Breaking News
Home / ರಾಜಕೀಯ (page 717)

ರಾಜಕೀಯ

ಬೆಳಗಾವಿಯಲ್ಲಿ ಅತಿ ಹೆಚ್ಚುಯುವ ಮತದಾರರು ಇದ್ದಾರೆ. 54,820

: ಚುನಾವಣೆಯಲ್ಲಿ ಯುವ ಮತದಾರರನ್ನು ಗಮನದಲ್ಲಿಟ್ಟುಕೊಂಡು ಭಾರತದ ಚುನಾವಣ ಆಯೋಗ ಈ ವರ್ಷದ ರಾಷ್ಟ್ರೀಯ ಮತದಾರರ ದಿನಾಚರಣೆಗೆ “ಮತದಾನಕ್ಕಿಂತ ಇನ್ನೊಂದಿಲ್ಲ; ನಾನು ಖಚಿತವಾಗಿ ಮತದಾನ ಮಾಡುವೆ’ ಎಂದು ಘೋಷಣೆ ನೀಡಿದೆ.   ರಾಜ್ಯದಲ್ಲಿ ಯುವ ಮತದಾರರ ಸಂಖ್ಯೆ 7.07 ಲಕ್ಷ ಇದ್ದು, ಆ ಪ್ರಕಾರ ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಯುವ ಮತದಾರರು ನಿರ್ಣಾಯಕ ಪಾತ್ರ ವಹಿಸಿಲಿದ್ದಾರೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಮಾಹಿತಿಯಂತೆ 2023ರ ಮತದಾರರ ಅಂತಿಮ …

Read More »

ತೊಗರಿ ಬೆಳೆಗಾರರಿಗೆ ಇಂದು ಪರಿಹಾರ ಘೋಷಣೆ: ಸಿಎಂ

ಕಲಬುರಗಿ: ಸಂಕಷ್ಟದಲ್ಲಿರುವ ತೊಗರಿ ಬೆಳಗಾರರಿಗೆ ಪರಿಹಾರ ನೀಡಲು ಸರಕಾರ ತೀರ್ಮಾನಿಸಿದ್ದು, ಇಂದು ಸಂಜೆ 4 ಗಂಟೆಗೆ ಸಭೆ ಕರೆಯಲಾಗಿದೆ.  ಕೃಷಿ, ಆರ್ಥಿಕ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದು ಪರಿಹಾರದ ಮೊತ್ತ ನಿಗದಿಪಡಿಸಿ ಸಭೆಯ ನಂತರ ಘೋಷಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಲ್ಲಿನ ಏರ್ ಪೋರ್ಟ್ ನಲ್ಲಿ ಇಂದು  ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಈ ಭಾಗದಲ್ಲಿ ತೊಗರಿ ಬೆಳೆದವರು ಸಮಸ್ಯೆಯಲ್ಲಿ …

Read More »

ಗೋವಾದ ಹರ್ಮಲ್ ಕಡಲತೀರದಲ್ಲಿ ಡಾಲ್ಫಿನ್ ಮೃತದೇಹ ಪತ್ತೆ

ಪಣಜಿ: ಗೋವಾದ ಹರ್ಮಲ್ ಕಡಲತೀರದಲ್ಲಿ ಡಾಲ್ಫಿನ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಪಣಜಿ ವೈಲ್ಡ್ ಅನಿಮಲ್ ಟೆಂಪರರಿ ಶೆಲ್ಟರ್ ಸೆಂಟರ್ ಸಿಬ್ಬಂದಿ ಹಾಗೂ ದ್ರಷ್ಟಿ ಲೈಫ್ ಸೇವರ್ ಸಂಸ್ಥೆಯ ಸಿಬ್ಬಂದಿ ಮೀನಿನ ಅಂತ್ಯಸಂಸ್ಕಾರ ನೆರವೇರಿಸಿದರು. 12 ಅಡಿ ಉದ್ದದ ಡಾಲ್ಫಿನ್ ಮೃತಪಡಲು ಕಾರಣವೇನು ಎಂಬುದು ಇದುವರೆಗೂ ಸ್ಪಷ್ಟವಾಗಿಲ್ಲ.   ವನ್ಯಜೀವಿ ತಾತ್ಕಾಲಿಕ ಆಶ್ರಯ ಕೇಂದ್ರದ ಸಿಬ್ಬಂದಿ ದ್ಯಾನೇಶ್ವರ್ ಟಕ್ಕರ್ ಮತ್ತು ಮೆಲ್ವಿನ್ ಡಿಸಿಲ್ವಾ ಅವರು ಡಾಲ್ಫಿನ್ ಕನಿಷ್ಠ ನಾಲ್ಕು ದಿನಗಳ ಹಿಂದೆ …

Read More »

ವಿಜಯಪುರ: ಯುವತಿಯ ಅತ್ಯಾಚಾರ ಪ್ರಕರಣ. ಪೊಲೀಸರಿಂದ ಮೂವರ ಬಂಧನ

ವಿಜಯಪುರ: ನಗರದ ಸ್ಯಾಟ್‍ಲೈಟ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವತಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದಲ್ಲಿ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಅಯಾಜ ಅಹಮದ್ ಜಮಾದಾರ, ಉಮರ ಫಾರೂಕ ಹಾಗೂ ರಾಹಿಲ್ ಬಂಧಿತ ಆರೋಪಿಗಳು ಎಂದು ಎಸ್ಪಿ ಆನಂದಕುಮಾರ ತಿಳಿಸಿದ್ದಾರೆ.   ಜ.17 ರಂದು ರಾತ್ರಿ ವೇಳೆ ನಗರದ ಸ್ಯಾಟ್‍ಲೈಟ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಾನಸಿಕ ಅಸ್ವಸ್ತೆಯಿಂದ ಬಳಸುತ್ತಿದ್ದ ಯುವತಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಪರಾರಿಯಾಗಿದ್ದರು. ಈ …

Read More »

2 ವರ್ಷಗಳಿಂದ ಸ್ಥಗಿತಗೊಂಡಿದ್ದ ಕ್ಯಾಮನಹಳ್ಳಿ ಶ್ರೀ ಆಂಜನೇಯ ಸ್ವಾಮಿ ದನಗಳ ಜಾತ್ರೆಗೆ ಮತ್ತೆ ಕಳೆ

ಕೊರಟಗೆರೆ : ಇತಿಹಾಸ ಪ್ರಸಿದ್ಧ ಕ್ಯಾಮನಹಳ್ಳಿ ಶ್ರೀ ಆಂಜನೇಯ ಸ್ವಾಮಿ ದನಗಳ ಜಾತ್ರೆ ಕಳೆದ 2 ವರ್ಷಗಳಿಂದ ಕೊರೋನಾ ನಂತರ ಚರ್ಮ ಗಂಟು ರೋಗದಿಂದ ಕಲೆಗೊಂಡಿದ್ದ‌ ದನಗಳ ಜಾತ್ರೆ ಈಗ ಸಾವಿರಾರು ರಾಸುಗಳು ಸೇರುವ ಮುಖಾಂತರ ಪ್ರತಿ ವರ್ಷದಂತೆ ಸಾಂಪ್ರದಾಯಿಕ ಮುಂದುವರೆಯುವ ಮೂಲಕ ಕ್ಯಾಮೇನಹಳ್ಳಿ ದನದ ಜಾತ್ರೆಗೆ ಕಳೆ ಬಂದಿದೆ.   ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರದಲ್ಲೂಂದಾದ ಕ್ಯಾಮೇನಹಳ್ಳಿ ಶ್ರೀ ಆಂಜನೇಯ ಸ್ವಾಮಿ ಧನಗಳ ಜಾತ್ರೆ …

Read More »

ಹದಿನಾರು ಚುನಾವಣೆ ಕಂಡ ಶತಾಯುಷಿ ಅಜ್ಜಿ

ಕೊಪ್ಪಳ: ದೇಶಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾಲದಲ್ಲಿರುವ ಹೊತ್ತಲ್ಲಿ ಕಳೆದ 75 ವರ್ಷಗಳಲ್ಲಿ ನಡೆದ ಚುನಾವಣೆಗಳಲ್ಲಿ ತಪ್ಪದೇ ಮತದಾನ ಮಾಡಿದವರು ಕಾಣಸಿಗೋದು ಬಹಳ ಅಪರೂಪ. ಆದರೆ ಕೊಪ್ಪಳ ಜಿಲ್ಲೆಯ ಶತಾಯುಷಿಯೊಬ್ಬರು 1952ರಿಂದ ನಡೆದ ಎಲ್ಲ ಚುನಾವಣೆಗಳಲ್ಲೂ ಮತದಾನ ಮಾಡಿದ್ದಾರೆ.   ಕೊಪ್ಪಳ ತಾಲೂಕಿನ ಅಗಳಕೇರಾ ಗ್ರಾಮದ ಬಸಮ್ಮ ಮಡಿವಾಳಯ್ಯ ಭೂಸನೂರಮಠ ಮೊದಲ ಚುನಾವಣೆ ಯಿಂದ ಹಿಡಿದು ಈವರೆಗಿನ ಲೋಕಸಭೆ, ವಿಧಾನಸಭೆ, ಸ್ಥಳೀಯ ಸಂಸ್ಥೆ ಹೀಗೆ ಎಲ್ಲ ಚುನಾವಣೆಗಳಲ್ಲೂ ಮತದಾನದ ಹಕ್ಕು ಚಲಾಯಿಸಿ ದಾಖಲೆ …

Read More »

ಇಂದು ಸಾರಿಗೆ ನೌಕರರ ಧರಣಿ; ಬಸ್‌ ಸೇವೆ ಅಬಾಧಿತ

ಬೆಂಗಳೂರು: ವೇತನ ಪರಿಷ್ಕರಣೆ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಜ. 24(ಮಂಗಳವಾರ)ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಆದರೆ ಇದರಿಂದ ಸಾರಿಗೆ ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಆಗುವುದಿಲ್ಲ. ಆದರೆ ಇದರಿಂದ ಸಾರಿಗೆ ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಆಗುವುದಿಲ್ಲ. ಜಿಲ್ಲಾ ಬಸ್‌ ಘಟಕಗಳ (ಡಿಪೋ) ಮುಂಭಾಗ, ಹುಬ್ಬಳ್ಳಿ, ಕಲಬುರಗಿ, ಬೆಂಗಳೂರು ಸಾರಿಗೆ ನಿಗಮಗಳ ವಿಭಾಗೀಯ ಕಚೇರಿ ಮುಂಭಾಗ ಮತ್ತು ಸ್ವಾತಂತ್ರ್ಯ ಉದ್ಯಾನದಲ್ಲಿ …

Read More »

ತೊಗರಿ ನೆಟೆರೋಗಕ್ಕೆ ಪರಿಹಾರ ನೀಡಲು ನಿರ್ಧಾರ: ಸಿಎಂ ಬೊಮ್ಮಾಯಿ

ಕಲಬುರಗಿ: ನೆಟೆರೋಗದಿಂದ ಹಾಳಾಗಿರುವ ತೊಗರಿಗೆ ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಷ್ಟು ಪ್ರಮಾಣದಲ್ಲಿ ಪರಿಹಾರ ನೀಡಬೇಕು ಎಂಬುದನ್ನು ನಿರ್ಣಯಿಸಲು ಉನ್ನತಾಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಸ್ಪಷ್ಟ ಪಡಿಸಿದರು.   ಈ ಮೊದಲು ಅತಿವೃಷ್ಟಿ ಹಾಗೂ ಈಗ ನೆಟೆರೋಗದಿಂದ ಹಾಳಾಗಿದ್ದರಿಂದ ರೈತರ ಸಂಕಷ್ಟ ಸರ್ಕಾರ ಅರಿವಿದೆ ಎಂದರು. ವಿಠಲ್ ಹೇರೂರ್ ಅವರ ಕಂಚಿನ ಪ್ರತಿಮೆ ಅನಾವರಣಕ್ಕೆ ಬಂದಿದ್ದೇನೆ. …

Read More »

ಪಿಎಸ್‌ಐ ಕೇಸ್ ಗೆ ಟ್ವಿಸ್ಟ್: ಸಿಐಡಿ ಅಧಿಕಾರಿಗೆ 76 ಲಕ್ಷ ರೂ. ಲಂಚ ನೀಡಿದ ಆರೋಪ

ಕಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಿಂದ ಪಾರು ಮಾಡಲು ತಾನು ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ 76 ಲಕ್ಷ ರೂ ನೀಡಿರುವುದಾಗಿ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಲೋಕಾಯುಕ್ತರಿಗೆ ದೂರು ನೀಡಿದ್ದಾನೆ. ಇದರೊಂದಿಗೆ ಪ್ರಕರಣಕ್ಕೆ ಹೊಸ ತಿರುವು ದೊರೆತಂತಾಗಿದೆ.   ದೂರಿನೊಂದಿಗೆ 8.4 ನಿಮಿಷ ಅವಧಿಯ ಆಡಿಯೋದ ಪೆನ್ ಡ್ರೈವ್ ದಾಖಲೆಯಾಗಿ ನೀಡಿದ್ದಾರೆ. ಈ ಸಂಬಂದ ‘ಆರ್.ಡಿ. ಪಾಟೀಲ ಯುವ ಬ್ರಿಗೇಡ್’ ಹೆಸರಿನ ಫೇಸ್‌ಬುಕ್‌ ಪೇಜ್ ಮೂಲಕ …

Read More »

ಬೆಳಗಾವಿ ಜಿಲ್ಲಾಧಿಕಾರಿಗೆ ರಾಜ್ಯಮಟ್ಟದ ‘ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ’ ಪ್ರಶಸ್ತಿ

ಬೆಳಗಾವಿ: ಭಾರತ ಚುನಾವಣಾ ಆಯೋಗದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕೊಡಮಾಡುವ ಅತ್ಯುತ್ತಮ “ಜಿಲ್ಲಾ ಚುನಾವಣಾಧಿಕಾರಿ” ಪ್ರಶಸ್ತಿಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭಾಜನರಾಗಿದ್ದಾರೆ. ಭಾರತ ಚುನಾವಣಾ ಆಯೋಗ ಮತ್ತು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ವತಿಯಿಂದ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಜ.25 ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ “ರಾಷ್ಟ್ರೀಯ ಮತದಾರರ ದಿನಾಚರಣೆ” ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ …

Read More »