Home / ರಾಜಕೀಯ (page 676)

ರಾಜಕೀಯ

ಕೇಂದ್ರ ಸರ್ಕಾರದ ನಿರ್ಧಾರದಿಂದ ಪಡಿತರ ಚೀಟಿದಾರರಿಗೆ ಬಿಗ್ ರಿಲೀಫ್

ಕೇಂದ್ರ ಸರ್ಕಾರದ ನಿರ್ಧಾರದಿಂದ ಪಡಿತರ ಚೀಟಿದಾರರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ದೇಶಾದ್ಯಂತ ಹೊಸ ನಿಯಮ ಜಾರಿಯಾಗ್ತಿದೆ. ಈ ಮೂಲಕ ಪಡಿತರ ಚೀಟಿಯಿಂದ ಆಹಾರ ಧಾನ್ಯ ಪಡೆಯುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲಾಗಿದ್ದು, ಇದರ ನಂತರ ಎಲ್ಲಾ ಅಂಗಡಿಗಳಲ್ಲಿ ಆನ್‌ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(ಪಿಒಎಸ್) ಸಾಧನಗಳನ್ನು ಕಡ್ಡಾಯಗೊಳಿಸಲಾಗಿದೆ.   ರಾಷ್ಟ್ರೀಯ ಆಹಾರ ಭದ್ರತಾ …

Read More »

ಬೆಂಗಳೂರಿನಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ

ಬೆಂಗಳೂರು: ಮೈಸೂರು – ಚೆನ್ನೈ ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದರಿಂದಾಗಿ ಕೋಚ್‌ನ ಎರಡು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.   ಬೆಂಗಳೂರಿನ ಕೆ.ಆರ್‌ಪುರಂ ಬಳಿ ಶನಿವಾರ ಈ ಘಟನೆ ಸಂಭವಿಸಿದೆ. ಚೆನ್ನೈ- ಬೆಂಗಳೂರು- ಮೈಸೂರು ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲು ಚೆನ್ನೈನಿಂದ ಬೆಂಗಳೂರಿಗೆ ಬರುವ ಮಾರ್ಗದಲ್ಲಿ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಬೆಂಗಳೂರಿನಲ್ಲಿ ಇಲ್ಲಿವರೆಗೆ …

Read More »

ಮಕ್ಕಳೆ ರಾಜಕಾರಣಿ ಮಾತ್ರ ಆಗಬೇಡಿ: ಶಾಸಕ ಎಂ.ವೈ.ಪಾಟೀಲ್ ಕರೆ

ಕಲಬುರಗಿ: ಮಕ್ಕಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಂಡು ಗುರಿಯೊಂದಿಗೆ ಸಾಧನೆ ಮಾಡಬೇಕು ಎಂದು ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಮಕ್ಕಳಿಗೆ ಸಲಹೆ ನೀಡಿದರು. ಕಲ್ಯಾಣ ಕರ್ನಾಟಕ ಉತ್ಸವದ ಹಿನ್ನೆಲೆಯಲ್ಲಿ ಕಲಬುರಗಿ ವಿವಿಯ ಬಯಲು ರಂಗಮಂದಿರ ಶನಿವಾರ ಆಯೋಜಿಸಿದ ಮಕ್ಕಳ ಉತ್ಸವ ಉದ್ಘಾಟಿಸಿ ಮಾತನಾಡಿ, ಇದು ಕೇವಲ ಉತ್ಸವ ಅಲ್ಲ, ನಮ್ಮ ಭಾಗದ ದೊಡ್ಡ ಹಬ್ಬವಾಗಿದೆ. ಭಾರತ ಸ್ವಾತಂತ್ರ್ಯ ಮತ್ತು ನಿಜಾಮ ಶಾಹಿಯಿಂದ ಮುಕ್ತಿ ಪಡೆದ ಬಳಿಕ ಸ್ವಾತಂತ್ರೋತ್ಸವವನ್ನು ಮಾರ್ಪಾಟಾಗಿ ಕಲ್ಯಾಣ ಕರ್ನಾಟಕ ಉತ್ಸವವಾಗಿ ಆಚರಿಸಲಾಗುತ್ತಿದೆ. …

Read More »

ಸನ್ಯಾಸಿಗಳೂ ಬಿಜೆಪಿ ಸೇರಬಹುದು: ಸಚಿವ ಡಾ|ಅಶ್ವತ್ಥನಾರಾಯಣ

ದಾವಣಗೆರೆ: ಭಾರತೀಯ ಜನತಾ ಪಾರ್ಟಿಗೆ ಸನ್ಯಾಸಿಗಳೂ ಸೇರಿದಂತೆ ಎಲ್ಲರಿಗೂ ಮುಕ್ತ ಆಹ್ವಾನವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ|ಅಶ್ವತ್ಥನಾರಾಯಣ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜಾಪ್ರಭುತ್ವ ದಲ್ಲಿ ಎಲ್ಲರೂ ಭಾಗವಹಿಸಬೇಕಾಗುತ್ತೆ. ಅಂತಹ ಆಲೋಚನೆ-ವಿಚಾರ ಇರೋರು ಬಿಜೆಪಿ ಸೇರಬಹುದು. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸನ್ಯಾಸಿ ಆಗಿದ್ದವರು. ಸನ್ಯಾಸಿಗಳಾಗಿದ್ದವರು ಶಾಸಕ-ಮಂತ್ರಿಯಾಗಿದ್ದಾರೆ. ಲೋಕಸಭೆಗೂ ಆಯ್ಕೆಯಾಗಿದ್ದಾರೆ. ನಮ್ಮ ಪಕ್ಷದಲ್ಲಿ ಎಲ್ಲರೂ ಇದ್ದಾರೆ. ಹೀಗಾಗಿ ಎಲ್ಲರಿಗೂ ಮುಕ್ತ ಆಹ್ವಾನವಿದೆ ಎಂದರು. ಅರ್ಕಾವತಿ ಬಡಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ …

Read More »

ಸ್ವಾಮೀಜಿಗಳು ವಿಧಾನಸೌಧದಲ್ಲಿ ಕಾಣಿಸಿಕೊಳ್ಳುವುದು ಸರಿಯಲ್ಲ: ಹೊರಟ್ಟಿ

ಧಾರವಾಡ: ಸ್ವಾಮೀಜಿಗಳು ಸಮಾಜಕ್ಕೆ ಮಾದರಿ. ಅವರು ಮಠ ಬಿಟ್ಟು ವಿಧಾನಸೌಧದಲ್ಲಿ ಕಾಣಿಸಿಕೊಳ್ಳುವುದು ಸರಿಯಲ್ಲ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಾನು ನೋಡಿದಂತೆ ಬಹುತೇಕ ಸ್ವಾಮೀಜಿಗಳು ವಿಧಾನಸೌಧದಲ್ಲಿಯೇ ಇರುತ್ತಾರೆ. ಇದು ಸರಿಯಾದ ಬೆಳವಣಿಗೆಯಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸ್ವಾಮೀಜಿಗಳು ರಾಜಕಾರಣಕ್ಕೆ ಬರಲಿ ಎಂದು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಚುನಾವಣೆಯಲ್ಲಿ ಮತ ಚಲಾವಣೆ ಮಾಡುವವರು ಬುದ್ಧಿವಂತರಾಗುವವರೆಗೂ ಒಳ್ಳೆಯ ಸರಕಾರ …

Read More »

ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆಂದ ಕಟೀಲು

ಲಿಂಗಸೂಗುರು: ಅರ್ಕಾವತಿ ಪ್ರಕರಣದ ತನಿಖೆ ಲೋಕಾಯುಕ್ತಕ್ಕೆ ವಹಿಸಿದ್ದು, ತನಿಖೆ ಬಳಿಕ ತಪ್ಪಿತಸ್ಥರು ಜೈಲು ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು ಹೇಳಿದರು. ಶನಿವಾರ ವಿಜಯ ಸಂಕಲ್ಪ ಯಾತ್ರೆ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆಂದು ನಾನು ಹೇಳಿದ್ದೆ. ನ್ಯಾ| ಕೆಂಪಣ್ಣ ಕೊಟ್ಟ ವರದಿ ಲೋಕಾಯುಕ್ತಕ್ಕೆ ಕೊಟ್ಟು ಸಂಪೂರ್ಣ ತನಿಖೆ ಮಾಡಿಸಲಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾದ ನಾಯಕರ ವಿರುದ್ಧ ಕ್ರಮ ಜರಗಲಿದೆ. ತಪ್ಪಿತಸ್ಥರು ಜೈಲಿಗೆ ಹೋಗುತ್ತಾರೆ …

Read More »

ದೊಡ್ಡಗೌಡರ ಮಧ್ಯಪ್ರವೇಶ; ಇಂದಿನ ಸಭೆ ರದ್ದು

ಬೆಂಗಳೂರು:ಹಾಸನ ವಿಧಾನಸಭೆ ಕ್ಷೇತ್ರದ ಟಿಕೆಟ್‌ ವಿಚಾರ ಕಗ್ಗಂಟಾಗಿರುವ ನಡುವೆಯೇ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಭಾನುವಾರ ನಡೆಯಬೇಕಾಗಿದ್ದ ಜೆಡಿಎಸ್‌ ಸಭೆಯೇ ರದ್ದಾಗಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.   ಎಚ್‌.ಡಿ.ರೇವಣ್ಣ ಅವರು ದೇವೇಗೌಡರ ಮೇಲೆ ಒತ್ತಡ ಹಾಕಿ ಸಭೆಯನ್ನು ಮುಂದೂಡುವಂತೆ ಮಾಡಿದ್ದು, ಈ ತಿಕ್ಕಾಟದಲ್ಲಿ ಎಚ್‌.ಡಿ ರೇವಣ್ಣ ಅವರೇ ಮೇಲುಗೈ ಸಾಧಿಸಿದ್ದಾರೆ ಎಂದು ಹೇಳಲಾಗಿದೆ. ತೀವ್ರ ಜಿದ್ದಾಜಿದ್ದಿ ಹಾಗೂ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಹಾಸನ ಕ್ಷೇತ್ರದ ಟಿಕೆಟ್‌ಗೆ ಸಂಬಂಧಿಸಿ ಶನಿವಾರ ಶೃಂಗೇರಿಯಲ್ಲಿ …

Read More »

ಮರ್ಯಾದೆಗೆ ಅಂಜಿ ಮಗಳ ರುಂಡ-ಮುಂಡ ಬೇರ್ಪಡಿಸಿದ ತಂದೆ!

ಆಂಧ್ರಪ್ರದೇಶ : ತಂದೆಯೊಬ್ಬ, ಬೇರೆ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದ ಮಗಳ ರುಂಡ-ಮುಂಡವನ್ನು ಕತ್ತರಿಸಿ ಕೊಲೆ ಮಾಡಿ ಕಾಡಿನಲ್ಲಿ ಎಸೆದಿದ್ದಾನೆ. ಈ ಮರ್ಯಾದಾ ಹತ್ಯೆ ಪ್ರಕರಣ ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.   ಪ್ರಸನ್ನ (21) ಮೃತ ದುರ್ದೈವಿ. ಪಾಣ್ಯಂ ಮಂಡಲ ಆಲಮೂರಿನ ದೇವೇಂದ್ರ ರೆಡ್ಡಿ ಮಗಳನ್ನು ಕೊಂದ ಆರೋಪಿ. ರೆಡ್ಡಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಹಿರಿಯ ಮಗಳಾದ ಪ್ರಸನ್ನಗೆ ಎರಡು ವರ್ಷಗಳ ಹಿಂದೆ ಸಾಫ್ಟ್‌ವೇರ್ ಇಂಜಿನಿಯರ್ …

Read More »

ಇಲ್ಲಿದೆ 20 ವರ್ಷ ಚಿಕ್ಕವರಾಗಿ ಕಾಣುವ ಡಾ. ಮಾರ್ಕ್​ ಹೇಳಿದ ಆರೋಗ್ಯ ಗುಟ್ಟು

ವಯಸ್ಸಾಗುವುದು ಸಹಜ. ಆದರೆ ವಯಸ್ಸಾದರೂ ಯುವಕರಂತೆ ಕಾಣುವುದು ಕಷ್ಟ. ಆದರೆ ಬಹಳಷ್ಟು ಜನರು ತಮ್ಮ ಮೂಲ ವಯಸ್ಸಿಗಿಂತ ಹಲವಾರು ವರ್ಷ ಚಿಕ್ಕವರಂತೆ ಕಾಣುತ್ತಾರೆ ಮತ್ತು ಅವರಲ್ಲಿ ಒಬ್ಬರು 63 ವರ್ಷದ ಡಾ ಮಾರ್ಕ್ ಹೈಮನ್ ಅವರು ಸುಮಾರು 20 ವರ್ಷ ಚಿಕ್ಕವರಾಗಿ ಕಾಣುತ್ತಾರೆ. ಇದರ ರಹಸ್ಯವನ್ನು ಅವರು ಬಹಿರಂಗಪಡಿಸಿದ್ದಾರೆ. ಡಾ ಹೈಮನ್ Instagram ನಲ್ಲಿ 23 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ ಮತ್ತು ಯಂಗ್ ಫಾರೆವರ್ ಪುಸ್ತಕದ ಲೇಖಕರಾಗಿದ್ದಾರೆ. ಒಬ್ಬ …

Read More »

ಬಹು ನಿರೀಕ್ಷಿತ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ ಮಾರ್ಚ್ 11ರಂದು ಉದ್ಘಾಟನೆ

ಬೆಂಗಳೂರು ಹಾಗೂ ಮೈಸೂರು ನಗರಗಳ ಜನತೆ ಕಾತರದಿಂದ ಕಾಯುತ್ತಿದ್ದ, ಉಭಯ ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್ 11ರಂದು ಲೋಕಾರ್ಪಣೆಯಾಗಲಿದೆ. ಬೆಂಗಳೂರು: ಬೆಂಗಳೂರು ಹಾಗೂ ಮೈಸೂರು ನಗರಗಳ ಜನತೆ ಕಾತರದಿಂದ ಕಾಯುತ್ತಿದ್ದ, ಉಭಯ ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್ 11ರಂದು ಲೋಕಾರ್ಪಣೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಇದನ್ನು ಮಂಡ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಧೃಡಪಡಿಸಿದ್ದಾರೆ. ಇದರ ಜೊತೆಗೆ ಪ್ರಧಾನಿ …

Read More »