ಹಾವೇರಿ: 86ನೇ ನುಡಿ ಜಾತ್ರೆಗೆ ಸಿದ್ಧಗೊಂಡಿರುವ ಏಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ ಹಳದಿ, ಕೆಂಪು ಬಾವುಟಗಳು ರಾರಾಜಿಸುತ್ತಿವೆ. ನಗರದಾದ್ಯಂತ ಮೈಸೂರು ದಸರಾ ಮಾದರಿ ದೀಪಾಲಂಕಾರ ಮಾಡಿದ್ದು, ಪ್ರಮುಖ ವೃತ್ತ, ರಸ್ತೆ ಮತ್ತು ಕಟ್ಟಡಗಳು ವಿವಿಧ ಬಣ್ಣಗಳ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ. ನಗರದ ಹೊಸಮನಿ ಸಿದ್ದಪ್ಪ ವೃತ್ತ, ರಾಣಿ ಚನ್ನಮ್ಮ ವೃತ್ತ, ವಾಲ್ಮೀಕಿ ವೃತ್ತ, ಸುಭಾಷ್ ಸರ್ಕಲ್, ಅಂಬೇಡ್ಕರ್ ಸರ್ಕಲ್, ಗಾಂ ಧಿ ಸರ್ಕಲ್, ಬಸವೇಶ್ವರ ಸರ್ಕಲ್, ಜೆ.ಎಚ್.ಪಟೇಲ್ ವೃತ್ತ, ಎಂಎಂ ಸರ್ಕಲ್, …
Read More »ಬೆಳಗಾವಿ: ದೇವಿಯ ದರ್ಶನಕ್ಕೆ ಹೊರಟಿದ್ದ ವಾಹನ ಭೀಕರ ಅಪಘಾತ; 6 ಮಂದಿ ಮೃತ್ಯು
ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಹೊರಟಿದ್ದ ವಾಹನ ಭೀಕರ ಅಪಘಾತಕ್ಕೆ ತುತ್ತಾಗಿ ಆರು ಜನ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ಜ.4 ರ ಮಧ್ಯರಾತ್ರಿ ನಡೆದಿದೆ. ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ಹನುಮವ್ವ ಮ್ಯಾಗಾಡಿ (25), ದೀಪಾ (31), ಸವಿತಾ (17), ಸುಪ್ರೀತಾ (11), ಮಾರುತಿ (42) ಮತ್ತು ಇಂದ್ರವ್ವ(24) ಮೃತಪಟ್ಟವರು ಎಂದು ಗುರುತಿಸಲಾಗಿದೆ. ವಾಹನವು ಆಲದ ಮರಕ್ಕೆ ಢಿಕ್ಕಿ ಹೊಡೆದಿದ್ದರಿಂದ …
Read More »ಹುಲಕುಂದ ಅಪಘಾತದಲ್ಲಿ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ: ಗೋವಿಂದ ಕಾರಜೋಳ
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಯಾತ್ರಾರ್ಥಿಗಳು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗುವಾಗ ವಾಹನ ಅಪಘಾತದಿಂದ ಆರು ಮಂದಿ ಮೃತಪಟ್ಟಿದ್ದು, 16 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೂಚನೆ ನೀಡಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು. ವಾಹನ ಅಪಘಾತದಲ್ಲಿ16 ಕ್ಕೂ ಹೆಚ್ಚು ಗಾಯಗೊಂದಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗಿದೆ, …
Read More »ಮೋದಿ ಬಳಿ ನಾಯಿಮರಿಯಂತೆ ಇರ್ತಾರೆ’ : ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು
ಬಳ್ಳಾರಿ : ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಎದುರು ನಾಯಿಯಂತೆ ಇರ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ವಿಪಕ್ಷ ನಾಯಕ ಸಿದ್ದರಾಮಯ್ಯರ ವ್ಯಕ್ತಿತ್ವ ತೋರಿಸುತ್ತೆ. ನಾಯಿ ನಿಯತ್ತಿನ ಪ್ರಾಣಿ ಎಂಬುದು ಅವರಿಗೆ ಗೊತ್ತಿಲ್ಲ ಅನಿಸುತ್ತೆ. ಸಿದ್ದರಾಮಯ್ಯ ಹೇಳಿಕೆಗೆ ನಾಡಿನ ಜನರು ಉತ್ತರ ಕೊಡುತ್ತಾರೆ. ನಾನು ನಿಯತ್ತಾಗಿ ಸರ್ಕಾರ ನಡೆಸುತ್ತಿದ್ದೇನೆ. ಸಿದ್ದರಾಮಯ್ಯ ರೀತಿ ಸುಳ್ಳು ಹೇಳಿಕೊಂಡು …
Read More »83 ವರ್ಷದ ಹಿಂದಿನ ಕರೆಂಟ್ ಬಿಲ್ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್
ಸಾಮಾನ್ಯವಾಗಿ ಮನೆಯ ಕರೆಂಟ್ ಬಿಲ್ ಎಷ್ಟು ಬರುತ್ತೆ ಗಮನಿಸಿದ್ದಿರಾ? 500, ಸಾವಿರ ರೂಪಾಯಿ ಬರುತ್ತೆ. ಆದರೆ ಈ ಬಿಲ್ ನೋಡಿ, ಜಸ್ 5 ರೂಪಾಯಿ ಅಷ್ಟೆ. ಅಷ್ಟು ಕಡಿಮೆ ಕರೆಂಟ್ ಬಿಲ್ ಯಾರದಪ್ಪಾ ಅಂತ ಕನ್ಫ್ಯೂಸ್ ಆದ್ರೋ ಹೇಗೆ. ಇದು 1940ರ ಕಾಲದ ಕರೆಂಟ್ಬಿಲ್ ಇದೇ ಕರೆಂಟ್ ಬಿಲ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಸಲಿಗೆ ಇದು ಸ್ವಾತಂತ್ರ್ಯ ಪೂರ್ವದ ವಿದ್ಯುತ್ಬಿಲ್, ಅಂದರೆ ಸುಮಾರು 83 ವರ್ಷದ …
Read More »ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ ಕೃಷ್ಣ
ಬೆಂಗಳೂರು : ಮಾಜಿ ಸಿಎಂ ಎಸ್.ಎಂ ಕೃಷ್ಣ ( S.M Krishna) ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಎಸ್ ಎಂ ಕೃಷ್ಣ ನಾನು ಹೆಚ್ಚಾಗಿ ರಾಜಕೀಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. 90 ವರ್ಷದ ವಯಸ್ಸಿನಲ್ಲಿ 50 ವರ್ಷದ ವ್ಯಕ್ತಿ ಹಾಗೆ ನಟಿಸೋಕೆ ಆಗುತ್ತಾ..? ಆದ್ದರಿಂದ ರಾಜಕೀಯ ಜೀವನಕ್ಕೆ ಗುಡ್ ಬೈ ಹೇಳುವ ಬಗ್ಗೆ ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ವಯಸ್ಸಿನ ಕಾರಣದಿಂದ ಸಾರ್ವಜನಿಕ ಜೀವನದಿಂದ ದೂರ ಇದ್ದೇನೆ, …
Read More »ಕೆಪಿಟಿಸಿಎಲ್ ಅಕ್ರಮ: ಮತ್ತೆ ಮೂವರ ಬಂಧನ
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಬುಧವಾರ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈವರೆಗೆ ಬಂಧಿತರಾದವರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ. ಗೋಕಾಕ ತಾಲ್ಲೂಕಿನ ಮಲ್ಲಾಪುರ ಪಿ.ಜಿ. ಗ್ರಾಮದ ಅಣ್ಣಪ್ಪ ಕೆಂಪಣ್ಣ ಮಾರವಾಡಿ(31), ಶಿವಾಪುರದ ಜಾನ್ರಾಬರ್ಟ್ ಯಶವಂತ ಬಂಗೆನ್ನವರ(26), ಮೂಡಲಗಿ ತಾಲ್ಲೂಕಿನ ರಾಜಾಪುರದ ಚಿದಾನಂದ ಚಿನ್ನಪ್ಪ ಮಾಡಲಗಿ(27) ಬಂಧಿತರು. ‘ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ಬಳಸಿ, ಮೂವರು ಆರೋಪಿಗಳು ಪರೀಕ್ಷೆ ಬರೆದಿದ್ದರು. ಅವರಿಂದ ಅಕ್ರಮಕ್ಕೆ …
Read More »2.95 ಲಕ್ಷ ಜನ್-ಧನ್ ಖಾತೆ ಸ್ತಬ್ಧ:
ಮಂಗಳೂರು: ಬಹುನಿರೀಕ್ಷಿತ ಪ್ರಧಾನಮಂತ್ರಿ ಜನ್-ಧನ್ ಯೋಜನೆ (ಪಿಎಂಜೆಡಿವೈ)ಯಲ್ಲಿ ಕರಾವಳಿಯಲ್ಲಿ ತೆರೆದ ಖಾತೆಗಳ ಪೈಕಿ 2.95 ಲಕ್ಷ ಖಾತೆಗಳು ಸ್ತಬ್ಧವಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ 5,18,496 ಖಾತೆ ಗಳಲ್ಲಿ 2,08,602 ಹಾಗೂ ಉಡುಪಿ ಜಿಲ್ಲೆಯ 2,64,704ರಲ್ಲಿ 86,487 ಬಳಕೆ ಯಾಗದೇ ನಿಷ್ಕ್ರಿಯವಾಗಿವೆ. ಈ ಖಾತೆ ಆರಂಭಿಸಿ 18 ತಿಂಗಳ ವರೆಗೆ ಬಳಸದಿದ್ದರೆ ಅದು ನಿಷ್ಕ್ರಿಯವಾಗುತ್ತದೆ. ಬಹುತೇಕರು ಖಾತೆ ತೆರೆದ ಬಳಿಕ ಸಕ್ರಿಯಗೊಳಿಸಿಲ್ಲ. ಅಲ್ಲದೆ ಸರಕಾರದ ವಿವಿಧ ಯೋಜನೆಗಳ ಹಣ ಪಡೆಯಲು ಬಹುತೇಕರು ಪ್ರತ್ಯೇಕ …
Read More »ಆರೋಗ್ಯ ಕವಚಕ್ಕೆ ಹುಸಿ ಕರೆಯೇ ಸವಾಲು: ಅರ್ಧಕ್ಕರ್ಧ ನಿರುಪಯೋಗಿ
ಬೆಂಗಳೂರು: ಸುಮ್ಮನೆ ಫೋನ್ ಮಾಡಿ ಉಪದ್ರವ ನೀಡುವುದು, ಹುಸಿ ಮತ್ತು ಸೈಲೆಂಟ್ ಕರೆಗಳು, ಮಕ್ಕಳು ಆಟ ಆಡುತ್ತ ಮಾಡುವ ಫೋನ್ ಕರೆಗಳು…! -ಇವು ‘ಆರೋಗ್ಯ ಕವಚ- 108′ ಕಾಲ್ಸೆಂಟರ್ಗೆ ಬರುವ ಕರೆಗಳು. ತುರ್ತು ಆರೋಗ್ಯ ಸೇವೆಗಾಗಿ ರಾಜ್ಯದ ನಾನಾ ಭಾಗಗಳಿಂದ ‘108′ ಆಯಂಬುಲೆನ್ಸ್ ಗೆ ನಿತ್ಯವೂ ಬರುವ ಕರೆಗಳಲ್ಲಿ ಇಂತಹ ಅನುಪಯುಕ್ತ ಕರೆಗಳ ಕಿರಿಕಿರಿ ತಲೆನೋವಾಗಿದೆ. ಪ್ರತಿದಿನ ಬರುವ ನೂರಾರು ಕರೆಗಳ ಪೈಕಿ ಅರ್ಧಕ್ಕರ್ಧ ಕರೆಗಳು ತುರ್ತು ಅಲ್ಲದ ಅಥವಾ ನಿರುಪ ಯೋಗಿ …
Read More »ಮಹದಾಯಿ ನಮಗೆ ತಾಯಿಯಷ್ಟೇ ಮುಖ್ಯ. ರಾಜಿ ಮಾಡಿಕೊಳ್ಳಲ್ಲ: ಗೋವಾ ಸಿಎಂ
ಪಣಜಿ: ಮಹದಾಯಿ ನಮಗೆ ತಾಯಿಯಷ್ಟೇ ಮುಖ್ಯ. ಗೋವಾದ ಅಸ್ಮಿತೆಯನ್ನು ಕಾಪಾಡಲು ಮತ್ತು ಅದನ್ನು ಎಲ್ಲಾ ರೀತಿಯಲ್ಲೂ ರಕ್ಷಿಸಲು, ದೇಶದ ಪರಿಣಿತ ಕಾನೂನು ತಜ್ಞರು ಮತ್ತು ಪರಿಸರವಾದಿಗಳ ಸಹಾಯದಿಂದ ಸುಪ್ರೀಂ ಕೋರ್ಟ್ನಲ್ಲಿ ಗೋವಾದ ಪರವನ್ನು ಬಲವಾಗಿ ಮಂಡಿಸಲಾಗುವುದು. ಇನ್ನೆರಡು ಮೂರು ದಿನಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯದ ನಿಯೋಗ ಭೇಟಿ ಮಾಡಲಿದೆ. ಮಹದಾಯಿ ವಿಚಾರದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ತಮ್ಮ ನಿಲುವನ್ನು …
Read More »