ಬೆಂಗಳೂರು : ಹಠಾತ್ ಹೃದಯಾಘಾತ ತಡೆಯಲು ಜಾರಿಗೆ ತಂದಿರುವ ‘ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆ’ ಅಡಿ ಸುಮಾರು 11 ಸಾವಿರ ಜನರಲ್ಲಿ ಗಂಭೀರವಾಗಿರುವ ಸಮಸ್ಯೆ ಪತ್ತೆ ಮಾಡಲಾಗಿದ್ದು, ನಾಲ್ಕು ತಿಂಗಳಲ್ಲಿ ಅಮೂಲ್ಯ ಸಮಯದಲ್ಲಿ 10 ಜೀವ ರಕ್ಷಣೆ ಮಾಡಲಾಗಿದೆ. ಈ ಯೋಜನೆಯನ್ನು ಹಬ್ ಮತ್ತು ಸ್ಟೋಕ್ ಮಾದರಿಯಲ್ಲಿ ಜಾರಿಗೆ ತರಲಾಗಿದ್ದು, 71 ತಾಲೂಕು ಆಸ್ಪತ್ರೆಗಳೂ ಸೇರಿದಂತೆ ಒಟ್ಟು 86 ಸರ್ಕಾರಿ ಆಸ್ಪತ್ರೆಗಳನ್ನು ಸ್ಟೋಕ್ ಕೇಂದ್ರಗಳನ್ನಾಗಿ ಹಾಗೂ ಜಯದೇವ ಸೇರಿದಂತೆ …
Read More »ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ
ಹಾರೂಗೇರಿ : ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಮ್ಮ ವಿರುದ್ಧ ಸ್ವ ಪಕ್ಷದರೇ ಕೆಲಸ ಮಾಡಿದ್ದರು, ನಾನು ಮಾಜಿ ಶಾಸಕ ಶಾಮ್ ಘಾಟಗೆ ಮಾತು ಕೇಳುತ್ತೇನೆ ಎಂದು ಆರೋಪ ಮಾಡುತ್ತಾರೆ ಘಾಟಗೆ ಅಷ್ಟೇ ಅಲ್ಲ ಮನೆಯಲ್ಲಿ ನಾನು ನನ್ನ ಹೆಂಡತಿ, ಮಕ್ಕಳ ಮಾತೂ ಕೇಳಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ವಿರುದ್ಧ ವಾಗ್ದಾಳಿ ನಡೆಸಿದರು. ಹಾರೂಗೇರಿ ಪಟ್ಟಣದಲ್ಲಿ ನೂತನ ಸಂಸದರ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಇವರು. …
Read More »ನ್ಯೂ ಇಂಡಿಯನ್ ಕ್ರಾಫ್ಟ್ ಪ್ರದರ್ಶನ
ಹಾವೇರಿ: ದೇಶದ ವಿವಿಧ ಭಾಗಗಳಲ್ಲಿ ಹೆಸರುವಾಸಿಯಾಗಿರುವ ‘ನ್ಯೂ ಇಂಡಿಯನ್ ಕ್ರಾಫ್ಟ್’ ಪ್ರದರ್ಶನ ಜೂನ್ 19ರಿಂದ ಹಾವೇರಿಯ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಆರಂಭವಾಗಿದ್ದು, ತರಹೇವಾರಿ ವಸ್ತುಗಳು ಖರೀದಿಗೆ ಲಭ್ಯವಿವೆ. ದೇಶದಾದ್ಯಂತ ಪ್ರಸಿದ್ಧಿ ಪಡೆದಿರುವ ವಿವಿಧ ವಸ್ತುಗಳ ಮಾರಾಟಗಾರರ 60ಕ್ಕೂ ಹೆಚ್ಚು ಮಳಿಗೆಗಳು ಪ್ರದರ್ಶನದಲ್ಲಿವೆ. ಕರ್ನಾಟಕ, ಉತ್ತರ ಪ್ರದೇಶ, ಮಧ್ಯಪ್ರದೇಶ, ಒಡಿಶಾ, ಕಾಶ್ಮೀರ, ಶಿಮ್ಲಾ, ಪಂಜಾಬ್, ಅಸ್ಸಾಂ, ಅರುಣಾಚಲ, ಪಶ್ಚಿಮ ಬಂಗಾಳ, ರಾಜಸ್ಥಾನ, ಹರಿಯಾಣ, ಉತ್ತರಾಖಂಡ, ಕೇರಳ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕುಶಲಕರ್ಮಿಗಳ ಕರಕುಶಲ …
Read More »ತೋಟಗಾರಿಕೆ ಬೆಳೆ ವಿಮೆ: 31 ಕೊನೆ ದಿನ
ಬ್ಯಾಡಗಿ: ತಾಲ್ಲೂಕಿನ ತೋಟಗಾರಿಕೆ ಬೆಳೆಗಳಾದ ಮೆಣಸಿನಕಾಯಿ, ಅಡಿಕೆ, ಶುಂಠಿ, ಹಸಿ ಮೆಣಸಿನಕಾಯಿ ಹಾಗೂ ಮಾವು ಬೆಳೆಗಳಿಗೆ ಸರ್ಕಾರ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ. 2024-25ನೇ ಸಾಲಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಕಂತು ತುಂಬಲು ಜುಲೈ 31 ಕೊನೆಯ ದಿನವಾಗಿದೆ. ಪ್ರತಿ ಹೆಕ್ಟೇರ್ ಅಡಿಕೆ ಬೆಳೆಗೆ ₹6,400, ಹಸಿಮೆಣಸಿನಕಾಯಿ ₹3,550, ಶುಂಠಿ ₹6,500, ಮಾವು ₹4,000 ದಂತೆ ವಿಮಾ ಕಂತನ್ನು ನಿಗದಿಪಡಿಸಿದೆ. …
Read More »ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು
ಮಹಾಲಿಂಗಪುರ: ರೈತ ಸಮುದಾಯವು ಜಾಣತನದಿಂದ ಒಕ್ಕಲುತನ ಮಾಡಿದರೆ ಕಡಿಮೆ ಜಮೀನು, ಅಲ್ಪಾವಧಿಯಲ್ಲಿಯೇ ಲಾಭವನ್ನು ಮಾಡಿಕೊಳ್ಳಬಹುದು ಎಂಬುದನ್ನು ರಬಕವಿ ಬನಹಟ್ಟಿ ತಾಲ್ಲೂಕಿನ ಕೆಸರಗೊಪ್ಪ ಗ್ರಾಮದ ಯುವ ರೈತ ಬಸವರಾಜ ಶ್ರೀಶೈಲ ಸತ್ತಿಗೇರಿ ಸಾಧಿಸಿ ತೋರಿಸಿದ್ದಾರೆ. ಅಂತರ ಬೆಳೆಯಾಗಿ ಕೊತ್ತಂಬರಿ ಸೊಪ್ಪು : ಒಟ್ಟು 3.18 ಎಕರೆ ಜಮೀನು ಹೊಂದಿರುವ ಸಣ್ಣ ರೈತರಾದ ಬಸವರಾಜ ಸತ್ತಿಗೇರಿ ಅವರು ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ 25 ಗುಂಟೆ ಜಮೀನಿನಲ್ಲಿ ಕಳೆದ ಮೇ18 ರಂದು ಅರಿಶಿನ …
Read More »ಪ್ರಧಾನಿ ‘ಸಂಸ್ಕೃತ ವಾರಾಂತ್ಯ’ ಪ್ರಸ್ತಾಪ; ಪೋಷಕರ ಹರ್ಷ
ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ಭಾನುವಾರದ ಮನದ ಮಾತು ಕಾರ್ಯಕ್ರಮದಲ್ಲಿ ಸಮಷ್ಠಿ ಗುಬ್ಬಿ ಎಂಬ ಕೊಪ್ಪಳದ ಯುವತಿಯ ‘ಸಂಸ್ಕೃತ ವಾರಾಂತ್ಯ’ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪೋಷಕರು ಹರ್ಷಗೊಂಡಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿರುವ ಸಮಷ್ಠಿ ಗುಬ್ಬಿ ಮೂಲತಃ ಕೊಪ್ಪಳ ತಾಲ್ಲೂಕಿನ ಕಿನ್ನಾಳ ಗ್ರಾಮದವರಾದರು ಪ್ರಸ್ತುತ ಕೊಪ್ಪಳದ ಭಾಗ್ಯನಗರದಲ್ಲಿ ನೆಲೆಸಿದ್ದಾರೆ. ಅವರು ಕೃಷಿ ವಿಜ್ಞಾನಿ ಶೇಷಗಿರಿ ಗುಬ್ಬಿ ಹಾಗೂ ಅನುರಾಧ ಗುಬ್ಬಿ ಅವರ ಪುತ್ರಿ. ಸಮಷ್ಟಿ ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಮತ್ತು …
Read More »ಹಣ ಸಹಾಯ ಮಾಡಿಲ್ಲವೆಂದು ಐಎಂಎ ಅಧ್ಯಕ್ಷರ ಮೇಲೆ ಹಲ್ಲೆ
ನೆಲಮಂಗಲ, ಜೂನ್ 30: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲದ (Nelamangala) ಖಾಸಗಿ ಆಸ್ಪತ್ರೆಯಲ್ಲಿ ಐಎಮ್ಎ (IMA) ಅಧ್ಯಕ್ಷರಿಗೆ ಕಪಾಳಮೋಕ್ಷ ಮಾಡಲಾಗಿದೆ. ಡಾ.ಜಯಪ್ರಸಾದ್ ಹಲ್ಲೆಗೆ ಒಳಗಾದ ಐಎಂಎ ಅಧ್ಯಕ್ಷ. ಡಾ.ಅಬ್ದುಲ್ ಹಲ್ಲೆ ಮಾಡಿದ ಆರೋಪಿ. ಆರೋಪಿ ಡಾ.ಅಬ್ದುಲ್ ರೆಹಮಾನ್ ಶರೀಫ್ ಖಾಸಗಿ ಅಸ್ಪತ್ರೆಯಲ್ಲಿ ಮೈಕ್ರೋ ಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದನು. ಮಗನ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಡಾ. ಅಬ್ದುಲ್ ವೈದ್ಯಕೀಯ ಸಂಘದಿಂದ 25 ಲಕ್ಷ ರೂ. ಸಹಾಯ ಮಾಡಿ ಎಂದು …
Read More »ಗೋಬಿ, ಕಬಾಬ್, ಪಾನಿಪುರಿಯಂತೆ ಶವರ್ಮಾದಲ್ಲೂ ಅಪಾಯಕಾರಿ ಬಾಕ್ಟೀರಿಯಾ ಪತ್ತೆ, ಬ್ಯಾನ್ಗೆ ಚಿಂತನೆ
ಬೆಂಗಳೂರು, ಜೂನ್.30: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಟೆಸ್ಟ್ನಲ್ಲಿ ಗೋಬಿ ಮಂಚೂರಿ (Gobi Manchuri), ಕಬಾಬ್ (Kabab), ಪಾನಿಪುರಿ (panipuri)ಯಲ್ಲಿ ಕ್ಯಾನ್ಸರ್ (Cancer) ಕಾರಕ ಅಂಶಗಳು ಪತ್ತೆಯಾಗಿದ್ದವು. ಇದೀಗ ಈ ಪಟ್ಟಿಯಲ್ಲಿ ಶವರ್ಮಾ (Shawarma) ಕೂಡ ಸೇರಿಕೊಂಡಿದೆ. ಗೋಬಿ, ಕಬಾಬ್, ಪಾನಿಪುರಿ ಬಳಿಕ ಶವರ್ಮಾಗೂ ಕಂಟಕ ಎದುರಾಗಿದೆ. ಶವರ್ಮಾ ಬ್ಯಾನ್ಗೆ ಆಹಾರ & ಗುಣಮಟ್ಟ ಇಲಾಖೆ (FASSAI) ಚಿಂತನೆ ನಡೆಸಿದೆ. ಆರೋಗ್ಯದ ದೃಷ್ಟಿಯಿಂದ ಶವರ್ಮಾ ನಿಷೇಧಿಸಲು ಚಿಂತನೆ ನಡೆದಿದೆ. …
Read More »ರಾಜ್ಯ ಸರ್ಕಾರದ ವಿರುದ್ಧ ಸ್ವಜನಪಕ್ಷಪಾತ ಆರೋಪ ಮಾಡಿದ ಬಿಜೆಪಿಗೆ ತಿಮ್ಮಾಪುರ ತಿರುಗೇಟು
ಬೆಂಗಳೂರು, ಜೂನ್ 30: ಅಬಕಾರಿ ಇಲಾಖೆ (Excise Department) ಬೆಂಗಳೂರು ವ್ಯಾಪ್ತಿಯ ಎಂಟು ಜನ ಉಪ ಆಯಕ್ತರ ಪೈಕಿ ನಾಲ್ವರನ್ನು ತಮ್ಮದೇ ಜಾತಿಯ ಅಧಿಕಾರಿಗಳನ್ನು ನೇಮಿಸಿದ್ದನ್ನು ರಾಜ್ಯ ಬಿಜೆಪಿ (BJP) ವಿರೋಧಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಸ್ವಜನ ಪಕ್ಷಪಾತದ ಗಂಭೀರ ಆರೋಪ ಮಾಡಿದೆ. ಅಬಕಾರಿ ಇಲಾಖೆಯಲ್ಲಿ ಜಾತಿ ತಾರತಮ್ಯ ಮಾಡಲಾಗಿದೆ. ಒಂದೇ ಸಮುದಾಯದ ನಾಲ್ವರಿಗೆ ಸ್ಥಾನಮಾನ ನೀಡಲಾಗಿದೆ. ವರ್ಗಾವಣೆ ಹಾಗೂ ನೇಮಕಾತಿಯಲ್ಲಿ ಕೆಲ ಸಚಿವರ ಆಪ್ತರಿಗೆ ಮಣೆ ಹಾಕಲಾಗಿದೆ. ಈ ಹಿಂದೆಯೂ …
Read More »ಪ್ರವಾಹ ಎದುರಿಸಲು ಕ್ರಮ ಕೈಗೊಳ್ಳಿ: ತಹಶೀಲ್ದಾರ್ ಮಂಜುಳಾ ನಾಯಿಕ
ಸಂಕೇಶ್ವರ: ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶದಲ್ಲಿ ರಭಸದಿಂದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಂಕೇಶ್ವರ ಪಟ್ಟಣದ ಹರಿಯುವ ಹಿರಣ್ಯಕೇಶಿ ನದಿ ತುಂಬಿ ಹರಿಯುತಿದ್ದು ಭವಿಷ್ಯದಲ್ಲಿ ಪ್ರವಾಹ ಭೀತಿ ಎದುರಿಸಲು ಈಗಿನಿಂದಲೇ ತಾಲ್ಲೂಕು ಆಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಹುಕ್ಕೇರಿ ತಹಶೀಲ್ದಾರ್ ಮಂಜುಳಾ ನಾಯಿಕ ಅವರು ಶನಿವಾರ ಸಂಕೇಶ್ವರಕ್ಕೆ ಭೇಟಿ ನೀಡಿ ಹಿರಣ್ಯಕೇಶಿ ನದಿಯ ನೀರಿನ ಮಟ್ಟ ವಿಕ್ಷಿಸಿದರು. ಮುಂದಿನ ದಿನಗಳಲ್ಲಿ ಹಿರಣ್ಯಕೇಶಿ ನದಿಗೆ ಹೆಚ್ಚು ನೀರು ಬಂದರೆ ನದಿ ಗಲ್ಲಿ, ಶಂಕರಲಿಂಗ ಮಠ, ಹೊಸ …
Read More »
Laxmi News 24×7