Breaking News

ರಾಜಕೀಯ

ಆರ್.ಎಫ್.ಒ ವಿರುದ್ಧ ಕೂಲಿಗಾರರ ಧರಣಿ

ಖಾನಾಪುರ: ನಾಗರಗಾಳಿ ವಲಯ ಅರಣ್ಯ ಅಧಿಕಾರಿ ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡದೇ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಗೋಟಗಾಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನರೇಗಾ ಕೂಲಿಕಾರರು ಅಧಿಕಾರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ನಾಗರಗಾಳಿ ವಲಯ ಅರಣ್ಯ ಅಧಿಕಾರಿಗಳ ಕಚೇರಿ ಮುಂದೆ ಶುಕ್ರವಾರ ಧರಣಿ ನಡೆಸಿದರು.   ಅರಣ್ಯ ಇಲಾಖೆಯಿಂದ ನರೇಗಾ ಯೋಜನೆಯಡಿ ಕೂಲಿ ಕೆಲಸ ಒದಗಿಸುವಂತೆ ಗುರುವಾರ ಗೋಟಗಾಳಿ ಗ್ರಾ.ಪಂ. ಆವರಣದಲ್ಲಿ ಕೂಲಿಕಾರರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯ ಸುದ್ದಿ …

Read More »

SSLC ಪರೀಕ್ಷೆ -2 ವಿಜ್ಞಾನ ವಿಷಯದ ಕೀ ಉತ್ತರ ಪ್ರಕಟ: ಆಕ್ಷೇಪಣೆಗಳಿದ್ದರೆ ಈ ವೆಬ್ ಸೈಟ್ ಗೆ ಭೇಟಿ ನೀಡಿ

ಬೆಂಗಳೂರು: 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವಿಜ್ಞಾನ ವಿಷಯದ ಕೀ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-2 ವಿಜ್ಞಾನ, ದ್ವಿತೀಯ ಭಾಷೆ ಇಂಗ್ಲೀಷ್ ಮತ್ತು ದ್ವಿತೀಯ ಭಾಷೆ ಕನ್ನಡ ವಿಷಯದ ಕೀ ಉತ್ತರಗಳನ್ನು ಜೂನ್ 21ರಂದು https://kseab.karnataka.gov.inನಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರಿಂದ ಆಕ್ಷೇಪಣೆಗಳಿದ್ದರೆ ಆಹ್ವಾನಿಸಲಾಗಿದೆ. ಆಕ್ಷೇಪಣೆಗಳಿದ್ದರೆ ಜೂನ್ 23ರಂದು ಸಂಜೆ 5:30ರೊಳಗೆ ಮಂಡಳಿಯ ಜಾಲತಾಣದ ಮೂಲಕ ಸಲ್ಲಿಸಬಹುದು. ಮಂಡಳಿಯ ಜಾಲತಾಣ https://kseab.karnataka.gov.in ಲಿಂಕ್ …

Read More »

ಬೆಂಗಳೂರಿನಲ್ಲಿ ಘೋರ ದುರಂತ : ಬಹುಮಹಡಿ ಕಟ್ಟಡದಿಂದ ಜಾರಿ ಬಿದ್ದ ಮಹಿಳೆ

ಬೆಂಗಳೂರು: ಆಕಸ್ಮಿಕವಾಗಿ ಸೋಪ್​ ಮೇಲೆ ಕಾಲಿಟ್ಟು ಮಹಿಳೆಯೊಬ್ಬರು ಕಟ್ಟಡದ ಮೇಲಿಂದ ಬಿದ್ದ ಘಟನೆ ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಕನಕನಗರದಲ್ಲಿ ನಡೆದಿದೆ. ಸದ್ಯ ಮಹಿಳೆಯನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದ್ದು, ಮಹಿಳೆ ಕೋಮಾಕ್ಕೆ ಜಾರಿದ್ದಾಳೆ ಎನ್ನಲಾಗಿದೆ. ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕನಕನಗರದಲ್ಲಿ ಈ ಪ್ರಕರಣ ನಡೆದಿದೆ. ಕಳೆದ ಮೂರು ದಿನದ ಹಿಂದ ನಡೆದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಛಾವಣಿಯ ಮೇಲೆ ಕೆಲವು ಕೆಲಸ ಮಾಡುತ್ತಿದ್ದ ವೇಳೆ …

Read More »

ತಡವಾಗಿ ಕಚೇರಿಗೆ ಬರುವ ಸರ್ಕಾರಿ ನೌಕರರಿಗೆ ಬಿಗ್ ಶಾಕ್

ತಡವಾಗಿ ಕಚೇರಿಗೆ ಬರುವ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ದೆಹಲಿ: ನಿಗದಿತ ಸಮಯಕ್ಕೆ ಕಛೇರಿಗೆ ಬಾರದ ಸರ್ಕಾರಿ ನೌಕರರಿಗೆ ಶಾಕ್‌ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ತಡವಾಗಿ ಬರುವವರನ್ನು ಪರಿಶೀಲಿಸುವ ಪ್ರಯತ್ನದಲ್ಲಿ, ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ (DoPT) ಹಿರಿಯ ಅಧಿಕಾರಿಗಳು ಸೇರಿದಂತೆ ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಬೆಳಿಗ್ಗೆ 9.15 ಕ್ಕೆ ಕಚೇರಿಗೆ ತಲುಪಲು ಮತ್ತು ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಅವರ ಹಾಜರಾತಿಯನ್ನು ಗುರುತಿಸಲು ಇತ್ತೀಚೆಗಷ್ಟೇ ಸೂಚನೆ ನೀಡಿದೆ. ವರದಿಯ ಪ್ರಕಾರ, …

Read More »

ನಿಬ್ಬೆರಗಾಗಿಸುವ ಜಲಯೋಗ ಸಾಧಕ: 3 ತಾಸು ನೀರಿನಲ್ಲಿ ತೇಲುವ 72ರ ವೃದ್ಧ!

ಕಬ್ಬೂರ: 72 ವರ್ಷದ ಈ ಹಿರಿಯರು ಜಲಯೋಗದಲ್ಲಿ ವಿಶ್ವದಾಖಲೆ ಮಾಡಿದ್ದಾರೆ. ರಾಷ್ಟ್ರ- ಅಂತರರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದಿದ್ದಾರೆ. ನೀರಿನ ಮೇಲೆ ಮೂರು ತಾಸಿಗೂ ಅಧಕ ಸಮಯ ಲೀಲಾಜಾಲವಾಗಿ ಯೋಗದ ಭಂಗಿಗಳನ್ನು ಪ್ರದರ್ಶಿಸುತ್ತಾರೆ. ಅವರ ಸಾಮರ್ಥ್ಯ, ಚುರುಕುತನ ಹಾಗೂ ಕ್ರಿಯಾಶೀಲ ವ್ಯಕ್ತಿತ್ವ ಎಂಥವರನ್ನೂ ನಿಬ್ಬೆರಗು ಮಾಡುತ್ತದೆ. ಚಿಕ್ಕೋಡಿ ತಾಲ್ಲೂಕಿನ ಕಬ್ಬೂರ ಪಟ್ಟಣದ ಪ್ರಕಾಶ ಬಸಲಿಂಗಪ್ಪ ಬೆಲ್ಲದ ಅವರೇ ಈ ಯೋಗ ಸಾಧಕ. ಬ್ಯಾಂಕ್‌ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅವರು 37 …

Read More »

ಪ್ರಜ್ವಲ್ ಬೆನ್ನಲ್ಲೇ ಅಣ್ಣ ಸೂರಜ್‌ ರೇವಣ್ಣನ ಮೇಲೆ ಅತ್ಯಾಚಾರ ಆರೋಪ

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬರೀ ರಾಜ್ಯ, ದೇಶ ಅಲ್ಲದೆ, ವಿಶೇಶಗಳವರೆಗೂ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ರೇವಣ್ಣ ಅಣ್ಣ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪವೊಂದು ಕೇಳಿಬಂದಿದೆ. ಸೂರಜ್‌ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಅರಕಲಗೂಡು ಜೆಡಿಎಸ್​ ಕಾರ್ಯಕರ್ತನ ಮೇಲೆ ಸೂರಜ್​ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈಗಾಗಲೇ ಪ್ರಜ್ವಲ್‌ …

Read More »

ಅಟಲ್ ಸೇತು ಉದ್ಘಾಟನೆಯಾದ ಕೆಲವೇ ತಿಂಗಳಲ್ಲಿ ಬಿರುಕು

ಮುಂಬೈ: ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ ಸಂಪರ್ಕ ಕಲ್ಪಿಸುವ ಸಮುದ್ರ ಸೇತುವೆ ಅಟಲ್ ಸೇತು ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಳೆ ಶುಕ್ರವಾರ ಆರೋಪಿಸಿದ್ದಾರೆ. ಸೇತುವೆ ಉದ್ಘಾಟನೆಗೊಂಡ ಕೆಲವೇ ತಿಂಗಳೊಳಗೆ ಅದರಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಜನರ ಜೀವಕ್ಕೆ ಅಪಾಯವನ್ನುಂಟುಮಾಡಿದೆ ಎಂದು ಪಟೋಳೆ ಹೇಳಿದ್ದಾರೆ. ಇಂದು ಹಗಲಿನಲ್ಲಿ ಸೇತುವೆಯನ್ನು ಪರಿಶೀಲಿಸಿದ ಪಟೋಳೆ, ಸೇತುವೆಯ ನಿರ್ಮಾಣ ಗುಣಮಟ್ಟ ಕಳಪೆಯಾಗಿದೆ ಮತ್ತು ರಸ್ತೆಯ ಒಂದು ಭಾಗವು ಒಂದು ಅಡಿಯಷ್ಟು ಕುಸಿದಿದೆ …

Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ: 40 ಲಕ್ಷ ರೂಪಾಯಿ ಕೈ ಸಾಲ ಕೊಟ್ಟ ಮೋಹನ್‌ರಾಜ್‌ ನಾಪತ್ತೆ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಮುಚ್ಚಿ ಹಾಕಲು ದರ್ಶನ್ ಏನೆಲ್ಲಾ ಮಾಡಲು ಯತ್ನಿಸಿದ್ದರು ಎಂಬ ಸ್ಪೋಟಕ ವಿಚಾರ ಬಯಲಾಗಿದೆ. ಮೊನ್ನೆಯಷ್ಟೇ ಆರ್​ಆರ್​ ನಗರದಲ್ಲಿರುವ ನಟ ದರ್ಶನ್ ಮನೆಯಲ್ಲಿ ಮತ್ತೆ 37 ಲಕ್ಷದ 40 ಸಾವಿರ ಹಣವನ್ನು, ಪತ್ನಿ ವಿಜಯಲಕ್ಷ್ಮಿ ಬಳಿಯಿಂದ 3 ಲಕ್ಷ ರೂ.ಹಣವನ್ನು ಸೀಜ್ ಮಾಡಲಾಗಿದೆ. ದರ್ಶನ್ ಮನೆಯ ಬೆಡ್ ರೂಮ್ ನಲ್ಲಿ ಕಬೋಡ್ ನಲ್ಲಿ 37 ಲಕ್ಷ ಹಣ ಸೀಜ್ ಆಗಿದೆ ಎಂದು ವರದಿ ಆಗಿದೆ. ಬ್ಯಾಗ್ ಒಳಗೆ …

Read More »

ಚಿನ್ನದ ಬೆಲೆ ₹800, ಬೆಳ್ಳಿ ₹1,400 ಏರಿಕೆ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ಧಾರಣೆಯು ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ದರವು ₹800 ಏರಿಕೆಯಾಗಿ, ₹73,350ಕ್ಕೆ ಮಾರಾಟವಾಗಿದೆ. ಬೆಳ್ಳಿ ಧಾರಣೆಯು ಕೆ.ಜಿಗೆ ₹1,400 ಹೆಚ್ಚಳವಾಗಿ, ₹93,700ಕ್ಕೆ ಮುಟ್ಟಿದೆ. ‘ಅಮೆರಿಕದಲ್ಲಿ ಚಿಲ್ಲರೆ ಹಣದುಬ್ಬರವು ಅಂದಾಜಿಗೂ ಮೀರಿ ಇಳಿಕೆಯಾಗಿದೆ. ಹಾಗಾಗಿ, ಪ್ರಸಕ್ತ ವರ್ಷದಲ್ಲಿ ಅಮೆರಿಕದ ಫೆಡರಲ್‌ ರಿಸರ್ವ್‌ ಎರಡು ಬಾರಿ ಬಡ್ಡಿದರ ಕಡಿತಗೊಳಿಸಲಿದೆ ಎಂಬ ನಿರೀಕ್ಷೆ ಹೆಚ್ಚಿದೆ. ಇದು ಹಳದಿ ಲೋಹದ ಬೆಲೆ ಏರಿಕೆಗೆ ಕಾರಣವಾಗಿದೆ’ …

Read More »

ದಲಿತ ಉದ್ಯಮಿಗಳ ಸಮಸ್ಯೆ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಮಿತಿ: ಸಚಿವ ಎಂ.ಬಿ ಪಾಟೀಲ್

ದಲಿತ ಉದ್ಯಮಿಗಳ ಸಮಸ್ಯೆ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಮಿತಿ: ಸಚಿವ ಎಂ.ಬಿ ಪಾಟೀಲ್ ಬೆಂಗಳೂರು: ರಾಜ್ಯದ ದಲಿತ ಉದ್ಯಮಿಗಳು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಭಾರೀ ಮತ್ತು ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದರು.   ಖನಿಜ ಭವನದಲ್ಲಿ ಶುಕ್ರವಾರ ನಡೆದ ರಾಜ್ಯಸಭೆ ಮಾಜಿ ಸದಸ್ಯ ಎಲ್.ಹನುಮಂತಯ್ಯ ಅಧ್ಯಕ್ಷತೆಯ ಕರ್ನಾಟಕ ದಲಿತ …

Read More »