Breaking News

ರಾಜಕೀಯ

ಡಿ.ಕೆ. ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯೋದು ಫಿಕ್ಸ್?

ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಕಾಣುತ್ತಿದೆ. ಹೀಗೆ ‘ಕನಕಪುರ ಬಂಡೆ’ ಎಂಬ ಹವಾ ಇಟ್ಟಿರುವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರಲ್ಲೇ ಅಸಮಾಧಾನ ಮೂಡಿದೆ ಎಂಬ ಆರೋಪ ಕೇಳಿಬರುತ್ತಿದೆ. ಇದೇ ಕಾರಣಕ್ಕೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನ ಕೆಳಗೆ ಇಳಿಸಲು ಎಲ್ಲಾ ಸಿದ್ಧತೆ ಸಾಗಿದೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆ 2024ರಲ್ಲಿ ಅಂದುಕೊಂಡ ರೀತಿ ಗೆಲುವು …

Read More »

ಜೂನ್ 8ರಂದು ಮೋದಿ ಪ್ರಮಾಣ ವಚನ ಸ್ವೀಕಾರ:ಆದರೆ 8 ನೇ ತಾರೀಖನ್ನೇ ಆರಿಸಿಕೊಂಡಿದ್ದೇಕೆ ?

ನವದೆಹಲಿ: ಬಿಜೆಪಿ ನಾಯಕ ನರೇಂದ್ರ ಮೋದಿ ಅವರು ಜೂನ್ 8 ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿಯವರ ದೊಡ್ಡ ಕಾರ್ಯಕ್ರಮಗಳಲ್ಲಿ ಎಂಟು ಸಂಖ್ಯೆ ಕಾಣಿಸಿಕೊಂಡಿರುವುದು ಇದೇ ಮೊದಲಲ್ಲ. ಆದರೆ ಸಂಖ್ಯಾಶಾಸ್ತ್ರದಲ್ಲಿ ಎಂಟರ ಮಹತ್ವವೇನು? ಸಂಖ್ಯಾಶಾಸ್ತ್ರದಲ್ಲಿ 8 ಸಂಖ್ಯೆ ಶನಿ ಗ್ರಹವನ್ನು ಸೂಚಿಸುತ್ತದೆ ಮತ್ತು 8 ನ್ಯಾಯದ ಸಂಕೇತವಾಗಿದೆ ಎಂದು ನೋಯ್ಡಾ ಮೂಲದ ಸಂಖ್ಯಾಶಾಸ್ತ್ರಜ್ಞ ರಾಹುಲ್ ಸಿಂಗ್ ಹೇಳುತ್ತಾರೆ . …

Read More »

ಲೋಕಸಭಾ ಚುನಾವಣೆ ಫಲಿತಾಂಶ: ಬೆಳಗಾವಿಯಲ್ಲಿ ತಮ್ಮ ತಾಕತ್ತು ತೋರಿಸಿದ ಜಾರಕಿಹೊಳಿ ಬ್ರದರ್ಸ್

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್​ ಶೆಟ್ಟರ್​ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಪುತ್ರ ಮೃಣಾಲ್​ ಅಂಬರೀಶ್​ ಸೋಲು ಕಂಡಿದ್ದಾರೆ. ಮೃಣಾಲ್ ಸೋಲಿಸಲು ಜಾರಕಿಹೊಳಿ ಸಹೋದರರು ಸೈಲೆಂಟ್ ಆಗಿ ಸೂತ್ರ ಹೆಣೆದಿದ್ದರು. ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸೇಡು ತೀರಿಸಿಕೊಂಡಿದ್ದು, ಜಗದೀಶ್ ಶೆಟ್ಟರ್ ಗೆಲ್ಲಿಸುವಲ್ಲಿ ಜಾರಕಿಹೊಳಿ ಸಹೋದರರ ಯಶಸ್ವಿ ಆಗಿದ್ದಾರೆ.   ಬೆಳಗಾವಿ, ಜೂನ್​ 04: ರಾಜ್ಯದ ಪ್ರಭಾವಿ ರಾಜಕೀಯ ಕುಟುಂಬಗಳಲ್ಲಿ ಬೆಳಗಾವಿಯ ಜಾರಕಿಹೊಳಿ ಕುಟುಂಬವೂ …

Read More »

ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆಲ್ಲೋದು ನಾವೇ: ಡಿಸಿಎಂ ಡಿಕೆಶಿ

ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಸಹೋದರ ಡಿ.ಕೆ ಸುರೇಶ್ ಪರವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆಲುವಿನ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಹೇಳಿದರು. ಈ ಮೂಲಕ ಸಹೋದರ ಡಿ.ಕೆ ಸುರೇಶ್ ಗೆಲ್ಲುವ ಬಗ್ಗೆ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. “ಮೋದಿ ಅವರ ನೂರು ದಿನಗಳ …

Read More »

ದೌರ್ಬಲ್ಯವೇ ಚಟಕ್ಕೆ ಕಾರಣ: ಬ್ರಹ್ಮಕುಮಾರಿ ಯೋಗಿನಿ

ಕೊಪ್ಪಳ: ‘ಮನುಷ್ಯನಲ್ಲಿ ಮಾನಸಿಕ ಹಾಗೂ ಅಧ್ಯಾತ್ಮಿಕ ಬಲ ಕಡಿಮೆಯಾಗಿರುವುದೇ ತಂಬಾಕಿಗೆ ಬಲಿಯಾಗಲು ಮುಖ್ಯ ಕಾರಣ’ ಎಂದು ಬ್ರಹ್ಮಕುಮಾರಿ ಯೋಗಿನಿ ಹೇಳಿದರು. ಈಶ್ವರೀಯ ವಿಶ್ವವಿದ್ಯಾಲಯ ತನ್ನ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಂಬಾಕು ನಿಷೇಧ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಬುದ್ಧಿಜೀವಿಯಾದ ಮನುಷ್ಯನಿಗೆ ಒಳ್ಳೆಯದನ್ನು ಸ್ವೀಕಾರ ಮಾಡಲು ಆಗುತ್ತಿಲ್ಲ, ಕೆಟ್ಟದ್ದನ್ನು ಬಿಡಲೂ ಸಾಧ್ಯವಾಗುತ್ತಿಲ್ಲ. ಅನೇಕ ದುಶ್ಚಟಗಳಿಗೆ ದಾಸನಾಗುತ್ತಿದ್ದು, ದಿನೇ ದಿನೇ ಮನುಷ್ಯನಲ್ಲಿ ದುಃಖ ಹಾಗೂ ಅಶಾಂತಿ ಹೆಚ್ಚುತ್ತಿದೆ. ಇಂತಹ ಸ್ಥಿತಿಗೆ ಮೂಲ ಕಾರಣ ಮನುಷ್ಯನ …

Read More »

150 ಜಿಲ್ಲಾಧಿಕಾರಿಗಳಿಗೆ ಅಮಿತ್ ಶಾ ಕರೆ

ನವದೆಹಲಿ: ಜೂನ್ 4 ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಮತ ಎಣಿಕೆಗೆ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 150 ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಆರೋಪದ ಕುರಿತು ಚುನಾವಣಾ ಆಯೋಗವು (ಇಸಿ) ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರಿಂದ ಭಾನುವಾರ ಮಾಹಿತಿ ಕೇಳಿದೆ. ಜೈರಾಮ್ ರಮೇಶ್ ಅವರಿಗೆ ಪತ್ರ ಬರೆದಿರುವ ಚುನಾವಣಾ ಆಯೋಗ, ಭಾನುವಾರ ಸಂಜೆ 7 ಗಂಟೆಯೊಳಗೆ ತಮ್ಮ ಆರೋಪಗಳ …

Read More »

ಮುಂಬೈ ಹೊಟೇಲ್ ಉದ್ಯಮಿ ಕೊಲೆ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

ಮುಂಬೈ: 2001ರಲ್ಲಿ ಮುಂಬೈನ ಹೊಟೇಲ್ ಉದ್ಯಮಿ ಜಯಾ ಶೆಟ್ಟಿ ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಮುಂಬೈ ವಿಶೇಷ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ(MCOCA) ಅಡಿಯಲ್ಲಿ ದಾಖಲಾದ ಪ್ರಕರಣಗಳ ವಿಶೇಷ ನ್ಯಾಯಾಧೀಶ ಎ.ಎಂ.ಪಾಟೀಲ್ ಅವರು, ಜಯಾ ಶೆಟ್ಟಿ ಕೊಲೆ ಪ್ರಕರಣದಲ್ಲಿ ರಾಜನ್‌ ಅಪರಾಧಿ ಎಂದು ಘೋಷಿಸಿದರು. ಜಯಾ ಶೆಟ್ಟಿ ಅವರು ಸೆಂಟ್ರಲ್ ಮುಂಬೈನ ಗಮದೇವಿಯಲ್ಲಿ ಗೋಲ್ಡನ್ ಕ್ರೌನ್ ಹೋಟೆಲ್ ನಡೆಸುತ್ತಿದ್ದರು. …

Read More »

ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನಕ್ಕೆ 2,000 ಪೊಲೀಸರ ಸರ್ಪಗಾವಲು: ಪ್ರವಾಸಿಗರಿಗೆ, ದೋಣಿಗಳಿಗೆ ನೋ ಎಂಟ್ರಿ!

ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನಕ್ಕೆ 2,000 ಪೊಲೀಸರ ಸರ್ಪಗಾವಲು: ಪ್ರವಾಸಿಗರಿಗೆ, ದೋಣಿಗಳಿಗೆ ನೋ ಎಂಟ್ರಿ! ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಸುಮಾರು ಎರಡೂವರೆ ತಿಂಗಳ ಕಾಲ ದೇಶಾದ್ಯಂತ ಸುಮಾರು 200 ಚುನಾವಣಾ ರ್‍ಯಾಲಿಗಳು ಮತ್ತು ರೋಡ್ ಶೋಗಳನ್ನು ನಡೆಸಿದ ಪ್ರಧಾನಿ ನರೇಂದ್ರ ಮೋದಿ (Narendra Modi)ಅವರು ಕೊನೆಯ ಹಂತದ ಚುನಾವಣೆಗೂ ಮುನ್ನ ಕನ್ಯಾಕುಮಾರಿಯ (Kanyakumari) ಪ್ರಸಿದ್ಧ ವಿವೇಕಾನಂದ (Vivekananda) ರಾಕ್ ಸ್ಮಾರಕದಲ್ಲಿ ಎರಡು ದಿನಗಳ ಕಾಲ ಧ್ಯಾನ ಮಾಡಲಿದ್ದಾರೆ.   ಇದಕ್ಕಾಗಿ …

Read More »

ವಿದ್ಯಾರ್ಥಿಗಳು ಮಾನಸಿಕ ಸದೃಢತೆ ಕಾಪಾಡಿಕೊಂಡು ಅಧ್ಯಯನಕ್ಕೆ ಸಜ್ಜಾಗಿ: ಪ್ರವೀಣ

ಅಳ್ನಾವರ: ‘ಒತ್ತಡದ ಬದುಕಿನಲ್ಲಿ ಮಾನಸಿಕ ಸಮತೋಲನ ಕಾಪಾಡಿಕೊಂಡು ಅಧ್ಯಯನಕ್ಕೆ ವಿದ್ಯಾರ್ಥಿಗಳು ಸಜ್ಜಾಗಬೇಕು’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರವೀಣ ಆನಂದಕಂದಾ ಹೇಳಿದರು. ಕಾಲೇಜಿನಲ್ಲಿ ತೆರೆದ ನೂತನ ಜಿಮ್ ಉದ್ಘಾಟಿಸಿ ಮಾತನಾಡಿದ ಅವರು, ‘ಈ ಜಿಮ್‌ನಲ್ಲಿ ಅಧುನಿಕ ಸಲಕರಣೆಗಳನ್ನು ಅಳವಡಿಸಲಾಗಿದೆ. ಸತತ ಓದಿನ ಜೊತೆಗೆ ಏಕಾಗ್ರತೆ ಸಾಧಿಸಲು ಈ ಸಲಕರಣೆಗಳನ್ನು ಬಳಸಿಕೊಂಡು ದೈಹಿಕ ಶ್ರಮ ಹಾಕಬೇಕು’ ಎಂದರು. ಟೇಬಲ್ ಟೆನಿಸ್ ಕೋರ್ಟ್‌ನಲ್ಲಿ ಆಟವಾಡಿದ ಬಳಿಕ ಕ್ರೀಡಾ ವಿಭಾಗದ ಪ್ರಬಾರ ಮುಖ್ಯಸ್ಥ …

Read More »

ಸುಧಾಕರ್​​​ಗೆ ಒಂದೇ ಮತ ಹೆಚ್ಚು ಬಂದ್ರೂ ರಾಜೀನಾಮೆ ನೀಡುವೆ: ಪ್ರದೀಪ್ ಈಶ್ವರ್

ಬೆಂಗಳೂರು: ಈ ಬಾರಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಪಕ್ಕಾ ಗೆಲ್ತಾರೆ..ಬಿಜೆಪಿ ಅಭ್ಯರ್ಥಿ ಸುಧಾಕರ್​ ಅವರು ಒಂದೇ ಒಂದು ಮತ ಹೆಚ್ಚು ಪಡೆದರೆ, ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರದೀಪ್​ ಈಶ್ವರ್​ ಸವಾಲು ಹಾಕಿದ್ದಾರೆ. ಅಲ್ಲದೇ ತಮ್ಮ ರಾಜೀನಾಮೆ ಮಾತಿಗೆ ಬದ್ಧನಾಗಿರುತ್ತೇನೆ ಎಂದೂ ತಿಳಿಸಿದ್ದಾರೆ. ಇತ್ತೀಚೆಗೆ ಮಾಜಿ ಸಚಿವ ಸುಧಾಕರ್​​ ಅವರು ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಚಿಕ್ಕಬಳ್ಳಾಪುರದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಕುಸಿದಿದೆ ಎಂದಿದ್ದ ಮಾತಿಗೂ ಈಶ್ವರ್​ …

Read More »