆಯವರೆಗೆ, ಸಾಯಂಕಾಲ 04 ರಿಂದ ರಾತ್ರಿ 09 ಗಂಟೆಯವರೆಗೆ ಮಂಗಳವಾರ ರಜಾ …
Read More »
Laxmi News 24×7