Home / ರಾಜಕೀಯ (page 733)

ರಾಜಕೀಯ

ಸರ್ವಾಧಿಕಾರಿ ಶಕ್ತಿಗಳಿಗೆ ಸೋಲಾಗಲಿ. ಎನ್ನುತ್ತಲೇ ಕಾಂಗ್ರೆಸ್​ ಸೇರ್ಪಡೆಯಾದ ವೈಎಸ್‌ವಿ ದತ್ತ, ಎಚ್​.ನಾಗೇಶ್​

ಬೆಂಗಳೂರು: ಜೆಡಿಎಸ್​ನ ಮಾಜಿ ಶಾಸಕ ವೈಎಸ್‌ವಿ ದತ್ತಾ, ಪಕ್ಷೇತರ ಶಾಸಕ ಎಚ್.ನಾಗೇಶ್, ‌ಮೈಸೂರು ಮೂಡ ಮಾಜಿ ಅಧ್ಯಕ್ಷ ಮೋಹನ್ ಕುಮಾರ್ ಅವರು ಶನಿವಾರ ಕಾಂಗ್ರೆಸ್ ಸೇರ್ಪಡೆಯಾದರು. ಇವರನ್ನು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.   ಈ ವೇಳೆ ಕಾರ್ಯಕರ್ತರು ಪಟಾಕಿ ಸಿಡಿಸಿ ಜೈಕಾರ ಕೂಗಿದರು. ವೈಎಸ್​ವಿ ದತ್ತ ಮಾತನಾಡಿ, ಇದು ಮಾತನಾಡುವ ಸಮಯವಲ್ಲ, ಕೆಲಸ ಮಾಡುವ ಸಮಯ. ಕಳೆದ ಹಲವು …

Read More »

ಉಪೇಂದ್ರ ನಿರ್ದೇಶನದ ‘ಯುಐ’ ಚಿತ್ರತಂಡದಿಂದ ಸಂಕ್ರಾಂತಿಗೆ ಡಿಫರೆಂಟ್ ವಿಷ್!

ಬೆಂಗಳೂರು: ಯಾವಾಗಲೂ ತನ್ನ ವೈಶಿಷ್ಟ್ಯದೊಂದಿಗೇ ಗಮನ ಸೆಳೆಯುವ ನಟ-ನಿರ್ದೇಶಕ ಉಪೇಂದ್ರ, ಇದೀಗ ತಮ್ಮ ನಿರ್ದೇಶನದ ಹೊಸ ಸಿನಿಮಾ ‘ಯುಐ’ ತಂಡದಿಂದ ಸಂಕ್ರಾಂತಿ ಶುಭಾಶಯ ಕೋರುವುದರಲ್ಲೂ ಡಿಫರೆಂಟ್ ಎನಿಸಿಕೊಂಡಿದ್ದಾರೆ. ರಿಯಲ್​ ಸ್ಟಾರ್ ಉಪೇಂದ್ರ ನಿರ್ದೇಶನದ ಸಿನಿಮಾದ ಟೈಟಲ್​ಗಳೇ ಡಿಫರೆಂಟ್ ಆಗಿರುತ್ತವೆ. ಅದೇ ರೀತಿ ಅವರು ನಿರ್ದೇಶನ ಮಾಡುತ್ತಿರುವ ನೂತನ ಸಿನಿಮಾ ಹೆಸರೇ ‘ನಾಮ’ದ ರೂಪದಲ್ಲಿದ್ದು ಘೋಷಣೆ ಆದಾಗಲೇ ಭಾರಿ ಗಮನ ಸೆಳೆಯಲಾಗಿತ್ತು. ದೇವರ ನಾಮದ ರೂಪದಲ್ಲಿ ವಿನ್ಯಾಸ ಮಾಡಲಾಗಿರುವ ಈ ಚಿತ್ರದ ಶೀರ್ಷಿಕೆಯನ್ನು …

Read More »

2024ರಲ್ಲಿ ಮೋದಿ ಸರ್ಕಾರಕ್ಕೆ ಬಹುಮತ ಪಡೆಯುವುದೂ ಕಷ್ಟವಾಗಬಹುದು: ಶಶಿ ತರೂರ್

ಕೋಯಿಕ್ಕೋಡ್: 2019ರ ಲೋಕಸಭಾ ಚುನಾವಣೆಯಲ್ಲಿನ ವಿಜಯವನ್ನು 2024 ರಲ್ಲಿ ಪುನರಾವರ್ತಿಸಲು ಬಿಜೆಪಿಗೆ ಅಸಾಧ್ಯ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ. ಲೋಕಸಭೆಯಲ್ಲಿ ಆಡಳಿತ ಪಕ್ಷ ಬಿಜೆಪಿಯು 50 ಸ್ಥಾನಗಳನ್ನು ಕಳೆದುಕೊಳ್ಳಬಹುದು ಎಂದು ಹೇಳಿದ್ದಾರೆ.   ಶುಕ್ರವಾರ ಇಲ್ಲಿ ನಡೆದ ಕೇರಳ ಸಾಹಿತ್ಯೋತ್ಸವದಲ್ಲಿ ಮಾತನಾಡಿದ ತಿರುವನಂತಪುರಂ ಸಂಸದರು, ಬಿಜೆಪಿಯ ಪ್ರಾಬಲ್ಯದ ಬಗ್ಗೆ ಮಾತನಾಡುವ ವೇಳೆ ಅವರು ಅನೇಕ ರಾಜ್ಯಗಳನ್ನು ಕಳೆದುಕೊಂಡಿರುವುದು ಸಹ ಸತ್ಯ. ಕೇಂದ್ರದಲ್ಲಿ ಅಧಿಕಾರವನ್ನು ಕಳೆದುಕೊಳ್ಳುವುದು ಅಸಾಧ್ಯವೇನಲ್ಲ …

Read More »

ದೇವರ ಹುಡುಕಾಟದಲ್ಲಿ ಗುರು-ಶಿಷ್ಯರ ಪಾತ್ರ ಮಹತ್ವವಾದದ್ದು: ಕೋಡಿಮಠದ ಶ್ರೀಗಳು

ಕುರುಗೋಡು : ಪ್ರತಿಯೊಬ್ಬರು ಪ್ರಜಾಪ್ರಭುತ್ವದಲ್ಲಿ ವಿದ್ಯಾ ಪಡಿಯಬೇಕು ಅಂದ್ರೆ ಮೊದಲು ಮಾನವೀಯತೆ ಹೊಂದಿರಬೇಕು ಎಂದು ಅರಸೀಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿಮಠದ ಶ್ರೀ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಅಭಿಮತ ವ್ಯಕ್ತಪಡಿಸಿದರು.   ಸಮೀಪದ ಬಾದನಹಟ್ಟಿ ಗ್ರಾಮದ ಯಲ್ಲಾಪುರ ರಸ್ತೆಯ ಶ್ರೀ ನಂದಿ ರೆಸಿಡೆನ್ಸಿಯಲ್ ಪಬ್ಲಿಕ್ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಶ್ರೀ ನಂದಿ ಚಿತ್ತಾರ 5ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅಶ್ರಿವಚನ ನೀಡಿ ಮಾತನಾಡಿದ ಅವರು, ದೇವರ ಹುಡುಕಾಟದಲ್ಲಿ ಹಾದಿ …

Read More »

ಯತ್ನಾಳ್ ರನ್ನು ಸಹಿಸಿಕೊಂಡಾಯ್ತು, ಇನ್ನು ನಿರ್ಧಾರ ಮಾಡಬೇಕಿದೆ: ಕಿಡಿಕಾರಿದ ನಿರಾಣಿ

ದಾವಣಗೆರೆ: ‘ಪಿಂಪ್ ಸಚಿವ’ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಚಿವ ಮುರುಗೇಶ ನಿರಾಣಿ ನೊಂದುಕೊಂಡ ಘಟನೆ ನಡೆಯಿತು. ಯತ್ನಾಳ್ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ನಿರಾಣಿ ಭಾವುಕರಾದರು. ಬಿಜೆಪಿ ಸಂಸ್ಕೃತಿ ಹೊಂದಿರುವ ಪಕ್ಷ, ನಮ್ಮ ಸಮುದಾಯವೂ ಸಂಸ್ಕೃತಿ ಹೊಂದಿದೆ. ಶಾಸಕ ಯತ್ನಾಳ ಅಸಂವಿಧಾನಿಕ ಮಾತುಗಳನ್ನು ಆಡುತ್ತಾರೆ ಸಿದ್ದೇಶ್ವರ ಸ್ವಾಮೀಜಿ ಅವರ ಸನ್ನಿಧಿಯಲ್ಲಿ ಬೆಳೆದವರು ನಾವು. ಅವರನ್ನು 0.5 ರಷ್ಟು ನಾವು ಅನುಕರಣೆ ಮಾಡಿದರೂ ಸಾಕು ಎಂದರು. \ …

Read More »

ತಮಿಳುನಾಡು ಮಾದರಿಯಲ್ಲಿ ಮೀಸಲಾತಿ ಜಾರಿ: ಸಿಎಂ ಬೊಮ್ಮಾಯಿ

ದಾವಣಗೆರೆ: ಮೀಸಲಾತಿ ವಿಚಾರವಾಗಿ ಈಗಾಗಲೇ ಕೆಲಸ ಮಾಡಿದ್ದೇವೆ. ಕ್ಯಾಬಿನೆಟ್ ನಲ್ಲಿ ಪಾಸ್ ಮಾಡಿದ್ದೇವೆ. ತಮಿಳುನಾಡು ಮಾದರಿಯಲ್ಲಿ ನಾವು ಮೀಸಲಾತಿ ಜಾರಿಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ದಾವಣಗೆರೆಯ ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಉಚಿತ ವಿದ್ಯುತ್ ಘೋಷಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಜನರನ್ನು ಮರಳು ಮಾಡುತ್ತಿದೆ. ಕಾಂಗ್ರೆಸ್ ನವರು ಕ್ರೇಜಿವಾಲ್ ದಾರಿಯಲ್ಲಿ ಹೋಗುತ್ತಿದ್ದಾರೆ. ಕಾಂಗ್ರೆಸ್ ನವರು ಹತಾಶರಾಗಿ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ …

Read More »

ಸ್ಯಾಂಟ್ರೋ ರವಿ ಬಂಧನ; ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್

ಶ್ರೀರಂಗಪಟ್ಟಣ : ಸ್ಯಾಂಟ್ರೋ ರವಿ ಬಂಧನದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಶುಕ್ರವಾರ ಶ್ರೀರಂಗಪಟ್ಟಣದ ಗಂಜಾಂ ಗ್ರಾಮದಲ್ಲಿರುವ ಶಕ್ತಿ ದೇವತೆ ನಿಮಿಷಾಂಭ ದೇವಸ್ಥಾನದಲ್ಲಿ ಹರಕೆ ತೀರಿಸಿದ್ದಾರೆ. ಕಳೆದ 4 ದಿನಗಳ ಹಿಂದೆ ಇದೇ ದೇವಸ್ಥಾನಕ್ಕೆ ಆಗಮಿಸಿ ಹರಕೆ ಹೊತ್ತುಕೊಂಡಿದ್ದ ಅಲೋಕ್ ಕುಮಾರ್ ಅವರು ನಿಮಿಷಾಂಭ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಸ್ಯಾಂಟ್ರೋ ರವಿ ಬಂಧನವಾದರೆ ಮತ್ತೆ ದೇಗುಲಕ್ಕೆ ಆಗಮಿಸುವುದಾಗಿ ಹರಕೆ ಹೊತ್ತಿದ್ದರು. ಹರಕೆ ಹೊತ್ತುಕೊಂಡ 26 ಗಂಟೆಗಳಲ್ಲೆ …

Read More »

ಆದಿಚುಂಚನಗಿರಿ ಶ್ರೀಗಳು ಬಿಜೆಪಿಯ ಸಿಎಂ ಅಭ್ಯರ್ಥಿಯೇ? ಆರ್.ಅಶೋಕ್ ಹೇಳಿದ್ದೇನು

ಯಡಿಯೂರಪ್ಪನವರು ಸಿಎಂ ಹುದ್ದೆಗೆ ಪದತ್ಯಾಗ ಮಾಡಿದ ಸನ್ನಿವೇಶವನ್ನೊಮ್ಮೆ ಮೆಲುಕು ಹಾಕಿಕೊಳ್ಳೋಣ. ಕರ್ನಾಟಕದ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಚರ್ಚೆ ಜೋರಾಗಿಯೇ ನಡೆಯುತ್ತಿತ್ತು. ಬಿಜೆಪಿಯ ವರಿಷ್ಠರು ಕೂಡಾ ಕೊಂಚ ಸುಳಿವನ್ನೂ ಬಿಟ್ಟುಕೊಟ್ಟಿರಲಿಲ್ಲ. ಅರವಿಂದ್ ಬೆಲ್ಲದ್, ಜಗದೀಶ್ ಶೆಟ್ಟರ್, ಬಸನಗೌಡ ಪಾಟೀಳ್ ಯತ್ನಳ್, ಬೊಮ್ಮಾಯಿ ಈ ರೀತಿ ಹಲವು ಹೆಸರುಗಳು ಸಿಎಂ ಅಭ್ಯರ್ಥಿ ಎಂದು ಮುನ್ನಲೆಗೆ ಬರುತ್ತಿತ್ತು. ಆ ಸಂದರ್ಭದಲ್ಲಿ ಮುನ್ನಲೆಗೆ ಬಂದಿದ್ದ ಇನ್ನೊಂದು ಹೆಸರೆಂದರೆ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀಗಳಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರದ್ದು. …

Read More »

ಯತ್ನಾಳ್ ವಿರುದ್ಧ ಏಕವಚನದ ಗುಡುಗು: ಕಣ್ಣೀರು ಹಾಕಿದ ಸಚಿವ ನಿರಾಣಿ

ಬೆಂಗಳೂರು: ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಏಕವಚನದಲ್ಲಿ ಗುಡುಗಿದ ಸಚಿವ ಮುರುಗೇಶ್ ನಿರಾಣಿ, ಭಾವೋದ್ರಿಕ್ತರಾಗಿ ಪ್ರತಿಕ್ರಿಯಿಸುವಾಗ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಬಳಿ ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ವಿಜಯಪುರದವರು ಒಬ್ಬರಿದ್ದಾರೆ. ಎಲುಬಿಲ್ಲದ ನಾಲಿಗೆ ಇಲ್ಲದೆ ಮಾತನಾಡುತ್ತಿದ್ದಾರೆ. ನನ್ನನ್ನು ಪಿಂಪ್ ಎಂದು ಕರೆದಿದ್ದಾರೆ. ಅಪ್ಪನಿಗೆ ಹುಟ್ಟಿದವರು ಈ ರೀತಿ ಮಾತನಾಡಲ್ಲ. ಆ ಸಂಸ್ಕೃತಿಯಲ್ಲಿ ಇದ್ದವರೆ ಆ ರೀತಿ ಮಾತನಾಡುತ್ತಾರೆ. ಒಳ್ಳೆಯ ಮನೆತನವಿದ್ದವರೂ ಈ ರೀತಿ …

Read More »

ಅಮಿತ್ ಶಾ ಒಂಥರಾ ರೌಡಿ ಇದ್ದಂಗೆ, ನಾನೇ ಸಿಎಂ ಆದ್ರೂ ಆದೆ

ಬೆಂಗಳೂರು: ‘ಅಮಿತ್ ಶಾ ಒಂಥರಾ ರೌಡಿ ರೀತಿ. ನಾನೇ ಸಿಎಂ ಆದರೂ ಆದೆ…’ ಎಂದು ಎಂಎಲ್ಸಿ ಸಿ.ಪಿ.ಯೋಗೇಶ್ವರ್​ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್​ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಕೋಲಾಹಲವನ್ನೇ ಎಬ್ಬಿಸಿದೆ. ಬಿಜೆಪಿಯ ಚಾಣಾಕ್ಷ ಅಮಿತ್​ ಶಾ ಅವರನ್ನ ರೌಡಿ ಎಂದಿರುವ ಮಾತು ಸ್ವಪಕ್ಷಕ್ಕೆ ಭಾರೀ ಮುಜುಗರ ತರಿಸಿದೆ. ಸಿಎಂ ಖುರ್ಚಿ ಮೇಲೆ ಯೋಗೇಶ್ವರ್​ ಕಣ್ಣಿಟ್ಟಿದ್ದಾರೆ ಎಂಬುದು ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ. ಆಪರೇಷನ್​ ಕಮಲಕ್ಕೆ ಜೆಡಿಎಸ್-ಕಾಂಗ್ರೆಸ್​ ಮೈತ್ರಿ ಸರ್ಕಾರ ಬಲಿಯಾಗಿತ್ತು. ಆಡಳಿತಾರೂಢ ಬಿಜೆಪಿ …

Read More »