Home / ರಾಜಕೀಯ (page 677)

ರಾಜಕೀಯ

ವಿದ್ಯಾರ್ಥಿಗಳಿಂದ ತಾಯಂದಿರ ಪಾದಪೂಜೆ-

ಮೂಡಲಗಿ: ವಿದ್ಯಾರ್ಥಿಗಳು ಪಠ್ಯಕ್ರಮದ ಅಭ್ಯಾಸದೊಂದಿಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಿಕೊಂಡು ಭವಿಷ್ಯ ಕಟ್ಟಿಕೊಳ್ಳಬೇಕು. ಅಕ್ಷರದೊಂದಿಗೆ ಉತ್ತಮ ಸಂಸ್ಕಾರವೂ ದೊರೆಯಬೇಕು ಎಂದು ಮುಖ್ಯಾಧ್ಯಾಪಕ ಎ.ವಿ. ಗಿರೆಣ್ಣವರ ಹೇಳಿದರು. ತುಕ್ಕಾನಟ್ಟಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ತಾಯಂದಿರ ಸಭೆ ಹಾಗೂ ತಾಯಂದಿರ ಪಾದ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಲಕರು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿಕೊಂಡು ಅವರಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಮಕ್ಕಳ ಶಿಕ್ಷಣಕ್ಕೆ ಬಡತನ ಅಡ್ಡಿಯಾಗಬಾರದು ಎಂದು ಸಲಹೆ ನೀಡಿದರು. …

Read More »

ಬಿಜೆಪಿಯನ್ನೇ ಬೆಂಬಲಿಸಿ: ವೀರಶೈವ-ಲಿಂಗಾಯತರಿಗೆ ಯಡಿಯೂರಪ್ಪ ಮನವಿ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ತಮ್ಮ ಬೆಂಬಲವನ್ನು ಮುಂದುವರೆಸಿ ಪಕ್ಷದ ಗೆಲುವನ್ನು ಖಚಿತಪಡಿಸಿಕೊಳ್ಳಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಪ್ರಬಲ ವೀರಶೈವ-ಲಿಂಗಾಯತ ಸಮುದಾಯಕ್ಕೆ ಮನವಿ ಮಾಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ 79ರ ಹರೆಯದ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾದ ನೀವು ಚುನಾವಣಾ ರಾಜಕೀಯದಿಂದ ನಿವೃತ್ತರಾದ ನಂತರವೂ ಸಮುದಾಯ ಬಿಜೆಪಿಯನ್ನು ಬೆಂಬಲಿಸುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ, ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಮತ …

Read More »

ಗುಜರಾತ್ ನ ಗ್ರಾಮಗಳಿಗೆ ಭೇಟಿ ನೀಡಿದ್ರೆ `ಗುಜರಾತ್ ಮಾಡೆಲ್’ ಗೊತ್ತಾಗುತ್ತೆ:H.D.K.

ಎಲ್ಲರೂ ಗುಜರಾತ್ ಮಾಡೆಲ್ ಅಂತಾರೆ, ಅದರೆ ಗುಜರಾತ್ ನ ಗ್ರಾಮಗಳಿಗೆ ಭೇಟಿ ನೀಡಿದ್ರೆ ಗುಜರಾತ್ ಮಾಡೆಲ್ ಅನ್ನೋದು ಗೊತ್ತಾಗುತ್ತೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರ ಫೈಲ್ಸ್ ರೀತಿಯಲ್ಲೇ ಗುಜರಾತ್ ಫೈಲ್ಸ್ ಪುಸ್ತಕ ಇದೆ. ಗುಜರಾತ್ ಗಲಭೆ ವೇಳೆ ಏನೆಲ್ಲಾ ಆಯ್ತು ಅನ್ನೋದು ಪುಸ್ತಕದಲ್ಲಿ ಇದೆ. ಗುಜರಾತ್ ಪೈಲ್ಸ್ ಪುಸ್ತಕದಲ್ಲಿ ಗಲಭೆಯ ಸಂಪೂರ್ಣ ಮಾಹಿತಿ ಇದೆ ಎಂದರು. ತಾವು ಅಭಿವೃದ್ಧಿ ಮಾಡಿದ್ದೇವೆ ಎಂದು ಬಿಂಬಿಸಲು ಪ್ರಧಾನಿ ಮೋದಿ ಅವರು …

Read More »

ಶಾಲಾ ದಾಖಲಾತಿಯಲ್ಲಿ ವಿದ್ಯಾರ್ಥಿ ಹೆಸರು, ಜನ್ಮದಿನಾಂಕ ಸೇರಿ ಇತರೆ ತಿದ್ದುಪಡಿ : ರಾಜ್ಯ ಸರ್ಕಾರದಿಂದ ಪರಿಷ್ಕೃತ ಸುತ್ತೋಲೆ

ಬೆಂಗಳೂರು : ವಿದ್ಯಾರ್ಥಿಗಳ ಶಾಲಾ ದಾಖಲಾತಿಗಳಲ್ಲಿ ವಿದ್ಯಾರ್ಥಿ ಹೆಸರು/ಪೋಷಕರ ಹೆಸರು, ಜನ್ಮದಿನಾಂಕ, ಜಾತಿ ಇತ್ಯಾದಿ ತಿದ್ದುಪಡಿ ಸಂಬಂದ ರಾಜ್ಯ ಸರ್ಕಾರ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ. ಶಾಲಾ ದಾಖಲಾತಿಗಳಲ್ಲಿ ವಿದ್ಯಾರ್ಥಿ ಹೆಸರು/ಪೋಷಕರ ಹೆಸರು, ಜಾತಿ, ಜನ್ಮ ದಿನಾಂಕ ಇತ್ಯಾದಿ ತಿದ್ದುಪಡಿ ಮಾಡುವ ಸಂಬಂಧ, ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾರ್ಗದರ್ಶನವನ್ನು ನೀಡಿ ಅಧಿಕಾರವನ್ನು ಉಲ್ಲೇಖಿತ ಸುತ್ತೋಲೆಗಳಲ್ಲಿ ಜಿಲ್ಲಾ ಉಪನಿರ್ದೇಶಕರಿಗೆ ಪ್ರತ್ಯಾಯೋಜಿಸಿ ಅದರಂತೆ ಕ್ರಮವಹಿಸಲಾಗುತ್ತಿದೆ. ಈ ಪ್ರಕ್ರಿಯೆಯು ವಿಳಂಬವಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ …

Read More »

ಬೊಮ್ಮಾಯಿಯವರು ಕಣ್ಣು ಬಿಡಲು ಇನ್ನೆಷ್ಟು ಶಿಕ್ಷಕರ ಹೆಣ ಬೀಳಬೇಕು?: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ಸರ್ಕಾರಿ ಕೊಲೆಗಳು ಅನ್ನದೆ ಬೇರೇನು ಹೇಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ತಪಸಿ ಗ್ರಾಮದಲ್ಲಿ ಶ್ರೀ ಬಸರಿಶಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   https://www.instagram.com/reel/CpEyv87Dkf5/?igshid=NDk5N2NlZjQ= ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …

Read More »

ನಗರಸಭೆ: ₹7.32 ಲಕ್ಷ ಉಳಿತಾಯ ಬಜೆಟ್‌

ಗೋಕಾಕ: ಇಲ್ಲಿನ ನಗರಸಭೆಯ 2023-24ನೇ ಸಾಲಿನ ₹7.32 ಲಕ್ಷದ ಉಳಿತಾಯದ ಬಜೆಟ್ ಅನ್ನು ಪ್ರಭಾರಿ ಪೌರಾಯುಕ್ತ ಶಿವಾನಂದ ಹಿರೇಮಠ ಅವರು, ಅಧ್ಯಕ್ಷ ಜಯಾನಂದ ಹುಣಚ್ಯಾಳಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಂಡಿಸಿದರು. ನಗರದ ಸ್ವಚ್ಛತೆಗಾಗಿ 19 ಜನ ಪೌರಕಾರ್ಮಿಕರ ನೇಮಕ ಪ್ರಕ್ರಿಯೆ ನಡೆದಿದ್ದು, ಉಳಿದ ಕಾರ್ಮಿಕರನ್ನು ಹೊರಗುತ್ತಿಗೆ ಹಾಗೂ ನೇರ ಪಾವತಿ ಆಧಾರದ ಮೇಲೆ ಸೇವೆಯನ್ನು ಪಡೆಯುವ ಉದ್ದೇಶಕ್ಕೆ ₹3.84 ಕೋಟಿ ಅವಶ್ಯ ನಿಗದಿ ಮಾಡಿರುವುದಾಗಿ ತಿಳಿಸಿದರು.   …

Read More »

15ನೇ ವಿಧಾನಸಭೆ ಅಧಿವೇಶನ ಅಂತ್ಯ; ಪರಸ್ಪರ ಶುಭಾಶಯ ಕೋರಿದ ಸದಸ್ಯರು

ಬೆಂಗಳೂರು: 15ನೇ ವಿಧಾನಸಭೆಯ ಕೊನೆಯ ಅಧಿವೇಶನದ ಕೊನೆಯ ದಿನವಾದ ವಿಧಾನಸಭೆಯಲ್ಲಿ ವಿದಾಯ ಭಾಷಣದ್ದೇ ಕಾರುಬಾರು. ಕಳೆದ 5 ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ, ಜನತೆಯ ಹಿತಕ್ಕಾಗಿ ತಮ್ಮನ್ನು ತಾವು ಅರ್ಪಣೆ ಮಾಡಿಕೊಂಡು ತನುಮನದಿಂದ ದುಡಿದ ಸಂತೃಪ್ತ, ಸಾರ್ಥಕ ಭಾವನೆಯನ್ನು ಎಲ್ಲ ಸದಸ್ಯರುಗಳು ವ್ಯಕ್ತಪಡಿಸಿ, ಪರಸ್ಪರ ಶುಭಾಶಯ,, ಅಭಿನಂದನೆಗಳ ವಿನಿಮಯ ಮಾಡಿಕೊಂಡರು. ಜತೆಗೆ ಮತ್ತೆ ಚುನಾವಣೆಯಲ್ಲಿ ಗೆದ್ದು ಸದನಕ್ಕೆ ಬರೋಣ ಶುಭ ಹಾರೈಕೆಗಳ ವಿನಿಮುಂವೂ ಸದನದಲ್ಲಿ ಆಯಿತು. 2018ರ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾದ …

Read More »

ಮದ್ಯಪಾನವನ್ನೇ ಮುಂದಿಟ್ಟುಕೊಂಡು ಸರ್ಕಾರಗಳು ರಾಜಕಾರಣ ಮಾಡುತ್ತಿವೆ! ಮುತಾಲಿಕ್

ಉಡುಪಿ: ರಾಜ್ಯ ಸರ್ಕಾರ ಮದ್ಯಪಾನದ ವಯಸ್ಸನ್ನು 21 ರಿಂದ 18 ವರ್ಷಕ್ಕೆ ಇಳಿಕೆ ಮಾಡಿರುವು ಆಘಾತಕಾರಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಮದ್ಯ ಸೇವನೆ ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತಿದೆ. ದೇಶದಾದ್ಯಂತ ಮದ್ಯಪಾನವನ್ನು ನಿಷೇಧ ಮಾಡಬೇಕೆಂದು ಗಾಂಧೀಜಿ 75 ವರ್ಷದ ಹಿಂದೆಯೇ ಸಲಹೆ ಕೊಟ್ಟಿದ್ದರು. ಆದರೆ ಮದ್ಯಪಾನವನ್ನೇ ಅನುಸರಿಸಿ ಸರಕಾರಗಳು ರಾಜಕಾರಣ ಮಾಡುತ್ತಿವೆ ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ಹೊರಹಾಕಿದರು. ವಿದ್ಯಾರ್ಥಿಗಳು, ಕಾರ್ಮಿಕರು, ರೈತರು ಮಧ್ಯಪಾನಕ್ಕೆ ಬಲಿಯಾಗುತ್ತಿದ್ದಾರೆ. …

Read More »

ಪ್ರಜಾಕೀಯ ಪಕ್ಷಕ್ಕೆ ಸಿಕ್ಕಿತು ‘ಆಟೋ ರಿಕ್ಷಾ’ ಚಿಹ್ನೆ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಚುನಾವಣೆಯ ಕಾವು ರಂಗೇರುತ್ತಿದೆ. ಈಗಾಗಲೇ ಎಲ್ಲಾ ಪಕ್ಷಗಳು ರಾಜ್ಯದಾದ್ಯಂತ ಪ್ರಚಾರ ಕಾರ್ಯ ಆರಂಭಿಸಿವೆ. ಹೊಸ ಹೊಸ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ಧೇಶದಿಂದ ಕ್ಷೇತ್ರದಲ್ಲಿ ನಿರಂತರ ಓಡಾಟ ನಡೆಸುತ್ತಿದ್ದಾರೆ. ಇದೆಲ್ಲದರ ನಡುವೆ ಜನರಿಗೆ ಕುತೂಹಲ ಕೆರಳಿಸಿರುವುದು ನಟ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷ. ಇದೀಗ ಪ್ರಜಾಕೀಯ ಪಕ್ಷಕ್ಕೆ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ. ಈ ಕುರಿತು ಚುನಾವಣಾ ಆಯೋಗ ಆದೇಶ ಹೊರಡಿಸಿದ್ದು, ತಮ್ಮ ಪಕ್ಷದ ಚಿಹ್ನೆಯನ್ನು ನಟ …

Read More »